ಲೇಖಕ: admin

ಬೆಂಗಳೂರು ಅ 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು. ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ  ಬಿ.ಕೆ.ರವಿ ಅವರ ಸಂಪಾದಕತ್ವದ “ಮೀಡಿಯಾ ಆಫ್ ದಿ ಮಿಲೇನಿಯಂ” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಬಿ.ಕೆ.ರವಿ ಅವರಿಗೆ ಬರೆಯುವ ಶಕ್ತಿ ಇದೆ. ಇದುವರೆಗೂ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ ಕ್ಷೇತ್ರದ ಅರಿವನ್ನು ವಿಸ್ತರಿಸಲಿ. ವೃತ್ತಿಧರ್ಮ ಕಾಪಾಡಿಕೊಂಡರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಪತ್ರಕರ್ತರು ಮುಂದಾಗಬೇಕು. ಸಂವಿಧಾನ ಉಳಿದರೆ ಪತ್ರಿಕಾ ವೃತ್ತಿಯ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ತಿಳಿಸಿದರು.‌ ಭಾರತೀಯ ಮಾಧ್ಯಮ ಮತ್ತು ಉದ್ಯಮ ಸೃಷ್ಟಿಸಿರುವ ಮತ್ತು ಎದುರಿಸುತ್ತಿರುವ ಇವತ್ತಿನ ಸಮಸ್ಯೆಗಳಿಗೆ ಮಾಧ್ಯಮ ಸಾಕ್ಷರತೆ ಪರಿಹಾರ ಆಗಬಲ್ಲದು. ಹೀಗಾಗಿ ಪದವಿ ಪೂರ್ವ ಹಂತದಿಂದಲೇ ಮಾಧ್ಯಮ ಸಾಕ್ಷರತೆಗೆ ಪೂರಕವಾದ ಪಠ್ಯಗಳನ್ನು ಅಳವಡಿಸಲು ಕ್ರಮ ವಹಿಸುವಂತೆ ಕೃತಿಯ ಸಂಪಾದಕರಾದ ಬಿ.ಕೆ.ರವಿ ಅವರು…

Read More

ಮೈಸೂರು ಅ.11 : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು. ಈ ಸಂದರ್ಭ ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಜಿ.ಪಂ ಸಿಇಓ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಅ.11 :  ಸಾಮಾಜಿಕ ಜಾಗೃತಿ  ಮೂಡಿಸುವ  “ನಂಬಿಕೆ” ಎಂಬ ಕಿರುಚಿತ್ರ  ಚಿತ್ರೀಕರಣಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಚಾಲನೆ ನೀಡಿದರು. ವಿಶ್ವ ಕುಂಬೂರ್ ಅವರ ನಿಶು ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಕುಂದುರುಮೊಟ್ಟೆ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಸವಿತಾ ರೈ ಕ್ಲಪ್ ಮಾಡುವ ಮೂಲಕ ಚಾಲನೆ ನೀಡಿದರು. ವಿಶ್ವಕುಂಬೂರು ಅವರ ನಿಶು ಕ್ರಿಯೇಷನ್‍ನಡಿ ನಿರ್ಮಾಣಗೊಳ್ಳುತ್ತಿರುವ ಚಿತ್ರವನ್ನು ಗೌತಮ್ ಸೂರ್ಯ ನಿರ್ದೇಶಿಸುತ್ತಿದ್ದು, ನಾಗೇಶ್ ಶೆಟ್ಟಿ ಛಾಯಾಗ್ರಹಣ ಇದೆ.  ವಿಶ್ವ ಕುಂಬೂರ್ ನಟ ಮತ್ತು ನಿರ್ಮಾಪಕರಾಗಿದ್ದು, ಹತ್ತು ಜನ ಪತ್ರಕರ್ತರೆ ನಟಿಸುತ್ತಿರುವುದು ವಿಶೇಷ. ಚಿತ್ರೀಕರಣವು ಕೊಡಗಿನಾದ್ಯಂತ ನಡೆಯಲಿದೆ.

Read More

ವಿರಾಜಪೇಟೆ  ಅ.11 :   ಕೊಡಗು ಜಿಲ್ಲೆಯ ಪ್ರಾಕೃತಿಕ ಸೌಂದರ್ಯವನ್ನು ಛಾಯಾಚಿತ್ರಗಳ ಮೂಲಕ ಪ್ರಸಾರಪಡಿಸುವ ಹಾಗೂ ಕೊಡಗು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ಸಾಹಿ ಛಾಯಾಚಿತ್ರ ಗ್ರಾಹಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆ ಮತ್ತು ಸಾದಿಕ್ ಆರ್ಟ್ಸ್ ಲಿಂಕ್ ವಿರಾಜಪೇಟೆ ಸಂಯುಕ್ತ ಆಶ್ರಯದಲ್ಲಿ ಕೊಡಗು ಕಲಾ ಉತ್ಸವದ ಅಂಗವಾಗಿ ಪ್ರಕೃತಿ ಸೌಂದರ್ಯ ಮತ್ತು ಪುರಾತನ ಕಟ್ಟಡಗಳ ಬಗ್ಗೆ ಛಾಯಾಚಿತ್ರ ಸ್ಪರ್ಧೆ ನಡೆಯಲಿದೆ. ಸ್ಪರ್ಧೆ ಯ ಬಗ್ಗೆ ಮಾಹಿತಿ ನೀಡಿದ ಸಾದೀಕ್ ಆರ್ಟ್ಸ್ ಲಿಂಕ್ ನ ಸಂಚಾಲಕ  ಸಾದೀಕ್ ಹಂಸ ಛಾಯಾಚಿತ್ರ ಸ್ಪರ್ಧೆ ಎರಡು ವಿಭಾಗದಲ್ಲಿ ನಡೆಯಲಿದ್ದು,  ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತು ಪುರಾತನ ಕಟ್ಟಡಗಳ ಛಾಯಾಚಿತ್ರಗಳನ್ನು ಸೆರೆಹಿಡಿದು ಕಳುಹಿಸಬೇಕು. ಛಾಯಾಚಿತ್ರ ಗ್ರಾಹಕರು ಮತ್ತು ಹವ್ಯಾಸಿ ಛಾಯಾಚಿತ್ರ ಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯು ಮುಕ್ತವಾಗಿದ್ದು ಎಲ್ಲಾ ವರ್ಗದ ವ್ಯಕ್ತಿಗಳು ಭಾಗವಹಿಸುವುದಾಗಿದೆ ಎಂದರು. ಪ್ರವಾಸೋದ್ಯಮವನ್ನು ಪ್ರೋತ್ಸಾಹ…

Read More

ಚೆಟ್ಟಳ್ಳಿ ಅ.11 : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಕೈಲ್‍ಪೊಳ್ದ್ ಸಂತೋಷಕೂಟ ಹಾಗೂ ಕೊಡವ ಸಮಾಜದ ವಾರ್ಷಿಕಮಹಾ ಸಭೆ ನಡೆಯಿತು. ಚೆಟ್ಟಳ್ಳಿ ಮಂಗಳ ಸಭಾಂಗಣದಲ್ಲಿ ನಡೆದ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ಮುಳ್ಳಂಡ ರತ್ತುಚಂಗಪ್ಪ ಮಾತನಾಡಿ, ಚೆಟ್ಟಳ್ಳಿಯ ಜೋಮಾಲೆ ಪೊಮ್ಮಕ್ಕಡ ಕೂಟದ ಮುತುವರ್ಜಿಯ ಫಲವಾಗಿ ಚೆಟ್ಟಳ್ಳಿ ಕೊಡವ ಸಮಾಜ ಸ್ಥಾಪನೆಯಾಯಿತು. ಕೊಡವ ಜನಾಂಗದ ಆಚಾರ ವಿಚಾರ ಒಗ್ಗಟು ಒತ್ರ್ತೊಮೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೊಡವ ಸಮಾಜ ಶ್ರಮಿಸಲಿದೆ ಎಂದರು. ಎಲ್ಲರ ಸಹಕಾರ ಇದ್ದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮೃತಪಟ್ಟ ಸಂಘದ ಸದಸ್ಯ ಬಲ್ಲಾರಂಡ ಕಾಳಪ್ಪ ರವಿ ಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಕಳೆದ ವರ್ಷದ ಮಹಾಸಭೆಯ ವರದಿ ಹಾಗೂ ಆಡಳಿತ ಮಂಡಳಿ ವರದಿಯನ್ನು ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ವಾಚಿಸಿದರು. ಲೆಕ್ಕಪತ್ರವನ್ನು ಖಜಾಂಜಿ ಪುತ್ತರಿರ ಗಂಗು ಅಚ್ಚಯ್ಯ ಮಂಡಿಸಿದರು. ಸಭೆಯಲ್ಲಿ ಸಮಾಜದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಪಳಗಂಡ ಗೀತಾ ಸುಬ್ಬಯ್ಯ ಪ್ರಾರ್ಥಿಸಿ, ಜಂಟಿ ಕಾರ್ಯದರ್ಶಿ ಮುಳ್ಳಂಡ…

Read More

ಮಡಿಕೇರಿ ಅ.11 : ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರದ ನಿವಾಸಿ ಯತೀಶ್.ಎ.ಎಂ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 600 ಗ್ರಾಂ ಬೆಳ್ಳಿ ಮತ್ತು 40 ಸಾವಿರ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕೋಣಮಾರಿಯಮ್ಮ ದೇವಸ್ಥಾನದ ಬಳಿಯ ನಿವಾಸಿ ಸತೀಶ್ ಕುಮಾರ್ ಎಂಬುವವರ ಮನೆಯಲ್ಲಿ ಜೂ.24 ರಂದು ಕಳ್ಳತನ ನಡೆದಿತ್ತು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಎ.ಗಂಗಾಧರಪ್ಪ, ಕುಶಾಲನಗರ ಸಿಪಿಐ ರಾಜೇಶ್.ಕೆ, ಪಿಎಸ್‌ಐ ಹೆಚ್.ವಿ.ಚಂದ್ರಶೇಖರ್, ನಗರ ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ ::: ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಮತ್ತು ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ನೀಡುವಂತೆ ಮನವಿ ಮಾಡಿರುವ ಪೊಲೀಸರು ಮಾಹಿತಿ ನೀಡಿದವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲವೆಂದು ತಿಳಿಸಿದ್ದಾರೆ.

Read More

ಮಡಿಕೇರಿ ಅ.11 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 26.09 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.50 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2089.14 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3211.28 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 27.05 ಮಿ.ಮೀ. ಕಳೆದ ವರ್ಷ ಇದೇ ದಿನ 0.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3069.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4671.69 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1641.91 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2481.97 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.03 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.23…

Read More

ಮಡಿಕೇರಿ ಅ.11:  ನಗರದ  ಶ್ರೀ ಕಾವೇರಿ ಭಕ್ತ ಮಂಡಳಿ ವತಿಯಿಂದ 69ನೇ ವರ್ಷದ ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆಯು ಅ.18 ರಂದು ನೇರವೇರಲಿದೆ. ಅಂದು ಬೆಳ್ಳಿಗೆ 7 ಗಂಟೆಗೆ ಮ್ಯಾನ್ಸ್‌ ಕಾಂಪೌಂಡ್‌ ಬಳಿ ಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡು ಶ್ರೀ ಕಾವೇರಿ ಮಾತೆಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳು ಜರುಗಲಿದೆ.  12 ಗಂಟೆಗೆ ಅನ್ನದಾನದ ನಂತರ ಮಧ್ಯಾಹ್ನ ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆಯು ಮ್ಯಾನ್ಸ್‌ ಕಾಂಪೌಂಡ್‌ ಬಳಿಯಿಂದ ಹೊರಟು ಜೂನಿಯರ್‌ ಕಾಲೇಜು ಮಾರ್ಗವಾಗಿ ಓಂಕಾರೇಶ್ವರ ದೇವಾಲಯ, ಜನರಲ್‌ ತಿಮ್ಮಯ್ಯ ವೃತ್ತ, ಶಾಂತಿನಿಕೇತನ, ಮರಳಿ ಜನರಲ್‌ ತಿಮ್ಮಯ್ಯ ವೃತ್ತ, ಗೌಳಿಬೀದಿ, ಕೋಹಿನೂರು ರಸ್ತೆ, ಎಸ್.ಬಿ.ಐ, ಪೇಟೆ ಶ್ರೀ ರಾಮ ಮಂದಿರ, ಚೌಕಿ, ಗಣಪತಿ ಬೀದಿ, ಬನ್ನಿ ಮಂಟಪ, ಮಹದೇವಪೇಟೆ, ಚೌಕಿ, ಸ್ಕ್ವಾಡರ್ನ್‌ ಲೀಡರ್‌ ಅಜ್ಜಮಾಡ ದೇವಯ್ಯ ವೃತ್ತ, ಜೂನಿಯರ್‌ ಕಾಲೇಜು ಮಾರ್ಗವಾಗಿ ಮ್ಯಾನ್ಸ್‌ ಕಾಂಪೌಂಡ್‌ ಬಳಿ ಸಂಪನ್ನಗೊಳ್ಳಲಿದೆ. ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆ ಉತ್ಸವದಲ್ಲಿ ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ…

Read More

ಮಡಿಕೇರಿ ಅ.11 : ಶ್ರೀಮಂಗಲ ವಿದ್ಯಾಸಂಸ್ಥೆಯ 2023-24ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬೋಡಂಗಡ ಎಂ ಅಯ್ಯಪ್ಪ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಚಟ್ಟಂಗಡ ರವಿ ಸುಬ್ಬಯ್ಯ, ಕಾರ್ಯದರ್ಶಿಯಾಗಿ ಕಾಳಿಮಾಡ ಪದ್ಮ ಬೆಳ್ಳಿಯಪ್ಪ, ಖಜಾಂಚಿಯಾಗಿ ಎಸ್.ಎಂ.ವಿನಯ್ ನೇಮಗೊಂಡಿದ್ದಾರೆ. ನಿರ್ದೇಶಕರುಗಳಾಗಿ ಅಜ್ಜಮಾಡ ಸಾವಿತ್ರಿ, ಚೆಟ್ಟಂಗಡ ಕಂಬ ಕಾರ್ಯಪ್ಪ, ಅಣ್ಣಾಳಮಾಡ ನರೇಂದ್ರ, ಅಯ್ಯಮಾಡ ಉದಯ, ಚಿಮ್ಮಂಗಡ ಗಣಪತಿ, ತಡಿಯಂಗಡ ಎಂ ಜಯರಾಜ್ ಮತ್ತು ಬಾಚಂಗಡ ಕಾರ್ಯಪ್ಪ ಆಯ್ಕೆಯಾಗಿದ್ದಾರೆ.

Read More

ನಾಪೋಕ್ಲು ಅ.11 : ಸೂಕ್ತ ಸಮಯದಲ್ಲಿ ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ಇಲ್ಲದೇ ಹೋದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗುತ್ತೇವೆ ಎಂದು ಕಾಟಕೇರಿಯ ಹರ್ ಮಂದಿರ್ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಹೇಳಿದರು. ಕಾಟಕೇರಿಯ ಹರ್ ಮಂದಿರ್ ಶಾಲೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಮಕ್ಕಳೇ ಮುಂದಿನ ಉತ್ತಮ ಸಮಾಜ ನಿರ್ಮಾಣದ ಶಿಲ್ಪಿಗಳು. ಹಾಗಾಗಿ ಮಕ್ಕಳು ಆರೋಗ್ಯದ ಮಹತ್ವವನ್ನು ತಿಳಿದುಕೊಂಡು ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅವಶ್ಯಕ ಎಂದರು. ಜಾಗತಿಕ ಮಟ್ಟದಲ್ಲಿ ಪ್ರತಿ ಆರರಲ್ಲಿ ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ನಾವು ನಮ್ಮ ಮನಸ್ಸನ್ನು ಧನಾತ್ಮಕವಾಗಿ ಇಟ್ಟುಕೊಳ್ಳಬೇಕು .ಇದಕ್ಕಾಗಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಪೌಷ್ಟಿಕ ಆಹಾರ ಸೇವನೆ, ವ್ಯಾಯಾಮ, ಧನಾತ್ಮಕ ಮಾತುಗಳು ಹಾಗೂ ಉತ್ತಮ ಹವ್ಯಾಸಗಳು ನಮ್ಮನ್ನು ಯೋಗ್ಯ ವ್ಯಕ್ತಿಯನ್ನಾಗಿ ಮಾಡುತ್ತವೆ ಎಂದರು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ ಮಕ್ಕಳಲ್ಲಿ ದೈಹಿಕ ತೊಂದರೆಗಳಿದ್ದರೆ ವೈದ್ಯರನ್ನು…

Read More