ನಾಪೋಕ್ಲು ಡಿ.27 NEWS DESK : ಭಾಗಮಂಡಲದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ 43ನೇ ವರ್ಷದ ಮಂಡಲ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ವರ್ಷಂಪ್ರತಿ ಆಚರಿಸಿಕೊಂಡು ಬರುವಂತೆ ಈ ವರ್ಷವು ಶ್ರೀ ಅಯ್ಯಪ್ಪ ಸ್ವಾಮಿಯ ಮಂಡಲ ಪೂಜೆಯ ಶೋಭಾ ಯಾತ್ರೆ, ಸಿಂಗಾರಿ ಮೇಳ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜೊತೆ ಅದ್ದೂರಿಯಿಂದ ಜರುಗಿತು. ಗುರುಸ್ವಾಮಿಗಳಾದ ಸಿ.ಆರ್ ಜಯನ್ ಮತ್ತು ಹೆಚ್.ಎಸ್.ವಸಂತ್ ಅವರ ನೇತೃತ್ವದಲ್ಲಿ ಭಾಗಮಂಡಲದ ತಲಕಾವೇರಿ ರಸ್ತೆಯ ಬದಿಯಲ್ಲಿರುವ ಅಯ್ಯಪ್ಪ ಬನದಲ್ಲಿ ಪೂಜೆ ಪ್ರಾರಂಭಿಸಿ ನಂತರ ಸಿಂಗಾರಿ ಮೇಳದೊಂದಿಗೆ ಶ್ರೀ ಅಯ್ಯಪ್ಪ ಸ್ವಾಮಿಯ ಶೋಭಾ ಯಾತ್ರೆಯು ಭಾಗಮಂಡಲದ ಮುಖ್ಯರಸ್ತೆಯಲ್ಲಿ ಸಾಗಿ ಬಂದು ಶ್ರೀ ಭಗಂಡೇಶ್ವರ ದೇವಾಲಯದ ಮುಂಭಾಗದಲ್ಲಿ ಮಂಡಲ ಪೂಜಾ ನೆರವೇರಿತು,ಈ ಸಂದರ್ಭ ಭಕ್ತಾದಿಗಳೆಲ್ಲರೂ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಿ ಪ್ರಸಾದ ವಿತರಣೆ ಮತ್ತು ಅನ್ನದಾನದಲ್ಲಿ ಪಾಲ್ಗೊಂಡರು. ಮಂಡಲ ಪೂಜೆಯಲ್ಲಿ ಭಾಗಮಂಡಲ, ಕರಿಕೆ ಅಯ್ಯಂಗೇರಿ, ದೊಡ್ಡಪುಲಿಕೊಟ್ಟು, ನಾಪೋಕ್ಲು, ಬೆಟ್ಟಗೇರಿ, ಚೆರಂಬಾಣೆ ಅಕ್ಕಪಕ್ಕದ ಊರುಗಳಿಂದ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಮತ್ತು ಭಕ್ತಾದಿಗಳು ಭಾಗವಹಿಸಿದರು.…
ಲೇಖಕ: admin
ಮಡಿಕೇರಿ ಡಿ.27 NEWS DESK : ಸ್ವಾತಂತ್ರ್ಯ ಹೋರಾಟಗಾರ ದಿ.ಪೂಜಾರಿರ ರಾಮಪ್ಪ ಟ್ರಸ್ಟ್ ಮೇಕೇರಿ ಹಾಗೂ ಅರ್ವತೋಕ್ಲು ಗ್ರಾಮಸ್ಥರ ಸಹಯೋಗದೊಂದಿಗೆ ಡಿ.28 ರಂದು ಮೇಕೇರಿ-ಅರ್ವತೊಕ್ಲು ಸಂಪರ್ಕ ರಸ್ತೆಗೆ ಪೂಜಾರಿರ ರಾಮಪ್ಪ ರಸ್ತೆ ನಾಮಕರಣ ಸಮಾರಂಭ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಮೇಕೇರಿ ಶಾಲಾ ಮೈದಾನದಲ್ಲಿ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮೇಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೂಜಾರಿರ ರಕ್ಷಿತ್ ಉತ್ತಪ್ಪ ವಹಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಪೂಜಾರಿರ ಕುಟುಂಬದ ಪಟ್ಟೆದಾರ ಪೂಜಾರಿರ ಪೂವಯ್ಯ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ ಪಾಲ್ಗೊಳ್ಳಲಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಭೀಷ್ಮ ಮಾದಪ್ಪ, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಮಾಜಿ ಸೈನಿಕ ಪೂಜಾರಿರ ಬೆಳಿಯಪ್ಪ, ರಾಮಪ್ಪ ಸಮಿತಿ ಗೌರವಾಧ್ಯಕ್ಷ ಪೂಜಾರಿರ ಮಾದಪ್ಪ ಉಪಸ್ಥಿತರಿರಲಿದ್ದಾರೆ.
ಮಡಿಕೇರಿ ಡಿ.27 NEWS DESK : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು. ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, ನೀಡಿ ಗೌರವಿಸಿ, ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯ ಕೃಷಿಕರಲ್ಲಿ ನೂರಾರು ವರ್ಷಗಳಲ್ಲಿ ಕಾಡಿದ್ದ ಜಮ್ಮಾ ಬಾಣೆ ಸಮಸ್ಯೆಯನ್ನು ಒಂದು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವಲ್ಲಿ ಪ್ರಯತ್ನಿಸಲಾಗಿದೆ ಎಂದು ಹೇಳಿದರು. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಸದಾ ಸ್ಮರಿಸಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ನಿರಂತರ ಪ್ರಯತ್ನ ಹಾಗೂ ಕಂದಾಯ ಸಚಿವರ…
ಮಡಿಕೇರಿ ಡಿ.26 NEWS DESK : ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಮೊದಲ ದಿನದ ಹಣಾಹಣಿಯಲ್ಲಿ ಮಂಡೇಪಂಡ ತಂಡ ಪರದಂಡ ತಂಡದ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಗೆಲವು ಸಾಧಿಸಿತು. ಮಂಡೇಪಂಡ ಪರ ಚಂದನ್ ಕಾರ್ಯಪ್ಪ ಹಾಗೂ ಚಂಗಪ್ಪ ಎಂ.ಪಿ ತಲಾ ಒಂದು ಗೋಲು ಬಾರಿಸಿದರು. ಪರದಂಡ ಪರ ರಂಜನ್ ಅಯ್ಯಪ್ಪ ಗೋಲು ದಾಖಲಿಸಿದರು. ಚೆಪ್ಪುಡಿರ ಮತ್ತು ಪಳಂಗಂಡ ನಡುವಿನ ಪಂದ್ಯ ಯಾವುದೇ ಗೋಲು ದಾಖಲಾಗದೆ ಡ್ರಾದಲ್ಲಿ ಅಂತ್ಯಗೊಂಡಿತು. ನೆಲ್ಲಮಕ್ಕಡ ಮತ್ತು ಮಾಚಮಾಡ ನಡುವಿನ ಪಂದ್ಯದಲ್ಲಿ ನೆಲ್ಲಮಕ್ಕಡ ತಂಡ 6-0 ಗೋಲುಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿತು. ನೆಲ್ಲಮಕ್ಕಡ ಪೂವಣ್ಣ ಹಾಗೂ ಅಯ್ಯಪ್ಪ ತಲಾ ಎರಡು ಗೋಲು ಬಾರಿಸಿದರು. ತಿಮ್ಮಯ್ಯ ಹಾಗೂ ಸಚಿನ್ ತಲಾ ಒಂದು ಗೋಲು ದಾಖಲಿಸಿದರು. ತಲಾ ಒಂದು ಗೋಲು ದಾಖಲಾಗುವ ಮೂಲಕ ಕಲಿಯಂಡ ಮತ್ತು ಕುಪ್ಪಂಡ ನಡುವಿನ ಪಂದ್ಯ ಡ್ರಾ ಗೊಂಡಿತು. ಕಲಿಯಂಡ ಪರ ಚಿರಂತ್ ಹಾಗೂ ಕುಪ್ಪಂಡ ಪರ ಸೋಮಯ್ಯ ಗೋಲು ಬಾರಿಸಿದರು.
ಸುಂಟಿಕೊಪ್ಪ ಡಿ.26 NEWS DESK : ಬೆಂಗಳೂರು ಮತ್ತು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಕೊಡಗು ತಂಡವನ್ನು ಆಯ್ಕೆಗೊಳಿಸುವ ಪ್ರಕ್ರಿಯೆ ಡಿ.28 ರಂದು ನಡೆಯಲಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ.ನಾಗೇಶ್ ಅವರು ಆಯ್ಕೆ ಪ್ರಕ್ರಿಯೆಯು ಆಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಆಟಗಾರರು ಪೂರ್ಣ ಫುಟ್ಬಾಲ್ ಕಿಟ್, ಆಧಾರ್ ಮೂಲಪ್ರತಿ, ಬ್ಯಾಂಕ್ ಪಾಸ್ ಪುಸ್ತಕ, ಒಂದು ಪಾಸ್ಪೋರ್ಟ್ ಸೈಜಿನ ಭಾವಚಿತ್ರವನ್ನು ಹೊಂದಿಕೊಂಡು ಭಾನುವಾರ ಬೆಳಿಗ್ಗೆ 10 ಗಂಟೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9481058256 ಇವರನ್ನು ಸಂರ್ಕಿಸುವಂತೆ ಕೋರಿದೆ.
ಮಡಿಕೇರಿ ಡಿ.26 NEWS DESK : ಕೊಡಗು ಕೆಂಬಟ್ಟಿ ಸಮಾಜದ 75ನೇ ವರ್ಷಗಳ ಬೇಡಿಕೆಯನ್ನು ಈಡೇರಿಸುಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರನ್ನು ಕೊಡಗು ಕೆಂಬಟ್ಟಿ ಸಮಾಜದ ವತಿಯಿಂದ ಗೌರವಿಸಲಾಯಿತು. ಕೊಡಗಿನ ಕೊಡವ ಭಾಷೆ ಮಾತನಾಡುವ ಕೆಂಬಟ್ಟಿ ಸಮುದಾಯವು ಆದಿಕರ್ನಾಟಕ ಎಂದು ಜಾತಿಪ್ರಮಾಣ ಪತ್ರ ಪಡೆಯುತ್ತಿದ್ದು. ಅವರ ಮೂಲ ಜಾತಿಯ ಹೆಸರಾದ ಕೆಂಬಟ್ಟಿ ಹೆಸರಿನಲ್ಲಿಯೇ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಭರವಸೆಯನ್ನು ನೀಡಿದರ ಸಲುವಾಗಿ ವಿಧಾನ ಸೌಧದ ಶಾಸಕರ ಕಛೇರಿಯಲ್ಲಿ ಕೊಡಗು ಕೆಂಬಟ್ಟಿ ಸಮಾಜದ ಪರವಾಗಿ ಸಮಾದ ಅಧ್ಯಕ್ಷ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ನೇತೃತ್ವದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಸುಂಟಿಕೊಪ್ಪ ಡಿ.26 NEWS DESK : ಸುಂಟಿಕೊಪ್ಪದ ಕೂರ್ಗ್ ಚೆಸ್ ಕ್ಲಬ್ ವತಿಯಿಂದ ಡಿ.31 ರಂದು ಸುಂಟಿಕೊಪ್ಪದಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಪಂದ್ಯಾವಳಿ ನಡೆಯಲಿದೆ. 7 ರಿಂದ 14 ವರ್ಷ ಪ್ರಾಯದ ಮಕ್ಕಳ ವಿಭಾಗದಲ್ಲಿ ಪ್ರಥಮ ಬಹುಮಾನ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ.1000 ನಗದು ಬಹುಮಾನ ಹಾಗೂ ಐವರು ಸ್ಪರ್ಧೆಗಳಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಈ ವಿಭಾಗದ ನೋಂದಣಿ ಶುಲ್ಕ ರೂ. 300 ಆಗಿದೆ. 15 ವರ್ಷ ಮೇಲ್ಪಟ್ಟವರ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ.5000, ದ್ವಿತೀಯ ಬಹುಮಾನ ರೂ.3000, ತೃತೀಯ ಬಹುಮಾನ ರೂ.1500 ನಗದು ಬಹುಮಾನ ಹಾಗೂ ಐವರು ಸ್ಪರ್ಧಿಗಳಿಗೆ ಆಕರ್ಷಕ ಟ್ರೋಫಿ ಸಿಗಲಿದೆ. ಈ ವಿಭಾಗದ ನೋಂದಣಿ ಶುಲ್ಕ ರೂ. 500 ಆಗಿದ್ದು, ಮೊದಲು ಹೆಸರು ನೋಂದಾಯಿಸಿಕೊಳ್ಳುವ 100 ಸ್ಪರ್ಧಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.…
ಮಡಿಕೇರಿ ಡಿ.26 NEWS DESK : ಮೈಸೂರಿನಲ್ಲಿರುವ ಎಂ.ಸಿ.ಪಿ.ಸಿ.ಎಸ್ ಸಂಘದ ಆಡಳಿತ ಮಂಡಳಿಯ ಮಾಹಿತಿ ಇರುವ ವರದಿಯನ್ನು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಂಘದ ಮತ್ತು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರಿಗೆ ನೀಡಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ವರದಿಯನ್ನು ಸ್ವೀಕರಿಸಿ ಅದನ್ನು ಕುಲಂಕುಶಲವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.
ಮಡಿಕೇರಿ ಡಿ.26 NEWS DESK : ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸುಶಾಸನ ದಿನ (ಉತ್ತಮ ಆಡಳಿತ ದಿನ)ದ ಅಂಗವಾಗಿ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ 14 ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ರೋಟರಿ ಮಿಸ್ಟಿಹಿಲ್ಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಮಡಿಕೇರಿ, ಮೇಕೇರಿ ಗ್ರಾಮ ಪಂಚಾಯಿತಿ ಮತ್ತು ಮಡಿಕೇರಿ ಎಸ್ಡಿಎಂಸಿ ಸಹಯೋಗದಲ್ಲಿ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಾರ್ಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ಕೇಂದ್ರ ಸರಕಾರದ ಮೈಭಾರತ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ,ಕೊಡಗು…
ಮಡಿಕೇರಿ ಡಿ.26 NEWS DESK : ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಮೂರ್ನಾಡಿನಲ್ಲಿ ಉದ್ಘಾಟನೆಗೊಂಡಿತು. ಕಳೆದ 25 ವರ್ಷಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ 13 ತಂಡಗಳ ನಡುವೆ ಟ್ರೋಫಿಗಾಗಿ ಐದು ದಿನಗಳ ಕಾಲ ಸೆಣಸಾಟ ನಡೆಯಲಿದೆ. ಹಾಕಿ ಕೂರ್ಗ್, ಎಂ.ಬಾಡಗ ಸ್ಪೋಟ್ರ್ಸ್ ರಿಕ್ರಿಯೇಷನ್ ಸಂಸ್ಥೆ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಏಕಲವ್ಯ ಪ್ರಶಸ್ತಿ ವಿಜೇತರಾದ ಒಲಂಪಿಯನ್ ಬೊಳ್ಳಂಡ ಪ್ರಮೀಳ ಅಯ್ಯಪ್ಪ ಅವರು ಪೋಷಕರು ತಮ್ಮ ಕನಸನ್ನು ಮಕ್ಕಳ ಮೇಲೆ ಹೇರದೆ, ಮಕ್ಕಳ ಕನಸನ್ನು ನನಸು ಮಾಡಲು ಮುಂದಾಗಬೇಕು ಮತ್ತು ಕ್ರೀಡಾಸಕ್ತಿಗೆ ಉತ್ತೇಜನ ನೀಡಬೇಕೆಂದು ಸಲಹೆ ನೀಡಿದರು. ಪ್ರಸ್ತುತ…






