ಲೇಖಕ: admin

ಮಡಿಕೇರಿ ಅ.12 : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜನ್ನು ಉಳಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಪೋಷಕರು ಶಿಕ್ಷಕರು ಒಂದಾಗಿ ಮುನ್ನಡೆಯಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪೋಷಕ ಶಿಕ್ಷಕರ ಸಂಘದ ಅಧ್ಯಕ ಕೆ.ಪಿ.ಮಾಥ್ಯೂ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪೋಷಕ ಶಿಕ್ಷಕರ ಸಂಘದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಲೇಜು ಸಮಾಜಕ್ಕೆ ಮಹನೀಯ ಸಾಧಕರನ್ನು ಕೊಡುಗೆಯಾಗಿ ನೀಡಿದೆ. ಚಾರಿತ್ರಿಕವಾಗಿ ಕಾಲೇಜಿಗೆ ಮಹತ್ತರವಾದ ಸ್ಥಾನಮಾನ ಇದೆ. ಆ ಹಾದಿಯನ್ನು ಕಾಲೇಜಿನ ಚರಿತ್ರೆಗೆ ಕುಂದುಬರದಂತೆ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವುಗಳು ರೂಪುರೇಷೆ ಕೈಗೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಕಾಲೇಜಿಗೆ 75 ವರ್ಷಗಳ ಸುದೀರ್ಘ ಇತಿಹಾಸ ಇದೆ. ಮುಂದಿನ ವರ್ಷ ಕಾಲೇಜು ತನ್ನ 75 ವರ್ಷಗಳ ಸಂಭ್ರಮಾಚರಣೆಗೆ ಸಿದ್ಧವಾಗುತ್ತಿದೆ. ಕಾಲೇಜು ಶೈಕ್ಷಣಿಕವಾಗಿ ಮಹೋನ್ನತವಾದ ಸಾಧನೆಯನ್ನು ತನ್ನ ಚರಿತ್ರೆಯ ಪುಟದಲ್ಲಿ ದಾಖಲಿಸಿದೆ. ಈ ಬಾರಿ ಅತೀ ಹೆಚ್ಚು…

Read More

ಮಡಿಕೇರಿ ಅ.12 : ಉತ್ತರ ಪ್ರದೇಶ ರಾಜ್ಯದಿಂದ ಪಂಚಾಯತ್ ರಾಜ್ ಸಂಸ್ಥೆಗಳ ಸುಮಾರು 30 ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ತಂಡ ಕರ್ನಾಟಕ ರಾಜ್ಯಕ್ಕೆ ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದಾರೆ. ಕರ್ನಾಟಕದಲ್ಲಿನ ಪಂಚಾಯತ್ ರಾಜ್ ವ್ಯವಸ್ಥೆ, ಪಂಚಾಯತ್ ರಾಜ್ ಸಂಸ್ಥೆಗಳ ಯೋಜನೆ ಮತ್ತು ಮೇಲ್ವಿಚಾರಣೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಯಕ್ರಮ ಮತ್ತು ಯೋಜನೆಗಳ ಅನುಷ್ಠಾನ, ವಿನೂತನ ಚಟುವಟಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳುವ ಮತ್ತು ಸೂಕ್ತವಾದವುಗಳನ್ನು ಅನುಕರಣೆ ಮಾಡುವ ಉದ್ದೇಶದಿಂದ ಪ್ರವಾಸವನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ವಂತ ಮೂಲ ಆದಾಯ ನಿರ್ವಹಣೆ ಬಗ್ಗೆ ಸಂವಾದ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Read More

ಪುತ್ತೂರು ಅ.12 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಧನ್ಯ.ಪಿ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ (Cadence Design Systems) ಸಂಸ್ಥೆಗೆ ಆಯ್ಕೆಯಾಗಿದ್ದಾರೆ. 2024ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ವಯ ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 1 ರಂದು ನಡೆದ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿ ಧನ್ಯ ಆಯ್ಕೆಯಾಗಿದ್ದಾರೆ.  ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ಕ್ಷೇತ್ರದ ದಿಗ್ಗಜ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಯು ಕಾಲೇಜಿಗೆ ಭೇಟಿ ನೀಡಿತ್ತು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 14 ಇಂಜಿನಿಯರಿಂಗ್ ಕಾಲೇಜುಗಳ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 470 ಅರ್ಹ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಒಟ್ಟು ಏಳು ಸುತ್ತಿನಲ್ಲಿ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ಅಂತಿಮವಾಗಿ ಇಬ್ಬರು ಆಯ್ಕೆಯಾಗಿದ್ದಾರೆ. ವಾರ್ಷಿಕ 15 ಲಕ್ಷ ರೂಪಾಯಿ ವೇತನ ನೀಡುವ ಹುದ್ದೆಗೆ ನಡೆದ ನೇಮಕಾತಿ ಇದಾಗಿದೆ. ಕಾಲೇಜಿನ ಎಲ್ಲಾ…

Read More

ಮಡಿಕೇರಿ ಅ.12 : ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿಯಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಇಂತಹ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರವು ‘ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’’ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು 2012 ರಲ್ಲಿ ಜಾರಿಗೆ ತಂದಿದೆ. ಈ ಯೋಜನೆಯಡಿ ದೊರಕುವ ಸೌಲಭ್ಯಗಳು ಇಂತಿವೆ. ಅಪಘಾತ ಪರಿಹಾರ ಯೋಜನೆಯ ವಿಶೇಷತೆಗಳು. ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಯೋಜನೆಯು…

Read More

ಮಡಿಕೇರಿ ಅ.12 : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ 3 ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು(ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ…

Read More

ಮಡಿಕೇರಿ ಅ.11 : ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 3ನೇ ಹಂತದ ಪಾದಯಾತ್ರೆಯ ಮುಂದುವರಿದ ಭಾಗವನ್ನು ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ-ತೆರಾಲ್-ಬಿರುನಾಣಿಯ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ನಾಲ್ಕು ನಾಡು ಮಂದ್‌ಗಳಲ್ಲಿ ಪಾದಯಾತ್ರೆ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಕೋವಿಯೊಂದಿಗೆ ಸಾಗಿದ ಪ್ರಮುಖರು ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕೊಡವ ಜಾಗೃತಿ ಸಭೆ ನಡೆಸಿದ ನಾಚಪ್ಪ, ಸಿಎನ್‌ಸಿ ಹೋರಾಟಕ್ಕೆ ಬೆಂಬಲ ಕೋರಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡಗಿನ ಆದಿಮಸಂಜಾತ ಕೊಡವ ಜನಾಂಗವನ್ನು ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಈ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಎಸ್.ಟಿ ಪಟ್ಟಿಗೆ ಸೇರಿಸುವುದು ವರ್ತಮಾನದ ಅನಿವಾರ್ಯ ಅವಶ್ಯಕತೆಯಾಗಿದೆ. ಆದ್ದರಿಂದ ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ÷್ಮ, ಸಮಗ್ರ ಕುಲಶಾಸ್ತ್ರ ಅಧ್ಯಯನ ಆರಂಭಿಸಬೇಕು. ಕೊಡವ…

Read More

ಮಡಿಕೇರಿ ಅ.11 : ಇತ್ತೀಚಿನ ದಿನಗಳಲ್ಲಿ ಮಡಿಕೇರಿ ನಗರದ ವೃತ್ತಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ಅಜಾಗರೂಕತೆ ಮತ್ತು ಸಂಚಾರಿ ಪೊಲೀಸರ ಅಲಭ್ಯತೆ ಕಾರಣವಾಗಿದೆ ಎಂದು ಕೊಡಗು ರಕ್ಷಣಾ ವೇದಿಕೆ ಆರೋಪಿಸಿದೆ. ಇಂದು ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಕೆಎಸ್‌ಆರ್‌ಟಿಸಿ ಬಸ್ ಮತ್ತೆ ಡಿಕ್ಕಿಯಾಗಿ ಹಾನಿಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಅವರು ಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೆಎಸ್‌ಆರ್‌ಟಿಸಿ ಯಲ್ಲಿ ನುರಿತ ಖಾಯಂ ಚಾಲಕರ ಕೊರತೆ ಎದುರಾಗಿರುವ ಕಾರಣ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಬಸ್ ಚಲಾಯಿಸಿ ಅನುಭವವಿಲ್ಲದ ಹೊರ ಜಿಲ್ಲೆಯ ಚಾಲಕರು ಬೆಟ್ಟ ಗುಡ್ಡ, ತಿರುವು ಪ್ರದೇಶದ ಕೊಡಗಿನಲ್ಲಿ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಇತ್ತೀಚೆಗೆ ಸೂರ್ಲಬ್ಬಿಯಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಸಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತ ಮತ್ತು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬಸ್…

Read More

ಮಡಿಕೇರಿ ಅ.11 : ಕಾಂತರಾಜ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರುವಂತೆ ಮತ್ತು ಮುಸ್ಲಿಮರ 2ಬಿ ಮೀಸಲಾತಿ ಪ್ರಮಾಣವನ್ನು ಶೇ.8ಕ್ಕೆ ಏರಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ, ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, 2014ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕಾಂತರಾಜು ಆಯೋಗವನ್ನು ನೇಮಿಸಿ ಜನಗಣತಿಗೆ ಆದೇಶಿಸಿದ್ದರು. ಅದರಂತೆ 2018ರಲ್ಲಿ ಆಯೋಗವು ವರದಿ ಸಿದ್ದಪಡಿಸಿತ್ತು. ಆದರೆ ಕಾರಣಾಂತರಗಳಿಂದ ವರದಿ ಪ್ರಕಟಗೊಂಡಿರಲಿಲ್ಲ. ನಂತರ ಬಂದ ಸರ್ಕಾರಗಳು ವರದಿಯನ್ನು ಅಂಗೀಕರಿಸುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು. ಇದೀಗ ಕಾಂತರಾಜು ಆಯೋಗ ವರದಿ ಸಿದ್ದವಿದ್ದು, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಲು ತಕ್ಷಣವೇ ಅಂಗೀಕರಿಸಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು. 2ಬಿ ಮೂಲಕ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ಹಿಂದಿನ ಬಿಜೆಪಿ ಸರ್ಕಾರ ರದ್ದು…

Read More

ಮಡಿಕೇರಿ ಅ.11 : ಪಡಿತರ ಚೀಟಿ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗಾಗಿ ಸರ್ಕಾರ ಅ.10 ರವರೆಗೆ ಕಾಲಾವಕಾಶ ನೀಡಿತ್ತಾದರೂ ಸರ್ವರ್ ಸಮಸ್ಯೆಯಿಂದ ಹಲವರು ಈ ಅವಕಾಶದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಅರ್ಜಿದಾರರ ಹಿತದೃಷ್ಟಿಯಿಂದ ದಿನ ವಿಸ್ತರಣೆ ಮಾಡಬೇಕೆಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ. ಮಡಿಕೇರಿ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದ ಅವರು ಸರ್ವರ್ ಸಮಸ್ಯೆ ಕುರಿತು ಸಾಲುಗಟ್ಟಿ ನಿಂತಿದ್ದ ಅರ್ಜಿದಾರರೊಂದಿಗೆ ಚರ್ಚಿಸಿದರು. ಸರ್ಕಾರ ಅ.10 ರವರೆಗೆ ಪಡಿತರ ಚೀಟಿ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗೆ ಅವಕಾಶ ನೀಡಿರುವುದಾಗಿ ಘೋಷಣೆ ಮಾಡಿತೇ ಹೊರತು ಸರ್ವರ್ ಸಮಸ್ಯೆಯನ್ನು ಬಗೆಹರಿಸಿಲ್ಲ. ಪ್ರತಿದಿನ ತಾಲ್ಲೂಕು ಕಚೇರಿಗೆ ಬರುತ್ತಿರುವ ಅರ್ಜಿದಾರರು ದಿನವಿಡೀ ಸಾಲುಗಟ್ಟಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ. ಹಲವರು ಅರ್ಜಿ ವಿಲೇವಾರಿಯಾಗದೆ ಮರಳಿದ್ದಾರೆ. ಪಡಿತರ ಚೀಟಿ ಇಲ್ಲದೆ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಲೀಲಾ ಶೇಷಮ್ಮ ಅಸಮಾಧಾನ ವ್ಯಕ್ತಪಡಿಸಿದರು. ತಾಂತ್ರಿಕ ವ್ಯವಸ್ಥೆಗಳನ್ನು ಮೇಲ್ದರ್ಜೆಗೇರಿಸುತ್ತಿಲ್ಲ. ಸರ್ವರ್ ಕೈಕೊಟ್ಟ ಪರಿಣಾಮ ನೂರಾರು ಅರ್ಜಿದಾರರ ಪಡಿತರ ಚೀಟಿ…

Read More

ಮಡಿಕೇರಿ ಅ.11 : ಯುವ ದಸರಾ ನೃತ್ಯ ಸ್ಪರ್ಧೆಗೆ ತಂಡಗಳನ್ನು ಆಯ್ಕೆ ಮಾಡಲು, ಆಯ್ಕೆ ಪ್ರಕ್ರಿಯೆಯನ್ನು ಅ.14 ರಂದು ನಗರದ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಯ್ಕೆಯಾದ ತಂಡಗಳ ನಡುವೆ ಅ.21 ರಂದು ನಗರದ ಗಾಂಧಿ ಮೈದಾನದ ಭವ್ಯ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯ ನೀತಿ ನಿಯಮಗಳನ್ನು ಎಲ್ಲಾ ತಂಡಗಳು ಕಡ್ಡಾಯವಾಗಿ ಪಾಲಿಸಬೇಕು. ಶಾಸ್ತ್ರೀಯ ನೃತ್ಯ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿರ್ಬಂಧವಿಲ್ಲ. ತಂಡವು ಕನಿಷ್ಠ 12 ಮಂದಿ ಗರಿಷ್ಠ 35 ಮಂದಿ ಕಲಾವಿದರು ಇರತಕ್ಕದ್ದು. ನೃತ್ಯಗಳು ಪರಿಕಲ್ಪನೆ ಹಾಗೂ ಸಾಮಾಜಿಕ ಸಂದೇಶವನ್ನು ಒಳಗೊಂಡಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ ತೊಡುಗೆಗಳು ಸಭ್ಯವಾಗಿರಬೇಕು. ಯಾರ ನಂಬಿಕೆಗಳಿಗೂ ನೋವನ್ನುಂಟು ಮಾಡಬಾರದು. ಕಾಲಾವಧಿ 10+2 ನಿಮಿಷಗಳು. ಬೆಂಕಿ, ಬಣ್ಣ, ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟುಮಾಡುವ ಯಾವುದೇ ಪರಿಕರಗಳನ್ನು ಬಳಸುವಂತಿಲ್ಲ. ತೀರ್ಪುಗಾರರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು. ಹೆಚ್ಚಿನ ಮಾಹಿತಿಗೆ ಕವನ್ ಕೋತ್ತೋಳಿ 9741292825, ಯುವ ದಸರಾ ಸಂಚಾಲಕರಾದ…

Read More