ಲೇಖಕ: admin

ಮಡಿಕೇರಿ ಅ.10 : ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ ಪ್ರಯುಕ್ತ ಸಿದ್ದಾಪುರದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಬೋಧಕ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ, ಗ್ರಾ.ಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಮಡಿಕೇರಿ ವ್ಯೆದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದಾಪುರ ಗ್ರಾ.ಪಂ ಅಧ್ಯಕ್ಷೆ ಪ್ರೇಮ ಗೋಪಾಲ್, ಕೊಡಗಿನ ಗಡಿಯಲ್ಲಿ ಹೆಚ್ಚು ಮಾನವ ಪ್ರಾಣಿ ಸಂಘರ್ಷಗಳು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುವುದು ಮುಖ್ಯವಾಗಿರುತ್ತದೆ ಹಾಗೂ ಕನಿಷ್ಠ…

Read More

ಮಡಿಕೇರಿ ಅ.10 : ಚದುರಂಗದಾಟ ಮಕ್ಕಳಲ್ಲಿ ಬೌದ್ದಿಕ ಕೌಶಲ್ಯವನ್ನು ಹೆಚ್ಚಿಸುವ ಮೂಲಕ ಸಂದಿಗ್ಧ ಪರಿಸ್ಥಿಯನ್ನು ನಿಭಾಯಿಸಲು ಸಹಕಾರಿಯಾಲಿದೆ ಎಂದು ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಮಡಿಕೇರಿಯ ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಕೊಡಗು ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳು ಟಿವಿ, ಮೊಬೈಲ್ ಗೆ ದಾಸರಾಗುವುದನ್ನು ತಪ್ಪಿಸಲು ಚೆಸ್ ಸೇರಿದಂತೆ ಇನ್ನಿತರ ಬೌದ್ಧಿಕ ಕೌಶಲ್ಯವನ್ನು ಹೆಚ್ಚಿಸುವ ಆಟಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ನ ಸಂಸ್ಥಾಪಕಿ ಕಾವ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ತಜ್ಞ ವೈದ್ಯರಾದ ಡಾ.ಅಭಿನಂದನ್, ಕೊಡಗು ಚಾನೆಲ್ ಸಂಪಾದಕ ಜಿ.ವಿ. ರವಿಕುಮಾರ್, ಕೊಡಗು ಚಾನೆಲ್ ನ ಹಿರಿಯ ವರದಿಗಾರ ಟಿ.ಜೆ.ಪ್ರವೀಣ್ ಕುಮಾರ್, ಡೈನಾಮಿಕ್ ಪತ್ರಿಕೆಯ ಉಪ ಸಂಪಾದಕ ಜಿ.ಎಸ್.ವಿನಯ್ ಕುಮಾರ್…

Read More

ಮಡಿಕೇರಿ ಅ.10 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷಂಪ್ರತಿ ಜಿಲ್ಲೆಯ ಮಹಿಳಾ ಲೇಖಕರಿಗೆ ನೀಡುತ್ತಿರುವ ಪ್ರತಿಷ್ಠಿತ ಕೊಡಗಿನ ಗೌರಮ್ಮ ಪ್ರಶಸ್ತಿಗೆ 2023-24 ಸಾಲಿಗೆ ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪ್ರಕಟಿಸಿದ ಅವರು, ಗೌರಮ್ಮ ಪುಸ್ತಕ ಪ್ರಶಸ್ತಿಗೆ ಈ ಬಾರಿ 12 ಲೇಖಕರು 15 ಪುಸ್ತಕಗಳನ್ನು ಕಳುಹಿಸಿದ್ದರು. ಇದರಲ್ಲಿ ಈರಮಂಡ ಹರಿಣಿ ವಿಜಯ್ ಅವರ ‘ಅಗ್ನಿ ಯಾತ್ರೆ’ ಮತ್ತು ಕಟ್ರತನ ಲಲಿತಾ ಅಯ್ಯಣ್ಣ ಅವರ ‘ಕಡಲಾಳದ ಮುತ್ತುಗಳು’ ಪುಸ್ತಕಗಳು ಸಮಾನ ಅರವತ್ತು ಅಂಕಗಳನ್ನು ಪಡೆದುಕೊಂಡ ಹಿನ್ನೆಲೆ. ಈ ಬಾರಿ ಪ್ರÀಶಸ್ತಿಯನ್ನು ಇಬ್ಬರು ಲೇಖಕಿಯರಿಗೆ ನೀಡಲಾಗುತ್ತಿದೆಯೆಂದು ಸ್ಪಷ್ಟಪಡಿಸಿದರು. ಜಿಲ್ಲಾ ಕಸಾಪದಿಂದ ಇದೇ ಅ.27 ರಂದು ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಗೌರಮ್ಮ ದತ್ತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅಂದಿನ ಕಾರ್ಯಕ್ರಮವನ್ನು ಕಾಲೇಜಿನ ವೆಂಕಟೇಶ್…

Read More

ಮಡಿಕೇರಿ ಅ.10 : ಅತ್ಯಂತ ಸರಳವಾಗಿ ಮಹಾಭಾರತದ ಬಗ್ಗೆ ಯುವ ಸಮೂಹಕ್ಕೆ, ಅದರಲ್ಲೂ ಎಳೆಯರಿಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಸಾಹಿತಿ ಬಾಚಮ್ಮಂಡ ಗೌರಮ್ಮ ಮಾದಮ್ಮಯ್ಯ ಅವರು ರಚಿಸಿರುವ ‘ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ’ ಪುಸ್ತಕವನ್ನು ಕರ್ನಾಟಕ ಜಾನಪದ ಪರಿಷತ್‍ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಅನಾವರಣಗೊಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಸುದ್ದಿಗೋಷ್ಠಿಯಲ್ಲಿ ಪುಸ್ತಕವನ್ನು ಉದ್ಘಾಟಿಸಿ ಮಾತನಾಡಿದ ಅನಂತಶಯನ, ನಮ್ಮ ಶ್ರೀಮಂತ ಸಂಸ್ಕೃತಿಯ ಸಂಪತ್ತು ಅರಿಯದ ನಮ್ಮ ನಡೆಗಳು ಹಲವಾರು ಬಾರಿ ಇತರರ ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ. ಈ ಹಿನ್ನೆಲೆ ಗೌರಮ್ಮ ಮಾದಮ್ಮಯ್ಯ ಅವರು ಬರೆದಿರುವ ಮಹಾಭಾರತವನ್ನು ಪ್ರಶ್ನೋತ್ತರಗಳ ಮೂಲಕ ತಿಳಿಸಿಕೊಡುವ ಪ್ರಯತ್ನ ಅತ್ಯಂತ ಶ್ಲಾಘನೀಯವೆಂದು ಮೆಚ್ಚುಗೆಯ ನುಡಿಗಳನ್ನಾಡಿದರು. ಹಿರಿಯ ಸಾಹಿತಿ ಕಸ್ತೂರಿ ಗೋವಿಂದಮ್ಮಯ್ಯ ಅವರು ಮಾತನಾಡಿ, ನಮ್ಮ ಸಂಸ್ಕೃತಿ, ಆಚಾರ ವಿಚಾರಗಳಿಂದು ನಶಿಸುತ್ತಿರುವುದಕ್ಕೆ, ನಮ್ಮಲ್ಲಿನ ಶ್ರೀಮಂತ ಸಂಸ್ಕೃತಿಯ ಬಗ್ಗೆ ಅರಿವನ್ನು ಹೊಂದಿರುವುದೇ ಪ್ರಮುಖ ಕಾರಣ. ನಮ್ಮ ಸಾಂಸ್ಕೃತಿಕ ವೈಭವವನ್ನು ಮತ್ತೆ ಪಡೆಯಲು, ಯುವ ಸಮೂಹಕ್ಕೆ ಅರಿವು ಮೂಡಿಸುವ ಇಂತಹ ಪುಸ್ತಕಗಳು ಕಾರಣವಾಗಲ್ಲುದೆಂದು…

Read More

ಮಡಿಕೇರಿ ಅ.10 : ಪೊನ್ನಂಪೇಟೆಯ ಕೂರ್ಗ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ತಾಂತ್ರಿಕ ಶಿಕ್ಷಣ ಸಂಸ್ಥೆ ಮುಂದಿನ ಸಾಲಿಗೆ 25 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ಣಗೊಳಿಸಿ ‘ಬೆಳ್ಳಿ ಮಹೋತ್ಸವ’ಕ್ಕೆ ಪಾದಾರ್ಪಣೆ ಮಾಡಲಿದ್ದು, ಈ ಹಿನ್ನೆಲೆ ನ.3 ರಿಂದ 5ರವರೆಗೆ ಸಿಐಟಿಯಲ್ಲಿ ರಾಜ್ಯ ಮಟ್ಟದ ‘ಕೃಷಿ ಯಂತ್ರ ಮೇಳ-2023’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ. ಮುಕ್ಕಾಟಿರ ಕಾರ್ಯಪ್ಪ ಮಾತನಾಡಿ, 1999 ರಲ್ಲಿ ಆರಂಭಗೊಂಡ ಸಿಐಟಿ ಸಂಸ್ಥೆ ಸ್ಥಳೀಯ ವಿದ್ಯಾರ್ಥಿಗಳಿಗೆ ಸುಲಭವಾಗಿ ತಾಂತ್ರಿಕ ಶಿಕ್ಷಣ ದೊರಕುವಂತೆ ಮಾಡಿದೆ. ಸಂಸ್ಥೆಯ ಬೆಳ್ಳಿ ಮಹೋತ್ಸವದ ಹಿನ್ನೆಲೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು. ಕಾಲೇಜಿನ ಉಪನ್ಯಾಸಕರಾದ ಡಾ. ರಾಮಕೃಷ್ಣ ಮಾತನಾಡಿ, ‘ಕೃಷಿ ದೇವೋಭವ’ ಘೋಷ ವಾಕ್ಯದಡಿ ಕೃಷಿ ಮೇಳ ಆಯೋಜಿತವಾಗುತ್ತಿದೆ. ಮೇಳದಲ್ಲಿ ಕೃಷಿಗೆ ಪೂರಕವಾದ ಯಂತ್ರಗಳು, ಪಂಪ್‍ಸೆಟ್ ಹೀಗೆ ಕೃಷಿಗೆ ಉಪಯುಕ್ತವಾದ ಯಂತ್ರೋಪಕರಣಗಳ 150 ರಿಂದ 200 ಮಳಿಗೆಗಳು ಪ್ರದರ್ಶಿಸಲ್ಪಡಲಿದೆ. ಈ ಮೇಳದ ಮೂಲಕ ಜಿಲ್ಲೆಯ ಕೃಷಿಕ ಬಂಧುಗಳು ಮಾರುಕಟ್ಟೆ ದರಕ್ಕಿಂತಲೂ ಕಡಿಮೆಯ ದರಕ್ಕೆ…

Read More

ಮಡಿಕೇರಿ ಅ.10 : ಜಾಗತಿಕವಾಗಿ ಭಾರತೀಯ ಕಾಫಿಗೆ ಬೇಡಿಕೆ ಮತ್ತು ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ದಕ್ಷಿಣ ಭಾರತ ಬೆಳೆಗಾರರ ಒಕ್ಕೂಟ (ಉಪಾಸಿ) ವಿವಿಧ ಕಾಫಿ ಸಂಸ್ಥೆಗಳ ಸಹಕಾರದಲ್ಲಿ ಇಂಡಿಯನ್ ಕಾಫಿ ಬ್ರಾಂಡ್ ರೂಪಿಸುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ಉಪಾಸಿಯ ಅಧ್ಯಕ್ಷ ಸಿ.ಶ್ರೀಧರನ್ ಹೇಳಿದ್ದಾರೆ. ನಗರದಲ್ಲಿ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ನ 144ನೇ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶ್ರೀಧರನ್, ಈಗಾಗಲೇ ವಿಶ್ವದ ಪ್ರಮುಖ ಕಾಫಿ ಕೆಫೆ ಸಂಸ್ಥೆಗಳು ಭಾರತದಲ್ಲಿ ಕೆಫೆ ಪ್ರಾರಂಭಿಸುತ್ತಿವೆ. ಕಾಫಿ ಜಗತ್ತಿನಲ್ಲಿ ಭಾರತದ ಕಾಫಿಯೂ ಗುರುತಿಸಲ್ಪಡುತ್ತಿದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ಆಯೋಜಿತ ವಿಶ್ವಕಾಫಿ ಸಮ್ಮೇಳನ ಕೂಡ ಜಾಗತಿಕವಾಗಿ ಭಾರತೀಯ ಕಾಫಿಗೆ ಒಳ್ಳೆಯ ಪ್ರಚಾರ ದೊರಕುವಂತೆ ಮಾಡಿದೆ. ಉಪಾಸಿ ಸಂಸ್ಥೆಯು ಇದೀಗ ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಇಂಡಿಯನ್ ಕಾಫಿ ಎಂಬ ಬ್ರಾಂಡ್ ಮೂಲಕ ಭಾರತೀಯ ಕಾಫಿಗೆ ಜಾಗತಿಕ ಬೇಡಿಕೆ ಮತ್ತು ಮಾನ್ಯತೆ ದೊರಕಿಸಲು ಪ್ರಯತ್ನಿಸುತ್ತಿದೆ ಎಂದರು. ಭಾರತದಲ್ಲಿ ಟೀ ಬೆಳೆಗೆ ಹೆಚ್ಚು ಅವಕಾಶಗಳಿದ್ದರೂ ವೈವಿಧ್ಯಮಯ…

Read More

ಮಡಿಕೇರಿ ಅ.11 : ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಗರದ  ಬೆಳ್ಯಪ್ಪ ಸ್ಮಾರಕ ಸಭಾಭವನದಲ್ಲಿ ಸಮಾಜದ ನೂತನ ಕಾರ್ಯಕಾರಿ ಮಂಡಳಿಯನ್ನು ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ.ಕುಶಾಲಪ್ಪ, ಸ್ಥಾಪಕಾಧ್ಯಕ್ಷರಾಗಿ ಮುತ್ತಮ್ಮ ಕೋಟಿ, ಗೌರವಾಧ್ಯಕ್ಷರಾಗಿ ಎಮ್.ಡಿ.ನಾಣಯ್ಯ, ಉಪಾಧ್ಯಕ್ಷರಾಗಿ ಲಯನ್ ದಾಮೋದರ್, ಕಾರ್ಯದರ್ಶಿಯಾಗಿ ಅರುಣ್, ಖಜಾಂಚಿಯಾಗಿ ಗಿರೀಶ್ ಮಡಿಕೆಬೀಡು ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ದಿನೇಶ್ ಐಗೂರು, ಅಶ್ವತ್ ಮಡಿಕೆಬೀಡು, ಸುರೇಶ್ ಮಡಿಕೇರಿ, ಅಪ್ಪಾಜಿ, ಪುರುಷೋತ್ತಮ್, ಅಚ್ಚು ಐಗೂರು, ಕೆ.ವೈ.ವಿಠಲ, ಕಾಂತಿಮಣಿ ಮಡಿಕೇರಿ, ಸರಸ್ವತಿ ನೇಮಕಗೊಂಡರು. ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ನಂತರ ಮಾತನಾಡಿದ ಗೌರವ ಅಧ್ಯಕ್ಷ ಎಂ.ಡಿ.ನಾಣಯ್ಯ, ಸಂಘಟನೆ ಬಲಿಷ್ಠವಾದಾಗ ಮಾತ್ರ ಆ ಸಮಾಜವು ಅಭಿವೃದ್ಧಿ ಹೊಂದುತ್ತದೆ. ಅದರಂತೆ ಸಮುದಾಯ ಎಲ್ಲರೂ ಜೊತೆಗೂಡಿ ನಡೆಯಬೇಕು ಎಂದರು. ಮುಂದಿನ ದಿನಗಳಲ್ಲಿ ನೂತನ ಸಮತಿಯು ಹೆಚ್ಚು ಕಾರ್ಯಪ್ರವೃತ್ತವಾಗಿ ಕೆಲಸ ಮಾಡಲಿ ಎಂದು ಶುಭಹಾರೈಸಿದರು. ವ್ಯಾಂಡಮ್ ಎಂಟಪ್ರೈಸಸ್‍ನ ಮಾಲೀಕ ಲಯನ್ ದಾಮೋದರ್ ಎಲ್ಲರೂ ಒಗ್ಗೂಡಿದಾಗ ಮಾತ್ರ ಸಮಾಜದ ಬೆಳವಣಿಗೆ ಸಾಧ್ಯ. ಸಮಾಜದ ಕಟ್ಟ…

Read More

ಮಡಿಕೇರಿ ಅ.10 : ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3000 ಮೀ ಓಟದ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಸಾಬಿತ್ ಪಿ.ಎನ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ನಾಸಿರ್ ಪಿ.ಎಸ್ ಹಾಗೂ ತಾಹಿರ ದಂಪತಿಯ ಪುತ್ರ.

Read More

ಮಡಿಕೇರಿ ಅ.10 :  ಮೈಸೂರು ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಡಾ.  ಬಿ.ಜೆ.ವಿಜಯ ಕುಮಾರ್  ಮಡಿಕೇರಿ ಮತಕ್ಷೇತ್ರದ  ಶಾಸಕ  ಡಾ. ಮಂತರ್ ಗೌಡ ಅವರನ್ನು ಕುಶಾಲನಗರದಲ್ಲಿ ಭೇಟಿ ಮಾಡಿ,  ಪಕ್ಷ ಸಂಘಟನೆ, ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಿದರು. ಈ  ಸಂದರ್ಭ  ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಶಾಸಕರನ್ನು ಅಭಿನಂದಿಸಿ, ಸನ್ಮಾನಿಸಿ ಶುಭ ಆರೈಸಿದರು. ಮೈಸೂರು ಜಿಲ್ಲಾ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಎಂ.ಶಿವಪ್ರಸಾದ್, ಪ್ರಮುಖರಾದ ಪದ್ಮನಾಭ ದಾಸನೂರು, ಸಂತೋಷ್ ಮೊಳೆಯೂರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ನ ಪ್ರಮುಖರು ಹಾಜರಿದ್ದರು.  

Read More

ಮಡಿಕೇರಿ ಅ.10 : ಮಡಿಕೇರಿಯಲ್ಲಿ ನಡೆದ  200 ಮೀಟರ್ ಓಟದ ಸ್ಪರ್ಧೆಯಲ್ಲಿ ದಿಗಂತ್ ರೈ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ನಗರದ ಸಂತ ಜೋಸೆಫರ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದಿಗಂತ್ ರೈ, ಶಾಲೆಯ ದೈಹಿಕ ಶಿಕ್ಷಕಿ ಪ್ರಮೀಳಾ ಅವರ ಮಾರ್ಗ ದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವನು ಮಡಿಕೇರಿಯ ಅನಿಲ್ ರೈ ಹಾಗೂ ಸೋನಿ ರೈ ದಂಪತಿಗಳ ಪುತ್ರ.

Read More