ಲೇಖಕ: admin

ಮಡಿಕೇರಿ ನ.7 : ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆಬದ್ಧವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕನ್ನು ಸಂವಿಧಾನದ ವಿಧಿ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಧೀನದೊಳಗೆ ಸಂಯೋಜಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಸಿಎನ್‍ಸಿ ಸಂಘಟನೆ 5ನೇ ಹಂತದ ಪಾದಯಾತ್ರೆಯನ್ನು ಆರಂಭಿಸಿತು. ವಿರಾಜಪೇಟೆ ತಾಲ್ಲೂಕಿನ ಬೆಪ್ಪುನಾಡ್ ನ ಅರಮೇರಿ ಮಂದ್ ಮತ್ತು ಕಡಂಗ ಮುರೂರು ಮಂದ್ ನಲ್ಲಿ ಪಾದಯಾತ್ರೆ ಹಿನ್ನೆಲೆ ನಡೆದ ಕೊಡವ ಜನಜಾಗೃತಿ ಸಭೆಯ ನೇತೃತ್ವ ವಹಿಸಿ ನಾಚಪ್ಪ ಮಾತನಾಡಿದರು. ಕೊಡಗಿನ ಅತ್ಯಂತ ಸೂಕ್ಷ್ಮ ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದ ಭದ್ರತೆಯ ಅಗತ್ಯವಿದೆ. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ಅನಿವಾರ್ಯವಾಗಿದೆ.…

Read More

ಮಡಿಕೇರಿ ನ.7 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿಯ ಕನಸು ಕಾಣುತ್ತಾರೆ. ಆದರೆ ಸರ್ವಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೇ ಎಂಬ ಬಗ್ಗೆ ಪ್ರತಿಯೊಬ್ಬರೂ ಚಿಂತಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹೆಚ್.ಸಿ.ಶ್ಯಾಮ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಧ್ವಜ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಬೃಹತ್ ಜಾಥಾಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ತಲುಪಿವೆಯೇ ಎಂಬ ಬಗ್ಗೆ ಆತ್ಮವಲೋಕನ ಮಾಡಬೇಕಿದೆ. ನಿಜವಾದ ಅಭಿವೃದ್ಧಿ ಕಾರ್ಯಗಳು ನಾಗರಿಕರಿಗೆ ತಲುಪುತ್ತಿವೆಯೇ ಎಂಬುದರ ಬಗ್ಗೆ ಯೋಚಿಸಬೇಕಿದೆ ಎಂದು…

Read More

ಮಡಿಕೇರಿ ನ.7 : ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ‘ಪೌರ ಕಾರ್ಮಿಕರ’ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪೌರಕಾರ್ಮಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ತಾವು ಕರ್ತವ್ಯ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು. ಪೌರಕಾರ್ಮಿಕರು ರಜೆ ಕೇಳಿದ್ದಲ್ಲಿ ನೀಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಡಾ.ಮಂತರ್ ಗೌಡ ಕರೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುವವರಿಂದ ದಂಡ ವಸೂಲಿ ಮಾಡಬೇಕು. ಈ ರೀತಿ ಆದಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಲು ಸಾಧ್ಯ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ನುಡಿದರು. ನಗರಸಭೆಯಲ್ಲಿ…

Read More

ಮಡಿಕೇರಿ ನ.7 :   ಶ್ರೀ ಧನ್ವಂತರಿ ಜಯಂತಿಯ ದಿನವಾದ ನ.10 ರಂದು ‘ಪ್ರತಿದಿನ ಪ್ರತಿಯೊಬ್ಬರಿಗೂ ಆಯುರ್ವೇದ’ ಘೋಷವಾಕ್ಯದೊಂದಿಗೆ ನಗರದಲ್ಲಿ ‘ರಾಷ್ಟ್ರೀಯ ಆಯುರ್ವೇದ ದಿನ’ವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆಯೆಂದು ನೀಮಾ(ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್) ಕೊಡಗು ಸಂಘಟನೆಯ ಅಧ್ಯಕ್ಷ  ಡಾ. ಎ.ಆರ್.ರಾಜರಾಮ್ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 7.30 ಕ್ಕೆ ಶ್ರೀ ಧನ್ವಂತರಿ ಪೂಜೆ, ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯದ ಕೆ.ವಿ.ಜಿ. ಆಯುರ್ವೇದ ಮಹಾ ವಿದ್ಯಾಲಯದ ಸಹಯೋಗದಲ್ಲಿ ಸಾರ್ವಜನನಿಕರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಸಂದರ್ಭ ಆಟೋ ಚಾಲಕರು, ಆರಕ್ಷಕರು ಮತ್ತು ಪತ್ರಿಕಾ ಸಿಬ್ಬಂದಿಗಳು ಮತ್ತು ಅವರ ಕುಟುಂಬಸ್ಥರಿಗೂ ವಿಶೇಷ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆಯೆಂದು ಮಾಹಿತಿಯನ್ನಿತ್ತರು. ಮಕ್ಕಳಿಗೆ ಸ್ಪರ್ಧೆ :  ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯ್ದ ಶಾಲೆಗಳ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ‘ಆಯುರ್ವೇದ ಪ್ರಕೃತಿಯ ಕೊಡುಗೆ…

Read More

ಮಡಿಕೇರಿ ನ.7 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ಕಾರ್ಯಕ್ರಮವು ನ.12 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂ ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯ ನಂತರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಈಗಾಗಲೇ ರಸಪ್ರಶ್ನೆ, ಪ್ರಬಂಧ ಹಾಗೂ ಪುಸ್ತಕ ವಿಮರ್ಶೆ ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಅಲ್ಲದೇ ಶಕ್ತಿ ದಿನಪತ್ರಿಕೆಯ ಸಲಹ…

Read More

ಹಾಸನ  ನ.7 :   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದರು. ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು  ಹಾಜರಿದ್ದರು.

Read More

ಸೋಮವಾರಪೇಟೆ ನ.7 : ಉದ್ಯೋಗಕ್ಕೆ ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೇ ಬದುಕಿಗೆ ಸಾಮಾನ್ಯ ಜ್ಞಾನವೂ ಅಷ್ಟೇ ಮುಖ್ಯ ಎಂದು ಸಾಂದೀಪನಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಖಿತ್ ದಾಮೋದರ್ ತಿಳಿಸಿದರು. ರಾಮಕೃಷ್ಣ ವಿದ್ಯಾಶಾಲೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಸಾಂದೀಪನಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಅಂತರ ಶಾಲಾ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದು ನಾವು ಪ್ರಮುಖವಾಗಿ ಉದ್ಯೋಗಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ಕೊಡುತ್ತಿದ್ದೇವೆ. ಆದರೆ ಬದುಕಿನಲ್ಲಿ ಸಾಮಾನ್ಯ ಜ್ಞಾನವೆಂಬದು ಇಲ್ಲವಾದರೆ ಜೀವನ ಕಷ್ಟವಾಗುತ್ತದೆ ಎಂದರು. ರಾಮಕೃಷ್ಣ ವಿದ್ಯಾಶಾಲೆ ಆರಂಭಗೊಂಡು 50 ವರ್ಷ ವಾಗಿರುವ ಸಂದರ್ಭ ಅಂದಿನ ಗುರುಗಳಾಗಿದ್ದ ಶಂಭವಾನಂದಜಿ ಅವರ ಜ್ಞಾಪಕಾರ್ಥ ರಾಜ್ಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಾಂತ ಏಕಕಾಲದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ರಾಜ್ಯದ 732 ಕೇಂದ್ರಗಳಲ್ಲಿ ಒಟ್ಟು 17241 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದು, ಕೊಡಗು ಜಿಲ್ಲೆಯಲ್ಲಿ 100 ಮಂದಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಪತ್ರಿಕಾ ಭವನದ ಅಧ್ಯಕ್ಷ ಎಸ್.ಮಹೇಶ್…

Read More

ನಾಪೋಕ್ಲು ನ.7 : ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಆರೋಗ್ಯದ ಜೊತೆಗೆ ಮಾನಸಿಕ ಸ್ಥಿತಿ ಉತ್ತಮಗೊಳ್ಳಲು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನ ದಿ ರೋವ್ ಕೂರ್ಗ್ ಮತ್ತು ರಘುರಾಜ್ ಸ್ಪೋರ್ಟ್ಸ್ ಮ್ಯಾನೇಜ್ ಮೆಂಟ್ ವತಿಯಿಂದ ಎರಡು ದಿನಗಳ ಕಾಲ ರೋವ್ ಕೂರ್ಗ್ ನಾಪೋಕ್ಲು ವಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭಕ್ಕೂ ಮೊದಲು  ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತಹ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ನಾಪೋಕ್ಳು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಮಾತನಾಡಿ, ಶಟಲ್ ಬ್ಯಾಡ್ಮಿಂಟನ್ ಕ್ರೀಡೆಯ ಹುಟ್ಟು ಹಾಗೂ ನಡೆದು ಬಂದ ದಾರಿಯ ಬಗ್ಗೆ ಸವಿಸ್ತಾರವಾಗಿ ಮಾತನಾಡಿ, ಕ್ರೀಡಾಪಟುಗಳಿಗೆ ಇದರ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮುಂದೆ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲಿ ಎಂದು ಆಶಿಸಿದರು. ಕಾಫಿ ಬೆಳೆಗಾರ ಬಿದ್ದಾಟ0ಡ ಜೀವನ್ ಕಾರ್ಯಪ್ಪ ಮಾತನಾಡಿ, ತಮ್ಮ ಅನಿಸಿಕೆ ವ್ಯಕ್ತಪಡಿಸಿ…

Read More

ಮಡಿಕೇರಿ ನ.7 : ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಕರ್ನಾಟಕ ಪಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಷನ್ ವತಿಯಿಂದ ಹುಬ್ಬಳ್ಳಿ ಧಾರವಾಡದಲ್ಲಿ ನಡೆದ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ -2023 ರಲ್ಲಿ 100ಮೀ, 200ಮೀ ಮತ್ತು 400ಮೀ ಅಥ್ಲೆಟಿಕ್ ನಲ್ಲಿ ಮಡಿಕೇರಿಯ ಬಿ.ವಸಂತಿ ಅವರು ಪ್ರಥಮ ಸ್ಥಾನ ಗಳಿಸುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಸಂತಿ ಅವರು, ಪ್ರಸ್ತುತ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನರ್ಸಿಂಗ್ ಆಫೀಸರ್ ಆಗಿ ಸೇವೆಯಲ್ಲಿದ್ದಾರೆ. ಅ.27 ರಿಂದು 29 ರವರೆಗೆ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕೂಡ ಇವರು ಉತ್ತಮ ಸಾಧನೆ ಮಾಡಿದ್ದಾರೆ.

Read More

ಮಡಿಕೇರಿ ನ.7 :  ಕುಶಾಲನಗರದ ನಂಜರಾಯಪಟ್ಟಣ ಗ್ರಾಮದ ಶ್ರೀ ನಂಜುಡೇಶ್ವರ ದೇವಾಲಯದಲ್ಲಿ ನ.13 ರಿಂದ ಡಿ.12ರ ವರೆಗೆ ಕಾರ್ತಿಕ ಮಾಸಾಚರಣೆ ಜರುಗಲಿದೆ. ಪ್ರತಿ ದಿನ ಸಂಜೆ 6 ಗಂಟೆಗೆ ದೇವರುಗಳಿಗೆ ಅಲಂಕಾರ, 7 ಗಂಟೆಗೆ ದೀಪ ಬೆಳಗುವುದು, 8 ಗಂಟೆಗೆ ಮಂಗಳಾರತಿ, 8.15 ಗಂಟೆಗೆ ತೀರ್ಥ ಪ್ರಸಾದ ವಿತರಣೆ, 8.30 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ. ಮೊದಲ ಮತ್ತು ಅಂತಿಮ ದಿನದ ಪೂಜೆಯನ್ನು ಗ್ರಾಮಸ್ಥರೆಲ್ಲ ಒಗ್ಗೂಡಿ ಆಚರಿಸುವಂತೆಯೂ ಉಳಿದ ದಿನಗಳನ್ನು ಸಮಿತಿಯ ಪದಾಧಿಕಾರಿಗಳು ಮತ್ತು ವೈಯಕ್ತಿಕ ಸಲ್ಲಿಸುವವರಿಗೆ ಮೀಸಲಿರಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಲಿ ಕೋರಿದೆ. ವೈಯಕ್ತಿಕ ಪೂಜೆ ಸಲ್ಲಿಸುವವರು 9480905471, 8217781254 ಸಂಪರ್ಕಿಸಬಹುದಾಗಿದೆ.

Read More