ಲೇಖಕ: admin

ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಹಿಮಚ್ಛಾದಿತ ಪ್ರದೇಶವಾಗಿರುವ ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ನೆಲಮಟ್ಟದಿಂದ ಭೂಮಿಯ ಒಳಗೆ ಸುಮಾರು 18 ಕಿ.ಮೀ. ದೂರದಲ್ಲಿ ಕಂಪನ ಕೇಂದ್ರ ಸ್ಥಾನವಿತ್ತು. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯನ್ನು ಈ ಕಂಪನಗಳು ಹೊಂದಿದ್ದವು ಎಂದು ಅಮೆರಿಕದ ಜಿಯೋಲಜಿಕಲ್ ಸರ್ವೆ ಇಲಾಖೆ ತಿಳಿಸಿದೆ. ಈ ನಡುವೆ ಕಂಪನದ ಕೇಂದ್ರ ಸ್ಥಾನದಿಂದ ಅಂದಾಜು 500 ಕಿ.ಮೀ. ದೂರವಿರುವ, ಭಾರತದ ರಾಜಧಾನಿ ದೆಹಲಿಯಲ್ಲೂ ಕಂಪನದ ಅನುಭವಗಳಾಗಿವೆ. ಆದರೆ, ಯಾವುದೇ ಕಟ್ಟಡ ಹಾನಿ ಅಥವಾ ಸಾವು ನೋವು ಸಂಭವಿಸಿಲ್ಲ. ದೆಹಲಿ – ರಾಷ್ಟ್ರ ರಾಜಧಾನಿ ಪ್ರಾಂತ್ಯ (ದೆಹಲಿ – ಎನ್ ಸಿಆರ್) ಹಾಗೂ ನೊಯ್ಡಾ ಮುಂತಾದ ಕಡೆಗಳಲ್ಲಿ ಕಂಪನದ ಅನುಭವ ಉಂಟಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ರಾತ್ರಿ 11:47 ಕ್ಕೆ ಜಜರ್ಕೋಟ್‌ನ ರಾಮಿದಂಡಾದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಸಾವು- ನೋವಿನ ಬಗ್ಗೆ ಪ್ರಧಾನಿ…

Read More

ಮಡಿಕೇರಿ ನ.4 :  ದಲಿತ ಸಂಘರ್ಷ ಸಮಿತಿ ವತಿಯಿಂದ ಪುನೀತ್ ರಾಜ್‍ಕುಮಾರ್ ಅವರ ಪುಣ್ಯಸ್ಮರಣೆಯ ಸಲುವಾಗಿ ನಗರದಲ್ಲಿರುವ ನಿರ್ಗತಿಕರಿಗೆ ಸ್ವೆಟರ್ ವಿತರಿಸಲಾಯಿತು. ಡಿ.ಎಸ್.ಎಸ್ ನ ಪೋಷಕ  ಡಾ. ಹೆಚ್.ವಿ. ದೇವದಾಸ್ ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭ ಡಿ.ಎಸ್.ಎಸ್   ಜಿಲ್ಲಾ ಸಂಚಾಲಕ  ಹೆಚ್.ಎಲ್.ದಿವಾಕರ್, ತಾಲ್ಲೂಕು ಸಂಚಾಲಕ  ದೀಪಕ್ ಪೊನ್ನಪ್ಪ ಮತ್ತು ನಗರ ಸಂಚಾಲಕ  ಲೋಕನಾಥ  ಹಾಜರಿದ್ದರು.

Read More

ಮಡಿಕೇರಿ ನ.3 : ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸುವ ಮೂಲಕ ರೈತರಿಗೆ ಸಹಕಾರಿಯಾಗುವಂತೆ ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ.39 ರಷ್ಟು ಮಳೆ ಕೊರತೆ ಉಂಟಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬಿತ್ತನೆ ಸಂಬಂಧಿಸಿದಂತೆ ಶೇ.67 ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾಲ ಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಹಾಗೆಯೇ ಬಿತ್ತನೆ ಬೀಜವನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಗತಿ ಸಾಧಿಸಲಾಗಿದೆ.…

Read More

ಸುಂಟಿಕೊಪ್ಪ ನ.3 : ಗ್ರಾಮೀಣ ಜನಪದ ಸೊಗಡು ನಮ್ಮ ದಿನನಿತ್ಯದ ಆಗುಹೋಗುಗಳ ಸುಖ ದುಃಖಗಳ ಹಾಡುಪಾಡಾಗಿದ್ದು, ಇದರ ಒಟ್ಟು ಮೊತ್ತವೇ ಜನಪದ ಕಲೆಗಳಾಗಿ ಸಾಹಿತ್ಯ, ಸಂಗೀತ, ಆಚಾರ ವಿಚಾರ, ಆಟೋಗಗಳಲ್ಲಿ ಹೊರಹೊಮ್ಮಿವೆ. ಆದರೆ ಇಂದು ಗ್ರಾಮೀಣ ಸಂಸ್ಕೃತಿ ಅಳಿವಿನಂಚಿನಲ್ಲಿದೆ ಎಂದು ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜ್ ನ ಕನ್ನಡ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಬೇಸರ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ ನಡೆದ ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು  ಆಧುನೀಕತೆಯ ಭರಾಟೆಯಲ್ಲಿ ಗ್ರಾಮೀಣ ಸಂಸ್ಕೃತಿಯ ಸೊಗಡು ನಶಿಸುತ್ತಿದೆ ಎಂಬ ಅತಂಕ ನಮ್ಮನ್ನು ಕಾಡುತ್ತಿದೆ ಎಂದರು. ಹಿಂದೆ ಅವಿಭಕ್ತ ಕುಟುಂಬ ಪದ್ಧತಿ ಇದ್ದಾಗ ಹಳ್ಳಿ ಜೀವನದಲ್ಲಿ ಸಹಬಾಳ್ವೆ ಮತ್ತು ಕಾಯಕ ಸಂಸ್ಕೃತಿ ಪ್ರಧಾನವಾಗಿತ್ತು. ಅಂದಿನ ಗ್ರಾಮೀಣ ಕ್ರೀಡೆಗಳಾದ ಕಬ್ಬಡಿ, ಖೋಖೋ, ಚೆನ್ನಮಣೆ, ಯಕ್ಷಗಾನ, ದೈವರಾಧನೆ, ನಾಟಕ, ಜನಪದ ಹಾಡು, ಒಗಟು ಮತ್ತು ಗಾದೆಗಳು ಜನಪದಕ್ಕೆ ಜೀವ ತುಂಬುತ್ತಿದ್ದವು. ಆನೇಕ ಆಧುನಿಕ ರೋಗಗಳಿಗೆ ಜನಪದ ನಾಟಿವೈದ್ಯ…

Read More

ಮಡಿಕೇರಿ ನ.3 :  ಸಾಮಾಜಿಕ ಜಾಗೃತಿ  ಮೂಡಿಸುವ  “ನಂಬಿಕೆ” ಕಿರುಚಿತ್ರದ ಪೋಸ್ಟರನ್ನು  ನಗರದ ಶಕ್ತಿ ವೃದ್ಧಾಶ್ರಮದಲ್ಲಿ ಬಿಡಗಡೆ ಮಾಡಲಾಯಿತು. ವೃದ್ಧಾಶ್ರಮದ ಹಿರಿಯರು ಪೊಸ್ಟರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಈ ಸಂದರ್ಭ ಶಕ್ತಿ ವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್  ಮಾತನಾಡಿ, ವಿಶ್ವ ಕುಂಬೂರ್ ಅವರ ನಿಶು ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ  “ನಂಬಿಕೆ” ಕಿರುಚಿತ್ರ  ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ   ಚಿತ್ರದ ಕ್ಯಾಮೆರಾ ಮೆನ್ ನಾಗೇಶ್ ಶೆಟ್ಟಿ, ಕಥೆ, ನಿರ್ದೇಶನ ಮಾಡಿದ ಗೌತಮ್ ಸೂರ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ  ಬೊಳ್ಳಜಿರ ಬಿ.ಅಯ್ಯಪ್ಪ,  ಚಂದನ್ ನಂದರಬೆಟ್ಟು, ಉಳ್ಳಿಯಡ ಕಾವ್ಯ ಕಾವೇರಿ, ಸತೀಶ್, ಉಮೇಶ್, ನಟ, ನಿರ್ಮಾಪಕ ವಿಶ್ವ ಕುಂಬೂರ್ ಹಾಜರಿದ್ದರು.  ಪೋಸ್ಟರ್ ಬಿಡುಗಡೆ ಪ್ರಯುಕ್ತ  ಚಿತ್ರತಂಡದಿಂದ  110 ಕೆ.ಜಿ ಅಕ್ಕಿಯನ್ನು ವೃದ್ಧಾಶ್ರಮಕ್ಕೆ ನೀಡಲಾಯಿತು.  ಕಿರುಚಿತ್ರದಲ್ಲಿ 12 ಜನ ಪತ್ರಕರ್ತರೆ ನಟಿಸುತ್ತಿರುವುದು ವಿಶೇಷ.   

Read More

ಮಡಿಕೇರಿ ನ.3 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಈ 8 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್, 15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ನ.15 ರೊಳಗೆ ಅರ್ಜಿ ಸಲ್ಲಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ. ಹೆಚ್ಚಿನ ಮಾಹಿತಿಗೆ 3 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್- 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್–9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್…

Read More

ಮಡಿಕೇರಿ ನ.3 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನವೆಂಬರ್, 08 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ನ.10 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ನ.3 : ಪದವೀಧರ/ಸ್ನಾತಕ ಪದವೀಧರ ವಿದ್ಯಾರ್ಥಿಗಳಿಗೆ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸಲು ನ.10 ರಂದು ಬೆಳಗ್ಗೆ 10.30 ಗಂಟೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ನಲ್ಲಿ ರಾಜ್ಯದ ಖ್ಯಾತ ಅಂಕಣಕಾರರು ಮತ್ತು ತರಬೇತುದಾರರಾದ ಆರ್.ಕೆ.ಬಾಲಚಂದ್ರ ಅವರಿಂದ “ಬ್ಯಾಂಕ್ ಪರೀಕ್ಷೆಗಳ ಕುರಿತು ಉಚಿತ ಜಾಗೃತಿ ಕಾರ್ಯಾಗಾರ” ನಡೆಯಲಿದೆ. ನ.9 ರೊಳಗೆ ಮೊಬೈಲ್ ಸಂಖ್ಯೆ 8660217739 ಕ್ಕೆ ಕರೆ/ ವಾಟ್ಸಪ್ ಮಾಡಿ ಅಥವಾ https://tinyurl.com/Free-orientation ಲಿಂಕ್ ಕ್ಲಿಕ್ ಮಾಡಿ ತಮ್ಮ ಹೆಸರು ನೊಂದಾಯಿಸಿಕೊಂಡು ಈ ಅವಕಾಶದ ಸದುಪಯೋಗಪಡಿಸಿಕೊಳ್ಳುವಂತೆ ಕೃಷಿಕ್ ಸರ್ವೋದಯ ಫೌಂಡೇಶನ್ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.

Read More

ಹೆಬ್ಬಾಲೆ ನ.3 : ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಅನ್ಯ ಭಾಷೆಯ ಸಂಪರ್ಕ ಅತಿ ಅವಶ್ಯಕ. ಹಾಗೆಂದು ನಮ್ಮ ಮಾತೃಭಾಷೆಯನ್ನು ಮರೆಯಬಾರದು. ನಮ್ಮ ಮಾತೃಭಾಷೆಯಾದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಫಾನ್ಸಿ ಮುತ್ತಣ್ಣ ಅಭಿಪ್ರಾಯಪಟ್ಟರು. ಉತ್ತರ ಕೊಡಗು ಜಿಲ್ಲೆಯ ಹೆಬ್ಬಾಲೆ ವಿದ್ಯಾವರ್ಧಕ ವಿದ್ಯಾ ಸಂಘದ ವತಿಯಿಂದ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ನಾಡು- ನುಡಿ, ಸಂಸ್ಕೃತಿ ಸಂರಕ್ಷಣೆ ಕುರಿತು ಮಾತನಾಡಿದರು. ಭಾಷೆಯ ಸೊಗಡು, ಭಾಷಾ ಸಂಸ್ಕೃತಿ ಉತ್ತಮವಾಗಿ ಬೆಳೆಯುತ್ತಿದೆಯೆಂದರೆ ಅದು ಗ್ರಾಮೀಣ ಪ್ರದೇಶದಲ್ಲಿ, ಅಪ್ಪ – ಅಮ್ಮ, ಅಕ್ಕ-ತಂಗಿ, ಈ ಭಾಷೆಯಲ್ಲಿ ಪ್ರೀತಿ ಇದೆ. ಇಂಥ ಭಾಷೆಯನ್ನ ಬೆಳೆಸೋಣ ಎಂದು ಹೇಳಿದರು. ವಿದ್ಯಾವರ್ಧಕ ಸಂಘದ ನಿರ್ದೇಶಕ ಹೆಚ್ ಹೆಚ್ ಸುಂದರ್ ಮಾತನಾಡಿ, ಸ್ವಾತಂತ್ರ ಪೂರ್ವದಲ್ಲಿ ಭಾರತದಲ್ಲಿ ಸುಮಾರು…

Read More

ಮಡಿಕೇರಿ ನ.3 : ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಗ್ರಾಮದಲ್ಲಿ 66/11ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತಿತರರು ಹಾಜರಿದ್ದರು.

Read More