ಲೇಖಕ: admin

ಮಡಿಕೇರಿ ನ.10 : ಕುಶಾಲನಗರದ ಕಾಫಿ ಉದ್ಯಮಿ ನರೇಂದ್ರ ಹೆಬ್ಬಾರ್ (57) ಅವರು ನಿಧನ ಹೊಂದಿದ್ದಾರೆ. ಕಾಫಿ ಸಮ್ಮೇಳನದಲ್ಲಿ  ಪಾಲ್ಗೊಳ್ಳಲು ಐದು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಅವರು ಅಸ್ವಸ್ಥಗೊಂಡಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ ಹೊಂದಿದರು. ಸಿದ್ದಾಪುರದ ನಿವಾಸಿಯಾಗಿರುವ ನರೇಂದ್ರ ಅವರು ಕುಶಾಲನಗರ ಸಮೀಪ ಕೊಪ್ಪದಲ್ಲಿ ಕಾಫಿ ಕೆಫೆಯನ್ನು ಹೊಂದಿದ್ದರು. ಜಿಲ್ಲೆಯ ಕಾಫಿ ಉದ್ಯಮಿಗಳು ನರೇಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More

ಸುಂಟಿಕೊಪ್ಪ ನ.10 : ಕಂಬಿಬಾಣೆ ಸರಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು. ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ತಾವು ಸೇರಿದಂತೆ ಹೆಚ್ಚಿನವರು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದವರು. ಕನ್ನಡ ಮಾಧ್ಯಮದಲ್ಲಿ ಓದಿದವರು ಹಿಂದುಳಿಯುತ್ತಾರೆ. ಇಂಗ್ಲೀಷ್ ಮಾಧ್ಯಮದಲ್ಲಿ ಓದಿದವರು ಬುದ್ಧಿವಂತರು ಎಂಬ ಭ್ರಮೆ ನಮ್ಮಲ್ಲಿದೆ ಅದನ್ನು ಹೊಗಲಾಡಿಸಬೇಕು ಎಂದು ಕರೆ ನೀಡಿದ ಅವರು ಈಗಾಗಲೇ ತಮ್ಮ ಸ್ನೇಹಿತರು ಆಗಿರುವ ಮಧುಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದು, ವಿಷಯ ಪ್ರಸ್ತಾಪಮಾಡಿ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಕೂಡ ಅವರು ನೀಡಿದ್ದಾರೆ ಎಂದು ತಿಳಿಸಿದರು. ಮ್ಯಾಗಡೂರ್ ಶ್ರೀ ವಿಶ್ವನಾಥ ದೇವಸ್ಥಾನ ಆಡಳಿತ ಮಂಡಳಿಯವರು ಈ ಶಾಲೆಯನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಸರಕಾರದೊಂದಿಗೆ ವ್ಯವಹಾರಿಸಲಾಗುವುದು…

Read More

ಮಡಿಕೇರಿ ನ.10 : ಟಿಪ್ಪು ಜಯಂತಿಯ ಸಂದರ್ಭ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ದೇವಪ್ಪಂಡ ಕುಟ್ಟಪ್ಪ ಅವರ ಸ್ಮರಣಾರ್ಥ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು. ಮಡಿಕೇರಿ ನಗರದ ಶ್ರೀಓಂಕಾರೇಶ್ವರ ದೇವಾಲಯ, ಕುಟ್ಟಪ್ಪ ಅವರ ಹುಟ್ಟೂರಾದ ಮಾದಾಪುರದ ಶ್ರೀಗಣಪತಿ ದೇವಾಲಯ, ಕುಶಾಲನಗರದ ಶ್ರೀಗಣಪತಿ ದೇವಾಲಯ, ವಿರಾಜಪೇಟೆಯ ಬಾಲಾಂಜನೇಯ ದೇವಾಲಯ ಸೇರಿದಂತೆ ವಿವಿಧೆಡೆ ಪೂಜೆ ಸಲ್ಲಿಸಿ ಕುಟ್ಟಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು. ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More

ಮಡಿಕೇರಿ ನ.9 : ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ದಸರಾ ಮಂಟಪದ ಕಲಾಕೃತಿಗಳಿಗೆ ಇತ್ತೀಚೆಗೆ ಶಾಂತಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. 47 ನೇ ದಸರಾ ಉತ್ಸವದ ಪ್ರಯುಕ್ತ ಆಯೋಜಿಸಿದ್ದ ಲಕ್ಕಿಡಿಪ್ ನ ಡ್ರಾ ಕೂಡ ಇದೇ ಸಂದರ್ಭ ನಡೆಯಿತು. ವಿಜೇತರು ಲಕ್ಕಿಡಿಪ್ ಕೂಪನ್ ನನ್ನು ಹಾಜರು ಪಡಿಸಿ ನ.25 ರೊಳಗೆ ಬಹುಮಾನ ಪಡೆದುಕೊಳ್ಳುವಂತೆ ಶ್ರೀಕೋಟೆ ಮಹಾಗಣಪತಿ ಮಂಟಪ ಸಮಿತಿಯ ಅಧ್ಯಕ್ಷ ಹೆಚ್.ಪಿ.ಲೋಕೇಶ್ ಮನವಿ ಮಾಡಿದ್ದಾರೆ. ::: ಫಲಿತಾಂಶ ::: ಪ್ರಥಮ ಬಹುಮಾನ ಸಂಖ್ಯೆ 3271 (ರೂ.25 ಸಾವಿರ), ದ್ವಿತೀಯ ಬಹುಮಾನ ಸಂಖ್ಯೆ 1892 (ರೂ.15 ಸಾವಿರ) ಮತ್ತು ತೃತೀಯ ಬಹುಮಾನ ಸಂಖ್ಯೆ 3642 (ರೂ.10 ಸಾವಿರ)

Read More

ಮಡಿಕೇರಿ ನ.9 : ನಾಪೋಕ್ಲುವಿನ ನೂರಂಬಡನಾಡ್ ಬೆತ್ ಮಂದ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಒತ್ತಾಯಿಸಿ ಪಾದಯಾತ್ರೆ ಮತ್ತು ಕೊಡವ ಜಾಗೃತಿ ಸಭೆ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಾಪೋಕ್ಲು ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ಮಾನವ ಸರಪಳಿ ನಿರ್ಮಿಸಿದ ಪ್ರಮುಖರು ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಕೋವಿಯೊಂದಿಗೆ ನೂರಂಬಡನಾಡ್ ಬೆತ್ ಮಂದ್ ಗೆ ಪಾದಯಾತ್ರೆಯಲ್ಲಿ ಸಾಗಿದ ಕೊಡವ, ಕೊಡವತಿಯರು ಸಿಎನ್‌ಸಿ ಮಂಡಿಸಿರುವ 9 ಬೇಡಿಕೆಗಳ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುತ್ತಿರುವ ಔಚಿತ್ಯದ ಕುರಿತು ಎನ್.ಯು.ನಾಚಪ್ಪ ವಿವರಿಸಿದರು. ಕೊಡವರು ಜಾಗೃತರಾದರೆ ಮಾತ್ರ ಸಂವಿಧಾನದಡಿ ಸಿಗಬೇಕಾದ ನ್ಯಾಯಯುತ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಿಎನ್‌ಸಿ ಯ ಶಾಂತಿಯುತ ಹೋರಾಟದೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು. ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆ ಬದ್ದವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ…

Read More

ಮಡಿಕೇರಿ ನ.9 :  ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ  ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ ಚಿನ್ನ ಗೆದ್ದಿದ್ದಾರೆ. ಕೊಯಮತ್ತೂರಿನಲ್ಲಿ  ನಡೆದ  38ನೇ ರಾಷ್ಟ್ರೀಯ  ಜ್ಯೂನಿಯರ್   ಕ್ರೀಡಾಕೂಟದಲ್ಲಿ  20 ವಷ೯ದೊಳಗಿನ ಮಹಿಳೆಯರ ವಿಭಾಗದ 100 ಮೀಟರ್ ಹಡ೯ಲ್ಸ್ ನಲ್ಲಿ  ಉನ್ನತಿ ಅಯ್ಯಪ್ಪ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈಕೆ ಮಡಿಕೇರಿ ಮೂಲದವರಾಗಿದ್ದು, ರಾಷ್ಟ್ರೀಯ ಅಥ್ಲೆಟಿಕ್ ಕೋಚ್ ಬೊಳ್ಳಂಡ ಅಯ್ಯಪ್ಪ ಮತ್ತು ಒಲಂಪಿಯನ್ ಪ್ರಮೀಳಾ ಅಯ್ಯಪ್ಪ ಅವರ ಪುತ್ರಿ.

Read More

ಮಡಿಕೇರಿ ನ.9 : ವಿದ್ಯುತ್ ಲೈನ್ ದುರಸ್ತಿ ಪಡಿಸುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶಗೊಂಡು ಲೈನ್ ಮೆನ್ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಆರ್ಜಿ ಗ್ರಾಮದಲ್ಲಿ ನಡೆದಿದೆ. ಅನಿಲ್ ಮ್ಯಾನೇಜಸ್(45) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ಅನಿಲ್ ಅವರು ವಿರಾಜಪೇಟೆ ವಲಯದಲ್ಲಿ ಲೈನ್‍ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೆಗ್ಗಳ ವಿಭಾಗಕ್ಕೆ ಒಳಪಡುವ ಆರ್ಜಿ ಗ್ರಾಮದಲ್ಲಿ 11 ಕೆ.ವಿ ವಿದ್ಯುತ್ ತಂತಿ ದುರಸ್ತಿಪಡಿಸುತ್ತಿದ್ದ ಸಂದರ್ಭ ಮತ್ತೊಂದು ಭಾಗದಲ್ಲಿ ತುಂಡಾಗಿ ಬಿದ್ದಿದ್ದ ತಂತಿಯಿಂದ ಭೂಮಿಗೆ ವಿದ್ಯುತ್ ಪ್ರಹರಿಸಿ ಅನಿಲ್ ಮ್ಯಾನೇಜಸ್ ಸ್ಥಳದಲ್ಲೇ ಮೃತಪಟ್ಟರು. ಘಟನಾ ಸ್ಥಳಕ್ಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಪಿ.ಎಸ್, ಸಹಾಯಕ ಇಂಜಿನಿಯರ್ ಟೆಕ್ನಿಕಲ್ ವಿಭಾಗದ ಸೋಮೇಶ್, ಸಹಾಯಕ ಇಂಜಿನಿಯರ್ ಅಯ್ಯನ ಗೌಡ ಪಾಟೀಲ್ ಅವರುಗಳು ಭೇಟಿ ನೀಡಿದರು. ದುರಂತದ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಾಗಿದೆ.

Read More

ಮಡಿಕೇರಿ ನ.9 : ಇತ್ತೀಚೆಗೆ ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರು ಒಂದೇ ದಿನ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಶಾಸಕರು ಇಬ್ಬರು ಮಹಿಳೆಯರ ನಾಪತ್ತೆ ಪ್ರಕರಣದ ಬಗ್ಗೆ ವಿಶೇಷ ಕಾಳಜಿ ತೋರಿ ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಪತ್ತೆ ಮಾಡಲು ಪೊಲೀಸರು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಭದ್ರತೆ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ. ಕೆಲವು ದಿನಗಳ ಹಿಂದೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಕೊಲೆಯಾಗಿದೆ. ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಪ್ರಕರಣಗಳು ಹೆಚ್ಚಾಗಿದೆ. ಕೆಲವು ಪ್ರಕರಣಗಳಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದೀಗ ಗೋಣಿಕೊಪ್ಪ ಮಹಿಳೆಯರ ನಾಪತ್ತೆ ಪ್ರಕರಣ ಆತಂಕವನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.

Read More