ಲೇಖಕ: admin

ನಾಪೋಕ್ಲು ನ.9 : ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಶನ್ ಅಸೋಸಿಯೇಷನ್ ವತಿಯಿಂದ ಚೆರಿಯಪರಂಬುವಿನ ಜನರಲ್ ಕೆ. ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನ.12 ರಂದು ಮೂರನೇ ವರ್ಷದ ರಾಜ್ಯಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕ್ಲಬ್ ನ ಉಪಾಧ್ಯಕ್ಷ ಅರೆಯಡ ರತ್ನ ಪೆಮ್ಮಯ್ಯ ಹೇಳಿದರು. ನಾಲ್ಕು ನಾಡು ಪ್ಲಾಂಟರ್ಸ್ ರಿಕ್ರಿಯೇಶನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಮೂರು ವಿಭಾಗಗಳಿದ್ದು, 0.22 ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 30 ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ 10 ಸಾವಿರ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಗುವುದು ಎಂದರು. 12 ಬೋರ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 20 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 15 ಸಾವಿರ ನಗದು ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ 10 ಸಾವಿರ ನಗದು ಮತ್ತು…

Read More

ನಾಪೋಕ್ಲು ನ.9 : ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಫಸಲನ್ನು ನಾಶ ಪಡಿಸುತ್ತಿವೆ. ಗ್ರಾಮದ ಕಾಫಿ ಬೆಳೆಗಾರ ಅಪ್ಪುಮಣಿಯಂಡ ರಘು ಸುಬ್ಬಯ್ಯ ಅವರ ತೋಟದಲ್ಲಿ ಅಡ್ಡಾಡಿರುವ ಒಂದು ಮರಿಯಾನೆ ಸೇರಿದಂತೆ 5 ಕಾಡಾನೆಗಳು ಅವರ ತೋಟದ ಹಲವು ಕಾಫಿ ಗಿಡಗಳನ್ನು ಮುರಿದು ಹಾಕಿ ಅಡಿಕೆ ಮರಗಳನ್ನು ನಾಶಪಡಿಸಿವೆ.  ಈ ದಾಳಿಯಿಂದಾಗಿ ಅಧಿಕ ಪ್ರಮಾಣದಲ್ಲಿ ಕಾಫಿ ,ಅಡಿಕೆ  ಫಸಲು ಹಾನಿ ಮಾಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ಹಾಗೂ ಕಾಳೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದು,  ಸೂಕ್ತ ಪರಿಹಾರಕ್ಕೆ ಸ್ಪಂದಿಸುವ ಭರವಸೆಯನ್ನು ನೀಡಿದ್ದಾರೆ. ಇತ್ತೀಚಿಗೆ ಮರಂದೋಡ, ಚೇಲಾವರ ಗ್ರಾಮ ವ್ಯಾಪ್ತಿಗಳಲ್ಲಿ ಕಾಡಾನೆಗಳು ಅಡ್ಡಾಡಿ ಬತ್ತದ ಗದ್ದೆಗಳನ್ನು ನಾಶಪಡಿಸಿದ್ದವು. ಹಲವು ರೈತರು ತಾವು ಕಷ್ಟಪಟ್ಟು ಬೆಳೆದ ಭತ್ತದ ಫಸಲು ನಷ್ಟಗೊಂಡ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕಾಡಾನೆಗಳ ಹಿಂಡು ನೆಲಜಿ ಗ್ರಾಮದಲ್ಲಿ ಸಂಚರಿಸುತ್ತಿದ್ದು, ಗ್ರಾಮದ ರೈತರು ಭಯಭೀತರಾಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಕೃಷಿಗೆ…

Read More

ಮಡಿಕೇರಿ ನ.9 : ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್ 6 ಹೊಸಕೋಟೆ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿದ್ದು, ನ.10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಕೊಡಗರಹಳ್ಳಿ, ಕಂಬಿಬಾಣೆ, ಹೊಸಕೋಟೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.

Read More

ಮಡಿಕೇರಿ ನ.9 : ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಪಟ್ಟಣ/ ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08272-228746 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ನ.9  : ರಾಜ್ಯ ಶಿಶುಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶುಕಲ್ಯಾಣ ಸಂಸ್ಥೆ, ಇನ್ನರ್‍ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಮತ್ತು ಲಯನೆಸ್ಸ್ ಕ್ಲಬ್ ಅವರ ಸಂಯುಕ್ತ ಆಶ್ರಯದಲ್ಲಿ ಆ.27 ರಂದು ನಡೆದ ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನ.15 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯುವ ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ವಿಜೇತರು ಬಹುಮಾನ ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9880985939 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ. ವಿಜೇತರಾದವರ ವಿವರ: ಹಸಿರು ಗುಂಪು ಮಡಿಕೇರಿ ಸಂತ ಜೋಸೆಫರ ಶಾಲೆಯ ಕೆ.ಎಸ್.ಉನ್ನತಿ(ಪ್ರಥಮ), ಮಡಿಕೇರಿ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಆಯುಷ್‍ತಲ್ ಎ.ಆಫ್ರಾ ಎಂ.ಎಸ್(ದ್ವಿತೀಯ), ಮಡಿಕೇರಿ ರಾಜೇಶ್ವರಿ ವಿದ್ಯಾಲಯದ ಸ್ವಾತಿ ಕೆ.ಟಿ.(ತೃತೀಯ ಸ್ಥಾನ) ಪಡೆದಿದ್ದಾರೆ. ಸಮಾಧಾನಕರ ಬಹುಮಾನ: ಕೊಡಗು ವಿದ್ಯಾಲಯದ ರೋನಿತ್ ಗಣಪತಿ ಎ.ಎಸ್., ಸಂತ ಜೋಸೆಫರ ಶಾಲೆಯ ಚಾರ್ವಿ ಪ್ರಸಾದ್ ಕೆ.ಎಸ್., ಕೊಡಗು ವಿದ್ಯಾಲಯದ ದೀಕ್ಷಾ ದೇಚಮ್ಮ, ಸಂತ ಜೋಸೆಫರ…

Read More

ಮಡಿಕೇರಿ ನ.9 : ನಾವೀನ್ಯತೆ ಕ್ಷೇತ್ರ –2, ತಾರ್ಕಿಕ ಸಾಧನೆಗಳು-2 ಈ ಎರಡು ವಿಭಾಗದಲ್ಲಿ ತಲಾ 2 ರಂತೆ ಒಟ್ಟು 4 ಪ್ರಶಸ್ತಿಗಳನ್ನು ನೀಡಲಾಗುವುದು. ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು 2023-24 ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿರುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಈ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ. 2023-24 ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ…

Read More

ಮಡಿಕೇರಿ ನ.8 : ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಮಾಜಿ ಸೈನಿಕ, ನಗರದ ಉಕ್ಕುಡ ನಿವಾಸಿ ಸಂದೇಶ್(38) ಅವರ ಮೃತದೇಹ ಸಮೀಪದ ಪಂಪಿನ ಕೆರೆಯಲ್ಲಿ ಪತ್ತೆಯಾಗಿದೆ. ಒಟ್ಟು ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ತಂಡ ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಪಂಪಿನ ಕೆರೆ ಬಹಳ ಆಳವಾಗಿದ್ದು, ಹುಡುಕಾಟ ಕಷ್ಟ ಸಾಧ್ಯವಾದ ಹಿನ್ನೆಲೆಯಲ್ಲಿ ಮಂಗಳೂರಿನ ಆಳ ಸಮುದ್ರ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಸಂಜೆ ಮಡಿಕೇರಿಗೆ ಕರೆಸಲಾಗಿತ್ತು. ಪಂಪಿನ ಕೆರೆಯಲ್ಲಿ ರಾತ್ರಿ ಶೋಧ ಕಾರ್ಯಾಚರಣೆ ನಡೆಸಲು ಅನುಕೂಲವಾಗುವಂತೆ ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ರಾತ್ರಿ ಸುಮಾರು 8.30 ಗಂಟೆಗೆ ಈಶ್ವರ್ ಮಲ್ಪೆ ಅವರ ಕಾರ್ಯಾಚರಣೆಯ ಮೂಲಕ ಮೃತದೇಹವನ್ನು ಮೇಲೆತ್ತಲಾಯಿತು. ಉಕ್ಕುಡದ ಪಂಪಿನ ಕೆರೆಯ ದಂಡೆ ಮೇಲೆ ಸಂದೇಶ್ ಅವರಿಗೆ ಸೇರಿದ ಚಪ್ಪಲಿ ಮತ್ತು ವಾಚ್ ಕಂಡು ಬಂದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದರು. ನಗರ ಪೊಲೀಸ್ ಇಲಾಖೆ ಮನವಿ ಹಿನ್ನೆಲೆಯಲ್ಲಿ…

Read More

ಮಡಿಕೇರಿ ನ.8 : ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದ ಭದ್ರತೆಯ ಅನಿವಾರ್ಯದ ಹಿನ್ನೆಲೆಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ ಐದನೇ ಹಂತದ ಪಾದಯಾತ್ರೆ ಜಿಲ್ಲೆಯ ವಿವಿಧೆಡೆ ಮುಂದುವರೆದಿದೆ. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಇಂದು ಕಡಿಯತ್‌ನಾಡ್ ನ ಕರಡದ “ಬೇಲಿಯಾಣೆ ಮಂದ್” ಮತ್ತು ಬಲಂಬೇರಿ ಮಂದ್ ನಲ್ಲಿ ಪಾದಯಾತ್ರೆ ಹಾಗೂ ಕೊಡವ ಜಾಗೃತಿ ಸಭೆ ನಡೆಸಿ ಕೊಡವ ಲ್ಯಾಂಡ್ ಗಾಗಿ ಹಕ್ಕೊತ್ತಾಯ ಮಂಡಿಸಲಾಯಿತು. ಕೊಡವರು ಕೊಡವ ಪ್ರದೇಶದ ಆದಿಮಸಂಜಾತ ಮೂಲನಿವಾಸಿ ಬುಡಕಟ್ಟು ಜನಾಂಗವಾಗಿದೆ. ಈ ವಿಶಿಷ್ಟ ಮತ್ತು ಸೂಕ್ಷ್ಮ ಜನರ ರಕ್ಷಣೆ ಸರ್ಕಾರಗಳ ಜವಾಬ್ದಾರಿಯಾಗಿದೆ. ಆಂತರಿಕ ರಾಜಕೀಯ-ಸ್ವಯಂ-ನಿರ್ಣಯದ ಹಕ್ಕು, ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ ಸೇರಿದಂತೆ ಕೊಡವರ ಪರವಾದ 9 ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಪಾದಯಾತ್ರೆಯ ಮೂಲಕ ಮಂಡಿಸಿ ಸರ್ಕಾರದ ಕಣ್ಣು ತೆರೆಸುತ್ತಿರುವುದಾಗಿ ನಾಚಪ್ಪ ಹೇಳಿದರು. ರಾಜ್ಯಗಳ ಮರು-ಸಂಘಟನಾ ಕಾಯಿದೆ 1956 ರ ಒಪ್ಪಂದಗಳಿಗೆ ಕರ್ನಾಟಕ ರಾಜ್ಯ ಬದ್ಧವಾಗಿಲ್ಲ,…

Read More

ಮಡಿಕೇರಿ ನ.08 : ಕಳೆದ ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಸಂಬಂಧ ವರದಿ ನೀಡುವುದು ಹಾಗೂ ಬರ ನಿರ್ವಹಣೆಯನ್ನು ಜವಾಬ್ದಾರಿಯಿಂದ ನಿಭಾಯಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ ಅಂಗನವಾಡಿ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಹಾನಿ ಬಗ್ಗೆ ಮಾಹಿತಿ ಪಟ್ಟಿಯನ್ನು ತಾಲ್ಲೂಕುವಾರು ಒದಗಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬರ ನಿರ್ವಹಣೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕೊಡಗು ಜಿಲ್ಲೆಗೆ 7.50 ಕೋಟಿ ರೂ. ಬಿಡುಗಡೆ ಮಾಡಿದೆ. ಆ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ…

Read More

ಮಡಿಕೇರಿ ನ.8 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿ.1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2023-24ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಕೃಷಿಕರಲ್ಲಿ ಮನವಿ ಮಾಡಿದರು. ರೈತರ ನೋಂದಣಿ ಸಂಬಂಧ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೆ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರ್ಕಾರ…

Read More