ಮಡಿಕೇರಿ ಅ.6 : ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ತೋಟಗಳಿಗೆ ಹಾನಿಯಾಗಿದ್ದು, 80 ಕ್ಕೂ ಅಧಿಕ ಅಡಿಕೆ, 28 ಕ್ಕೂ ಹೆಚ್ಚು ತೆಂಗು ಮತ್ತು ಸುಮಾರು 50 ಬಾಳೆ ಗಿಡಗಳನ್ನು ನಾಶ ಪಡಿಸಿದೆ. ಕರಿಕೆಯ ಎಳ್ಳುಕೊಚ್ಚಿ ಗ್ರಾಮದ ರಾಘವ ಹೊಸಮನೆ, ದುಶ್ಯಂತ ಹೊಸಮನೆ ಹಾಗೂ ಚೆತ್ತುಕಾಯದ ಹೆಚ್.ಎಂ.ನಂಜುಂಡ ಅವರ ತೋಟಗಳಲ್ಲಿ ಅಪಾರ ನಷ್ಟ ಉಂಟಾಗಿದೆ. ಪ್ರತಿವರ್ಷ ಈ ಅವಧಿಯಲ್ಲಿ ಗಡಿ ರಾಜ್ಯ ಕೇರಳ ಭಾಗದಿಂದ ಕಾಡಾನೆಗಳ ಹಿಂಡು ಬಂದು ದಾಂಧಲೆ ನಡೆಸುತ್ತವೆ ಎಂದು ಸ್ಥಳೀಯ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ ಗಡಿ ಗ್ರಾಮದ ಬಗ್ಗೆ ಕಾಳಜಿ ವಹಿಸಿ ಕಾಡಾನೆ ಉಪಟಳ ತಡೆಗೆ ಸೋಲಾರ್ ಬೇಲಿ ನಿರ್ಮಾಣ ಮತ್ತು ತಡೆಗೋಡೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ವಿತರಿಸಬೇಕೆಂದು ತೋಟದ ಮಾಲೀಕರುಗಳು ಮನವಿ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಅ.6 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 3ನೇ ಹಂತದ ಪಾದಯಾತ್ರೆ ಅ.7 ರಂದು ಗೋಣಿಕೊಪ್ಪದಿಂದ ಆರಂಭಗೊಳ್ಳಲಿದೆ ಎಂದು ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ಪಟ್ಟಣದ ಶ್ರೀಉಮಾ ಮಹೇಶ್ವರಿ ದೇವಾಲಯದ ಬಳಿಯಿಂದ ಪಾದಯಾತ್ರೆ ಸಾಗಲಿದೆ. ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ), ಮಧ್ಯಾಹ್ನ 3 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಅರ್ಕೇರಿನಾಡ್ (ಬಾಳೆಲೆ), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್ನಾಡ್ (ಕಿರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್ನಾಡ್ ಬೆಕ್ಕೆಸೆಡ್ಲೂರ್-ಕಾನೂರ್ ನಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಅ.6 : ಅಖಿಲ ಕರ್ನಾಟಕ ಅರುಂಧತಿಯಾರ್ ಆದಿದ್ರಾವಿಡ ಪೌರಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಕೃಷ್ಣ ಅವರನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಥವಾ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಅರುಂದತಿಯಾರ್ ಸಂಘಟನೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪಳನಿಪ್ರಕಾಶ್ ಮಾತನಾಡಿ, ಆರ್.ಕೃಷ್ಣ ಅವರು ಪೌರಕಾರ್ಮಿಕ ಸಫಾಯಿ ಕರ್ಮಚಾರಿಗಳಿಗೆ ಪ್ರತ್ಯೇಕವಾಗಿ ಶೇ.3ರಷ್ಟು ಒಳ ಮೀಸಲಾತಿಗಾಗಿ ಹೋರಾಟ ಮಾಡಿದ ಏಕೈಕ ನಾಯಕರಾಗಿದ್ದಾರೆ. ಸಮುದಾಯದ ಪರವಾಗಿ ಕಳೆದ 25 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದಾರೆ. ಅವರ ಪ್ರಯತ್ನದಿಂದಾಗಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿದೆ ಎಂದರು. 1996ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ಪುರಸಭೆಗೆ ಅಧ್ಯಕ್ಷರು ಹಾಗೂ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಅನುಭವನ ಹೊಂದಿದ್ದಾರೆ. ಇವರು ಆರು ಜಿಲ್ಲೆಗಳಲ್ಲಿ ಸಮುದಾಯದ ಸಮಸ್ಯೆಗಳಿಗೆ ಹೋರಾಟ ಮಾಡುತ್ತಿದ್ದು, ಇವರಿಗೆ ರಾಜ್ಯ ಸರ್ಕಾರ ಉನ್ನತ ಹುದ್ದೆ ನೀಡಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ…
ಮಡಿಕೇರಿ ಅ.6 : ರೋಟರಿ ಮಡಿಕೇರಿ 3181ರ ವತಿಯಿಂದ “ಜಗತ್ತಿನಲ್ಲಿ ಭರವಸೆಯನ್ನು ಮೂಡಿಸುವುದು” ದ್ಯೇಯ ವಾಕ್ಯದೊಂದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ರೋಟರಿಯನ್ ಹೆಚ್.ಆರ್.ಕೇಶವ ತಿಳಿಸಿದ್ದಾರೆ. ಮಡಿಕೇರಿ ರೋಟರಿ ಸಂಸ್ಥೆಗೆ ಅಧಿಕೃತ ಭೇಟಿ ನೀಡಿ, ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಸಂಸ್ಥೆ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಸರ್ಕಾರೇತರ ಸಂಸ್ಥೆಯಾಗಿದ್ದು, 12 ಲಕ್ಷ ಸದಸ್ಯತ್ವವನ್ನ ಹೊಂದಿದೆ. 1905 ರಲ್ಲಿ ಪ್ರಾರಂಭವಾದ ಸಂಸ್ಥೆ ತಮ್ಮ ಸ್ನೇಹಿತರಿಂದ ಆಮಂತ್ರಣ ಪಡೆದು ಸದಸ್ಯತ್ವವನ್ನು ಪಡೆದುಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು. ಸೇವೆಯನ್ನು ಗುರಿಯಾಗಿಸಿಕೊಂಡು ನಡೆದು ಬಂದಿರುವ ರೋಟರಿ ಸಂಸ್ಥೆ, ಪ್ರತಿಯೊಂದು ಕ್ಲಬ್ಗಳು ಮಾಡಿರುವ ಕೆಲಸವನ್ನು ಅವಲೋಕನ ಮಾಡುತ್ತಿದೆ. ಪೊಲಿಯೋ ನಿರ್ಮೂಲನೆಗೆ ಪಣತೊಟ್ಟಿದ್ದು, ರೋಟರಿ ಇಂಡಿಯಾ ಸಾಕ್ಷರತಾ ಮಿಷನ್ ಎಂಬ ದ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸಿದೆ ಎಂದರು. ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷೆ ಗೀತಾ ಗಿರೀಶ್ ಮಾತನಾಡಿ, ಮಡಿಕೇರಿ ರೋಟರಿ ಸಂಸ್ಥೆ ಅಂಗನವಾಡಿಯನ್ನು ಪುನರುಜ್ಜಿವನ ಗೊಳಿಸಬೇಕು ಎಂಬ ನಿಟ್ಟಿನಲ್ಲಿ ನಗರದ ಏಳು ಅಂಗನವಾಡಿಗಳಿಗೆ ಮೂಲಭೂತ ಸೌಲಭ್ಯಗಳನ್ನು…
ಮಡಿಕೇರಿ ಅ.6 : ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮಡಿಕೇರಿ ರೋಟರಿ ಸಂಸ್ಥೆಯ ವತಿಯಿಂದ ಸುಮಾರು ಒಂದುವರೆ ಲಕ್ಷ ಮೌಲ್ಯದ ಬೆಂಚ್ ಗಳನ್ನು ನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ವಿತರಿಸಲಾಯಿತು. ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರು ಬೆಂಚ್ಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ. ವಿದ್ಯಾರ್ಥಿಗಳು ಯಾವುದೇ ಸೌಲಭ್ಯಗಳಿಂದ ವಂಚಿತರಾಗಬಾರದು. ವಿದ್ಯಾಭ್ಯಾಸ ಎನ್ನುವುದು ನಮ್ಮ ಮುಖದ ಕನ್ನಡಿಯಂತೆ. ಇಂದಿನ ಸಮಾಜದಲ್ಲಿ ಜೀವಿಸಬೇಕಾದರೆ ವಿದ್ಯಾಭ್ಯಾಸ ಅತಿ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗುವುದು ಬಹಳ ಮುಖ್ಯ ಎಂದು ಕರೆ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಮಾತನಾಡಿ, ಹಲವಾರು ವರ್ಷಗಳಿಂದ ರೋಟರಿ ಸಂಸ್ಥೆಯವರು ಹಾಗೂ ಡಾ.ಪಾಟ್ಕರ್ ಅವರು ವಿದ್ಯಾರ್ಥಿಗಳಿಗೆ ಅನೇಕ ನೆರವಿನ ಕಾರ್ಯ ನೀಡುತ್ತ ಬಂದಿದ್ದು, ಇನ್ನು ಮುಂದೆಯೂ ಇದೇ ರೀತಿ ವಿದ್ಯಾರ್ಥಿಗಳ ಬದುಕಿನಲ್ಲಿ ರೋಟರಿ ಸಂಸ್ಥೆಯು ಬೆಳಕಾಗಿ ಬರಬೇಕು. ಹಾಗೆಯೇ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.…
ಮಡಿಕೇರಿ ಅ.6 : 2023 ನೇ ಸಾಲಿನ ಮಡಿಕೇರಿ ದಸರಾ ಸ್ವಾಗತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಗರದ ದಸರಾ ಸಮಿತಿ ಕಚೇರಿಯಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಎ.ಜಿ.ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಯಕ್ಷಿತ್ ಅಪ್ಪಯ್ಯ ಕೊತ್ತೋಳಿ, ಖಜಾಂಚಿಯಾಗಿ ಆರ್.ಪಿ.ಚಂದ್ರಶೇಖರ್ ಸಹ ಕಾರ್ಯದರ್ಶಿಯಾಗಿ ಹಬೀಬ್ ಅಹಮ್ಮದ್ ಹಾಗೂ ಗೌರವ ಸಲಹೆಗಾರರಾಗಿ ಶೇಕ್ ಅಹಮ್ಮದ್ ಆಯ್ಕೆಯಾದರು.
ಮಡಿಕೇರಿ ಅ.6 : ಬಜರಂಗದಳದ ಶೌರ್ಯ ಜಾಗರಣ ರಥಯಾತ್ರೆ ಕೊಡಗಿನ ವಿವಿಧೆಡೆ ಭವ್ಯ ಸ್ವಾಗತ ಕೋರಿದರು. ಮಡಿಕೇರಿಗೆ ಆಗಮಿಸಿದ ರಥಯಾತ್ರೆಯಾತ್ರೆಯೂ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಕೇರಳದ ಚಂಡೆ ವಾದ್ಯಗಳೊಂದಿಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಆಗಮಿಸಿದ ಶೌರ್ಯ ಜಾಗರಣಾ ರಥಕ್ಕೆ ಮಾಜೀ ಶಾಸಕ ಕೆ.ಜಿ. ಬೋಪಯ್ಯ ಅವರು ತೆಂಗಿನ ಕಾಯಿ ಒಡೆದು, ಪುಷ್ಪರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ವಾದ್ಯಗೋಷ್ಟಿಯ ಸಹಿತ ಮೆರವಣಿಯೆ ಮೂಲಕ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಸಾಗಲಾಯಿತು. ಈ ಸಂದರ್ಭ ವೇದ ಮಂತ್ರಘೋಷಗಳ ಸಹಿತ ರಥಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ಸಂಪಾಜೆ ಮಾರ್ಗವಾಗಿ ಪುತ್ತೂರು ಕಡೆಗೆ ರಥವನ್ನು ಬೀಳ್ಕೊಡಲಾಯಿತು. ಇದಕ್ಕೂ ಮುನ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಗೆ ಗಣ್ಯರು ಸಹಿತ ಸಂಘಟನೆಗಳ ಪ್ರಮುಖರು ಪುಷ್ಪಾರ್ಚನೆ ನಡೆಸಿ ಗೌರವ ಸಮರ್ಪಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣ ಮೂರ್ತಿ, ವಿಶ್ವ ಹಿಂದೂ ಪರಿಷತ್ ಶ್ರೀ ಕೃಷ್ಣ ಜನ್ಮಾಷ್ಟಮಿ…
ಮಡಿಕೇರಿ ಅ.6 : ವಿವಿಧ ಇಲಾಖೆಗಳ ಅಧಿಕಾರಿಗಳು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಮಿತಿಗಳೊಂದಿಗೆ ಕೈಜೋಡಿಸುವ ಮೂಲಕ ಅತ್ಯಂತ ವ್ಯವಸ್ಥಿತವಾಗಿ ಯಶಸ್ವಿ ದಸರಾ ಆಚರಣೆಗೆ ಸಹಕಾರ ನೀಡುವಂತೆ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯ ಭದ್ರತೆಯನ್ನು ಪಿ.ಡಬ್ಲ್ಯೂ.ಡಿ ಇಲಾಖೆ ಅಧಿಕಾರಿಗಳು ಗಮನಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು. ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸೂಕ್ತ ಸಿದ್ದತೆ ಮಾಡಬೇಕೆಂದು ಅವರು ಸೂಚಿಸಿದರು. ಕಾರ್ಯಕ್ರಮ ವ್ಯಾಪ್ತಿಯ 100-200 ಮೀಟರ್ ವ್ಯಾಪ್ತಿಯಲ್ಲಿ ಅಗ್ನಿಶಾಮಕ ದಳವನ್ನು ನಿಯೋಜಿಸುವಂತೆ ಅವರು ಸಲಹೆ ನೀಡಿದರು. ದಸರಾ ದಿನಗಳಲ್ಲಿ ನಿರಂತರ ವಿದ್ಯುತ್ ಪೂರೈಸಲು ಸೆಸ್ಕ್ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ವೇದಿಕೆಯಲ್ಲಿ ಅಲಂಕಾರಿಕ ಹೂ ಕುಂಡ ವ್ಯವಸ್ಥೆಗೆ ತೋಟಗಾರಿಕಾ…
ಮಡಿಕೇರಿ ಅ.6 : ನೆಲ್ಯಹುದಿಕೇರಿಯ ಅಭ್ಯತ್ ಮಂಗಲ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನವಾಗಿ ಅಧ್ಯಕ್ಷರಾಗಿ ವಿ.ಕೆ.ಲೋಕೇಶ್ ಹಾಗೂ ಉಪಾಧ್ಯಕ್ಷರಾಗಿ ತೋಟಂಬೈಲು ಪ್ರಸನ್ನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಕುಶಾಲನಗರ ಕಂದಾಯ ಇಲಾಖೆ ಅಧಿಕಾರಿ ಚೇತನ್ ಕಾರ್ಯಪ್ಪ ಕಾರ್ಯನಿರ್ವಹಿಸಿದರು.
ಮಡಿಕೇರಿ ಅ.6 : ಕೊಡಗು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅ.10 ರಿಂದ 25 ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಅ.9 ರಿಂದ 24 ರವರೆಗೆ ರಜೆ ನೀಡಲಾಗಿತ್ತು. ಆದರೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಮೆರಗು ಅ.24 ರ ರಾತ್ರಿಯೂ ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಅಡಚಣೆಯಾಗಬಾರದು ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಲಹೆಯಂತೆ ಶಿಕ್ಷಣ ಇಲಾಖೆ ಈ ಮಾರ್ಪಾಡು ಮಾಡಿ ಆದೇಶಿಸಿದೆ.






