ಲೇಖಕ: admin

ಕುಶಾಲನಗರ ನ.6 : ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರು ನಡೆಸಿದ ಹೋರಾಟ 800 ವರ್ಷಗಳು ಕಳೆದರೂ ಇಂದಿಗೂ ಕೂಡ ನಡೆಯುತ್ತಲೇ ಇದ್ದರೂ ಕೂಡ ಸಮ ಸಮಾಜ ಸಾಧ್ಯವಾಗುತ್ತಿಲ್ಲ ಎಂದು ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ  ಡಾ.ಸುನಿಲ್ ಕುಮಾರ್ ವಿಷಾದಿಸಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ “ವಚನಗಳ ನಡಿಗೆ – ವಿದ್ಯಾರ್ಥಿಗಳ ಕಡೆಗೆ ” ಚಿಂತನಾ ಗೋಷ್ಠಿಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ ಅವರು, ಶತ ಶತಮಾನಗಳಿಂದ ಅದೆಷ್ಟೋ ಆಡಳಿತಗಳು, ಸರ್ಕಾರಗಳು ಬಂದು ಹೋದರೂ ಕೂಡ ಜಾತಿ, ಧರ್ಮ, ವರ್ಣ, ಬೇಧಗಳ ತಾರತಮ್ಯ ದೂರವಾಗಿಲ್ಲ. ವಿದ್ಯಾವಂತರಿಂದಲೇ ಸಮಾಜದಲ್ಲಿಂದು ಹೆಚ್ಚಿನ ಕೆಡುಕುಗಳು ಉಂಟಾಗುತ್ತಿವೆ ಹೊರತು ಅವಿದ್ಯಾವಂತರಿಂದಲ್ಲ. ದಯೆಯೇ ಧರ್ಮದ ಮೂಲ ಎಂದು ಬಸವಣ್ಣನವರು ಸಾರಿ ಹೋಗಿದ್ದಾರೆ. ಆದರೆ ಯುದ್ಧಗಳ ಹೆಸರಲ್ಲಿ ಮಕ್ಕಳಾದಿಯಾಗಿ ಜನರನ್ನು ಸಿಡಿಮದ್ದು ಗುಂಡುಗಳ ಸಿಡಿಸಿ ಅಮಾನುಷವಾಗಿ ಕೊಲ್ಲಲಾಗುತ್ತಿದೆ. ಒಳಿತು ಕೆಡುಕುಗಳ ಅವಲೋಕನ…

Read More

ನಾಪೋಕ್ಲು ನ.6 : ಜಿಲ್ಲೆಯ ಕ್ರೀಡಾಪಟುಗಳನ್ನು ಅಧಿಕ ಸಂಖ್ಯೆಯಲ್ಲಿ ತರಬೇತುಗೊಳಿಸಿ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಕೊಡಗು ಬ್ಯಾಡ್ಮಿಂಟನ್ ಅಸೋಸಿಯೇಷನ್ ಉದ್ದೇಶವಾಗಿದೆ ಎಂದು ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ ಹೇಳಿದರು. ದಿ ರೋವ್ ಕೂರ್ಗ್ ನಾಪೋಕ್ಲು ಮತ್ತು ರಘುರಾಜ್ ಸ್ಪೋರ್ಟ್ಸ್ ಮ್ಯಾನೇಜ್ ಮೆಂಟ್ ವತಿಯಿಂದ ದಿ ರೋವ್ ಕೂರ್ಗ್ ನಾಪೋಕ್ಲು ವಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಘಟಕವಾಗಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳನ್ನು ತರಬೇತಿಗೊಳಿಸುವಲ್ಲಿ ಕಾರ್ಯನಿರತವಾಗಿದೆ. ಇದೀಗ ನಾಪೋಕ್ಲುವಿನಲ್ಲಿ ಬ್ಯಾಡ್ಮಿಂಟನ್ ತರಬೇತಿಗಾಗಿ ವಿದ್ಯಾರ್ಥಿಗಳಿಗೆ ಅವಕಾಶ ಲಭಿಸಿದ್ದು, ಇದು ವ್ಯಾವಹಾರಿಕವಾಗಿ ಮಾಡಿದ್ದಲ್ಲ. ಈಜು ಹಾಗೂ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಲು ಕೈಗೊಂಡ ಕಾರ್ಯವಾಗಿದೆ ಎಂದರು. ಕೊಡಗಿನಲ್ಲಿ ಕ್ರೀಡೆಗೆ ವಿಪುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ.ಮೋಹನ್ ಅಪ್ಪಾಜಿ ತಿಳಿಸಿದರು. ಅಂಕುರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ರತ್ನ…

Read More

ಮಡಿಕೇರಿ ನ.6 :  ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಅನ್ನು ಪುತ್ತರಿ ಕಳೆದ ಮೊದಲ ಭಾನುವಾರ  ಸಂಭ್ರಮದಿಂದ ಆಚರಿಸಲಾಗುವುದೆಂದು  ಬೊಟ್ಟಿಯತ್ ನಾಡ್ ತಕ್ಕ ಹಾಗೂ ಕೈಮುಡಿಕೆ ಮಂದ್ ತಕ್ಕ ಮುಖ್ಯಸ್ಥರು ತಿಳಿಸಿದ್ದಾರೆ. ಬೊಟ್ಟಿಯತ್ ನಾಡ್ ತಕ್ಕ ಹಾಗೂ ಕೈಮುಡಿಕೆ ಮಂದ್ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ  ಪುತ್ತರಿ ಹಬ್ಬವು ನ.27 ಅಥವಾ 28 ರಂದು ನಡೆಯಲಿದ್ದು,  ಮೂರು ನಾಡಿಗೆ ಸೇರಿದ ಕೋಲ್ ಮಂದ್ ನಡೆಸುವ ಉದ್ದೇಶದಿಂದ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಈ ಬಾರಿ  ಡಿ.3ರಂದು ನಡೆಸಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಮೂರು ನಾಡಿನವರಿಂದ ಸಾಮೂಹಿಕ ಪುತ್ತರಿ ಕೋಲಾಟ್ ಬಳಿಕ ಸಾರ್ವಜನಿಕವಾಗಿ ವಿವಿಧ ಪೈಪೋಟಿಯನ್ನು ಏರ್ಪಡಿಸಲು ಸಭೆ ತಿರ್ಮಾನಿಸಿತು. ಪುತ್ತರಿ ಕೋಲಾಟ್, ಉಮ್ಮತಾಟ್, ಬೊಳಕಾಟ್, ಪರೆಯಕಳಿ, ಬಾಳೋಪಾಟ್, ಕೊಡವ ಪಾಟ್ ಹಾಗೂ ವಾಲಗತಾಟ್ ಪೈಪೋಟಿಗಳನ್ನು ತಲಾ ಎರಡು ವಿಭಾಗಗಳಾಗಿ ನಡೆಯಲಿದೆ.  ಪ್ರಾಥಮಿಕ ಹಾಗೂ…

Read More

ನಾಪೋಕ್ಲು ನ.6 : ಪೊಲೀಸ್ ಠಾಣೆಗೆ ನೂತನ ಕ್ರೈಂ ಪಿಎಸ್ಐ ಆಗಿ ಬಿ.ಶ್ರೀಧರ ಅವರನ್ನು ಇಲಾಖೆ (ನೇಮಕ) ನಿಯತ್ತಿಗೊಳಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಪಿಎಸ್ಐ ಆಗಿ ಬಡ್ತಿ ಹೊಂದಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಖಾಲಿ ಇದ್ದ ಕ್ರೈಂ ಪಿಎಸ್ಐ ಹುದ್ದೆಗೆ ಬಿ.ಶ್ರೀಧರ ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದಾರೆ. ಶ್ರೀಧರ್ ಅವರು 1998 ರಿಂದ 2004 ರ ವರೆಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆ ಯಾಗಿ ಕರ್ತವ್ಯ ನಿರ್ವಹಿಸಿ ಬಳಿಕ ವಿರಾಜಪೇಟೆಯ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆ ಯಾಗಿ ನಂತರ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದವರಾಗಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ನ.6 : ರಾಜ್ಯದ ಬೇರೆ ಜಿಲ್ಲೆಗಳಲ್ಲಿರುವಂತೆ ಕೊಡಗಿನಲ್ಲಿಯೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯವನ್ನು ಮತ್ತೆ ಜಿಲ್ಲಾಡಳಿತ ಜಾರಿಗೆ ತರಬೇಕೆಂದು ಜಿಲ್ಲಾ ಲೀಡ್ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ, ಅಂಕಣಕಾರ ಆರ್.ಕೆ.ಬಾಲಚಂದ್ರ ಮನವಿ ಮಾಡಿದ್ದಾರೆ. ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಗರದ ಓಂಕಾರ ಸದನದಲ್ಲಿ ಆಯೋಜಿತ ಕನ್ನಡ ಹಬ್ಬ ದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ವಾಷಿ೯ಕ ಪ್ರಶಸ್ತಿ ಪ್ರಧಾನ ಮತ್ತು ಸ್ಪಧಾ೯ ವಿಜೇತರಿಗೆ ಬಹುಮಾನ ವಿತರಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಾಲಚಂದ್ರ, ಪ್ರತೀ ಜಿಲ್ಲೆಯಲ್ಲಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ನವಂಬರ್ ನಲ್ಲಿ ಆಯಾ ಜಿಲ್ಲಾಡಳಿತ ಅಂಥ ಸಾಧಕರನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಾತ್ರ ರಾಜ್ಯೋತ್ಸವ ಸಂದಭ೯ ಇಂಥ ಸನ್ಮಾನ, ಗೌರವಾಪ೯ಣೆ ಕಂಡುಬರುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಗಮನ ಹರಿಸಿ ಸಾಧಕರನ್ನು ಗೌರವಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕೆಂದು ಕೋರಿದರು. ಕನ್ನಡ ಸಂಬಂಧಿತ…

Read More

ಮಡಿಕೇರಿ ನ.6 :  ಕುಂಜಿಲದ ಖುತುಬುಲ್ ಆರಿಫೀನ್ ರಾತೀಬ್ ಸಂಘದ ಆಶ್ರಯದಲ್ಲಿ ನಡೆದ ರಾತೀಬ್ ಮಜ್ಲಿಸ್ ಸಂಭ್ರಮದಿಂದ ನಡೆಯಿತು. ಮಗ್ರಿಬ್,  ಪಯ್-ನರಿ ಜುಮಾ ಮಸೀದಿಯಲ್ಲಿ ಮುಹಿಯುಧ್ಧೀನ್ ರಾತೀಬ್ ಹಾಗೂ ಇಶಾ ನಮಾಝಿನ ಬಳಿಕ ಸಭಾಂಗಣದಲ್ಲಿ ರಿಫಾಯಿಯ ಕುತ್ತ್ ರಾತೀಬ್ ಹಾಗೂ ಮುದರ್ರಿಸ್ ನಿಝಾರ್ ಅಹ್ಸನಿ ದುವಾ ನಡೆಸಿ ತಬರ್ರುಕ್ ವಿತರಣೆ ನೀಡಲಾಯಿತು ಎಂದು ರಾತೀಬ್ ಸಂಗಾಟಕರು ತಿಳಿಸಿದರು. ವರದಿ : ಸಾಜಿದ್ ಪಯ್ಯಡಿ 

Read More

ಮಡಿಕೇರಿ ನ.6 :  ನಗರದ  ವ್ಯಾoಡಮ್ ಎಂಟರ್‌ಪ್ರೈಸಸ್   ನ 29ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಲಕ್ಕಿ ಡ್ರಾ ಕೂಪನ್ ನ್ನು ರಾಷ್ಟ್ರೀಯ ಹಾಕಿ ಪಟು ಮರಗೋಡಿನ ಜನಾರ್ಧನ ಅವರ ಪುತ್ರಿ  ಚೈತ್ರಾ ಬಿಡುಗಡೆ ಮಾಡಿ ಶುಭಹಾರೈಸಿದರು. ಲಕ್ಕಿ ಡ್ರಾ ಕೂಪನ್ ನಲ್ಲಿ  ಒಂದು ಲಕ್ಷಕ್ಕೂ ಮಿಗಿಲಾದ ಬಹುಮಾನವನ್ನು ಒಳಗೊಂಡಿದ್ದು,  ಪ್ರಥಮ ಬಹುಮಾನ ಸ್ಕೂಟರ್, ದ್ವಿತೀಯ ಬಹುಮಾನ ರಿಫ್ರಿಜಿರೇಟರ್  ನೀಡಲಾಗುವುದೆಂದು ವ್ಯಾoಡಮ್ ಎಂಟರ್‌ಪ್ರೈಸಸ್    ಮಾಲೀಕ ದಮೋದರ್ ತಿಳಿಸಿದ್ದಾರೆ. ಚೈತ್ರಾ  ಬೆಳೆಗಾವಿಯ ಕಿತ್ತೂರು ಸೈನಿಕ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಷ್ಟ್ರವನ್ನು ಪ್ರತಿನಿಧಿಸಿರುವವುದರಿಂದ ಅವರನ್ನು ಸಂಸ್ಥೆ ವತಿಯಿಂದ  ಗೌರವಿಸಲಾಯಿತು.

Read More

ಮಡಿಕೇರಿ ನ.5 : ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೇ ನುಗ್ಗಿದ ಚೋರನೊಬ್ಬ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ತಾಳಿ ಸರವನ್ನು ಕದ್ದೊಯ್ಯಲು ಯತ್ನಿಸಿದ ಘಟನೆ ಮಡಿಕೇರಿ ನಗರದ ಹೃದಯ ಭಾಗದಲ್ಲಿ ನಡೆದಿದೆ. ನಗರದ ಐಡಿಬಿಐ ಬ್ಯಾಂಕ್ ಎದುರು ವಾಸವಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ.ಪ್ರಭಾಕರ್ ಅವರ ಮನೆಗೆ ಇಂದು ಸಂಜೆ 6.40 ರ ವೇಳೆಗೆ ಲಗ್ಗೆ ಇಟ್ಟ ಕಳ್ಳ ಪತ್ನಿ ಸಾಕಮ್ಮ ಅವರ ತಲೆಯ ಭಾಗಕ್ಕೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ. ನಂತರ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಕಸಿಯಲು ಯತ್ನಿಸಿದ್ದಾನೆ. ಆದರೆ ಸಾಕಮ್ಮ ಜೋರಾಗಿ ಕಿರುಚಿಕೊಂಡ ಕಾರಣ ಆತ ಬಂದ ದಾರಿಗೆ ಸುಂಕವಿಲ್ಲವೆಂದು ಕಾಲಿಗೆ ಬುದ್ದಿ ಹೇಳಿದ್ದಾನೆ. ಸರ ಸಾಕಮ್ಮ ಅವರ ಕುತ್ತಿಗೆಯಲ್ಲೇ ಉಳಿದಿದೆ. ವಾಯು ವಿಹಾರಕ್ಕೆಂದು ಹೋಗಿದ್ದ ಪತಿ ಪ್ರಭಾಕರ್ ಅವರು ಮನೆಗೆ ಮರಳಿದಾಗ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಸ್ಥಳೀಯರ ಸಹಕಾರದಿಂದ ಸಾಕಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಚೋರ ಮನೆಯ ಹಿಂಬಾಗಿಲಿನಿಂದ ಒಳ ಪ್ರವೇಶಿಸಿರುವ…

Read More

ಚೆಟ್ಟಳ್ಳಿ ನ.5 : ಚೆಟ್ಟಳ್ಳಿಯ ಅವರ್ ಕ್ಲಬ್ ವತಿಯಿಂದ ವಿವಾಹಿತ ಮಹಿಳೆಯರ ಮುಕ್ತ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು. ಕೌಟುಂಬಿಕ ಜಂಜಾಟ ಮತ್ತು ದಿನದ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸಮವಸ್ತ್ರ ತೊಟ್ಟ ಮಹಿಳೆಯರು ನಾವೇನು ಪುರುಷರಿಗಿಂತ ಕಡಿಮೆ ಇಲ್ಲ ಎಂಬಂತೆ ಕ್ರಿಕೆಟ್ ಬ್ಯಾಟ್ ಹಿಡಿದು ಸಿಕ್ಸ್, ಫೋರ್ ಬಾರಿಸಿ ಸಂಭ್ರಮಿಸಿದರು. ಟೀಂ ಮಾಲ್ದಾರೆ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಟೀಂ ಮಾಸ್ಟರ್ ಬ್ಲಾಸ್ಟರ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. 6 ಓವರ್ ಗಳ ಪಂದ್ಯಾವಳಿಯಲ್ಲಿ 25 ವರ್ಷ ಮೇಲ್ಪಟ್ಟ ಒಟ್ಟು 15 ಮಹಿಳಾ ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಾಸ್ಟರ್ ಬ್ಲಾಸ್ಟರ್ ತಂಡ ನಿಗಧಿತ 4 ಓವರ್ ಗಳಲ್ಲಿ 23 ರನ್ ಗಳನ್ನು ಗಳಿಸಿತು. ಈ ಅಲ್ಪಮೊತ್ತದ ಗುರಿಯನ್ನು ಬೆನ್ನತ್ತಿದ ಮಾಲ್ದಾರೆ ತಂಡ 2.3 ಎಸೆತಗಳಲ್ಲಿ ಗೆದ್ದು ಬೀಗಿತು. ಸಂಭ್ರಮ ಮತ್ತು ಕೋಕೇರಿ ತಂಡದ ನಡುವೆ ಸೆಣಸಾಟ ನಡೆದು ಕೋಕೇರಿ ಮೂರನೇ…

Read More

ಮಡಿಕೇರಿ ನ.5 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 140 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರ ನಗರದಿಂದ ಕೂಡ್ಲೂರು ರಸ್ತೆಯಲ್ಲಿ ಗಾಂಜಾ ದಂಧೆ ನಡೆಯುತ್ತಿರುವ ಕುರಿತು ದೊರೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕುಶಾಲನಗರದ ನಿವಾಸಿಗಳಾದ ಗಣೇಶ (24) ಹಾಗೂ ದೀಪು (24) ಅವರುಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಸಿದ್ದಾರೆ. ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಜಗದೀಶ್.ಎಂ, ಕುಶಾಲನಗರ ಪಿಎಸ್‌ಐ ಮೋಹನ್ ರಾಜು.ಪಿ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ದಾಳಿ ನಡೆಸಲಾಯಿತು. ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More