ಲೇಖಕ: admin

ಮಡಿಕೇರಿ ನ.4 : ಪ್ರಸಕ್ತ(2023-24) ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಯೊಜನೆಗಳ ಹೆಚ್ಚಿನ ಮಾಹಿತಿಗೆ ನಿಮಗದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳಬಹುದು. ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸೇವಾ ಸಿಂಧು/ ಗ್ರಾಮಒನ್ ತಂತ್ರಾಂಶದ ವೆಬ್‍ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ…

Read More

ಮಡಿಕೇರಿ ನ.4 : ನಗರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯು ನ.7 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದ್ದು,  ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ನಗರಸಭೆ ಪೌರಾಯುಕ್ತ  ವಿಜಯ್  ತಿಳಿಸಿದ್ದಾರೆ.

Read More

ಮಡಿಕೇರಿ ನ.4 : ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್‍ಸಿ, ಎನ್‍ಐಟಿ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ ಮತ್ತು ಐಯುಎಸ್‍ಎಲ್‍ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ ಎರಡು ಲಕ್ಷಗಳ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು https://dom.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನ ಆಜಾದ್ ಭವನ ಎಫ್‍ಎಂಸಿ ಕಾಲೇಜು ಹತ್ತಿರ ಮಡಿಕೇರಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ08272225528 ಹಾಗೂ 08272220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ  ತಿಳಿಸಿದ್ದಾರೆ.

Read More

ಮಡಿಕೇರಿ ನ.4 : ಪ್ರಸಕ್ತ(2023-24) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರ ವಾರ್ಷಿಕ ಆದಾಯ ರೂ.6 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್‍ಗೆ ಗರಿಷ್ಠ ರೂ.20 ಲಕ್ಷ ಹಾಗೂ ರೂ.6 ಲಕ್ಷದಿಂದ ರೂ.15 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್‍ಗೆ ರೂ.10 ಲಕ್ಷ ಗರಿಷ್ಠ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ಇಲಾಖಾ ವೆಬ್‍ಸೈಟ್ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕಚೇರಿಯನ್ನು ಹಾಗೂ ದೂ.ಸಂ.08272-225528 ಹಾಗೂ ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ನ.4 : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ದಕ್ಷಿಣ ಪ್ರಾಂತ, ಮಡಿಕೇರಿ ವಿಭಾಗ ಹಾಗೂ ಮಡಿಕೇರಿ ಸೇವಾ ಭಾರತೀ ಸಂಯುಕ್ತ ಆಶ್ರಯದಲ್ಲಿ ನ.5 ರಂದು “ಕಾವೇರಿ ಸ್ವಾಸ್ಥ್ಯ ಸೇವಾಯಾತ್ರಾ” ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ವಾಲ್ನೂರು ಬಾಳೆಗುಂಡಿ ಗಿರಿಜನ ಕಾಲೋನಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ತಪಾಸಣೆ, ಬಿಎಂಐ, ಪೌಷ್ಟಿಕಾಂಶದ ಮೌಲ್ಯ ಮಾಪನ, ಉಚಿತ ಔಷಧಿಗಳು, ಆರೋಗ್ಯ ಶಿಕ್ಷಣ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಶಿಬಿರ ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಡಾ.ಹೆಚ್.ಜಿ.ಶ್ರೀಕಾಂತ್-99809 32300, ಡಾ.ಎಸ್.ಮಂಜುನಾಥ್-95916 79559 ಸಂಪರ್ಕಿಸಬಹುದಾಗಿದೆ.

Read More

ವಿರಾಜಪೇಟೆ ನ.4 : ರಾಜ್ಯ ಸರಕಾರ ಕನ್ನಡ ಭಾಷೆ ಏಳಿಗೆಗಾಗಿ ದುಡಿಯುವ ಕೆಲಸ ನಿರಂತರವಾಗಿ ಮಾಡುತ್ತಿದೆ. ಕನ್ನಡ ಭಾಷೆಯ ರಕ್ಷಣೆಯಾದರೆ ಮಾತ್ರ ಕರ್ನಾಟಕ ರಾಜ್ಯವನ್ನು ಉಳಿಸಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ಸ್ವರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡ ಬೆಳವಣಿಗೆಯಲ್ಲಿ ಕೊಡಗಿನ ಜನರ ಮಹತ್ವದ ಕೊಡುಗೆ ಇದೆ. ಸಾಹಿತ್ಯ, ಸಂಸ್ಕೃತಿ, ಭಾಷೆಯಲ್ಲಿ ಕನ್ನಡಕ್ಕೆ ಅವರು ಆದ್ಯತೆ ನೀಡಿದ್ದಾರೆ. ಕನ್ನಡ ನಾಡಿನ ಐತಿಹ್ಯವನ್ನು ಉನ್ನತವಾಗಿ ಬೆಳೆಸಬೇಕು ಹಾಗೂ ಈ ಐತಿಹ್ಯವನ್ನು ಎಲ್ಲಾರಿಗೆ ಸಾರುವ ಕೆಲಸ ಆಗಬೇಕು. ಕನ್ನಡ ವಿಜಯನಗರ ರಾಜರ ಕಾಲದಿಂದಲೂ ವಿಜೃಂಭಿಸುತ್ತ ಬಂದಿದೆ. ಇದನ್ನು ಇಂದಿನ ಯುವ ಜನಾಂಗದಿಂದ ಮುಂದಿನ ಪೀಳಿಗೆಯವರಗೆ ಉಳಿಸಿ ಬೆಳೆಸುವ ಕೆಲಸ ಆಗಬೇಕು. ಸಿದ್ದರಾಮಯ್ಯ ಸರಕಾರ ಕನ್ನಡಕ್ಕೆ ಹೆಚ್ಚಿನ ಒತ್ತು ನೀಡಿದ್ದು ಇದಕ್ಕೆ ಈ ಬಾರಿಯ ಕನ್ನಡ…

Read More

ವಿರಾಜಪೇಟೆ ನ.4 :   ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಕನ್ನಡ ಉಪನ್ಯಾಸಕ  ಬಿ.ಬಿ.ಸುನೀಲ್  ಮಾತನಾಡಿ, ಕನ್ನಡ ಭಾಷೆಯು ಇತರ ಭಾಷೆಗಳಿಗಿಂತ ವಿಭಿನ್ನವಾಗಿದ್ದು, ವೈಶಿಷ್ಟ್ಯಪೂರ್ಣವಾಗಿದೆ. ಅನೇಕ ಶ್ರೇಷ್ಠ ಗ್ರಂಥಗಳು ಪ್ರಕಟಗೊಂಡಿದ್ದು, ಭಾರತೀಯ ಭಾಷೆಗಳಲ್ಲಿ ಎಂಟು ಜ್ಞಾನಪೀಠ ತನ್ನದಾಗಿಸಿಕೊಂಡಿದೆ. ವಿವಿಧ ಕಾಲಘಟ್ಟದಲ್ಲಿ ಕವಿಪುಂಗವರು ನೀಡಿದ ಕೊಡುಗೆಯಿಂದಾಗಿ ಕನ್ನಡದ ಸ್ಥಾನಮಾನ ಜಾಗತಿಕ ಮಟ್ಟದಲ್ಲಿ ಖ್ಯಾತಿಗಳಿಸಿದೆ. ಕನ್ನಡದ ಸಾಹಿತ್ಯ ಪ್ರಕಾರಗಳು, ನಮಗೆ ಈವರೆಗೆ ಲಭ್ಯವಾಗಿರುವ ಶಾಸನಗಳು, ಸಂಶೋಧನಾ ಕಾರ್ಯದಿಂದ ದೊರೆತ ಮಾಹಿತಿಗಳು ಭಾಷೆಯ ಹಿರಿಮೆಯನ್ನು ಸಾರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ   ಪ್ರಾಂಶುಪಾಲ  ಡಾ. ಐ.ಎಂ.ದಿಲನ್,  ‘ಕರ್ನಾಟಕ’ ಎಂಬ ಹೆಸರಿನ ಮರುನಾಮಕರಣಗೊಂಡ ಸುವರ್ಣ ವರ್ಷದ ಈ ಸಂದರ್ಭಕ್ಕೆ ಸಾಕ್ಷಿಯಾದ ನಾವೇ ಧನ್ಯರು ಎಂದರು. ಭಾಷಾ ವಿಷಯದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಕನ್ನಡ ಉಪನ್ಯಾಸಕ ಬಿ.ಇ.ಪ್ರದೀಪ್,  ಗಣಕ ವಿಜ್ಞಾನ ಉಪನ್ಯಾಸಕಿ  ಮಹೇಶ್ವರಿ ಇದ್ದರು.…

Read More

ವಿರಾಜಪೇಟೆ ನ.4 : ಓದುವ ಹವ್ಯಾಸವು ಬದುಕನ್ನು ಸುಂದರಗೊಳಿಸುತ್ತದೆ ಎಂದು ಮಡಿಕೇರಿಯ ಪ್ರಥಮ ದರ್ಜೆ ಮಹಿಳಾ ಕಾಲೇಜಿನ  ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನಿರಂತರವಾಗಿ ಕಠಿಣ ಪರಿಶ್ರಮದಿಂದ ಅಭ್ಯಸಿಸಬೇಕು. ಕಾಲೇಜಿನಲ್ಲಿ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಸದಾ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದರು. ವಿದ್ಯಾರ್ಥಿಗಳ ಸೂಪ್ತ ಪ್ರತಿಭೆಯನ್ನು ಹೊರ ತೆಗುಯುವುದೇ ಕಾಲೇಜಿನ ಉದ್ದೇಶವಾಗಿರುತ್ತದೆ. ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುದರ ಜೊತೆಗೆ ನೆಲ, ಜಲ, ಭಾಷೆ ಸಂಸ್ಕೃತಿ ಯನ್ನು ಉಳಿಸಿ ಬೆಳೆಸಬೇಕು. ಎಲ್ಲರೂ ಸಮಾನರೆಂಬ ಭಾವನೆ ಹೊಂದಬೇಕು ಎಂದು ತಿಳಿಸಿದರು. ಕರ್ನಾಟಕ ಭಾಷಾ ಅಲ್ಪ ಸಂಖ್ಯಾತರ ಒಕ್ಕೂಟದ ಅಧ್ಯಕ್ಷ ಪ್ರತೀಕ್ ಪೊನ್ನಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ಅಗತ್ಯ ಎಂದ ಅವರು, ಯುವಕರು ರಾಷ್ಟ್ರದ ಏಳಿಗೆಗಾಗಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ,…

Read More

ಗೋಣಿಕೊಪ್ಪ ನ.4 : ಅಂಕಗಳು ಒದಿಗಷ್ಟೆ ಸಿಮಿತವಾಗದೆ ಮನೋ ನೆಮ್ಮದಿ, ಮನೋ ಧೃಡತೆ ಸಿಗುವ ಹವ್ಯಾಸವನ್ನು ಬೆಳೆಸಿಕೊಂಡಗ ಸಂಭ್ರಮ, ಸಂತೋಷದ ಜೀವನ ನಡೆಸಬಹುದು ಎಂದು ಕವಿ, ಸಾಹಿತಿ ಜಗದೀಶ್ ಜೋಡುಬೀಟಿ ತಿಳಿಸಿದರು. ಅರುವತ್ತೊಕ್ಲು ಸರ್ವದೈವತಾ ಇಂಗ್ಲಿಷ್ ಮಾದ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಅಂತರ್ ಶಾಲೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತನ್ನ ಆತ್ಮಶಕ್ತಿಯನ್ನು ಅರಿತುಕೊಳ್ಳಲಾಗದಷ್ಟು ನಿಶಕ್ತಿಯಾಗಿದ್ದಾನೆ. ಕೇವಲ ಪರೀಕ್ಷೆಗಳಿಗಾಗಿ ತೊಡಗಿಸಿಕೊಳ್ಳುವ ಅಂಕದ ಓದಿನಿಂದ ಈ ವ್ಯವಸ್ಥೆಯೆಂದು ರೂಪಗೊಳ್ಳುತ್ತಿದೆ. ಹೀಗಾಗಿ ಉನ್ನತ ಪದವಿ ಶಿಕ್ಷಣವನ್ನು ಪಡೆದುಕೊಂಡಿದ್ದರೂ ಆತ್ಮಹತ್ಯೆಗೆ ಶರಣಾಗುವುದನ್ನು ಕಾಣುತ್ತಿದ್ದೇವೆ. ಓದುವ ಹವ್ಯಾಸದ ಜತೆಗೆ ಕ್ರೀಡೆ, ಸಂಸ್ಕೃತಿ, ಸಾಹಿತ್ಯ ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಬದುಕಲು ಬೇಕಾದ ದೃಢತೆಯನ್ನು ಕಲ್ಪಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಅದನ್ನು ಹೊರಗೆಡವಲು ಉತ್ತಮ ವೇದಿಕೆ ಅವಶ್ಯಕತೆ ಇದೆ. ಅಂತಹ ವೇದಿಕೆಯನ್ನು ಅರುವತ್ತೂಕ್ಲು ಸರ್ವದೈವತ ಶಾಲೆ ಸೃಷ್ಟಿಸುತ್ತಿದೆ. ಜಾತ್ಯತೀತವಾಗಿ ನಿಂತು ಅಕ್ಷರ ಬಿತ್ತುವುದರ ಜತೆಗೆ…

Read More

ಬೆಂಗಳೂರು ನ.4 :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಡಾ.ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎನ್.ಬೋಸರಾಜು, ಸಿ.ಎಂ.ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಸೇರಿದಂತೆ ಮತ್ತಿತರರು ಇದ್ದರು.

Read More