ಮಡಿಕೇರಿ ಅ.10 : ಇಸ್ರೇಲ್ ಹಾಗೂ ಪ್ಯಾಲಸ್ರೈನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಇಸ್ರೇಲ್ ದೇಶದಲ್ಲಿ ಸಿಲುಕಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ : 08272-221077, 1077 08272-221099 ವಾಟ್ಸಾಪ್ ಸಂಖ್ಯೆ : 8550001077
ಲೇಖಕ: admin
ಮಡಿಕೇರಿ ಅ.10 : ಕೆದಮಳ್ಳೂರು- ಕಡಂಗ ಕ್ರಿಶ್ಚಿಯನ್ ಕಾಲೋನಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಪಕ್ಷದ ಪ್ರಮುಖರು ಹಾಜರಿದ್ದರು.
ನಾಪೋಕ್ಲು ಅ.10 : ಸಿಡಿಲು ಬಡಿದು ಮನೆಯ ವಿದ್ಯುತ್ ಮೀಟರ್ ಬೋರ್ಡು ಗೆ ಹಾನಿಯಾಗಿರುವ ಘಟನೆ ಅಜ್ಜಿಮುಟ್ಟ ಗ್ರಾಮದಲ್ಲಿ ನಡೆದಿದೆ. ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಈ ಸಂದರ್ಭ ಅಜ್ಜಿಮುಟ್ಟ ನಿವಾಸಿ ಶಿವಪ್ಪ ಪೂಜಾರಿ ಎಂಬವರ ಮನೆ ಸಮೀಪದ ಕರೆಂಟ್ ಕಂಬಕ್ಕೆ ಇಡಿಲು ಬಡಿದ ಕಾರಣ ಕಂಬ ಹಾಗೂ ಮೀಟರ್ ಬೋರ್ಡ್ ಸುಟ್ಟು ಹೋಗಿ ನಷ್ಟ ಸಂಭವಿಸಿದೆ. ಸಿಡಿಲಿನ ರಭಸಕ್ಕೆ ಶಿವಪ್ಪನವರ ಮನೆ ಸಮೀಪದ ಅಂತೋನಿ ಎಂಬವರ ಮನೆಗೆ ಅಲಾವಡಿಸಿದ್ದ ಇನ್ವರ್ಟರ್ ಕೂಡ ಸುಟ್ಟು ಹೋಗಿದೆ. ಅವಘಡದಿಂದಾಗಿ ಬಹುತೇಕ ಮನಗಳಿಗೆ ಕರೆಂಟ್ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಅ.10 : ಸಮುದಾಯ ಜೊತೆಯಲ್ಲಿದ್ದಾಗ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮೂರನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಸಮಾಜದಲ್ಲಿ ಇಂದು ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ.ಯುವ ಜನರ ತಪ್ಪುಗಳನ್ನು ಪತ್ತೆ ಹಚ್ಚಿ ತಿದ್ದುವ ಕೆಲಸವನ್ನು ಹಿರಿಯರು ಮಾಡಬೇಕು ಎಂದ ಅವರು ಸಮುದಾಯದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳು ಸಾಮರಸ್ಯವನ್ನು ಬೆಸೆಯುತ್ತವೆ. ಸೋಲು ಗೆಲುವು ಜೀವನದ ಭಾಗ. ಒಮ್ಮೆ ಗೆದ್ದವರು ಮತ್ತೊಮ್ಮೆ ಸೋಲಬಹುದು. ಸಾರ್ವಜನಿಕ ಸೇವೆಯಲ್ಲಿಯೂ ಏಳು ಬೀಳುಗಳು ಸಾಮಾನ್ಯ. ಶಾಸಕನಾಗಿ ನಾನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು. ಸರ್ಕಾರ ರೈತರಿಗೆ 3 ಲಕ್ಷದಿಂದ ಐದು ಲಕ್ಷ ರೂಪಾಯಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಿಸುತ್ತಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸೂಕ್ತ ರೀತಿಯಲ್ಲಿ…
ನಾಪೋಕ್ಲು ಅ.10 : ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂ.ಬಿ ರಿಯಾಶರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬದ0ಜೆಟ್ಟಿರ ಗಪ್ಪಣ್ಣ ಹಾಗೂ ಶಿಕ್ಷಕ ವೃಂದ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.10 : ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೃತಪಟ್ಟ ಜೀವನದಾರಿ ಆಶ್ರಮದ ಸ್ಥಾಪಕ ರಮೇಶ್ ಅವರ ಪತ್ನಿ ರೂಪಾ (38) ಇಂದು ನಿಧನರಾಗಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ಚಿಂತಾಜನಕ ಸ್ಥಿತಿಯಲ್ಲಿದ್ದ ರೂಪಾ ಚಿಕಿತ್ಸೆ ಫಲಕಾರಿ ಆಗದೆ ಸೋಮವಾರ ನಡು ರಾತ್ರಿ ಕೊನೆಯುಸಿರು ಎಳೆದಿದ್ದಾರೆ. ಮೃತರು ಮೂವರು ಪುತ್ರಿಯರನ್ನು ಅಗಲಿದ್ದು, ಇಂದು ಮಡಿಕೇರಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ನಾಪೋಕ್ಲು ಅ.10 : ಕಳೆದ 25 ವರ್ಷಗಳಿಂದ ಬಹಳ ಅರ್ಥಪೂರ್ಣವಾಗಿ ಬೆಂಗಳೂರಿನಲ್ಲಿ ಬಾಳೆಯಡ ಕುಟುಂಬಸ್ಥರು ಸಂತೋಷ ಕೂಟವನ್ನು ನಡೆಸಿಕೊಂಡು ಬರುತ್ತಿದ್ದು, ಪ್ರತಿಯೊಬ್ಬರ ಕಷ್ಟ ಸುಖಕ್ಕೂ ಭಾಗಿಯಾಗುತ್ತಿದ್ದೇವೆ.ಇದೀಗ 25ನೇ ವರ್ಷಕ್ಕೆ ಕಾಲಿಟ್ಟಿದ್ದು ಕುಟುಂಬದವರ ಒಗ್ಗಟ್ಟು ಹೀಗೆ ಇರಲಿ ಎಂದು ಕಾರ್ಯದರ್ಶಿ ರವಿ ಉತ್ತಯ್ಯ ಹೇಳಿದರು. ಬೆಂಗಳೂರಿನ ಇಂಟರ್ ನ್ಯಾಷನಲ್ ಏರ್ ರ್ಪೋರ್ಟ್ ರೋಡಿನ ಗೋಲ್ಡನ್ ಫಿಂಚ್ ರೆಸ್ಟೋರೆಂಟ್ ನಲ್ಲಿ ಬಾಳೆಯಡ ಕುಟುಂಬದ 25ನೇ ವರ್ಷದ ಸಂತೋಷಕೂಟದಲ್ಲಿ ಅವರು ಮಾತನಾಡಿದರು. ಕುಟುಂಬದ ಹಿರಿಯರಾದ ಬಾಳೆಯಡ ಶೀಲಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮೊದಲಿಗೆ ಶ್ರೀ ಕಾವೇರಿ ಮಾತೆಯ ನೆನೆದು ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯರಾದ ಶೀಲಾ ಸೇರಿದಂತೆ ಒಲಿಂಪಿಯನ್ ಕರ್ನಲ್ ಬಾಳೆಯಡ ಸುಬ್ರಮಣಿ, ಅಂತಾರಾಷ್ಟ್ರೀಯ ಹಾಕಿ ಆಟಗಾರ ಸುಮನ್ ಪೂಣಚ್ಚ, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಂತಹ ಕರುಣ್ ಕಾಳಪ್ಪ ಅವರು ಕುಟುಂಬದಲ್ಲಿ ಪಿ ಹೆಚ್ ಡಿ, ವಕೀಲ ವೃತ್ತಿ, ಇಂಜಿನಿಯರ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ 60 ಜನರನ್ನು ಸನ್ಮಾನಿಸಲಾಯಿತು. ಬಳಿಕ ಚಿಕ್ಕ ಮಕ್ಕಳಿಂದ…
ಮಡಿಕೇರಿ ಅ.10 : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ರಾತ್ರಿ 1.27 ನಿಮಿಷಕ್ಕೆ (18 ರ ಬೆಳಗ್ಗೆ) “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಜರುಗಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು / ಯಾಥ್ರಾರ್ತಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲ್ಯಾಸ್ಟಿಕ್ ಬಿಂದಿಗೆ, ಪ್ಲ್ಯಾಸ್ಟಿಕ್ ಬಾಟಲ್ ಮತ್ತು ಪ್ಲ್ಯಾಸ್ಟಿಕ್ ಕ್ಯಾನ್ಗಳನ್ನು ಬಳಕೆ ಮಾಡುತ್ತಿರುತ್ತಾರೆ. ಆದರೆ ಅಧಿಸೂಚಿತ ಸಂಸ್ಥೆಗಳಲ್ಲಿ ನಿಷೇಧಿತ ಪ್ಲ್ಯಾಸ್ಟಿಕ್ಗಳನ್ನು ನಿರ್ಬಂಧಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಇವರ ಸುತ್ತೋಲೆಯಲ್ಲಿ ಸೂಚಿಸಿರುತ್ತಾರೆ. ಆದ್ದರಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲ್ಯಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ನಿರ್ಬಂಧಿಸಲಾಗಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ ಅ.10 : “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಗಳಲ್ಲಿ ಊಧ್ವಾರ್ಚನೆ (ಶುಚಿತ್ವ) ಕಾರ್ಯವು ಅ.12 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ. ಈ ಸಮಯದಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದ್ದರಿಂದ ಎಂದಿನಂತೆ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಯವರ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿ ಅ.10 : ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ನ ಕೊಡಗು ಶಾಖೆ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಕುರಿತು ಮಡಿಕೇರಿಯಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ ನಡೆಯಿತು. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ನೀತಿಯ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಪಿ.ಸುಬ್ರಮಣ್ಯ ಯಡಿಪಡಿತ್ತಾಯ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡುನ್ನು ಒಂದು ಬಾರಿಯಾದರು ಓದಲೇಬೇಕು. ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಚಿಂತಾಜನಕ ಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳಿಗೆ ವಾಸ್ತವದ ಸ್ಥಿತಿಗತಿಗಳ ಬಗ್ಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಪಠ್ಯಪುಸ್ತಕದ ಹೊರತಾಗಿಯೂ ಶಿಕ್ಷಣ ನೀಡುವಂತಾಗಬೇಕು ಎಂದರು. ಜೀವನ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ಸಾಮಥ್ರ್ಯ, ಕೌಶಲ್ಯ, ಚಾಕಚಕ್ಯತೆ, ಇಚ್ಛಾಶಕ್ತಿ ಇಲ್ಲದಂತಾಗಿದೆ. ಅಂಕಗಳೇ ಮುಂದಿನ ಗುರಿ ಅಲ್ಲ, ಒಮ್ಮೆ ಗುರಿ ಇಟ್ಟ ನಂತರ ಅದನ್ನು ಬದಲಾಯಿಸಬಾರದು, ಬದಲಾಯಿಸಬೇಕಾದರೆ ತಂತ್ರಗಾರಿಕೆ ಮುಖ್ಯ ಎಂದು ತಿಳಿಸಿದರು. ಪೊನ್ನಂಪೇಟೆ ಸಾಯಿಶಂಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕೊಡಗು ಅನುದಾನ…






