ಲೇಖಕ: admin

ಮಡಿಕೇರಿ ಅ.10 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್2 ಕಾವೇರಿ ಇಂಡಸ್ಟ್ರೀಯಲ್ ಏರಿಯಾ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಅ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಕೂಡಿಗೆ, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಹಳೆಕೂಡಿಗೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ವಿದ್ಯುತ್ ವ್ಯತ್ಯಯ : ನಗರದ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್5 ಜಿ.ಟಿ.ರಸ್ತೆ ಹಾಗೂ ಎಫ್1 ಕೋಟೆ ದಸರಾ ಹಬ್ಬದ ಪ್ರಯುಕ್ತ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಅಕ್ಟೋಬರ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪುಟಾಣಿನಗರ, ದೇಚೂರು, ಚೈನ್‍ಗೇಟ್, ಸುದರ್ಶನ ಸರ್ಕಲ್, ಜಿ.ಟಿ.ರಸ್ತೆ, ಅಶೋಕಪುರ, ಪೆಸನ್ಸ್‍ಲೇನ್, ಕೆ.ಎಸ್.ಆರ್.ಟಿ.ಸಿ. ಇಂಡಸ್ಟ್ರಿಯಲ್ ಏರಿಯಾ, ಕಾಲೇಜುರಸ್ತೆ, ಪ್ರಕೃತಿ ಬಡಾವಣೆ…

Read More

ಮಡಿಕೇರಿ ಅ.10 : ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ‘ಗೋಡೆ ಗಡಿಯಾರ’ವನ್ನು ಕೊಡುಗೆಯಾಗಿ ನೀಡಲಾಯಿತು. ಮಡಿಕೇರಿಯ ಮಹೇಶ್ ಎಂಟರ್ ಪ್ರೈಸಸ್‍ನ ಮಾಲೀಕರಾದ ಹರೀಶ್ ಅವರು ರೋಟರಿ ಮಿಸ್ಟಿಹಿಲ್ಸ್ ಮೂಲಕ ನೀಡಿದ ಗೋಡೆ ಗಡಿಯಾರವನ್ನು ಮಿಸ್ಟಿಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿಗೆ ಅವರಿಗೆ ಹಸ್ತಾಂತರಿಸಿದರು. ತಿಮ್ಮಯ್ಯ ಮ್ಯೂಸಿಯಂ ವೀಕ್ಷಣೆಗೆ ಬರುವ ಸಂದರ್ಶಕರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಈ ಗೋಡೆ ಗಡಿಯಾರವನ್ನು ನೀಡುತ್ತಿರುವುದಾಗಿ ದಾನಿಗಳಾದ ಹರೀಶ್ ಹೇಳಿದರು. ಈ ಸಂದರ್ಭ ರೋಟರಿ ಮಿಸ್ಟಿ ಹಿಲ್ಸ್‍ನ ನಿರ್ದೇಶಕರಾದ ಎ.ಕೆ.ವಿನೋದ್, ಅನಿಲ್ ಎಚ್.ಟಿ, ಮಹೇಶ್ ಎಂಟರ್ ಪ್ರೈಸಸ್ ಪಾಲುದಾರ ರಂಜಿತ್, ಸಿದ್ದಿಕಿ, ಶಮಿಕ್ ರೈ, ತಿಮ್ಮಯ್ಯ ಮ್ಯೂಸಿಯಂನ ಮೋಹನ್ ಇದ್ದರು.

Read More

ಮಡಿಕೇರಿ ಅ.10 : ಬರಹಗಾರರು ಸ್ವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಭಾರಧ್ವಜ ಕೆ. ಆನಂದ ತೀರ್ಥ ಸಲಹೆ ನೀಡಿದರು. ಬೆಂಗಳೂರಿನ ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ದೇಸಿ ಜಗಲಿ ಕಥಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬರಹಗಾರರು ಎನಿಸಿಕೊಂಡವರು ಮತ್ತೊಬ್ಬ ಬರಹಗಾರರ ಬರವಣಿಗೆಯ ಶೈಲಿಯನ್ನು ಅನುಕರಿಸುವುದು ಸರಿಯಿಲ್ಲ. ಸ್ವಂತಿಕೆ ಎಂಬುದನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ಬರಹಗಾರರಾಗಿ ಹೊರ ಹೊಮ್ಮಲು ಸಾಧ್ಯ ಎಂದ ಓದುವ ಹವ್ಯಾಸವನ್ನು ರೂಢಿಸಿಕೊಂಡವರು ಮಾತ್ರ ಬರವಣಿಗೆಯಲ್ಲಿ ಯಶಸ್ಸು ಕಾಣಬಹುದಾಗಿ ಎಂದು ನುಡಿದರು. ಕಥಾ ಕಮ್ಮಟದಲ್ಲಿ ತರಬೇತುರರಾಗಿದ್ದ ಪ್ರಭಾಕರ ಶಿಶಿಲ ಅವರು ಮಾತನಾಡಿ ಜೀವನದ ಬಗ್ಗೆ ಪ್ರೀತಿ ಬೆಳೆಸಿಕೊಂಡರೆ ಮಾತ್ರ ಕಥೆ ಬರೆಯಲು ಸಾಧ್ಯವಾಗುತ್ತದೆ. ಸಮಾಜದಲ್ಲಿನ ಅಸಮಾನತೆಯನ್ನು ಬರವಣಿಗೆಯ ಮೂಲಕ ಹೋಗಲಾಡಿಸಲು ಬರಹಗಾರರು ಪ್ರಯತ್ನಿಸಬೇಕು. ಬೇರೆ ಬೇರೆ ಪುಸ್ತಕಗಳನ್ನು ಓದುವ ಮೂಲಕ…

Read More

ಮಡಿಕೇರಿ ಅ.9 : ಜೀವನದಾರಿ ಅನಾಥಾಶ್ರಮ ಆಶ್ರಮದ ಸ್ಥಾಪಕ ರಮೇಶ್ ಅವರ ನಿಧನಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವನದಾರಿ ಆಶ್ರಮದ ಮೂಲಕ ರಮೇಶ್ ಅವರ ಸಮಾಜಸೇವೆ ಶ್ಲಾಘನೀಯ. ಅನಾಥಾಶ್ರಮದ ಉಸ್ತುವಾರಿ ರಮೇಶ್ ಅವರ ಅಕಾಲಿಕ ಮರಣದಿಂದ ಆಶ್ರಮವಾಸಿಗಳಿಗೆ ಯಾವುದೇ ತೊಂದರೆ ಆಗಬಾರದು. ಅನಾಥಾಶ್ರಮದಲ್ಲಿರುವವರಿಗೆ ತೊಂದರೆ ಆಗದಂತೆ ಅಗತ್ಯ ಸಹಕಾರವನ್ನು ಜಿಲ್ಲಾಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read More

ಮಡಿಕೇರಿ ಅ.9 : ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾಗಿರುವ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈ ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಲು ಕೇಂದ್ರ WASH (WATER, SANITATION and HYGIENE) ತಜ್ಞರ ತಂಡದ ಅನಿಲ್ ಬಿಹಾರಿ ಮತ್ತು ಜಾಲಿ ಕೇಶವನ್ ರವರು ಜಿಲ್ಲೆಗೆ ಆಗಮಿಸಿದ್ದು, 3 ದಿನಗಳ ಕಾಲ ಜೆ.ಜೆ.ಎಂ ಮತ್ತು ಎಸ್ ಬಿ ಎಂ ಕಾಮಗಾರಿಗಳನ್ನು  ಪರಿಶೀಲಿಸಿದರು. ಈ ಯೋಜನೆಯಡಿಯಲ್ಲಿ ಒಟ್ಟು 463 ಜನವಸತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿರುತ್ತದೆ.  ಇದರಲ್ಲಿ ಮಡಿಕೇರಿ ತಾಲ್ಲೂಕಿನ ಮಕ್ಕಂದೂರು, ಕಾಟಕೇರಿ, ಮದೆ, ಮಲೆಚೆಂಬು ಮತ್ತು ಸೊಡ್ಲೂರು ಕಟ್ಟೆಮಾಡು ಗ್ರಾಮಗಳು, ಸೋಮವಾರಪೇಟೆ ತಾಲ್ಲೂಕಿನ 7ನೇ ಹೊಸಕೋಟೆ, ಶಾಂತಳ್ಳಿ, ಕುಂದಳ್ಳಿ, ಕುಂಬೂರು, ಸೂರ್ಲಬ್ಬಿ, ಬೇಲೂರು ಬಸವನಹಳ್ಳಿ, ದೊಡ್ಡಮಳ್ತೆ, ಗಣಗೂರು, ಹಿತ್ಲುಕೇರಿ ಹಾಗೂ ಮುಳ್ಳೂರು ಗ್ರಾಮಗಳು ಮತ್ತು  ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿನ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಿದ್ದಾರೆ. ಕೇಂದ್ರ WASH ತಂಡವು ಆಯಾ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ,…

Read More

ಮಡಿಕೇರಿ ಅ.9 : ನಗರದಲ್ಲಿ ನಡೆದ ಶಾಪಿಂಗ್ ಉತ್ಸವದಲ್ಲಿ ಆಯೋಜಿಸಲಾಗಿದ್ದ KODAGU”GOT TALENT ಜೂನಿಯರ್ ಸೋಲೋ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿನಿ ಪಿ.ಜಿ.ಸಿಂಚನ ಕಾವೇರಮ್ಮ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೋಪಟ್ಟಿ ಗ್ರಾಮದ ಪೊಡನೋಳನ ಗಿರೀಶ್ ಹಾಗೂ ಪವಿತ್ರ ದಂಪತಿ ಪುತ್ರಿಯಾಗಿರುವ ಸಿಂಚನ ಕಾವೇರಮ್ಮ ಮಡಿಕೇರಿಯ ನಾಟ್ಯ ಕಲಾ ಡ್ಯಾನ್ಸ್ ಸ್ಟುಡಿಯೋದ ನೃತ್ಯ ತರಬೇತುದಾರ ಮತ್ತು ಸಂಯೋಜಕ ಅಭಿಷೇಕ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.

Read More

ಮಡಿಕೇರಿ ಅ.9 : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಗುತ್ತಿದ್ದು, ನ.15 ರೊಳಗೆ ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯ ಕುಮಾರ್ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮದಲ್ಲಿ ಶೇ.80 ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಹಾಗೂ ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ, ಎನ್.ಇ.ಇ.ಟಿ ಯಲ್ಲಿ ರಾಷ್ಟ್ರ ಮಟ್ಟದಲ್ಲಿ 5000 ಒಳಗೆ ರ‍್ಯಾಂಕ್ ಗಳಿಸಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳು 2023 ನ.15 ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ,…

Read More

ಮಡಿಕೇರಿ ಅ.9 : ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.5 ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ ಎಂದು ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಮಿತ ರೈ ತಿಳಿಸಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 4928 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 4947 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿಂದ ಸೆಪ್ಟೆಂಬರ್, ತಿಂಗಳ ಅಂತ್ಯದವರೆಗೆ 143 ಪ್ರಕರಣಗಳು ದಾಖಲಾಗಿ 128 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ 15 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ…

Read More

ಮಡಿಕೇರಿ ಅ.9 : ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಲೋಕೋಪಯೋಗಿ ಹೀಗೆ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಲಮಿತಿಯಲ್ಲಿ ನಿಯಮಾನುಸಾರ ಬಳಸುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪ್ರತೀ ಇಲಾಖೆಗೂ ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಾರ್ಯಕ್ರಮಗಳು/ ಸೌಲಭ್ಯಗಳು ನಿಗಧಿಯಾಗಿದ್ದು, ಸರ್ಕಾರದ ನಿರ್ದೇಶನವನ್ನು ಪಾಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಕೌಶಲ್ಯ ಕಾರ್ಯಕ್ರಮದಡಿ ವಿವಿಧ ವೃತ್ತಿಪರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಎಸ್‍ಸಿಎಸ್‍ಪಿ/ಟಿಎಸ್‍ಪಿ…

Read More

ಮಡಿಕೇರಿ ಅ.9 : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ನೀಡಿರುವ ಸಲಹೆಗಳನ್ನು ಪರಿಗಣಿಸಿ, ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ(ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಇಲಾಖೆಗಳು ಆದ್ಯತೆ ನೀಡಬೇಕು ಮತ್ತು ಸಕಾಲದಲ್ಲಿ ಸ್ಪಂದಿಸಬೇಕು ಎಂದರು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಐಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಕುಡಿಯುವ ನೀರು ಸಂಪರ್ಕ, ತಡೆಗೋಡೆ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕೋರಿದರು. ಮತ್ತೊಬ್ಬ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಾತನಾಡಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವಾಸಮಾಡುವ…

Read More