ಲೇಖಕ: admin

ಮಡಿಕೇರಿ ನ.9: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಇಂತಿಷ್ಟು ಹಣ ಎಂದು ನಿಗಧಿ ಮಾಡಿದ್ದು, ಪ್ರಥಮ ಆದ್ಯತೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು. ಡಿಸೆಂಬರ್, ಜನವರಿ ಮತ್ತು ಫೆಬ್ರವರಿಯಲ್ಲಿ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ. ಮಾರ್ಚ್-ಏಪ್ರಿಲ್ ನಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಆದ್ದರಿಂದ ಆದಷ್ಟು ಶೀಘ್ರ ಇಲಾಖೆ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಗುರಿಯ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರದ ಆಶಯವನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಚೇರಿ ಮುಖ್ಯಸ್ಥರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪರಿಶೀಷ್ಟರಿಗೆ ಮೂಲ…

Read More

ಮಡಿಕೇರಿ ನ.9 : ವಿವಿಧ ಇಲಾಖೆಗಳಿಗೆ ತಾರೀಖುವಾರು ನಿಗದಿಪಡಿಸಿರುವ ಚಟುವಟಿಕೆಗಳನ್ನು ಸಮರ್ಪಕವಾಗಿ ಕೈಗೊಂಡು ಅವುಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸೂಚಿಸಿದರು. ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಜೊತೆಗೆ ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ‘ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮವು ನ.15 ರಿಂದ 28 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ನಿಯಮಾನುಸಾರ ಇಲಾಖೆಗಳು ನಿಗದಿಪಡಿಸಿರುವ ಚಟುವಟಿಕೆಗಳನ್ನು ಅದೇ ದಿನಾಂಕಗಳಂದು ಕೈಗೊಳ್ಳಬೇಕು. ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಪೋಷ್ಟರ್‌ಗಳನ್ನು ಎಲ್ಲಾ ಅಂಗನವಾಡಿಗಳಲ್ಲಿಯೂ ಪ್ರಚುರಪಡಿಸಬೇಕು ಎಂದರು. ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್  ಮಾತನಾಡಿ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಂಗವಾಗಿ ಒಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮದ 0-5 ವರ್ಷದ ಒಳಗಿನ ಮಕ್ಕಳಿರುವ…

Read More

ಮಡಿಕೇರಿ ನ.9 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಡಗದಾಳು ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಪ್ರಯುಕ್ತ ಕಡಗದಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ. ಶಾಮ್ ಪ್ರಸಾದ್ ಉದ್ಘಾಟಿಸಿದರು. ನಂತರ ಸಂವಿಧಾನದ ಪೀಠಿಕೆಯನ್ನು ಓದಿ ಬೋಧಿಸಿದರು. ಬಳಿಕ ಮಾತನಾಡಿದ ಎಚ್.ಸಿ.ಶಾಮ್ ಪ್ರಸಾದ್ ಅವರು ಸಮಾಜದ ಕಟ್ಡಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಸಿಗಬೇಕೆಂಬುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಅದರಂತೆ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶವನ್ನು ನೀಡಲು ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತವೆ. ಅದರಂತೆ ಯಾರೇ ಆದರು ಆರ್ಥಿಕ ಅಥವಾ ಇನ್ನಾವುದೇ ದುರ್ಬಲತೆಗಳಿಂದ ಸಿಗಬೇಕಾದ ಅವಕಾಶಗಳಿಂದ ವಂಚಿತರಾಗಬೇಕಾಗಿಲ್ಲ. ಪ್ರಾಧಿಕಾರದ ಮೂಲಕ ಎಲ್ಲರಿಗೂ ನ್ಯಾಯ ದೊರಕಿಸಿಕೊಡಲಾಗುವುದು ಎಂದರು. ರಾಜ್ಯಾದಾದ್ಯಂತ 100 ಗ್ರಾಮ ನ್ಯಾಯಾಲಗಳನ್ನು ಸ್ಥಾಪಿಸುತ್ತಿದ್ದು, ಕೊಡಗು ಜಿಲ್ಲೆಯಲಿ 10 ಗ್ರಾಮಗಳನ್ನು…

Read More

ಮಡಿಕೇರಿ ನ.9 :  ಕೇರಳ ರಾಜ್ಯದ ಮುಸ್ಲಿಂ ಲೀಗ್ ನಾಯಕ ಸಾದಿಕ್ ಅಲಿ ಶಿಹಾಬ್ ತಙಳ್ ಕುಶಾಲನಗರದ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದರು. ಧರ್ಮಗುರು ಲಾಮಾ ಕರ್ಮ ಶ್ರಿ ಅವರು ಸ್ವಾಗತಿಸಿದರು. ಪರಿಸರ, ಕೃಷಿ ಪದ್ಧತಿ, ಅವರ ಆಧ್ಯಾತ್ಮಿಕತೆಗಳ ಬಗ್ಗೆ ಚರ್ಚಿಸಿ ಅಲ್ಲಿನ ಅಧ್ಯಯನ ಕೇಂದ್ರ ಹಾಗೂ ಶಿಬಿರಗಳಿಗೆ ಭೇಟಿ ನೀಡಿದರು. ಗುರು ಲಾಮಾ ಶ್ರೀ ಅವರೊಂದಿಗೆ ಮಾತನಾಡಿ  ಕೊಡಗಿನ ಜನರ ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು. ಕೊಡಗು ಪ್ರಕೃತಿ ಸೌಂದರ್ಯದ ನಾಡು, ಅದೇ ರೀತಿ ಇಲ್ಲಿನ ಜನರು ಶಾಂತಿ ಪ್ರಿಯರು ಎಂದರು. ಈ ಸಂದರ್ಭ ಪ್ರಮುಖರಾದ ನಾಸಿರ್ ಕತ್ತಲೆಕಾಡು ಹಾಗೂ ಜಂಶೀರ್ ಮಂಗಡನ್  ಹಾಜರಿದ್ದರು.

Read More

ಮಡಿಕೇರಿ ನ.9 : ಕೊಡಗಿನ ಜಮ್ಮಾಮಲೆ ಹಿಡುವಳಿದಾರರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು. ಕಕ್ಕಬ್ಬೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ಜಮ್ಮಾಮಲೆ ಅಸೋಸಿಯೇಷನ್ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಪರವಾದ ಬೇಡಿಕೆಗಳ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಶಾಸಕರು, ಕೊಡಗಿನ ಜಮ್ಮಾಬಾಣೆ ಮತ್ತು ಜಮ್ಮಾಮಲೆ ಕುರಿತು ನ್ಯಾಯಾಂಗ ತೀರ್ಪು ಹಾಗೂ ಆಡಳಿತಾತ್ಮಕ ಪರಿಹಾರ ದೊರೆತ್ತಿದ್ದರೂ ಇಲ್ಲಿಯವರೆಗೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳದೆ ಇರುವುದು ವಿಷಾದನೀಯ ಎಂದರು. ನನಗೆ ಕೆಲವು ದಿನಗಳ ಸಮಯಾವಕಾಶ ನೀಡಿ ಸಹಕರಿಸಿದಲ್ಲಿ ಈ ಎಲ್ಲಾ ಗೊಂದಲಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದ ಪರಿಶ್ರಮ ಪಡುವುದಾಗಿ ಭರವಸೆ ನೀಡಿದರು. ::: ಬೇಡಿಕೆಗಳು ::: ಜಮ್ಮಾಮಲೆ ಅಸೋಸಿಯೇಷನ್ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿತು. ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿ ಕ್ಷೇತ್ರವನ್ನು ಧಾರ್ಮಿಕ ಕ್ಷೇತ್ರವನ್ನಾಗಿಯೇ ಉಳಿಸಿಕೊಂಡು ಪಾವಿತ್ರ್ಯತೆ ಕಾಪಾಡಲು ಕ್ರಮ ಕೈಗೊಳ್ಳಬೇಕು,…

Read More

 ಬೆಂಗಳೂರು ನ.9 :  ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು.…

Read More

ಮಡಿಕೇರಿ ನ.9 : ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಉಪವಿಭಾಗದಲ್ಲಿ ಎನ್‍ಡಿಆರ್‍ಎಫ್ ಮತ್ತು ಮಳೆಹಾನಿ ದುರಸ್ತಿ ಕಾಮಗಾರಿ ಪೂರ್ಣಗೊಂಡ ಬಿಲ್‍ಗಳನ್ನು ಸಲ್ಲಿಸಿದ್ದರೂ ಗುತ್ತಿಗೆದಾರರಿಗೆ ಹಣ ಪಾವತಿಯಾಗಿಲ್ಲ. ತಕ್ಷಣ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ತಾಲ್ಲೂಕು ಲೋಕೋಪಯೋಗಿ ಗುತ್ತಿಗೆದಾರರ ಸಂಘ ಜಿಲ್ಲೆಯ ಶಾಸಕದ್ವಯರಲ್ಲಿ ಮನವಿ ಮಾಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಂಘದ ಪ್ರಮುಖರು ಗುತ್ತಿಗೆದಾರರ ಸಮಸ್ಯೆಗಳನ್ನು ವಿವರಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಪಿ.ರಾಜೀವ ಲೋಚನ 2018-19, 2019-20, 2020-21 ಮತ್ತು 2021-22ನೇ ಸಾಲಿನ ಮಳೆಹಾನಿ ಮತ್ತು ಎನ್‍ಡಿಆರ್‍ಎಫ್ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡು ನೋಡಲ್ ಅಧಿಕಾರಿ ಹಾಗೂ ಕುಶಾಲನಗರ ಇಂಜಿನಿಯರಿಂಗ್ ಕಾಲೇಜಿನಿಂದ ಪರಿಶೀಲನೆ ವರದಿಯನ್ನು ನೀಡಿದ್ದರೂ ಇಲ್ಲಿಯವರೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಬಗ್ಗೆ ಹಲವು ಬಾರಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು…

Read More

ಮಡಿಕೇರಿ ನ.9 : ಭಾರಿ ಮಳೆಯಿಂದಾಗಿ ಚೆಂಬು ಗ್ರಾಮದ ಡಬ್ಬಡ್ಕ ಭಾಗದ ಅಡ್ಡ ಹೊಳೆ ಸೇತುವೆಗೆ ಹಾನಿ ಆಗಿ  ಸಂಚರಿಸಲು ಸಂಕಷ್ಟ ಪಡುತ್ತಿದ್ದ ಗ್ರಾಮಸ್ಥರ ಸಮಸ್ಯೆಗೆ  ವಿರಾಜಪೇಟೆ ಶಾಸಕ  ಹಾಗೂ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಎ.ಎಸ್.ಪೊನ್ನಣ್ಣ ಸ್ಪಂದಿಸಿದ್ದು, ಶಾಸಕರ ಬದ್ಧತೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚೆಂಬು ಗ್ರಾಮದ ಡಬ್ಬಡ್ಕ ಭಾಗದ ಅಡ್ಡ ಹೊಳೆ ಸೇತುವೆಗೆ ಹಾನಿ ಆಗಿ  ಸಂಚಾರ ಸಂಪೂರ್ಣ ಕಡಿತಗೊಂಡಿತ್ತು. ವಿಷಯ ತಿಳಿದ ಶಾಸಕ  ಎ.ಎಸ್.ಪೊನ್ನಣ್ಣ  ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಹಾನಿಯಾದ ಕಡೆ ದುರಸ್ತಿ ಮಾಡಿಸುವ ಮೂಲಕ ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಲ್ಲಿ ಮುತುವರ್ಜಿ ವಹಿಸಿದ್ದಾರೆ.  ಮಳೆ ಕಡಿಮೆ ಆದ ಕೂಡಲೇ ಹಾನಿಗೊಳಗಾದ ಭಾಗವನ್ನು ಸಂಪೂರ್ಣ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ. ಶಾಸಕರ ಈ ಕ್ಷೇತ್ರ ಕಾರ್ಯಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಧನ್ಯವಾದ ಅರ್ಪಿಸಿದ್ದಾರೆ.

Read More

ಸೋಮವಾರಪೇಟೆ ನ.9 : ಚೈಲ್ಡ್ ಮೂವ್‍ಮೆಂಟ್ ಫಾರ್ ಸಿವಿಕ್ ಅವರ್‍ನೆಸ್(ಸಿ.ಎಂ.ಸಿ.ಎ), ನಾವು ಪ್ರತಿಷ್ಠಾನ ಕೊಡಗು ಮತ್ತು ಅರಸಿಕೆರೆ ಪ್ರಕೃತಿ ಫೌಂಡೇಶನ್ ಆಶ್ರಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸ್ನೇಹಿ ಗ್ರಾಮಸಭೆ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು. ಕಿರಗಂದೂರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಗ್ರಾಮಸಭೆ, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಸಹಾಯವಾಣಿ ಕುರಿತು ಅರಿವು ಮೂಡಿಸಲಾಯಿತು. ಸರ್ಕಾರದ ಮಟ್ಟದಲ್ಲಿ ಶಾಲಾ ಅಗತ್ಯತೆಗಳನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದನ್ನು ತಿಳಿಸಲಾಯಿತು. ಪಂಚಾಯಿತಿ ಮಟ್ಟದಲ್ಲಿ ನಡೆಯುವ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಸಿ, ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಬಗ್ಗೆ ತಿಳಿಸಲಾಯಿತು. ನವೆಂಬರ್ ತಿಂಗಳಿನಲ್ಲಿ ಆಯಾಯ ಗ್ರಾ.ಪಂ ಗಳಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಲಿದ್ದು, ಮಕ್ಕಳ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಪ್ರತಿಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುತ್ತದೆ ಎಂದು ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು ತಿಳಿಸಿದರು. ಸಂಸ್ಥೆಯ ಸದಸ್ಯ ಪಿ.ಬಿ.ಪೊನ್ನಪ್ಪ…

Read More

ಸೋಮವಾರಪೇಟೆ ನ.9 : ಸೋಮವಾರಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಳಿಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 18 ವರ್ಷ ತುಂಬಿದ ಎಲ್ಲ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಚುನಾವಣೆಗಳಲ್ಲಿ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕಿ ಎಂ.ಬಿ. ತಿಲೋತ್ತಮೆ, ಚುನಾವಣಾ ಸಾಕ್ಷರತಾ ಕ್ಲಬ್‍ನ ಕಾರ್ಯದರ್ಶಿ ಬಿ.ಬಿ. ಲಲಿತ ಇದ್ದರು. ವಿವಿಧ ಕಾಲೇಜಿನ 25 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ರಸ ಸ್ಪರ್ಧೆಯಲ್ಲಿ ಕೂಡಿಗೆ ಪದವಿ ಪೂರ್ವ ಕಾಲೇಜಿನ ತರುಣ್ ಕುಮಾರ್ ಪ್ರಥಮ, ಸೋಮವಾರಪೇಟೆ ಕಾಲೇಜಿನ ಮದನ್ ದ್ವಿತೀಯ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಬಿಟಿಸಿಜಿ ಕಾಲೇಜಿನ ಅಮೃತ್ ಮತ್ತು ಇಮ್ರಾನ್ ತೃತೀಯ ಸ್ಥಾನ ಪಡೆದರು. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕೂಡಿಗೆ ಕಾಲೇಜಿನ ಮೇಘನ ಪ್ರಥಮ, ಸೋಮವಾರಪೇಟೆ ಕಾಲೇಜಿನ ಮದನ್ ದ್ವಿತೀಯ ಹಾಗೂ…

Read More