ಮಡಿಕೇರಿ ಅ.13 : ಸಿದ್ದಾಪುರದ ಶ್ರೀ ದುರ್ಗಾ ಭಗವತಿ ದೇವಾಲಯದಲ್ಲಿ ಅ.15 ರಿಂದ ಅ.24ರ ವರೆಗೆ ನವರಾತ್ರಿ ಮಹೋತ್ಸವ ಜರುಗಲಿದೆ. ದೇವಾಲಯದಲ್ಲಿ ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಅಲಂಕಾರ ಪೂಜೆ, ಪ್ರಸಾದ ವಿತರಣೆ ಹಾಗೂ ಸಂಜೆ 6.30 ಗಂಟೆಗೆ ಅಲಂಕಾರ ದೀಪಾರಾಧನೆ, ಭಗವತಿ ಸೇವೆ, ಕುಮಾರಿ ಪೂಜೆ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಅ.22ರ ದುರ್ಗಾಷ್ಠಮಿಯಂದು ಸಂಜೆ ಪುಸ್ತಕ ಪೂಜೆಗಿಡುವುದು, 23 ರಂದು ಮಹಾನವಮಿ (ಆಯುದ್ಧ ಪೂಜೆ) ಪ್ರಯುಕ್ತ 8.30 ಗಂಟೆಗೆಯಿಂದ ವಾಹನ ಪೂಜೆ ಜರುಗಲಿದ್ದು, ಅ.24 ರಂದು ವಿಜಯದಶಮಿಯಂದು ವಿದ್ಯಾರಂಭ, 9 ಗಂಟೆಯಿಂದ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ವಿದ್ಯಾರಂಭಕ್ಕೆ ಬರುವ ಮಕ್ಕಳು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಲೇಖಕ: admin
ಮಡಿಕೇರಿ ಅ.13 : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡು, ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ಕಾಮಗಾರಿಗಳನ್ನೆ ನೂತನ ಕಾಮಗಾರಿಗಳೆಂದು ತಿಳಿಸಿ, ಜನರ ಹಾದಿ ತಪ್ಪಿಸುವ ಪ್ರಯತ್ನವನ್ನು ಕಾಂಗ್ರೆಸ್ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಳೂರು ಕಿಶೋರ್ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತೆನ್ನಿರ ಮೈನಾ ಅವರು ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ, ತಾಳತ್ಮನೆ-ಮೇಕೇರಿ-ಬಿಳಿಗೇರಿ-ಅರ್ವತ್ತೊಕ್ಲು-ಬೆಟ್ಟಗೇರಿ ರಸ್ತೆಯನ್ನು ಜಿಲ್ಲಾ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಈ ರಸ್ತೆ ಒಳಗೊಂಡಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನ 355 ಕಿ.ಮೀ. ದೂರದ ಒಟ್ಟು 34 ರಸ್ತೆ ಕಾಮಗಾರಿಗಳಿಗೆ 2020 ಸೆ.1 ರಂದು ಅನುಮೋದನೆಗೊಂಡು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ ಎಂದು ದಾಖಲೆ ಸಹಿತ ಮಾಹಿತಿ ನೀಡಿದರು. ಅರ್ವತ್ತೊಕ್ಲು, ಬೆಟ್ಟಗೇರಿ, ತಾಳತ್ತ್ಮನೆ ವಿಭಾಗಗಳಲ್ಲಿ ಈಗಾಗಲೆ ಸಾಕಷ್ಟು ಗ್ರಾಮೀಣ ರಸ್ತೆ ಕಾಮಗಾರಿಗಳು ನಡೆದಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಡಿಕೇರಿ ತಾಲ್ಲೂಕಿನ 132…
ಮಡಿಕೇರಿ ಅ.13 : ಸಹಕಾರ ಸಂಘಗಳು ಪ್ರಜಾಸತ್ತಾತ್ಮಕ ಸಂಸ್ಥೆಗಳಾಗಿದ್ದು, ಸದಸ್ಯರೇ ಸಹಕಾರ ಸಂಸ್ಥೆಗಳನ್ನ ನಿರ್ವಹಿಸುವ ಮತ್ತು ನಿಯಂತ್ರಿಸುವ ವ್ಯವಸ್ಥೆ ಇದೆ. ಸಹಕಾರ ಸಂಘಗಳು ಕಾರ್ಯನೀತಿ ರೂಪಿಸುವಲ್ಲಿ ನಿರ್ಧಾಗಳನ್ನು ಕೈಗೊಳ್ಳುವ ಕಾರ್ಯದಲ್ಲಿ ಮತ್ತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಪ್ರತಿಯೊಬ್ಬ ಸದಸ್ಯನಿಗೆ ಹಕ್ಕುಂಟು. ಆದರೆ ಪ್ರಜಾಪ್ರಭುತ್ವ ಸ್ವೇಚ್ಛಾಚಾರವಾಗಿರಬಾರದು. ಕಾರ್ಯನಿರ್ವಹಣೆಯು ಉಪನಿಯಮಗಳ, ನಿಯಮಗಳ ಹಾಗೂ ಸಹಕಾರಿ ಅಧಿನಿಯಮ ಮತ್ತು ಇತರ ಅಧಿನಿಯಮಗಳ ಮಿತಿಗೊಳಪಟ್ಟು ನಿಯಂತ್ರಿಸಲ್ಪಟ್ಟಲ್ಲಿ ಸಂಘಗಳು ಉತ್ತಮ ರೀತಿಯಲ್ಲಿ ಸಾಗುತ್ತವೆ ಎಂದು ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟರು. ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗೆ ಸಹಕಾರ ಕಾಯ್ದೆ, ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು…
ಮಡಿಕೇರಿ ಅ.13 : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಉತ್ಸವಕ್ಕೆ ಸಾಹಿತ್ಯ ಸ್ಪರ್ಶವನ್ನು ನೀಡುವ ‘ಬಹುಭಾಷಾ ಕವಿಗೋಷ್ಠಿ’ ಅ.18 ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿದ್ದು, ನಾಡಿನ ಉದಯೋನ್ಮುಖ ಕವಿ, ಕವಿಯಿತ್ರಿಯರ ಕವನ ವಾಚನ ಸಾಹಿತ್ಯಾಭಿಮಾನಿಗಳನ್ನು ಸೆಳೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುಭಾಷಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷ ಉಜ್ವಲ್ ರಂಜಿತ್ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಕವಿಗೋಷ್ಠಿಯಲ್ಲಿ ಆಯ್ದ 60 ಕವನಗಳ ವಾಚನ ನಡೆಯಲಿದೆಯೆಂದು ತಿಳಿಸಿದರು. ಕವಿಗೋಷ್ಠಿಯನ್ನು ಡಿಸಿಸಿ ಬ್ಯಾಂಕ್ ರಸ್ತೆಯ ಬಳಿಯ ‘ರಾಷ್ಟ್ರಕವಿ ಕುವೆಂಪು’ ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷರಾದ ಹಿರಿಯ ಕವಿ, ಸಾಹಿತಿ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ ಎಂದರು. ಕವಿಗೋಷ್ಠಿಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಹೆಚ್.ಎಸ್. ಚಂದ್ರಮೌಳಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಂತಾರ ಚಲನ…
ಕುಶಾಲನಗರ ಅ.13: ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು(ಕ.ಸಾ.ಪ.) ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಅ.17 ರಂದು ದಿವಂಗತ ಎನ್.ಮಹಾಬಲೇಶ್ವರ್ ಭಟ್ ಅವರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎನ್.ಸತೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ. ಜಿಲ್ಲಾ ಅಗ್ರಣಿ ಬ್ಯಾಂಕ್( ಲೀಡ್ ಬ್ಯಾಂಕ್) ನ ನಿವೃತ್ತ ಮುಖ್ಯಸ್ಥ, ವೃತ್ತಿ ಮಾರ್ಗದರ್ಶಕ ಆರ್.ಕೆ.ಬಾಲಚಂದ್ರ “ಕನ್ನಡದ ಏಳು ಬೀಳುಗಳು” ಕುರಿತು ದತ್ತಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯತ್ ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಬಿಳಿಗೇರಿ ಗ್ರಾಮದ ಕೃಷಿಕ ಎನ್.ಎನ್.ಕುಮಾರ್ ಪಾಲ್ಗೊಳ್ಳಲಿದ್ದಾರೆ. ಈ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ…
ಸುಂಟಿಕೊಪ್ಪ ಅ.13 : ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆಯು ಅ.16 ರಂದು ನಡೆಯಲಿದ್ದು, ಬಿಜೆಪಿ ಕಾಂಗ್ರೆಸ್ ಹೊಂದಾಣಿಕೆಯ ರಾಜಕೀಯ ಬೆಳವಣಿಗೆಯಿಂದ 13 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ಹಿಂದಿನಿಂದಲೂ ಬಿಜೆಪಿ ಆಡಳಿತದಲಿದ್ದು, ವಿರೋಧ ಪಕ್ಷದಲ್ಲಿ ಕಾಂಗ್ರೆಸ್ಸಿನ ಕೆಲವು ನಿರ್ದೇಶಕರು ಇದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಸ್ಥಾನ ಹಂಚಿಕೆಯ ಪ್ರಸ್ತಾಪಕ್ಕೆ ಹಿರಿಯ ಸಹಕಾರಿಗಳು ಮುಂದಾದರು. ಪರಿಣಾಮವಾಗಿ ಇಂತಿಷ್ಟು ಸೀಟು ಬಿಜೆಪಿಗೆ ಹಾಗೂ ಕಾಂಗ್ರೆಸ್ಗೆ ಹಂಚಿಕೆ ಸೂತ್ರ ಅಳವಡಿಸಲಾಯಿತು. ಅದು ಯಶಸ್ವಿಯೂ ಆಯಿತು. ಆದರೆ ಸಾಲಗಾರರ ಸಾಮಾನ್ಯ 6 ಕ್ಷೇತ್ರದಲ್ಲಿ ಹಾಗೂ ಪರಿಶೀಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಬಿಗಿ ಪಟ್ಟಿನಿಂದ ಚುನಾವಣೆಯು ತಾ.16 ರಂದು ನಡೆಯಲಿದೆ. ಸಾಲಗಾರರ ಸಾಮಾನ್ಯ 6 ಕ್ಷೇತ್ರಕ್ಕೆ ಉದಯಕುಮಾರ್ ಪಟ್ಟೆಮನೆ, ಜೆರ್ಮಿ ಡಿಸೋಜ, ಕ್ಲೈವಾ ಪೊನ್ನಪ್ಪ, ಮೋಹನ್ ಆರ್.ಆರ್.ಕುಂಜಿಲನ…
ಮಡಿಕೇರಿ ಅ.13 : ಅಖಿಲ ಕರ್ನಾಟಕ ಅರುಂಧತಿಯಾರ್ ಆದಿದ್ರಾವಿಡ ಪೌರಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಕೃಷ್ಣ ಅವರನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಥವಾ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾ ಒತ್ತಾಯಿಸಿದೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ವಿರಾಜಪೇಟೆಯ ಪಳನಿಪ್ರಕಾಶ್, ಪೌರಕಾರ್ಮಿಕ ಸಫಾಯಿ ಕರ್ಮಚಾರಿಗಳಿಗೆ ಪ್ರತ್ಯೇಕವಾಗಿ ಶೇ.3ರಷ್ಟು ಒಳಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಹೋರಾಟ ಮಾಡಿದ ಏಕೈಕ ನಾಯಕ ಆರ್.ಕೃಷ್ಣ ಅವರಾಗಿದ್ದಾರೆ. ಸಮುದಾಯದ ಪರವಾಗಿ ಕಳೆದ 25 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ಅವರ ಪ್ರಯತ್ನದ ಫಲವಾಗಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿದೆ ಎಂದರು. 1996ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ಪುರಸಭೆಗೆ ಅಧ್ಯಕ್ಷರು ಹಾಗೂ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಅನುಭವನ ಹೊಂದಿದ್ದಾರೆ. ಆರು ಜಿಲ್ಲೆಗಳಲ್ಲಿ ಸಮುದಾಯದ ಸಮಸ್ಯೆಗಳಿಗೆ ಹೋರಾಟ ಮಾಡುತ್ತಿರುವ ಕೃಷ್ಣ ಅವರಿಗೆ ರಾಜ್ಯ ಸರ್ಕಾರ ಉನ್ನತ ಹುದ್ದೆ…
ಮಡಿಕೇರಿ ಅ.13 : ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಪರಂಪರೆ, ಪದ್ಧತಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಯುವ ಸಮೂಹ ಮಾಡಬೇಕೆಂದು ಕಲಾವಿದೆ ಪದ್ಮಶ್ರೀ ರಾಣಿ ಮಾಚಯ್ಯ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಬರಹಗಾರ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಅವರು ಬರೆದಿರುವ ಕೊಡವ ಮಕ್ಕಡ ಕೂಟದಿಂದ ಹೊರ ತಂದಿರುವ ದಾಖಲೆಯ 75ನೇ ಪುಸ್ತಕ “ಆ ಪನ್ನೆರಂಡ್ ತಿಂಗ” ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಮ್ಮ ಪರಂಪರೆ, ಪದ್ಧತಿ ಮತ್ತು ಸಂಸ್ಕೃತಿಯನ್ನು ಅನುಸರಿಸಲು ಯುವ ಜನರು ಅಸಡ್ಡೆ ತೋರುತ್ತಿದ್ದಾರೆ. ಹಬ್ಬಗಳ ಆಚರಣೆಯಲ್ಲಿ ಪಾಲ್ಗೊಳ್ಳಲು ಕೂಡ ಹಿಂದೇಟು ಹಾಕುತ್ತಿದ್ದಾರೆ. ಜ್ಞಾನವನ್ನು ಹೆಚ್ಚಿಸುವ ಶಕ್ತಿ ಹೊಂದಿರುವ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಿಲ್ಲ. ಯುವ ಸಮೂಹದ ನಿರ್ಲಕ್ಷ್ಯ ಮನೋಭಾವದಿಂದ ಇಂದು ಪರಂಪರೆ, ಪದ್ಧತಿ ಮತ್ತು ಸಂಸ್ಕೃತಿ ನಾಶವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳ ತಪ್ಪುಗಳನ್ನು ತಿದ್ದಬೇಕಾದ ತಂದೆ ತಾಯಿಯರು ಕೂಡ ಪದ್ಧತಿ, ಪರಂಪರೆ ಬಗ್ಗೆ ತಿಳಿ ಹೇಳದೆ ಮಕ್ಕಳು ಹೇಳಿದಂತೆ ಕೇಳುತ್ತಿದ್ದಾರೆ.…
ನಾಪೋಕ್ಲು ಅ.13 : ಎನ್ಎಸ್ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು ಶಿಸ್ತು, ಸಂಯಮ ಹಾಗೂ ಸೇವಾ ಮನೋಭಾವನೆಯನ್ನು ರೂಡಿಸಿಕೊಳ್ಳಬೇಕು ಎಂದು ಮೂರ್ನಾಡು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಹೇಳಿದರು. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಶಿಬಿರಾರ್ಥಿಗಳು ಶ್ರಮದಾನದ ಮಹತ್ವವನ್ನು ಅರಿತುಕೊಳ್ಳಬೇಕು, ಮನೆ, ವಠಾರ, ಸಮುದಾಯದ ಸ್ವಚ್ಛತೆಯತ್ತ ಗಮನಹರಿಸಬೇಕು ಎಂದರು. ನಾಪೋಕ್ಲು ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿದರೂ ಜನಸೇವೆಯೇ ಮುಖ್ಯ ಎಂಬುದನ್ನು ಮರೆಯಬಾರದು ಎಂದರು. ಶಿಬಿರದ ಉದ್ಘಾಟನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಹ್ಯಾರಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ರಾಜ ಮಾದಪ್ಪ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ , ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ,…
ನಾಪೋಕ್ಲು ಅ.13 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಮುರ್ನಾಡು ಪದವಿ ಕಾಲೇಜಿನ ಪ್ರಥಮ ಬಿಕಾಂ ನ ವಿದ್ಯಾರ್ಥಿ ಆರ್. ಕೃಷಿಕ ರಾಜ್ ಚಿನ್ನದ ಪದಕ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ವುಶು ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ






