ಮಡಿಕೇರಿ ನ.10 : ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕವಿ, ಚಿಂತಕ ಅರ್ಜುನ್ ಮೌರ್ಯ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ದಲಿತ ಸಾಹಿತ್ಯ ಪರಿಷತ್ತು, ಗದಗ ಈ ಆದೇಶ ಪತ್ರವನ್ನು ಹೊರಡಿಸಿದೆ. ಅರ್ಜುನ್ ಮೌರ್ಯ ಕೊಡಗಿನ ಕವಿ, ಬರಹಗಾರರಾಗಿದ್ದಾರೆ. ಅವನಿ, ಪಯಣ, ಕವರ, ದುಡಿ, ನಾನೂ ನನ್ನ ವ್ಯಾಖ್ಯಾನ, ಬೆಂದೊಡಲ ಕುಣಿತ, ಗುಡಿ, ತೆರೆದ ಅಂಚೆ ಕೃತಿಗಳು ಸೇರಿದಂತೆ ಒಂಭತ್ತು ಕೃತಿಗಳನ್ನು ರಚಿಸಿದ್ದಾರೆ. ಕಥಾಸಂಕಲನ, ಕವನ ಸಂಕಲನ, ಕಾದಂಬರಿ ಹಾಗೂ ಲೇಖನ ಬರಹದಲ್ಲಿ ತೊಡಗಿಸಿಕೊಂಡಿರುವ ಅರ್ಜುನ್ ಮೌರ್ಯ ಅವರಿಗೆ ಇತ್ತೀಚೆಗಷ್ಟೇ 2022ರ ” ಆಥರ್ ಆಫ್ ದ ಇಯರ್ ” ರಾಷ್ಟ್ರೀಯ ಪ್ರಶಸ್ತಿ ದೊರಕಿರುವುದು ವಿಶೇಷ. ಬರಹಲೋಕದಲ್ಲಿ ಹೆಚ್ಚಾಗಿ ದಲಿತ ಬಂಡಾಯ ಸಾಹಿತ್ಯದಲ್ಲಿ ಗುರುತಿಸಿಕೊಂಡಿರುವ ಅವರು ಹಲವು ಸಂಘಟನೆಗಳೊಂದಿಗೆ ಸಮಾಜಸೇವೆಯಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಅವರು ಖಾಸಗಿ ಪದವಿ ಕಾಲೇಜೊಂದರಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಲೇಖಕ: admin
ಮಡಿಕೇರಿ ನ.10 : ಪ್ರಸಕ್ತ(2023-24) ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕು ಯುವ ಒಕ್ಕೂಟ, ಬೆಟ್ಟದಹಳ್ಳಿ ಸಿದ್ದಾರ್ಥನಗರ ಮಾನವತ ಯುವ ಸಂಘ ಇವರ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನ.20 ರಂದು ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಹಳ್ಳಿ ಶಾಂತಳ್ಳಿ ಕುಮಾರ ಲಿಂಗೇಶ್ವರ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯುವಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲೆ 9481213920, 9591137275, ಚಂದ್ರಿಕಾ, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಸೋಮವಾರಪೇಟೆ ದೂ.ಸಂ.9480747935 ಮತ್ತು ಆದರ್ಶ್, ಅಧ್ಯಕ್ಷರು, ಮಾನವತ ಯುವಕ ಸಂಘ, ಬೆಟ್ಟದಳ್ಳಿ, ಶಾಂತಳ್ಳಿ ಮೊ.ಸಂ.9141079884 ನ್ನು ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಸ್ಪರ್ಧೆಗಳ ವಿವರ: ಜನಪದ…
ಮಡಿಕೇರಿ ನ.10 : 68 ನೇ ಕನ್ನಡ ರಾಜ್ಯೋತ್ಸವ ಮತ್ತು ‘ಕರ್ನಾಟಕ ಸುವರ್ಣ ಸಂಭ್ರಮ-50 ರ ಆಚರಣೆಯ ಪ್ರಯುಕ್ತ ನ.22 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆಯ ಮಹಿಳಾ ಸಮಾಜದಲ್ಲಿ ಶಾಲಾ, ಕಾಲೇಜು, ಸಾರ್ವಜನಿಕರಿಗೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಿಂಬಿಸುವ ಸ್ಪರ್ಧೆಗಳು ನಡೆಯಲಿದೆ. ಈ ಸ್ಪರ್ಧೆಗಳ ಬಹುಮಾನವನ್ನು ನ.30 ರಂದು ಮಧ್ಯಾಹ್ನ 2.30 ಗಂಟೆಗೆ ಸೋಮವಾರಪೇಟೆ ಮಹಿಳಾ ಸಮಾಜದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ನೀಡಲಾಗುವುದು. ರಸ ಪ್ರಶ್ನೆ ಸ್ಪರ್ಧೆ ಪ್ರೌಢಶಾಲೆ/ ಕಾಲೇಜು(ಪ್ರತಿ ಶಾಲಾ ಕಾಲೇಜಿನಿಂದ 3 ವಿದ್ಯಾರ್ಥಿಗಳಿಗೆ ಅವಕಾಶ) ಹೆಸರು ನೋಂದಾಯಿಸಲು ವಸತಿ ರವೀಂದ್ರ 8970075594. ಚಿತ್ರಕಲಾ ಸ್ಪರ್ಧೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು(ಪ್ರತಿ ಶಾಲಾ ಕಾಲೇಜಿನಿಂದ 3 ವಿದ್ಯಾರ್ಥಿಗಳಿಗೆ ಅವಕಾಶ) ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಹೆಸರು ನೋಂದಾಯಿಸಲು ಹರೀಶ್ 9448896487, ಸಿ.ಸಿ.ನಂದ 7760530274. ಛದ್ಮವೇಷ ಸ್ಪರ್ಧೆ: ಯುಕೆಜಿಯಿಂದ 3 ನೇ ತರಗತಿ, 4 ನೇ ತರಗತಿಯಿಂದ 7ನೇ ತರಗತಿ, 8ನೇ ತರಗತಿಯಿಂದ 10ನೇ ತರಗತಿಯವರೆಗೆ (ಕನ್ನಡ ನಾಡು ನುಡಿ…
ಮಡಿಕೇರಿ ನ.10 : ರಾಜ್ಯ ಸಕಾ೯ರ ಜನತೆಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವ ಕಾಯ೯ಕ್ಕೆ ಆದ್ಯತೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ. ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ನೀಮಾ ಸಂಸ್ಥೆಯಿಂದ ಆಯೋಜಿತ ರಾಷ್ಟ್ರೀಯ 8ನೇ ಆಯುವೇ೯ದ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಸಂರಕ್ಷಣೆಯಲ್ಲಿ ಆಲೋಪತಿ ಮತ್ತು ಆಯುವೇ೯ದ ಚಿಕಿತ್ಸೆಗಳು ಬಹುಮುಖ್ಯ ಪಾತ್ರ ವಹಿಸಿದೆ. ಪುರಾತನ ಕಾಲದ ಐತಿಹ್ಯ ಹೊಂದಿರುವ ಆಯುವೇ೯ದ ಮತ್ತು ಅಲೋಪತಿ ಔಷಧೀಯ ಪದ್ದತಿಗಳ ಬಗ್ಗೆ ಆಗಿಂದಾಗ್ಗೆ ಚಚೆ೯ಗಳು ನಡೆಯುತ್ತಲೇ ಇದೆ. ಹೀಗಿದ್ದರೂ ಆಯುವೇ೯ದ ಮತ್ತು ಅಲೋಪತಿ ಎರಡೂ ಪದ್ದತಿಗಳನ್ನು ಅಗತ್ಯವಿದ್ದಷ್ಟು ಬಳಸಿಕೊಂಡು ಪ್ರತೀಯೋವ೯ರು ತಮ್ಮ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಗಮನ ಹರಿಸಲು ಸಾಧ್ಯ ಎಂದು ಹೇಳಿದರು. ಇಂದಿನ ದಿನಗಳಲ್ಲಿ ಬಹುತೇಕ ಮಂದಿ ಒತ್ತಡದ ಜೀವನ ಕ್ರಮದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಎಲ್ಲಕ್ಕಿಂತ ಮೊದಲು ಮಾನಸಿಕವಾಗಿ ಪ್ರತೀಯೋವ೯ರು ಸಂತೋಷದಿಂದ…
ಮಡಿಕೇರಿ ನ.10 : ಕುಶಾಲನಗರದ ಬಿ.ಎಂ ರಸ್ತೆಯ ನಿವಾಸಿ ಹೃದಯ ರೋಗ ತಜ್ಞರಾದ ಡಾ.ಕಿರಣ್ ಕಾಳಪ್ಪ ಅವರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಆಗಿ ಮುಂಬಡ್ತಿ ಹೊಂದಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಕಮಾಂಡೋ ಆಸ್ಪತ್ರೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಡಾ.ಕಿರಣ್ ಇದೀಗ ಮುಂಬಡ್ತಿ ಹೊಂದಿ ಕೊಲ್ಕತ್ತಾದ ಕಮಾಂಡೋ ಆಸ್ಪತ್ರೆಯಲ್ಲಿ ಹೃದಯ ರೋಗ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಪತ್ನಿ ಡಾ.ಕಾವ್ಯಶ್ರೀ ದಂತರೋಹ ತಜ್ಞರಾಗಿದ್ದಾರೆ. ಡಾ.ಕಿರಣ್ ಕಾಳಪ್ಪ ಕುಶಾಲನಗರ ಚೌಡ್ಲು ಕಾಳಪ್ಪ ಹಾಗೂ ಕಾವೇರಿ ಅವರ ಪುತ್ರ.
ಮಡಿಕೇರಿ ನ.10 : ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದು, ತಕ್ಷಣ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಕ್ಕಬ್ಬೆ ಶ್ರೀಇಗ್ಗುತ್ತಪ್ಪ ದೇವಾಲಯದ ರಸ್ತೆ ಸಂಪೂರ್ಣವಾಗಿ ಹೊಂಡ, ಗುಂಡಿಗಳಾಗಿದ್ದು, ಮಳೆಯ ಸಂದರ್ಭ ಕೆರೆಯಂತ್ತಾಗುತ್ತದೆ. ವಾಹನಗಳು, ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳ ಸಂಚಾರ ಅಸಾಧ್ಯವಾಗಿದೆ. ಆದ್ದರಿಂದ ರಸ್ತೆ ಡಾಂಬರೀಕರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು, ಶುಚಿತ್ವಕ್ಕೆ ಆದ್ಯತೆ ನೀಡಬೇಕು ಮತ್ತು ಬೀದಿದೀಪಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿರುವ ಗ್ರಾಮಸ್ಥರು ಸಕಾಲದಲ್ಲಿ ಮೂಲಭೂತ ಸೌಲಭ್ಯ ನೀಡದಿದ್ದಲ್ಲಿ ಗ್ರಾ.ಪಂ ಗೆ ಕಂದಾಯ ಪಾವತಿ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಮಡಿಕೇರಿ ನ.10 : ನಾಪೋಕ್ಲು ಪಂಚಾಯತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಾಕ್ಷಾರತ ಕಾರ್ಯಕ್ರಮದ ಸಾಮಾಜಿಕ ಚೇತನ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಬಿ.ಆರ್.ಪಿ ಮಂಜುಳಾ, ಸಿ ಆರ್ ಪಿ ಕಲ್ಪನಾ ಮತ್ತು ಇನ್ನಿತರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ನ.10 : 3ನೇ ಹಾಕಿ ಇಂಡಿಯಾ ಹಿರಿಯ ಪುರುಷರ (senior national) ಹಾಕಿ ಚಾಂಪಿಯನ್ ಶಿಪ್ ನ ತೀರ್ಪುಗಾರರಾಗಿ ಹರ್ಷಿತ್ ಅಯ್ಯಪ್ಪ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯು ನ.16 ರಿಂದ 28ರ ವರೆಗೆ ಚೆನ್ನೈನಲ್ಲಿ ನಡೆಯಲಿದೆ. ಹರ್ಷಿತ್ ಅಯ್ಯಪ್ಪ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟ್ಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಮತ್ತು ಭೋಜಮ್ಮ ದಂಪತಿಯ ಪುತ್ರ. ವರದಿ : ದುಗ್ಗಳ ಸದಾನಂದ
ಸುಂಟಿಕೊಪ್ಪ ನ.10 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಸಮಿತಿಗೆ ಟಿ.ಕೆ.ಸಾಯಿಕುಮಾರ್ ಅವರು ತಮ್ಮ ತಂದೆ ಟಿ.ಕೆ.ಕುಮಾರನ್ ಹಾಗೂ ತಾಯಿ ಕೆ.ಎನ್.ಭಾರತಿ ಅವರ ನೆನಪಿಗಾಗಿ ಘೋಷಿಸಿದ್ದ 25ಸಾವಿರ ರೂ.ಗಳ ದತ್ತಿನಿಧಿಯನ್ನು ವಿತರಿಸಿದರು. ಸುಂಟಿಕೊಪ್ಪದಲ್ಲಿ ನಡೆದ ಈ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಟಿ.ಕೆ.ಸಾಯಿಕುಮಾರ್ ಅವರು ಘೋಷಿಸಿದ್ದ ದತ್ತಿನಿಧಿಯನ್ನು ಅತ್ತೂರುನಲ್ಲೂರು (ಕಂಬಿಬಾಣೆ)ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಬಿ.ಸಿ.ದಿನೇಶ್, ಗೌರವಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಬಿ.ವಿನ್ಸೆಂಟ್, ನಿರ್ದೇಶಕರಾದ ಕೆ.ಹೆಚ್.ಶಿವಣ್ಣ, ಸಿಲ್ವೆಸ್ಟರ್ ಡಿಸೋಜಾ, ಅಲ್ಫ್ರೆಡ್ ಡಿಸೋಜಾ ಅವರುಗಳಿಗೆ ಚೆಕ್ ಹಸ್ತಾಂತರಿಸಿದರು.
ಸುಂಟಿಕೊಪ್ಪ ನ.10 : ಅಗ್ನಿ ಬೆಳಕಿನ ಸಂಕೇತವಾಗಿದ್ದು, ಅಗ್ನಿಯ ಅಂಶವಾಗಿರುವ ದೀಪಾರಾಧನೆಯಿಂದ ಮನೆ ಮನಗಳಲ್ಲಿ ಜ್ಞಾನ ಜ್ಯೋತಿಯನ್ನು ಹಚ್ಚಿ ಮಕ್ಕಳಲ್ಲಿ ನಮ್ಮ ಧರ್ಮ ಪರಂಪರೆ ಆಚಾರ ವಿಚಾರಗಳ ಅರಿವು ಮೂಡಿಸು ಕೆಲಸವಾಗಲೆಂದು ಸಿದ್ಧಲಿಂಗಪುರದ ಅರಶಿನಗುಪ್ಪೆಯ ಶ್ರೀ ಮಂಜುನಾಥ ಕ್ಷೇತ್ರದ ಮುಖ್ಯಸ್ಥರು ಮತ್ತು ಅಖಿಲಭಾರತ ಸಂತಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಜಿ.ರಾಜೇಶ್ನಾಥ ಕರೆ ನೀಡಿದರು. ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಧಾರ್ಮಿಕ ಉಪನ್ಯಾಸ ನೀಡಿದರು. ಕೋವಿಡ್ ಬಂದ ಸಂದರ್ಭದಲ್ಲಿ ತುಳಸಿ ಗಿಡದ ಮಹತ್ವ ಮನೆಯ ಮುಂದೆ ಸಗಣಿ ಸಾರಿಸಿ ಶುದ್ಧತೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವ ಅವಶ್ಯಕತೆಯ ಪ್ರಾಮುಖ್ಯತೆಯನ್ನು ಕಂಡುಕೊಂಡೆವು. ಆದರೆ ನಮ್ಮ ಹಿರಿಯರು ಪದ್ಧತಿ ಪರಂಪರೆಗಳ ಆಚರಣೆಯ ಹಿನ್ನಲೆಯಲ್ಲಿ ಬಹಳ ಹಿಂದೆಯೇ ಇದನ್ನು ಕಂಡುಕೊಂಡಿದ್ದರು. ಕೃಷಿ ನಮ್ಮ ಬೆನ್ನಲುಬು ಆಗಿದ್ದು ಮನೆಯಂಗಳದಲ್ಲಿ ತರಕಾರಿ ಹೂವಿನ ಗಿಡದೊಂದಿಗೆ ಸಾವಯವ…






