ಲೇಖಕ: admin

ಮಡಿಕೇರಿ ಅ.13 : ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗ ಉತ್ಸವವು ಅ.15 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನು ಸಲ್ಲಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳುವ ಮೂಲಕ ‘ಮಡಿಕೇರಿ ದಸರಾಗೆ ಚಾಲನೆ’ ದೊರೆಯಲಿದೆ ಎಂದು ನಗರ ದಸರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಅ.13 : ನಗರದ ಗಾಂಧಿ ಮಂಟಪದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ‘ಸ್ಮಾರಕ ಉದ್ಯಾನವನ’ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಸಂಬಂಧ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸುದೀರ್ಘ ಚರ್ಚೆ ನಡೆಯಿತು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಸದಸ್ಯರಾದ ಮುನೀರ್ ಅಹ್ಮದ್, ಲಿಯಾಕತ್ ಅಲಿ, ಅಂಬೆಕಲ್ಲು ನವೀನ್ ಇತರರ ಉಪಸ್ಥಿತಿಯಲ್ಲಿ ಚರ್ಚೆ ನಡೆಯಿತು. ಈಗಾಗಲೇ ಸರ್ಕಾರದಿಂದ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆಯಾಗಿದ್ದು, ಮಹಾತ್ಮ ಗಾಂಧೀಜಿಯವರ ಚಿತಾ ಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ಉದ್ಯಾನವನ ನಿರ್ಮಾಣ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಅಕ್ಟೋಬರ್, 17 ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿ ಪೂಜೆ ನೆರವೇರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಮಹಾತ್ಮ ಗಾಂಧೀಜಿಯವರ ಸ್ಮಾರಕ ಉದ್ಯಾನವನ ನಿರ್ಮಿಸುವಲ್ಲಿ ಈಗಾಗಲೇ ಯೋಜನೆ ಸಿದ್ಧವಾಗಿದ್ದು, ಹೊಸ ತಂತ್ರಜ್ಞಾನದಂತೆ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಬೇಕು. ಜೊತೆಗೆ…

Read More

ಮಡಿಕೇರಿ ಅ.13 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಅ.15 ರಿಂದ ಅ.24ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಶರನ್ನವರಾತ್ರಿಯ ಅಂಗವಾಗಿ ಹತ್ತು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 9.30 ಗಂಟೆಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Read More

ಮಡಿಕೇರಿ ಅ.13 : ಕೊಡಗು ಕಸದ ಕೊಂಪೆಯಾಗಿ ಮಾರ್ಪಡುತ್ತಿದ್ದು, ಶಾಸಕದ್ವಯರು ಜಿಲ್ಲೆಯ ವಿವಿಧೆಡೆ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಮುಂದಾಳತ್ವ ವಹಿಸಬೇಕೆಂದು ಅಲ್ಲರಂಡ ರಂಗಚಾವಡಿಯ ಅಧ್ಯಕ್ಷ ಅಲ್ಲರಂಡ ವಿಠಲ್ ನಂಜಪ್ಪ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಛ ಭಾರತವು ಭಾರತೀಯ ಸಂಸ್ಕೃತಿ ಮತ್ತು ಸ್ವಾತಂತ್ರ್ಯ ಹೋರಾಟದ ಒಂದು ಭಾಗ. ಗಾಂಧಿಜಿಯವರು ಸ್ವಾತಂತ್ರ್ಯ ಹೋರಾಟದಷ್ಟೆ ಮಹತ್ವವನ್ನು ಶುಚಿತ್ವದೆಡೆಗೆ ನೀಡಿದ್ದರು. ಅಲ್ಲದೇ ಇಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಪರಿಕಲ್ಪನೆಯೊಂದಿಗೆ ಸ್ವತಃ ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಅದನ್ನು ಕಾರ್ಯಗತಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ಆದರೆ ಸ್ವಚ್ಛತೆಯ ವಿಚಾರದಲ್ಲಿ ಹಿಂದುಳಿದಿದ್ದು, ವಿಶ್ವ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡಗಿನ ಎಲ್ಲಾ ನಗರಗಳು ಕಸದ ಕೊಂಪೆಗಳಾಗಿ ಮಾರ್ಪಡುತ್ತಿದ್ದು, ಸಾಂಕ್ರಾಮಿಕ ರೋಗ ಹರುಡುವ ಭೀತಿ ಇದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಎಲ್ಲಾ ಭಾಗಗಳಲ್ಲೂ…

Read More

ಮಡಿಕೇರಿ ಅ.13 : ಸ್ವಚ್ಛ ಕಾವೇರಿಗಾಗಿ ಅ.20 ರಿಂದ ನ.13ರ ವರೆಗೆ ಕಾವೇರಿ ಜಾಗೃತಿ ರಥಯಾತ್ರೆ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ಅಣ್ಣೈ ಕಾವೇರಿ ರಿವರ್ ಪ್ರೊಟೆಕ್ಷನ್ ಅಶ್ರಯದಲ್ಲಿ ಅ.20ರಿಂದ ನ.13ರವರೆಗೆ 13ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ತಲಕಾವೇರಿಯಿಂದ ಪೊಂಪ್‌ಹಾರ್   ವರೆಗೆ ಯಾತ್ರೆ ಕೈಗೊಳ್ಳಲಾಗಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ಸುಮಾರು 40ಕ್ಕೂ ಅಧಿಕ ಸಾಧುಸಂತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.20 ರಂದು ಬೆಳಗ್ಗೆ 8.30 ಗಂಟೆಗೆ ತಲಕಾವೇರಿಯಲ್ಲಿ ಕಾವೇರಿ ಯಾತ್ರೆಗೆ ಚಾಲನೆ ದೊರೆಯಲಿದ್ದು, 10.30ಕ್ಕೆ ಭಾಗಮಂಡಲ ಸಂಗಮದಲ್ಲಿ ಆರತಿ, ಸಂಜೆ 4…

Read More

ಮಡಿಕೇರಿ ಅ.13 : ಒಡನಾಟ, ಸಾಮರಸ್ಯದೊಂದಿಗೆ ಜೀವನದಲ್ಲಿ ಸಾಮಾಜಿಕ ಸೇವೆಯ ಮೂಲಕ ಮನತೃಪ್ತಿಯೊಂದಿಗೆ ಸಂಭ್ರಮಿಸುವುದನ್ನೂ ರೋಟರಿ ಸಂಸ್ಥೆಗಳು ಕಲಿಸುತ್ತವೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಎಚ್.ಆರ್.ಕೇಶವ್ ಹೇಳಿದ್ದಾರೆ. ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಾತನಾಡಿದ ರೋಟರಿ ಜಿಲ್ಲೆ 3181 ಗವನ೯ರ್ ಎಚ್.ಆರ್.ಕೇಶವ್, ಹೊಸ ರೋಟರಿ ಸಂಸ್ಧೆಗಳು ಸಾಕಷ್ಟು ಚೈತನ್ಯದಾಯಿತ್ವದೊಂದಿಗೆ ಬೇರೆ ಸಂಸ್ಥೆಗಳಿಗಿಂತ ಉತ್ತಮವಾಗಿ ಕಾಯ೯ನಿವ೯ಹಿಸಲು ಸಾಧ್ಯ. 2 ನೇ ವಷ೯ದಲ್ಲಿ ಸಾಗುತ್ತಿರುವ ರೋಟರಿ ವುಡ್ಸ್ ಇದನ್ನೇ ಸಾಬೀತುಪಡಿಸಿದೆ ಎಂದರು. ರೋಟರಿ ವಲಯ ಸಹಾಯಕ ಗವನ೯ರ್ ದೇವಣಿರ ತಿಲಕ್, ಅಂಗನವಾಡಿಗಳ ಕಾಯಕಲ್ಪಕ್ಕೆ ರೋಟರಿ ಜಿಲ್ಲೆ 3181 ವಿಶೇಷ ಯೋಜನೆಗಳನ್ನು ರೂಪಿಸಿದೆ ಎಂದರು. ಅಧ್ಯಕ್ಷರು, ಕಾಯ೯ದಶಿ೯ ಜತೆ ಎಲ್ಲಾ ರೋಟರಿ ಸದಸ್ಯರು ಕೈಜೋಡಿಸಿದರೆ ಸಾಮಾಜಿಕ ಸೇವಾ ಕಾಯ೯ಗಳು ಸುಗಮವಾಗಿ ಸಾಗುತ್ತವೆ ಎಂದೂ ತಿಲಕ್ ಹೇಳಿದರು. ರೋಟರಿ ವುಡ್ಸ್ ಗೆ ಇದೇ ಸಂದಭ೯ 7 ಹೊಸ ಸದಸ್ಯರನ್ನು ಸೇಪ೯ಡೆಗೊಳಿಸಲಾಯಿತು. ಈ…

Read More

ಮಡಿಕೇರಿ ಅ.13 : ಕೊಡವ ಮಕ್ಕಡ ಕೂಟ, ಮಂಗಳೂರು ವಿಶ್ವವಿದ್ಯಾನಿಲಯದ ಕೊಡವ ಸಾಂಸ್ಕೃತಿ ಅಧ್ಯಯನ ಪೀಠ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತಶ್ರಯದಲ್ಲಿ ಅ.16 ರಂದು ಶ್ರೀ ಕಾವೇರಿ ದರ್ಶನಂ ಹಾಗೂ ಕೊಡಗಿನಿಂದ ಗಿರಿಯವರೆಗೆ ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್ ಸಭಾಂಗಣದಲ್ಲಿ ಪೂರ್ವಹ್ನ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ, ಶ್ರೀ ಕಾವೇರಿ ದರ್ಶನಂ ಲೇಖಕ, ಕೊಡಗಿನಿಂದ ಗಿರಿಯವರೆಗೆ (ಮೂಲ ಲೇಖಕರು ದಿ.ಮಳವಂಡ ಗೌರಮ್ಮ ಅಚ್ಚಯ್ಯ) ಭಾಷಾಂತರಕಾರ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ, ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕರಾದ ಡಾ. ಎಂ.ಎಂ.ಮೀನಾಕ್ಷಿ ಉಪಸ್ಥಿತರಿರಲಿದ್ದಾರೆ.

Read More

ಮಡಿಕೇರಿ ಅ.13  : ಮಾದಾಪುರದ ಶ್ರೀ ಮತಿ ಡಿ ಚೆನ್ನಮ್ಮ ಪದವಿ  ಪೂರ್ವ ಕಾಲೇಜಿನ ಎನ್.ಎಸ್.ಎಸ್  ಘಟಕದ ವತಿಯಿಂದ  2023-2024 ನೇ ಸಾಲಿನ ವಾರ್ಷಿಕ ವಿಶೇಷ  ಶಿಬಿರಕ್ಕೆ ಚಾಲನೆ ದೊರೆಯಿತು. ಶಿಬಿರವನ್ನು ಹರದೂರು ಗ್ರಾ.ಪಂ ಅಧ್ಯಕ್ಷೆ  ಉಷಾ ಪೊನ್ನಪ್ಪ ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಹರ್ಷ  ಮಾತನಾಡಿ  ಎನ್ ಎಸ್ ಎಸ್ ನಿಂದ ಸ್ವಯಂ ಶಿಸ್ತು ಸಮಯ ಪ್ರಜ್ಞೆ, ಸಮಾಜ ಸೇವೆ, ರಾಷ್ಟ್ರೀಯ ಭಾವೈಕ್ಯತೆ ರೂಡಿಸಿಕೊಳ್ಳ ಬಹುದು ಎಂದು  ಅಭಿಪ್ರಾಯಪಟ್ಟರು.  ಕಾರ್ಯಕ್ರಮದಲ್ಲಿ  ಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಕಾರ್ಯಕ್ರಮಾಧಿಕಾರಿ  ಎನ್.ಎನ್. ಮನೋಹರ್  ಸಂಸ್ಥೆಯ ಬೋಧಕ ಬೋಧಕೇತರ ವರ್ಗ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಅ.13 : ಹಿಂದುಳಿದ ವರ್ಗಗಳ ಜಾತಿ ಪಟ್ಟಿಯ ಪ್ರವರ್ಗ 3ಎ ಕ.ಸಂ.2ರಲ್ಲಿ ನಮೂದಾಗಿರುವ ಕೊಡಗರು'(Kodagaru) ಎಂಬುದರ ಬದಲಾಗಿ ಕನ್ನಡ ಆವೃತ್ತಿಯಲ್ಲಿ “ಕೊಡವ” ಎಂದು ಮತ್ತು ಆಂಗ್ಲ ಆವೃತ್ತಿಯಲ್ಲಿ ‘Kodava’ಎಂದು ಬದಲಾಯಿಸಿ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಹೇಮಲತ ಎಂ. ಅವರು ಸರಕಾರದ ನಿರ್ಧಾರದಂತೆ ಆದೇಶ ಹೊರಡಿಸಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಅವರ ನೇತೃತ್ವದ ನಿಯೋಗ ಡಾ.ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ನಿರಂತರವಾಗಿ ಭೇಟಿಯಾಗಿ “ಕೊಡಗರು” ಬದಲಿಗೆ “ಕೊಡವ” ಎಂದು ಬದಲಾಯಿಸುವಂತೆ ಮನವಿ ಸಲ್ಲಿಸಿತ್ತು. ಅಲ್ಲದೆ ಕಳೆದ 14 ವರ್ಷಗಳಿಂದ ಹೈಕೋರ್ಟ್ ನಲ್ಲಿ ನ್ಯಾಯಾಂಗ ಹೋರಾಟದ ಮೂಲಕ ಗಮನ ಸೆಳೆದು ಸಂವಿಧಾನಿಕ ಹಕ್ಕು ನೀಡಬೇಕೆಂದು ಅರ್ಜಿ ಸಲ್ಲಿಸಿತ್ತು. ಅಲ್ಲದೆ ಇತ್ತೀಚೆಗೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೂಡ ಭೇಟಿಯಾಗಿ ನಾಚಪ್ಪ ಚರ್ಚಿಸಿದ್ದರು. ಸರ್ಕಾರ “ಕೊಡವ” ಎಂದು ಬದಲಾಯಿಸಿ ಆದೇಶ ಹೊರಡಿಸಿದ…

Read More

ವಿರಾಜಪೇಟೆ ಅ.13 : ವಿದ್ಯಾರ್ಥಿ ಜೀವನದ ಯಶಸ್ಸಿಗೆ ವಚನ ಸಾಹಿತ್ಯದ ಅರಿವು ಅತೀ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ ವೃತ್ತ ನಿರೀಕ್ಷಕ ಶಿವರುದ್ರ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ “ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ'” ಚಿಂತನಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಕನ್ನಡ ಸಾಹಿತ್ಯಕ್ಕೆ ಹೊಸ ಹೊಳಪು ನೀಡಿದ ಹನ್ನೆರಡನೇ ಶತಮಾನದ ವಚನಕಾರರ ವಚನ ಸಾಹಿತ್ಯದ ಜ್ಞಾನವನ್ನು ಮೈಗೂಡಿಸಿಕೊಂಡಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಹಾಗೆಯೇ ಇಂದು ಜನರಲ್ಲಿರಲೇ ಬೇಕಾದ ಉತ್ತಮ ಸಂಸ್ಕಾರಗಳು ಹಾಗೂ ಆಚಾರ, ವಿಚಾರಗಳನ್ನು ಅರಿತು ಅದರಂತೆ ನಡೆಯುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶಿವರುದ್ರ ಹೇಳಿದರು. ಇದೇ ಸಂದರ್ಭ ವಿದ್ಯಾರ್ಥಿಗಳ ಸ್ಮರಣ ಶಕ್ತಿ ಹಾಗೂ ವಿಷಯ ಗ್ರಹಿಕಾ ಶಕ್ತಿಯನ್ನು ವೃದ್ದಿಸಲು ಅನುಕೂಲವಾಗುವ ಮನಸ್ಸನ್ನು ಕೇಂದ್ರೀಕರಿಸುವ ಯೋಗದ ಬಗ್ಗೆ ಮಾಹಿತಿ ನೀಡಿದರು. “ವಿದ್ಯಾರ್ಥಿಗಳೆಡೆಗೆ…

Read More