ಮಡಿಕೇರಿ ನ.6 : ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ ಮಾದರಿಗಳನ್ನು ಪರೀಕ್ಷಿಸಿದಾಗ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಡೆಂಗ್ಯೂ/ ಚಿಕುಂಗುನ್ಯಾ, ವೆಸ್ಟನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ. ಮಳೆಗಾಲದಲ್ಲಿ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗುತ್ತದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ. ಈ ಸೊಳ್ಳೆಗಳು…
ಲೇಖಕ: admin
ಮಡಿಕೇರಿ ನ.6 : ಪ್ರಸಕ್ತ (2023-24) ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ವೆಬ್ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು) ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್, 7 ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ತಿಳಿಸಿದ್ದಾರೆ.
ಮಡಿಕೇರಿ ನ.6 : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ (ಯುಪಿಎಸ್ಸಿ/ಕೆಎಎಸ್/ಬ್ಯಾಂಕಿಂಗ್/ಗ್ರೂಫ್-ಸಿ/ಆರ್ಆರ್ಬಿ/ ಎಸ್ಎಸ್ಸಿ/ಜೆಯುಡಿಐಸಿಐಎಆರ್ವೈ ಸರ್ವೀಸಸ್) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ ಯುಪಿಎಸ್ಸಿ/ಕೆಎಎಸ್ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ www.sw.kar.nic.in ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕಡಂಗ ನ.6 : ಕುಂಜಿಲ ಪಯ್ ನರಿ ಸುನ್ನೀ ಮುಸ್ಲಿಂ ಜಮಾಅತ್ ಹಾಗೂ ಕುಂಜಿಲ ಬ್ಲಾಕ್ ಕಾಂಗ್ರೆಸ್ ಪಕ್ಷದ ಸಂಯುಕ್ತಾಶ್ರಯದಲ್ಲಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ತಿನ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕುಂಜಿಲ ಪಯ್ ನರಿ ಸುನ್ನೀ ಮುಸ್ಲಿಂ ಜಮಾಅತ್ ಹಾಗೂ ಕುಂಜಿಲ ಬ್ಲಾಕ್ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕುಂಜಿಲ ಪಯ್ ನರಿ ಕಕ್ಕಬ್ಬೆ ಸಂಪರ್ಕ ರಸ್ತೆ ಟೆಂಡರ್ ಕರೆಯಲಾಗಿದ್ದು, ಅತೀ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು. ಪಯ್ ನರಿ ಮಸ್ಜಿದ್, ಮೂಲಭೂತ ಸೌಕರ್ಯ ಹಾಗೂ ಸ್ಮಶಾನ ಸುತ್ತ ತಡೆಗೋಡೆಗೆ ಅನುದಾನ ಬಿಡುಗಡೆಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಮನವಿ ನೀಡಲಾಯಿತು. ಇದೇ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ…
ಪುತ್ತೂರು ನ.6 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪದಕಗಳೊಂದಿಗೆ ನಗದು ಬಹುಮಾನವನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ರನ್ನರ್ಸ್ ಕ್ಲಬ್ ಇದರ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ನೀವಿಯಸ್ ಮಂಗಳೂರು ಮ್ಯಾರಥಾನ್-2023 ಇದರ 21.1 ಕಿಲೋಮೀಟರ್ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಕಾಲೇಜಿನ ಅಂತಿಮ ಎಂಬಿಎ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ.ಐ ದ್ವಿತೀಯ ಸ್ಥಾನ ಗಳಿಸಿ ರೂ.15 ಸಾವಿರ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಇದೇ ವಿಭಾಗದಲ್ಲಿ ಕಾಲೇಜ್ ನ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು ರೂ.10 ಸಾವಿರ ನಗದು ಬಹುಮಾನ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳು ಕಳೆದ ಬಾರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿಯೂ ಬಹುಮಾನವನ್ನು ಗೆದ್ದಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ .ಕೆ ತಿಳಿಸಿದ್ದಾರೆ.
ವಿರಾಜಪೇಟೆ ನ.6 : ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುದರ ಮೂಲಕ ಉದ್ಯೋಗ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು. ಮುಂಬೈ ಯ ಬಜಾಜ್ ಫಿಂಸೆರ್ವ್ ಕಂಪನಿ ವತಿಯಿಂದ ವಿರಾಜಪೇಟೆ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಸರ್ಟಿಫಿಕೇಟ್ ಕೋರ್ಸ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯವು ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯ ತರಬೇರಿ ಪಡೆಯಬೇಕು ಎಂದರು. ಆ ಮೂಲಕ ಸೂಕ್ತ ಉದ್ಯೋಗದ ಆಯ್ಕೆ ಮಾಡಬಹುದು ಎಂದು ತಿಳಿಸಿದರು. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕೌಶಲ್ಯ ಆಧಾರಿತ ಉದ್ಯೋಗ ಇಂದು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ತರಬೇತಿ ಪಡೆಯುವಂತಾಗಲು ಈ ಕಾರ್ಯಕ್ರಮವನ್ನು ಎಂ. ಓ. ಯು ಅಡಿಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭ ತರಬೇತುದಾರೆ ಬಜಾಜ್ ಫಿಂಸೆರ್ವ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ರಶ್ಮಿ ಮನ್ಸುಖಾನಿ, ಐಕ್ಯೂಎಸಿ ಸಂಚಾಲಕಿ ಹೇಮ, ವಾಣಿಜ್ಯ ವಿಭಾಗ ಮುಖ್ಯಸ್ಥೆ ದೃಶ್ಯ ಹಾಜರಿದ್ದರು. ವಿದ್ಯಾರ್ಥಿನಿ…
ಮಡಿಕೇರಿ ನ.6 : ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ವಿಖ್ಯಾತ ಮಡಿಕೇರಿ ದಸರಾ ಮಹೋತ್ಸವವನ್ನು ಮತ್ತಷ್ಟು ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ನಡೆಸಲು ಬಜೆಟ್ ನಲ್ಲಿ ಸರಕಾರ ಅನುದಾನ ಮೀಸಲಿಡಬೇಕು. ಇದಕ್ಕಾಗಿ ದಸರಾ ಪ್ರಾಧಿಕಾರ ರಚಿಸಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿಯ ದಸರಾ ಮಹೋತ್ಸವ ಜಿಲ್ಲೆಯ ಶಾಸಕದ್ವಯರ ಸಂಪೂರ್ಣ ಸಹಕಾರದಿಂದ ಅದ್ದೂರಿಯಾಗಿ ನಡೆದು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ವರ್ಷಗಳಲ್ಲಿ ದಸರಾ ಆಚರಣೆಗೆ ಬಜೆಟ್ ನಲ್ಲೇ ಹಣವನ್ನು ಮೀಸಲಿಟ್ಟರೆ ದಸರಾ ಸಮಿತಿಗಳ ಕಾರ್ಯ ಸುಗಮವಾಗಲಿದೆ ಎಂದು ಅಭಿಪ್ರಾಯಪಟ್ಟರು. ವರ್ಷದಿಂದ ವರ್ಷಕ್ಕೆ ದಸರಾ ಆಚರಣೆಯ ಖರ್ಚು ಹೆಚ್ಚಾಗುತ್ತಿದೆ, ಜನರಿಂದ ವಂತಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿವರ್ಷ ಅನುದಾನಕ್ಕಾಗಿ ಸರಕಾರಕ್ಕೆ ಮನವಿ ಸಲ್ಲಿಸಬೇಕಾಗಿದೆ. ಬಿಡುಗಡೆಯಾಗುತ್ತಿರುವ ಅನುದಾನ ದಸರಾ ಸಮಿತಿ, ದಶಮಂಟಪ ಸಮಿತಿಗಳು ಹಾಗೂ ಕರಗೋತ್ಸವಗಳಿಗೆ ಸಾಕಾಗುತ್ತಿಲ್ಲ. ಲಕ್ಷಾಂತರ ಹಣ ಖರ್ಚು ಮಾಡಿ 10 ದಿನಗಳ ಕಾಲ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯ ಮಾತ್ರವಲ್ಲದೆ…
ಬೆಂಗಳೂರು ನ.6 : ವಿದ್ಯುತ್ ಬೇಡಿಕೆ ಹೆಚ್ಚಿದ್ದರೂ ರಾಜ್ಯಾದ್ಯಂತ ಐಪಿ ಸೆಟ್ಗಳಿಗೆ ನಿರಂತರ 5 ರಿಂದ 7 ಗಂಟೆಗಳ ಕಾಲ ವಿದ್ಯುತ್ ಅನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ವಿದ್ಯುತ್ ಬೇಡಿಕೆ, ಸಮಸ್ಯೆ ಕುರಿತಾಗಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು ರಾಜ್ಯದಾದ್ಯಂತ ಐಪಿ ಸೆಟ್ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು ದಿನಕ್ಕೆ 600 ಮೆಗಾವ್ಯಾಟ್/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್ಗಳ ಅಗತ್ಯವಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು…
ಮಡಿಕೇರಿ ನ.6 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ನ.13 ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ದೀಪೋತ್ಸವ ನಡೆಯಲಿದೆ ಎಂದು ದೇವಾಲಯದ ಟ್ರಸ್ಟಿ ಹೆಚ್.ಎಸ್.ದೇವರಾಜು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾತ್ರಿ 7 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ನಡೆಯಲಿದೆ. 7 ಗಂಟೆಗೆ ಕಳಸ ಪೂಜೆ, 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ ನಡೆಯಲಿದ್ದು, ರಾತ್ರಿ 9 ಗಂಟೆಗೆ ತಾಯಿಯ ದರ್ಶನ ಹಾಗೂ 9.30 ಗಂಟೆಗೆ ದೀಪೋತ್ಸವ ಪ್ರಾರಂಭವಾಗಲಿದೆ. ಭಕ್ತಾದಿಗಳು ಎಳ್ಳು ಬತ್ತಿಯನ್ನು ಹಚ್ಚಬಹುದು ಎಂದು ತಿಳಿಸಿದರು. ಮತ್ತೋರ್ವ ಟ್ರಸ್ಟಿ ವಿ.ಸಚಿನ್ ವಾಸುದೇವ್ ಮಾತನಾಡಿ, 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರ ಆಗಲಿದೆ ಎಂಬ ನಂಬಿಕೆ ಇದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ, ಟ್ರಸ್ಟಿ ಹೆಚ್.ಎಸ್.ರಾಜೇಶ್ವರಿ ಹಾಗೂ ಪ್ರಮುಖರಾದ ಎ.ಸಿ.ಚುಮ್ಮಿ ದೇವಯ್ಯ ಉಪಸ್ಥಿತರಿದ್ದರು.
ಮಡಿಕೇರಿ ನ.6 : ಕನ್ನಡಿಗರು ಇತರ ಭಾಷಿಕರಿಗೆ ಕನ್ನಡವನ್ನು ಕಲಿಸುವ ಔದಾರ್ಯ ತೋರಿದರೆ ಕರ್ನಾಟಕವೇ ಕನ್ನಡಮಯವಾಗುತ್ತದೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಉದ್ಯೋಗ, ವಿಧ್ಯಾಭ್ಯಾಸ ದ ಸಲುವಾಗಿ ಹೊರ ರಾಜ್ಯದ ಜನತೆ ವಿಫುಲವಾಗಿ ಬರುತ್ತಿದ್ದು, ಅವರೊಂದಿಗೆ ನಾವು ಕನ್ನಡವನ್ನೇ ಮಾತನಾಡಿದರೆ ಅವರು ಕನ್ನಡ ಕಲಿಯುತ್ತಾರೆ. ಆ ಕಾರ್ಯವನ್ನು ಎಲ್ಲಾ ಕನ್ನಡಿಗರು ಅನುಸರಿಸಬೇಕು ಎಂದು ಕರೆ ನೀಡಿದರು. ತಾವು ಮೆಡಿಕಲ್ ವಿದ್ಯಾರ್ಥಿಯಾಗಿದ್ದಾಗ ಸಂಭ್ರಮಿಸಿದ ವಿಧ್ಯಾರ್ಥಿ ಜೀವನದ ಸುಮಧುರ ಕ್ಷಣಗಳನ್ನು ಮತ್ತೆ ಮರುಕಳಿಸಲು ಅವಕಾಶ ನೀಡಿದ ಮೆಡಿಕಲ್ ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಅಭಾರಿಯಾಗಿದ್ದೇನೆ ಎಂದು ತಿಳಿಸಿದರು. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಪ್ರಧಾನ ಸಂಚಾಲಕ ತೆನ್ನಿರ ಮೈನಾ ಮಾತನಾಡಿ, ಕನ್ನಡ ವಿಶ್ವದ ಅತ್ಯಂತ…






