ಮಡಿಕೇರಿ ಅ.9 : ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿದ್ಯಾರ್ಥಿಗಳಾದ ಎಸ್.ಸಂಜಯ್ ಶಾಟ್ ಪುಟ್ ನಲ್ಲಿ ಪ್ರಥಮ, ಹ್ಯಾಮರ್ ಥ್ರೋ ದ್ವಿತೀಯ, ಸಿ.ಆರ್. ಕೌಶಿಕ್ ಕುಮಾರ್ ಲಾಂಗ್ ಜಂಪ್ ನಲ್ಲಿ ಪ್ರಥಮ, ಟ್ರಿಪಲ್ ಜಂಪ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಬಾಲಕರ ರಿಲೇ ಸ್ಪರ್ಧೆಯಲ್ಲಿ ರಿಲೇ ತಂಡದಲ್ಲಿ ಕೌಶಿಕ್ ಕುಮಾರ್, ಲಿಖಿತ್ ಕುಮಾರ್, ಎ.ವಿ.ವಿಕಾಸ್, ಎಸ್.ಸಂಜಯ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲ ಲೋಕೇಶ್ ಮತ್ತು ನಿಲಯ ಪಾಲಕ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕ ಕೆ.ಪಿ.ಪವನ್ ಸಾಗರ್ ಹಾಗೂ ಬೋಧಕ ಬೋದಕೇತರ ಸಿಬ್ಬಂದಿಗಳು ಮುಂದಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.
ಲೇಖಕ: admin
ನಾಪೋಕ್ಲು ಅ.9 : ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ನಿವೃತ್ತ ಸುಬೇದಾರ್ ಮೇಜರ್ ಬಾಳೆಯಡ ಅಪ್ಪಣ್ಣ (ಅಪ್ಪಾಜಿ) ಹೇಳಿದರು. ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಅಂಬಲ ಮಹಿಳಾ ಸಮಾಜಜ ವತಿಯಿಂದ ಆಯೋಜಿಸಿದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕೋವಿ ಪೂಜೆ ನೆರವೇರಿಸಿದ ಬಳಿಕ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸೇನೆಯಲ್ಲಿ ಶೂಟಿಂಗ್ ಸಂದರ್ಭ ಕಠಿಣ ಮುಂಜಾಗ್ರತಾ ಕ್ರಮಗಳನ್ನು ವಹಿಸುತ್ತಾರೆ. ಆದರೆ ಇಲ್ಲಿ ಪ್ರತಿಯೊಬ್ಬರೂ ಕೋವಿಯನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಬಳಸುವಂತಾಗಬೇಕು ಎಂದರು ಸಲಹೆ ನೀಡಿದರು. ಮಹಿಳಾ ಸಮಾಜದ ಮಹಿಳಾ ಮಣಿಗಳು ಅತ್ಯುತ್ತಮ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಪ್ರಸಂಸ್ಥೆ ವ್ಯಕ್ತಪಡಿಸಿದ ಅವರು, ಶುಭಹಾರೈಸಿದರು. ಅಂಬಲ ಮಹಿಳಾ ಸಮಾಜ ಅಧ್ಯಕ್ಷ ಅಪ್ಪುಮಣಿಯ0ಡ ಡೇಸಿ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಈ ಸಂದರ್ಭ ಕಾಫಿ ಬೆಳೆಗಾರ, ಎಳ್ತಂಡ ಬೋಪಣ್ಣ, ನಾಪೋಕ್ಲು…
ಮಡಿಕೇರಿ ಅ.9: ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ‘ಸೀರತುನ್ನಬಿ’ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ ನಗರದ ವಿವಿಧ ಕಡೆಗಳಲ್ಲಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರಕಾರ್ಮಿಕರಿಗೆ ಬೆಳಗ್ಗಿನ ಉಪಾಹಾರ ನೀಡಲಾಯಿತು. ಈ ಸಂದರ್ಭ ಮಡಿಕೇರಿಯ ಅಹ್ಮದಿಯಾ ಜಮಾಅತ್ ಮಸೀದಿಯ ಧರ್ಮಗುರು ಮೌಲವಿ ಖಲೀಂ ಖಾನ್ ಸಾಹೇಬ್, ಅಧ್ಯಕ್ಷ ಜೆ.ಎಂ.ಶರೀಫ್, ಉಪಾಧ್ಯಕ್ಷ ಎಂ.ಬಿ.ಝಾಹಿರ್ ಅಹ್ಮದ್, ಅನ್ಸಾರ್ ವಿಭಾಗದ ಅಧ್ಯಕ್ಷ ಎಂ.ಯು.ಉಸ್ಮಾನ್, ಪ್ರಮುಖರಾದ ಎಂ.ಇ.ವಸೀಂ ಅಹ್ಮದ್, ಎಂ.ಇ.ಮುಷ್ತಾಕ್ ಅಹ್ಮದ್, ಎಂ.ಇ.ಮುಕ್ತಾರ್ ಅಹ್ಮದ್, ಮೊಹಮ್ಮದ್ ಯೂಸುಫ್, ಜೆ.ಎಂ.ನಾಸೀರ್ ಹಾಗೂ ಇತರ ಸದಸ್ಯರು ಹಾಜರಿದ್ದರು.
ವಿರಾಜಪೇಟೆ ಅ.9 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ನಡೆದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ಸೇಕ್ರೆಡ್ ಹಾರ್ಟ್ ಕಾಲೇಜು ತಂಡ “ವಿನ್ನರ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಸೆಂಟ್ ಆನ್ಸ್ ಪದವಿ ಕಾಲೇಜಿನ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಸಮಾರೋಪ ಸಮಾರಂಭದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಕರ್ ಫೈನಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಆಟಗಾರರಿಗೆ ಶುಭ ಕೋರಿದರು. ಒಟ್ಟು 35 ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯಲ್ಲಿ ಮಂಗಳೂರಿನ ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ತಂಡವು ಜಯಭೇರಿಯನ್ನು ಬಾರಿಸಿ ವಿನ್ನರ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಆಯೋಜಕ ತಂಡವಾದ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ತಂಡವು ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟಿತ್ತು. ಒಟ್ಟು ಮೂರು ದಿವಸ ನಡೆದ ಈ ಪಂದ್ಯಾವಳಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕ್ರೀಡೆಗಳು ಸಮಾಜದಲ್ಲಿ ವೈವಿದ್ಯತೆಯನ್ನು ತರಲು ಸಹಕಾರಿಯಾಗಿವೆ. ಪರಸ್ಪರ ಭಾಂದವ್ಯ ಬೆಳೆಸಿ…
ಮಡಿಕೇರಿ, ಅ.9: ಕೊಡಗು ಜಿಲ್ಲಾ ಸರಕಾರಿ ವಕೀಲರ ತೆರವಾದ ಸ್ಥಾನಕ್ಕೆ ಮಡಿಕೇರಿ ವಕೀಲರಾದ ಎನ್. ಶ್ರೀಧರನ್ ನಾಯರ್ ಅವರನ್ನು ಕರ್ನಾಟಕ ಸರಕಾರ ಕಾನೂನು ಇಲಾಖೆಯು ಮುಂದಿನ ಆದೇಶದವರೆಗೆ ನೇಮಿಸಿದೆ. ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದಿನ ಸರಕಾರದ ಅವಧಿಯಲ್ಲಿಯೂ ಕೊಡಗು ಜಿಲ್ಲಾ ಸರಕಾರಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಮಡಿಕೇರಿ ಅ.9 : ವಿರಾಜಪೇಟೆ ಕ್ಷೇತ್ರದ ಎಲ್ಲರನ್ನೂ ಒಳಗೊಂಡಂತೆ ಸಮಾನತೆಯ ಆಧಾರದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಗೆ ಬದ್ದನಾಗಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು. ಬೇತ್ರಿಯಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಬಹಳಷ್ಟು ನಿರೀಕ್ಷೆ ಮತ್ತು ಭರವಸೆಗಳನಿಟ್ಟು ತಮ್ಮನ್ನು ಶಾಸಕನಾಗಿ ಆಯ್ಕೆ ಮಾಡಿದ ಜನತೆಯ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕಟಿಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಕರ್ತವ್ಯದಿಂದ ವಿಮುಖನಾಗಲಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸುವಂತೆ ಮನವಿ ಮಾಡಿದರು. ಸದ್ಯದಲ್ಲಿಯೇ ಸಮಸ್ಯೆಯನ್ನು ಬಗೆ ಹರಿಸುವ ಎ.ಎಸ್.ಪೊನ್ನಣ್ಣ ಭರವಸೆಯನ್ನು ನೀಡಿದರು.
ಮಡಿಕೇರಿ ಅ.18 : ಶಾಲಾ ಬಸ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಗೋಣಿಕೊಪ್ಪ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ. ಗೋಣಿಕೊಪ್ಪಲಿನ ಖಾಸಗಿ ಶಾಲೆಯ ಸೇರಿದ ಬಸ್ ನಲ್ಲಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಬೆಂಕಿಕಾಣಿಸಿಕೊಂಡಿದ್ದು, ಬೀಯರ್ ಬಾಟಲಿಗೆ ಪೆಟ್ರೋಲ್ ತುಂಬಿಸಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ನಾಲೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಗೋಣಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಅ.8 : ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಟಿ.ಪಿ.ಭವ್ಯ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರು ಸಿದ್ದಾಪುರ ಸಮಿಪದ ಇಂಜಿಳಗೆರೆ ನಿವಾಸಿ ಟಿ.ಎ.ಪ್ರಕಾಶ್ ಹಾಗೂ ಟಿ.ಪಿ.ದಿವ್ಯ ದಂಪತಿಗಳ ಪುತ್ರಿಯಾಗಿದ್ದಾರೆ. ಭವ್ಯ ಅಮ್ಮತ್ತಿಯ ಝೆನ್ ಶಿಟೋರಿಯೋ ಕರಾಟೆ ಫೆಡರೇಶನ್ ನ ತರಬೇತುದಾರರಾದ ಪ್ರಸನ್ನ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಮಡಿಕೇರಿ ಅ.8 : ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ನಡೆದ ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದು, ಅವರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಮಹಿಳೆಯರಿಗೆ ಹಾಗೂ ಮನೆಗೆ ಅಗತ್ಯವಾದ ವಸ್ತುಗಳನ್ನು ಗ್ರಾಹಕರಿಗೆ ನೆರವಾಗಿ ತಲುಪಿಸುವ ನಿಟ್ಟಿನಲ್ಲಿ ಶಾಪಿಂಗ್ ಉತ್ಸವವನ್ನು ಆಯೋಜಿಸಿದ್ದು, ವಿವಿಧ ಪರಿಕಾರಗಳನ್ನು ಮಾರಾಟ ಮಾಡುವುದರ ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದರೊಂದಿಗೆ ಜನರಿಗೆ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ. ಗ್ರಾಹಕರು ಸ್ಥಳೀಯ ಮಹಿಳೆಯರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರ ಆರ್ಥಿಕ ಸಬಲೀಕರಣವನ್ನು ಪುನರ್ಚೇತನ ಗೊಳಿಸಲು ಮುಂದಾಗಬೇಕೆಂದು ಕರೆ ನೀಡಿದರು. ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಮಹಿಳೆಯರು ಸ್ವಾವಲಂಭಿ ಜೀವನವನ್ನು ನಡೆಸಲು ಇಂತಹ ಮೇಳಗಳು ಸಹಕಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಉತ್ತಮ ಅವಕಾಶ ದೊರೆತಂತಾಗುತ್ತದೆ…
ಮಡಿಕೇರಿ ಅ.8 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಆಯೋಜಿಸಿದ ಶೌರ್ಯ ಜಾಗರಣಾ ರಥಯಾತ್ರೆಗೆ ಕೊಡಗಿನ ಗಡಿ ಸಂಪಾಜೆಯಲ್ಲಿ ಭವ್ಯ ಸ್ವಾಗತ ಕೋರಿದರು. ಮಡಿಕೇರಿಯಿಂದ ಆಗಮಿಸಿದ ರಥಯಾತ್ರೆಯನ್ನು ಕೊಯನಾಡು ಶ್ರೀ ಮಹಾಗಣಪತಿ ಗುಡಿಯ ಬಳಿ ಸಂಪಾಜೆ, ಚೆಂಬು ಗ್ರಾಮದ ಹಿಂದೂ ಭಾಂದವರ ಉಪಸ್ಥಿತಿಯಲ್ಲಿ ಅರ್ಚಕರಿಂದ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ಸಂಪಾಜೆ ಪೆಟ್ರೋಲ್ ಬಂಕ್ ವರೆಗೆ ನೂರಾರು ವಾಹನಗಳ ಜಾಥಾದೊಂದಿಗೆ ಕರೆತರಲಾಯಿತು. ನೆರೆದಿದ್ದ ಹಿಂದೂ ಸಮಾಜದ ಮುಖಂಡರು, ಮಾತೆಯರು, ಹಿಂದೂ ಪರಿವಾರದ ಕಾರ್ಯಕರ್ತರಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಹಿಂದೂ ನಾಯಕ ಅನಂತ್ ಊರುಬೈಲು ರಥಯಾತ್ರೆಯ ಉದ್ದೇಶ, ಮಹತ್ವದ ಬಗ್ಗೆ ಮಾತನಾಡಿ ಹಿಂದೂ ಸಮಾಜದ ಒಗ್ಗಟ್ಟಿನ ಅನಿವಾರ್ಯತೆ ಬಗ್ಗೆ ವಿವರಿಸಿದರು. ಸಂಪಾಜೆ ಗೇಟಿನ ತನಕ ಕೇರಳದ ಚಂಡೆನಾದ, ಜಯಘೋಷದೊಂದಿಗೆ ಪಾದಯಾತ್ರೆಯ ಮೂಲಕ ಆಗಮಿಸಿ, ಪಟಾಕಿ ಸಿಡಿಸಿ, ದ.ಕ.ಜಿಲ್ಲೆಗೆ ರಥವನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕೊಡಗು ವಿಹಿಂಪ ಅದ್ಯಕ್ಷ ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಮಾಜಿ…






