ಲೇಖಕ: admin

ಮಡಿಕೇರಿ ನ.8 : ಚಿನ್ನಾಭರಣವನ್ನು ಅಡವಿಟ್ಟು ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು ಸುಮಾರು 2.09 ಲಕ್ಷ ರೂ.ಗಳನ್ನು ದೋಚಿದ ಪ್ರಕರಣ ಕುಶಾಲನಗರದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಆನಂದನಗರದ ವೈಲೇಶ್ ಎಂಬುವವರೇ ಹಣ ಕಳೆದುಕೊಂಡ ವ್ಯಕ್ತಿ. ಬ್ಯಾಂಕ್ ನ ಕೃಷಿ ಸಾಲ ತೀರಿಸಲೆಂದು ಮತ್ತೊಂದು ಬ್ಯಾಂಕ್ ನಲ್ಲಿ ಚಿನ್ನಾಭರಣ ಅಡವಿಟ್ಟು ಹಣವನ್ನು ಬೈಕ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಕುಸಾಲನಗರದ ಅಯ್ಯಪ್ಪಸ್ವಾಮಿ ದೇವಾಲಯದ ರಸ್ತೆ ಬಳಿ ಇದ್ದ ನಾಲ್ವರು ಅಪರಿಚಿತರು ನಿಮ್ಮ ಹಣ ರಸ್ತೆಯಲ್ಲಿ ಬಿದ್ದಿದೆ ಎಂದು ವೈಲೇಶ್ ಅವರ ಗಮನವನ್ನು ಬೇರೆಡೆ ಸೆಳೆದಿದ್ದಾರೆ. ಬೈಕ್ ನಿಂದ ಕೆಳಗೆ ಇಳಿದ ವೈಲೇಶ್ ಅವರು ರಸ್ತೆಯಲ್ಲಿ ಬಿದ್ದಿದ್ದ ಕೆಲವು ನೋಟುಗಳನ್ನು ತೆಗೆದುಕೊಳ್ಳುತ್ತಿದ್ದಾಗ ಬೈಕ್ ನ ಎದುರು ಭಾಗದ ಬ್ಯಾಗ್ ನಲ್ಲಿ ಇರಿಸಿದ್ದ 2.09 ಲಕ್ಷ ರೂ.ಗಳನ್ನು ಚೋರರು ದೋಚಿ ತಾವು ಬಂದಿದ್ದ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಶಾಲನಗರ ಪೊಲೀಸರು ಪ್ರಕರಣ…

Read More

ಮಡಿಕೇರಿ ನ.8 : ಕೊಡಗು ಜಿಲ್ಲಾ ಮದನೀಸ್ ಅಸೋಸಿಯೇಷನ್ ವತಿಯಿಂದ ನ.10 ರಂದು ಶೈಖುನಾ ತಾಜುಲ್ ಉಲಮಾ ಸೆಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ (ಖ.ಸಿ) ಅವರ ಅನುಸ್ಮರಣಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ  2.30 ಗಂಟೆಗೆ  ಸಿದ್ದಾಪುರ ಚರ್ಚ್ ಸಭಾಂಗಣದಲ್ಲಿ  ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಲುಖ್ಮಾನುಲ್ ಹಕೀಂ ಸಖಾಫಿ ಪುಲ್ಲಾರೆ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ ವೈ ಎಸ್, ಎಸ್ ಎಸ್ ಎಫ್, ಮುಸ್ಲಿಂ ಜಮಾಅತ್, ಜಂಇಯ್ಯತುಲ್ ಉಲಮಾ ನೇತಾರರು ಭಾಗವಹಸಲಿದ್ದಾರೆ ಎಂದು ಮದನೀಸ್ ಅಸೋಸಿಯೇಷನ್ ಜಿಲ್ಲಾದ್ಯಕ್ಷ  ಹಮೀದ್ ಮದನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ನ.8 : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 25ನೇ ವಾರ್ಷಿಕೋತ್ಸವವು ನ.16 ರಂದು ನಡೆಯಲಿದೆ. ನ.15 ರ ಸಂಜೆಯಿಂದ ಆರಂಭಗೊಳ್ಳುವ ಪೂಜಾ ವಿಧಿವಿಧಾನಗಳು ನ.16ರ ಮಧ್ಯಾಹ್ನ ಮಹಾಮಂಗಳಾರತಿಯೊಂದಿಗೆ ಪೂರ್ಣಗೊಳ್ಳಲಿದೆ. ಆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ. 25ನೇ ಭಕ್ತಿಪೂರ್ವಕ ಹಾಗೂ ಸಾರ್ಥಕತೆಯ ವಾರ್ಷಿಕೋತ್ಸವ ಪ್ರಯುಕ್ತ ದೇವರಿಗೆ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮುಖವಾಡವನ್ನು ಅರ್ಪಿಸಲು ಸಂಕಲ್ಪ ಮಾಡಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ನಂಜನಗೂಡು ಕಾವೇರಿ ನದಿಯ ಉಪನದಿಗಳಲ್ಲಿ ಒಂದಾದ ಕಪಿಲಾ ಅಥವಾ ಕಬಿನಿ ನದಿಯ ಬಲದಂಡೆಯಲ್ಲಿದೆ. ಗರಲಪುರಿ ಎಂದೂ ಕರೆಯಲ್ಪಡುವ ನಂಜನಗೂಡು ಬೃಹತ್ ನಂಜುಂಡೇಶ್ವರ ಅಥವಾ ಶ್ರೀಕಂಠೇಶ್ವರ ದೇವಸ್ಥಾನದಿಂದಾಗಿ ಪ್ರಸಿದ್ಧವಾಗಿದೆ. ನಂಜುಂಡ ಎಂಬ ಹೆಸರನ್ನು ಹಾಲಾಹಲ ಅಥವಾ ವಿಷವನ್ನು ಸೇವಿಸಿದ ಶಿವ ಎಂದು ವಿವರಿಸಲಾಗಿದೆ ಮತ್ತು ಈ ನಂಜುಂಡನೇ ಅದನ್ನು ಜೀರ್ಣಿಸಿಕೊಳ್ಳುವ ಮೂಲಕ ವಿಷಕಂಠ ಅಥವಾ ಶ್ರೀಕಂಠನಾದನು. ಹೀಗಾಗಿ ದೇವರನ್ನು ನಂಜುಂಡೇಶ್ವರ ಮತ್ತು ಶ್ರೀಕಂಠೇಶ್ವರ ಎಂದು ಕರೆಯುತ್ತಾರೆ . ಆತನು ತನ್ನ ಭಕ್ತರ ರೋಗಗಳನ್ನು ಗುಣಪಡಿಸುವವನೆಂದು ವಿವರಿಸಲಾಗಿದೆ. ಮುಸ್ಲಿಂ ದೊರೆ ಹೈದರ್ ಅಲಿಖಾನ್ ಅವರು ನಂಜುಂಡ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದರು ಮತ್ತು ದೇವಾಲಯದ ಪವಿತ್ರ ನೀರನ್ನು ನೀಡುವುದರ ಮೂಲಕ ತನ್ನ ಪ್ರೀತಿಯ ಆನೆಯ ಕಣ್ಣಿನ ಕಾಯಿಲೆಯನ್ನು ಗುಣಪಡಿಸಿದ ಕಾರಣ ಅವನನ್ನು ‘ಹಕೀಮ್ ನಂಜುಂಡ’ ಎಂದು ಕರೆದರು. ಈ ಸ್ಥಳವನ್ನು ದಕ್ಷಿಣದ ದಕ್ಷಿಣ ಕಾಶಿ ಅಥವಾ ವಾರಣಾಸಿ ಎಂದು ಕರೆಯಲಾಗುತ್ತದೆ . ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಇಬ್ಬರೂ ಈ ದೇವಾಲಯದೊಂದಿಗೆ ನಿಕಟ…

Read More

ಮಡಿಕೇರಿ ನ.8 : ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಇತ್ತೀಚೆಗೆ ಧ್ವಜ ಹಿಡಿದು ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಧಾರ್ಮಿಕ ನಂಬಿಕೆಗೆ ಚ್ಯುತಿ ತರಲಾಗಿದೆ ಎಂದು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸಂಚಾಲಕ ಉಳ್ಳಿಯಡ ಎಂ.ಪೂವಯ್ಯ ಅವರು, ಇತ್ತೀಚಿನ ದಿನಗಳಲ್ಲಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಧಾರ್ಮಿಕ ಆಚರಣೆಗೆ ವಿರುದ್ಧವಾದ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿದರು. ಬೆಳಗಾವಿ ಭಾಗದ ಕೆಲವು ಸಾಧು ಸಂತರು ತಲಕಾವೇರಿಯ ಪವಿತ್ರ ಕುಂಡಿಕೆ ಸಮೀಪ ಗುಂಪುಗೂಡಿ ಕನ್ನಡ ರಾಜ್ಯೋತ್ಸವ ಆಚರಿಸುವ ನೆಪದಲ್ಲಿ ಪುಣ್ಯಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತಂದಿರುವುದು ಖಂಡನೀಯ. ಕೋಟ್ಯಾಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಕಾವೇರಿ ಕ್ಷೇತ್ರದಲ್ಲಿ ಈ ರೀತಿಯ ಅಚಾತುರ್ಯ ಇಲ್ಲಿಯವರೆಗೆ ನಡೆದಿರುವ ಉದಾಹರಣೆಗಳೇ ಇಲ್ಲ. ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ, ಸಾರ್ವಜನಿಕ ಸಭೆ, ವಿಚಾರಗೋಷ್ಠಿ, ಕವಿಗೋಷ್ಠಿಯಂತಹ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದು ಸ್ಥಳೀಯರ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಪೂವಯ್ಯ ಅಸಮಾಧಾನ ವ್ಯಕ್ತಪಡಿಸಿದರು. ತಲಕಾವೇರಿ ಕ್ಷೇತ್ರವನ್ನು ಯಾರು…

Read More

ವಿರಾಜಪೇಟೆ  ನ.8 :  ಕನ್ನಡ ಭಾಷೆಯು ವಿಶ್ವ ಲಿಪಿಗಳ ರಾಣಿಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಪ್ರಾದ್ಯಾಪಕ ಡಾ. ಜಮೀರ್ ಅಹಮದ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಹಾಗೂ ಎನ್. ಎಸ್. ಎಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯು ಶ್ರೀಮಂತ ಭಾಷೆಯಾಗಿದ್ದು,  ವಿಶ್ವ ಭಾಷೆಗಳ ರಾಣಿಯಾಗಿದೆ. ನಮ್ಮ ಮಾತೃ ಭಾಷೆ ಅನೇಕ ಇದ್ದರೂ ಕನ್ನಡ ಭಾಷೆ ನಮ್ಮನ್ನು ಸಾಮಾಜಿಕವಾಗಿ ಒಗ್ಗೂಡಿಸುತ್ತದೆ. ಬಿ. ಎಂ. ರೈಸ್, ಕಿಟೆಲ್, ಮೊಗ್ಲಿಂಗ್ ರಂತಹ ವಿದೇಶಿಗರು ಕನ್ನಡ ಭಾಷೆಗೆ ಕೊಡುಗೆ ನೀಡಿದ್ದಾರೆ ಎಂದರು. ಕನ್ನಡ ಭಾಷಾ ಅಭಿಮಾನವನ್ನು ಪ್ರತಿಯೊಬ್ಬ ಕನ್ನಡಿಗನೂ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಆನಂದ್. ಕೆ. ಮಾತನಾಡಿ,  ಕನ್ನಡ ಭಾಷೆಯ ಸೊಗಡು ನಮ್ಮೆಲ್ಲರ ಹೆಮ್ಮೆಯಾಗಿದ್ದು, ಭಾಷೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಈ ಸಂದರ್ಭ ಕಾಲೇಜಿನ ಎನ್. ಎಸ್. ಎಸ್. ಘಟಕವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ.…

Read More

ನಾಪೋಕ್ಲು ನ.8 : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ನ.13 ರಂದು ಹುತ್ತರಿ (ಪುತ್ತರಿ) ಹಬ್ಬದ ದಿನ ನಿಗದಿ ಹಾಗೂ ದೇಶ ಕಟ್ಟು ಜಾರಿ ಕಾರ್ಯಕ್ರಮವನ್ನು ನಿಗದಿ ಪಡಿಸಲಾಗುವುದು. ಮಳೆ ಬೆಳೆಗಳ ಸಮೃದ್ಧಿಯ ವರದಾತ ಎಂದು ಪ್ರಸಿದ್ಧವಾಗಿರುವ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷ ಸಂಭ್ರಮದಿಂದ ಆಚರಿಸಲ್ಪಡುವ ಹುತ್ತರಿ(ಪುತ್ತರಿ) ಯ ವೈಭವ ಪೂರ್ಣ ಆಚರಣೆಗಳಿಗೆ ನ.13ರ ಸೋಮವಾರದಂದು ದೇವಾಲಯದ ಪಾರಂಪರಿಕ ಪತ್ತೆಪರೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಹುತ್ತರಿ ಆಚರಣೆಯ ಎಲ್ಲಾ ಕಾರ್ಯಕ್ರಮಗಳಿಗೂ ದಿನ ನಕ್ಷತ್ರ ಮುಹೂರ್ತಗಳನ್ನು ವಿಧಿಯುಕ್ತವಾಗಿ ಪ್ರಕಟಿಸಲಾಗುವುದು. ಅಂದು ದೇವತಕ್ಕರಾದ ಪರದಂಡ ಕುಟುಂಬಸ್ಥರು, ಅಮ್ಮಂಗೇರಿ ಕಣಿಯರು (ಜ್ಯೋತಿಷ್ಯರು), ಪಾಡಿ ನಾಡಿನ ಎಲ್ಲಾ ತಕ್ಕ ಮುಖ್ಯಸ್ಥರು, ಕೊಡಗಿನ ಸರ್ವ ಸಮುದಾಯದ ಭಕ್ತಾದಿಗಳ ಸಮ್ಮುಖದಲ್ಲಿ ಹಬ್ಬದ ದಿನವನ್ನು ಹಾಗೂ ಕ್ರಮವಾಗಿ ‘ದೇವಪೊವ್ದ್’ ಹಾಗೂ ‘ನಾಡ್ ಪೊವ್ದ್’ನ ಶುಭ ಮಹೂರ್ತಗಳನ್ನು ನಿರ್ಧಾರ ಮಾಡಿ ಪ್ರಕಟಿಸಲಾಗುವುದು. ಭಕ್ತರು ದೇಶಕಟ್ಟು ವಿಧಿಸಿದ ದಿನದಿಂದ 15 ದಿನಗಳ ನಂತರ ನಡೆಯುವ ಬಿಚ್ರ್ಯಾರ್ ಕಲ್ಲಾಡ್ಚ ಹಬ್ಬದ…

Read More

ನಾಪೋಕ್ಲು ನ.8 : ಕುಂಜಿಲ-ಕಕ್ಕಬ್ಬೆ ಪಂಚಾಯತಿಯಲ್ಲಿ ಸಾಮಾಜಿಕ ಚೇತನ ಕೇಂದ್ರ ಉದ್ಘಾಟನೆಗೊಂಡಿತು. ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಸಾಕ್ಷಾರತ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ಚೇತನ ಕೇಂದ್ರವನ್ನು ಕುಂಜಿಲ-ಕಕ್ಕಬ್ಬೆ ಪಂಚಾಯತಿಯ ಪಿಡಿಓ, ಶಿಕ್ಷಣ ಇಲಾಖೆಯ ಅಧಿಕಾರಿಗಳ ಮತ್ತು ಗ್ರಾ.ಪಂ ಸದಸ್ಯರ ಸಮಾಕ್ಷಮದಲ್ಲಿ ಉದ್ಘಾಟಿಸಲಾಯಿತು. ವರದಿ : ದುಗ್ಗಳ ಸದಾನಂದ  

Read More

ಮಡಿಕೇರಿ ನ.8 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಡಿ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು…

Read More

ಮಡಿಕೇರಿ ನ.7 : ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರದ ಉಕ್ಕುಡ ನಿವಾಸಿ ಸಂದೇಶ್(38) ಎಂಬುವವರೇ ನಾಪತ್ತೆಯಾದ ಯೋಧ. ಪತ್ರವೊಂದು ಸಿಕ್ಕಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನಗರದ ಪಂಪಿನ ಕೆರೆಯಲ್ಲಿ ನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಂದು ತೀವ್ರ ಶೋಧ ಕಾರ್ಯ ನಡೆಸಿದರು. ಕತ್ತಲಾದ ಹಿನ್ನೆಲೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿಯಾಗಿದ್ದ ಸಂದೇಶ್ ಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.

Read More