ಲೇಖಕ: admin

ಮಡಿಕೇರಿ ಅ.11 :  ವಿರಾಜಪೇಟೆಯ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ  ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಪಿಂಚಣಿ ಆದೇಶ ಪ್ರತಿ  ವಿತರಿಸಿದರು. ಕಂದಾಯ ಇಲಾಖೆ ವತಿಯಿಂದ  12 ಫಲಾನುಭವಿಗಳಿಗೆ 94 ಸಿ ರಡಿ ಹಕ್ಕುಪತ್ರ ಮತ್ತು 30 ಫಲಾನುಭವಿಗಳಿಗೆ ಪಿಂಚಣಿ ಆದೇಶ ಪ್ರತಿ ವಿತರಿಸಲಾಯಿತು.

Read More

ಮಡಿಕೇರಿ ಅ.11 : ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ, ನೆಹರು ಯುವ ಕೇಂದ್ರ ಮುಂಭಾಗ, ಕಾವೇರಿ ಲೇ-ಔಟ್, ಮಡಿಕೇರಿ ಈ ಸಂಸ್ಥೆಯು 0 ಯಿಂದ 6 ವರ್ಷದವರೆಗಿನ ಒಪ್ಪಿಸಲ್ಪಟ್ಟ ಹಾಗೂ ಪೋಷಣೆ ಮತ್ತು ರಕ್ಷಣೆಗೆ ಒಳಪಟ್ಟ ಮಕ್ಕಳು ಇರುವ ಸಂಸ್ಥೆ ಆಗಿರುತ್ತದೆ. ಈ ಸಂಸ್ಥೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು 3 ಜನ ಆಯಗಳು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 08272-200450 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿಯ ಮಡಿಲು ಸರ್ಕಾರಿ ದತ್ತು ಸಂಸ್ಥೆಯ ಅಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಅ.11 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ವತಿಯಿಂದ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕಾಗಿ ಅರ್ಜಿ ಸಲ್ಲಿಸಲು ನವೆಂಬರ್, 4 ಕೊನೆಯ ದಿನವಾಗಿದೆ. ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ ಇಂತಿದೆ. ಮೆಕ್ಯಾನಿಕ್ ಡೀಸೆಲ್ (40 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರೀಷಿಯನ್(18 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್(5 ಸ್ಥಾನ), ಫಿಟ್ಟರ್ (5 ಸ್ಥಾನ), ಪಾಸಾ(10 ಸ್ಥಾನ). ತರಬೇತಿ ಅವಧಿ ಒಂದು ವರ್ಷ ಆಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಮೆಕ್ಯಾನಿಕ್ ಡೀಸೆಲ್ ಒಟ್ಟು 29 ಸ್ಥಾನ. ತರಬೇತಿ 2 ವರ್ಷ ಆಗಿರುತ್ತದೆ. ಅರ್ಜಿಯನ್ನು ಆಯೋಗದ ಅಂತರ್ಜಾಲ www.apprenticeshippindia.org  ಮೂಲಕ ನೋಂದಣಿ ಮಾಡುವುದು ಹಾಗೂ ನೋಂದಣಿ…

Read More

ಮಡಿಕೇರಿ ಅ.10 : ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಅವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ನಗರಸಭಾ ಪೌರಾಯುಕ್ತರ ಮೇಲೆ ಹಲ್ಲೆಗೆ ಯತ್ನ ಆರೋಪದ ಹಿನ್ನೆಲೆಯಲ್ಲಿ ಪೌರ ಸೇವಾ ನೌಕರರ ಸೇವಾ ಸಂಘದಿಂದ ಕರ್ತವ್ಯಕ್ಕೆ ಹಾಜರಾಗದೆ ನಗರಸಭಾ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ಅಧೀನ ಕಾರ್ಯದರ್ಶಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದ ಸಂದರ್ಭ ಕಚೇರಿ ಪ್ರವೇಶಿಸಿದ ಸತೀಶ್ ಅವರು, ಫಾರಂ ನಂಬರ್ 3 ವಿಚಾರದಲ್ಲಿ ಪೌರಾಯುಕ್ತರೊಂದಿಗೆ ಕಲಹ ನಡೆಸಿದ್ದಾರೆ. ಅಲ್ಲದೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಿಬ್ಬಂದಿಗಳಿಗೆ ಮಾನಸಿಕ ಕಿರುಕುಳ ನೀಡಬಾರದು, ಶಿಸ್ತನ್ನು ಪಾಲಿಸಬೇಕು, ಸೌಜನ್ಯದಿಂದ ವರ್ತಿಸಬೇಕು, ಸತೀಶ್ ಅವರ ನಗರಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ನಗರಸಭಾ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ನಿರತರಾದ ಕಾರಣ ಕಚೇರಿಗೆ ಬಂದ ಸಾರ್ವಜನಿಕರು ಅರ್ಜಿಗಳು ವಿಲೇವಾರಿಯಾಗದೆ ಮರಳಿದರು. ನಿತ್ಯ ನಗರಸಭೆಯಲ್ಲಿ ಒಂದಲ್ಲ ಒಂದು ಗೊಂದಲ, ಶೀತಲ…

Read More

ಮಡಿಕೇರಿ ಅ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೇವಾದಳದ ರಾಜ್ಯ ಮುಖ್ಯ ಸಂಘಟಕ ಎಂ.ರಾಮಚಂದ್ರ ಅವರು ಭಾರತ್ ಸೇವಾದಳವನ್ನು 1923 ಡಿ.26 ರಂದು ಎನ್.ಎಸ್.ಹಾರ್ಡಿಕರ್ ಅವರು ಸ್ಥಾಪನೆ ಮಾಡಿದ್ದು, ಇದೀಗ 100 ವರ್ಷ ಪೂರೈಸುತ್ತಿದೆ. ಶತಮಾನೋತ್ಸವದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅ.29 ರಂದು ಪಾದಯಾತ್ರೆ ಮತ್ತು ಬೃಹತ್ ಸಮಾವೇಶ ನಡೆಯಲಿದೆ ಎಂದರು. ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ನೇತೃತ್ವದಲ್ಲ್ಲಿ ನಡೆದ ಸಭೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಆಯೋಜಿಸಲಾಗುವ ಸೇವಾದಳ ಸಮಿತಿಯ ರಾಜ್ಯ ಮಟ್ಟದ ಸಮಾವೇಶ, ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸೇವಾದಳ ಸಕ್ರಿಯವಾಗುವ ಹಾಗೂ ಜಿಲ್ಲಾ, ಬ್ಲಾಕ್, ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸುವ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭ ಎಂ.ರಾಮಚಂದ್ರ ಅವರನ್ನು ಸೇವಾದಳದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ತೆರೆಸಾ ವಿಕ್ಟರ್, ರಾಜ್ಯ ಉಪಾಧ್ಯಕ್ಷರಾದ ಜಾಕೀರ್ ಹುಸೇನ್, ರಮೇಶ್,…

Read More

ಮಡಿಕೇರಿ ಅ.10 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಕೊಡವ ಸಮಗ್ರ ಕುಲಶಾಸ್ತ್ರ ಅಧ್ಯಯನ, ಕೊಡವ “ಸಂಸ್ಕಾರ ಗನ್” ಸಂವಿಧಾನದ 25 ಮತ್ತು 26ನೇ ವಿಧಿಗಳಡಿಯಲ್ಲಿ ಕೊಡವರ “ಧಾರ್ಮಿಕ ಸಂಸ್ಕಾರ”ವೆಂದು ರಕ್ಷಿಸುವುದು ಸೇರಿದಂತೆ 9 ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ನಡೆದ ಮೂರನೇ ಹಂತದ ಪಾದಯಾತ್ರೆ ಮತ್ತು ಕೊಡವ ಜನಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೀವನದಿ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು. ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಘಟಿಸಿದ…

Read More

ಮಡಿಕೇರಿ ಅ.10 : ಜಾಗತಿಕವಾಗಿ ಕೊರೊನಾ ಬಳಿಕ 8 ಜನರಲ್ಲಿ ಒಬ್ಬರಿಗೆ ಮಾನಸಿಕ ಅಸ್ವಸ್ಥತೆ ಕಂಡುಬರುತ್ತಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ, ಮಡಿಕೇರಿ, ಎಸ್‍ವಿವೈಎಂ, ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯು ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬ ಘೋಷವಾಕ್ಯದಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋದಕ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾನಸಿಕ ಆರೋಗ್ಯ ಮನುಷ್ಯನಿಗೆ ತುಂಬಾ ಮುಖ್ಯ. ಮಾನಸಿಕ ಆರೋಗ್ಯದಲ್ಲಿ ವ್ಯತ್ಯಾಸವಾದಲ್ಲಿ ಸಮಾಜದ ಸ್ಥಿತಿಗತಿಗಳಲ್ಲಿ ಏರುಪೇರು ಉಂಟಾಗುತ್ತದೆ. ಸಮಾಜದ ಒಳಿತಿಗೆ ಮಾನಸಿಕ ಖಾಯಿಲೆಗೆ ತಕ್ಕಂತೆ ಔಷಧಿ ಹಾಗೂ…

Read More

ಮಡಿಕೇರಿ ಅ.10 : ಉಪನ್ಯಾಸಕರ ನೇಮಕ ಮತ್ತು ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕೊಡಗು ವಿಶ್ವ ವಿದ್ಯಾನಿಲಯ ರಚನೆಯಾದ ನಂತರ ನಮಗೆ ತೊಂದರೆಗಳು ಎದುರಾಗಿದ್ದು, ಶೈಕ್ಷಣಿಕ ಪ್ರಗತಿಗೆ ಅಡಚಣೆಯಾಗಿದೆ. ಕಾಲೇಜ್ ಗೆ 93 ಉಪನ್ಯಾಸಕರ ಅಗತ್ಯವಿದ್ದು, ಕೇವಲ 43ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಾಠವನ್ನು ಮಾಡದೆ ಪರೀಕ್ಷೆ ಮಾಡಲಾಗುತ್ತಿದೆ, ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಲ್ಯಾಬ್ ನಲ್ಲಿ ಸೌಲಭ್ಯದ ಕೊರತೆ ಇದೆ ಮತ್ತು ಹಾಸ್ಟೆಲ್ ವ್ಯವಸ್ಥೆ ಇಲ್ಲವೆಂದು ವಿದ್ಯಾರ್ಥಿಗಳು ಆರೋಪಿಸಿದರು. ಸಮಸ್ಯೆಗಳ ಕುರಿತು ಕಾಲೇಜು ಆಡಳಿತ ಮಂಡಳಿಗೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಉಪನ್ಯಾಸಕರ ನೇಮಕ ಸೇರಿದಂತೆ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ತರಗತಿಗೆ ಹಾಜರಾಗುವುದಿಲ್ಲವೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಕೊಡಗು ವಿವಿ ಕುಲಪತಿ ಅಶೋಕ್ ಸಂಗಪ್ಪ ಆಲೂರ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಸೀನಪ್ಪ ಅವರುಗಳು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಕೊಡಗು ವಿಶ್ವ ವಿದ್ಯಾನಿಲಯ…

Read More

ಮಡಿಕೇರಿ ಅ.10 : ಬಾಳೆಲೆ ಕಾಲೇಜು ಕ್ರೀಡಾಂಗಣದಲ್ಲಿ ಬಿರ್ಸಾಮುಂಡ ಸಮಿತಿ ವತಿಯಿಂದ ನಡೆದ ಹಗ್ಗಜಗ್ಗಾಟ ಮುತ್ತು ತಟ್ಟೆಬಿಲ್ಲು ಸ್ಪರ್ಧೆಗೆ ಯರವ ಸಮುದಾಯದ ದೈವಾರಾಧಕ ಮುತ್ತ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬುಡಕಟ್ಟು ಸಾಮಾಜಿಕ ಹೋರಾಟಗಾರ ಗಪ್ಪು ಮಾತನಾಡಿ ಗಿರಿಜನ ಹಾಡಿಯ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಜೊತೆಗೆ ಬುಡಕಟ್ಟು ಜನರ ಶ್ರೀಮಂತ ಸಾಂಸ್ಕೃತಿಯನ್ನು ಉಳಿಸುವಂತೆ ಕರೆ ನೀಡಿದರು. ಬಿರ್ಸಾಮುಂಡ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಬಾಳೆಲೆ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ, ನಿಟ್ಟೂರು ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ನಿವೃತ್ತ ಯೋಧ ಕಾಳ, ಗಿರಿಜನ ಮುಖಂಡರುಗಳಾದ ಗಪ್ಪು, ಅಪ್ಪಾಜಿ, ತಟ್ಟಕೆರೆ ದಾಸಪ್ಪ, ಬಿರ್ಸಾಮುಂಡ ಸಮಿತಿಯ ಕಾರ್ಯದರ್ಶಿ ದಿನೇಶ್ ತಿತಿಮತಿ, ಸಂಚಾಲಕ ಮಾಚಿಮಾಡ ರವೀಂದ್ರ, ನಿರ್ದೇಶಕರಾದ ಮುರುಗೇಶ್, ಕಾಯರ ಕಿರಣ್…

Read More

ಮಡಿಕೇರಿ ಅ.10 : ಮುಂದಿನ ಪೀಳಿಗೆಗಾಗಿ ನಾವು ಅಳಿವಿನಂಚಿನಲ್ಲಿರುವ ಜೀವ ಪ್ರಭೇದಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದು ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ವತಿಯಿಂದ ನಮ್ಮ ನಡೆ ಪರಿಸರದೆಡೆಗೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ 69ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ : 2023 ಕಾರ್ಯಕ್ರಮದಲ್ಲಿ ಮಕ್ಕಳಿಗೆ ವನ್ಯಜೀವಿಗಳ ಸಂರಕ್ಷಣೆಯ ಮಹತ್ವ ಕುರಿತು ಮಾತನಾಡಿದರು. ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಆಗಿದೆ ಎಂದರು. ವನ್ಯಜೀವಿ ಸಪ್ತಾಹದ ಉದ್ದೇಶ ಹಾಗೂ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿ ಮಕ್ಕಳೊಂದಿಗೆ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಸಂವಾದ ನಡೆಸಿದ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ…

Read More