ಲೇಖಕ: admin

ಮಡಿಕೇರಿ ನ.27 NEWS DESK : ಅಂಚೆ ಅದಾಲತ್‍ನ ಮುಂದಿನ ಸಭೆಯು ಡಿಸೆಂಬರ್, 08 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 05 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, 08 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ನ.27 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾವೇರಿ ಕಾರ್ನಿವಲ್ ನ ಲೋಗೋ ಹಾಗೂ ಬ್ಯಾನರ್ ಗಳನ್ನು ಬಿಡುಗಡೆ ಮಾಡಲಾಯಿತು. ಗೋಣಿಕೊಪ್ಪಲು ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕರಾದ ಪಳಗಂಡ ವಾಣಿ ಚಂಗಪ್ಪ ಲೋಗೋ ಹಾಗೂ ಬ್ಯಾನರ್ ಗಳನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದರು. ಕಾರ್ಯಕ್ರಮದ ಪೂರ್ವ ತಯಾರಿ ಹಿಂದಿನ ಜವಾಬ್ದಾರಿಗಳು ಪ್ರಾಂಶುಪಾಲರ, ಎಲ್ಲಾ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಅಪಾರವೆಂದರು. ಡಿ.2 ರಂದು ನಡೆಯುವ ಕಾವೇರಿ ಕಾರ್ನಿವಲ್ 2025 ಜಿಲ್ಲಾ ಮಟ್ಟದ ಅಂತರ ಶಾಲಾ ಸ್ಪರ್ಧೆಯನ್ನು ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ  ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಶುಭ ನುಡಿದರು.  ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ಪದವಿ ಕಾಲೇಜಿನ ಪ್ರಾಂಶುಪಾಲರು ಬೇನೆಡಿಕ್ಟ್ ಸಾಲ್ದಾನ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾಗರಾಜು ಕಾರ್ಯಕ್ರಮದ ಮುಂದಿನ ಕಾರ್ಯಯೋಜನೆಗೆ ಶುಭಕೋರಿದರು. ಉಪನ್ಯಾಸಕರು, ಪದವಿ ಉಪನ್ಯಾಸಕರು, ಬೋಧಕೇತರ ವೃಂದ ಹಾಗೂ ಸರ್ವ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳ ನೃತ್ಯ…

Read More

ಮಡಿಕೇರಿ ನ.27 NEWS DESK : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿ.1 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.27 NEWS DESK : ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನ.29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

Read More

ವಿರಾಜಪೇಟೆ ನ.27 NEWS DESK : ಪೆರುಂಬಾಡಿಯಲ್ಲಿರುವ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವವು  ವಿವಿಧ ಸಾಂಸ್ಕೃತಿಕ, ಆರೋಗ್ಯ, ಪರಿಸರ ಕಾಳಜಿ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಎಸ್ ಇ ಎ ಕ್ಯಾಂಪಸ್ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ಬಿಂದು ಉದ್ಘಾಟಿಸಿ ಮಾತನಾಡಿ  ಈ ಹಿಂದೆ ಅದೆಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಲವು ಸಮಸ್ಯೆಗಳ ನಡುವೆಯೂ ಶಿಕ್ಷಣ ಕಲಿತು ಉನ್ನತ ಹುದ್ದೆಯೊಂದಿಗೆ ಸೇವಾ ಸಾಧನೆ ಮೂಲಕ ಗುರುತಿಸಿಕೊಂಡಿದ್ದಾರೆ.  ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಶಾಲೆ ಕಾಲೇಜುಗಳಲ್ಲಿ ಪೂರಕವಾದ ವಾತಾವರಣ ಇದ್ದು,  ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.  ಬ್ಲಾಕ್ ಸಂಪನ್ಮೂಲ ವ್ಯಕ್ತಿ ಶೈಲಾ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಉದ್ದೇಶದಿಂದ ಮಹಿಳಾ ಕಾಲೇಜು ಪ್ರಾರಂಭ ಮಾಡಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವು…

Read More

ಪಾಲಿಬೆಟ್ಟ ನ.27 NEWS DESK :  ಲಯನ್ಸ್ ಕ್ಲಬ್‌ ಪಾಲಿಬೆಟ್ಟ ಮತ್ತು ಮಡಿಕೇರಿ ಇಕ್ಷಾ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಡಿ.7 ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ. ಅನುಗ್ರಹ ಲಯನ್ಸ್ ಸೇವಾ ಭವನದ ಸಭಾಂಗಣದಲ್ಲಿ  ಏರ್ಪಡಿಸಲಾಗಿದ  ಶಿಬಿರದಲ್ಲಿ ನೇತ್ರ ತಜ್ಞರಾದ ಡಾ.ಎ.ಜಿ.ಚಿನ್ನಪ್ಪ ಹಾಗೂ ಡಾ. ಎಂ.ಎನ್.ಗುರುಪ್ರಸಾದ್ ಭಾಗವಹಿಸಲಿದ್ದಾರೆ.  ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪಾಲಿಬೆಟ್ಟ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಎಸ್.ಸುಬ್ರಮಣಿ ಮನವಿ ಮಾಡಿದರು.

Read More

ಕುಶಾಲನಗರ ನ.27 NEWS DESK :  ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ಡಿ.1 ಮತ್ತು 2 ರಂದು 40ನೇ ವರ್ಷದ ಹನುಮ‌ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಉಪಾಧ್ಯಕ್ಷ ನವನೀತ್ ಪೊನ್ನೇಟಿ ಹಾಗೂ ಕಾರ್ಯದರ್ಶಿ ಕೆ.ವಿ.ಅನುದೀಪ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ‌ ಅವರು, ಡಿ.1 ರಂದು ರಥ ಬೀದಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಪವನಾಮ ಹೋಮ, ಧ್ವಜಾರೋಹಣ ಮತ್ತು ಮಹಾಪೂಜೆ ನಡೆಯಲಿದೆ. 2 ರಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನ ಪ್ರಸಾದ ಸಂತರ್ಪಣೆ ನೆರವೇರಿಸಲಾಗುವುದು.  ಅಂದು ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಬೈಚನಹಳ್ಳಿ‌ ಮಾರಮ್ಮ ದೇವಾಲಯದ ತನಕ ಸಾಗಲಿದೆ. ಮಧ್ಯಾಹ್ನ ಗಾಯತ್ರಿ ಕಲ್ಯಾಣ‌ ಮಂಟಪದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಕೊಡಗಿನ ವಿವಿಧೆಡೆಗಳಿಂದ…

Read More

ಮಡಿಕೇರಿ ನ.27 NEWS DESK : ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಈ ದೇಶದ ಸಂವಿಧಾನ ಪ್ರಪಂಚದಲ್ಲಿ‌ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ದೇಶವದ ಬಡವರನ್ನು ಬದುಕಿಸುವ ಶಾಸನವಾಗಿದೆ. ಸಂವಿಧಾನದ ಎಲ್ಲಾ ಪ್ರಯೋಜನವನ್ನು ಪಡೆಯುವ‌ ಮೂಲಕ ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಸಾಗಬೇಕೆಂದರು.  ಪ್ರಾಸ್ತಾವಿಕವಾಗಿ ಮಾತನಾಡಿದ ದ.ಸಂ.ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ಮಾತನಾಡಿ, ನಮ್ಮ ಸಮಿತಿಯು ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದ್ದು, ಈ ವಿದ್ಯಾರ್ಥಿ ನಿಲಯದಲ್ಲಿ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಇನ್ನು ಮುಂದೆಯೂ ವಿದ್ಯಾಭ್ಯಾಸವನ್ನು ನಮ್ಮ ಧ್ಯೇಯವನ್ನಾಗಿಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಮಾಡುವತ್ತ ಶ್ರಮವಹಿಸುತ್ತೇವೆ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಜಿಲ್ಲಾ ಖಜಾನಾಧಿಕಾರಿ ರಘುನಾಥ್ ಅವರು ಮಾತನಾಡಿ ವಿದ್ಯಾರ್ಥಿಗಳು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಇತಿಹಾಸವನ್ನು ಓದುವ ಮೂಲಕ ಅವರನ್ನು ಸ್ಫೂರ್ತಿಯಾಗಿಸಿಕೊಂಡು ಪ್ರಮುಖ ಹುದ್ದೆಗಳಿಗೆ ಏರಬೇಕು ಎಂದರು. ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳೆಂದು ಖಾತ್ರಿಪಡಿಸಬೇಕು.…

Read More

ವಿರಾಜಪೇಟೆ ನ.27 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆಯ ಕಾನೂರು ವಲಯದ ಕುಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುಷ್ಪಾ ಅವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು ಎನ್ನುದರ ಕುರಿತು ಹಾಗೂ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಧ್ಯಾಯರಾದ ದಿನೇಶ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ನ.27 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪನ್ಯದ ಮಳ್ಳೂರು ಬೆಳ್ಳಾರಿಕಮ್ಮ ದೇವಾಲಯದಲ್ಲಿ ವಿಶೇಷ ಪೂಜೆಗಳು, ನಾಗ ಪೂಜೆ, ಅಭಿμÉೀಕ ಪೂಜೆ, ಅರಸಿನ, ಕುಂಕುಮಾರ್ಚನೆ ಪೂಜೆಯನ್ನು ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ಮಾಗಲು ವಸಂತ, ಪಟ್ಟೆಮನೆ ಅನಿಲ್ ಕುಮಾರ್ ಸೇರಿದಂತೆ ಇತರರು ಇದ್ದರು. ಕೆದಕಲ್ ಭದ್ರಕಾಳಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿμÉೀಕ, ಹರಕೆ ಒಪ್ಪಿಸುವುದು, ವಿಶೇಷ ಪೂಜೆ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಧ್ಯಾಹ್ನ ದೀಪರಾಧನೆ, ಮಹಾಪೂಜೆ ನೆರವೇರಿತು. ಸುಂಟಿಕೊಪ್ಪ, ಬೋಯಿಕೇರಿ, ಕೆದಕಲ್, ಮಡಿಕೇರಿ, ಹಾಲೇರಿ ಸೇರಿದಂತೆ ಇತರೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದರು. ನೆರೆದವರಿಗೆ ಅನ್ನದಾನ ನಡೆಯಿತು. ಸುಂಟಿಕೊಪ್ಪ ಮಧುರಮ್ಮ ಬಡಾವಣೆಯಲ್ಲಿ ನಾಗದೇವರ ದೇವಾಲಯದಲ್ಲಿ ಸುಬ್ರಮಣ್ಯ ಷಷ್ಠಿ ಅಂಗವಾಗಿ ನಾಗದೇವರ 32ನೇ ವರ್ಷದ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ…

Read More