ಲೇಖಕ: admin

ನಾಪೋಕ್ಲು ಅ.6 : ಹೊದ್ದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕಾವೇರಿ ನದಿ ಮಲೀನ ವಾಗುತ್ತಿದ್ದು, ಕಾವೇರಿ ನದಿ ಹಾಗೂ ಪರಿಸರವನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಗ್ರಾ.ಪಂ ಮುಂದಾಗಿದೆ ಎಂದು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಹೇಳಿದರು. ಹೊದ್ದೂರು ಗ್ರಾ.ಪಂ ಮುಂದಾಳತ್ವದಲ್ಲಿ ಧರ್ಮಸ್ಥಳ ಹಾಗೂ ಸಂಜೀವಿನಿ ಒಕ್ಕೂಟ, ವಿವಿಧ ಸಂಘಗಳ ಸಹಾಯ ಯೋಗದೊಂದಿಗೆ ಹಮ್ಮಿಕೊಳ್ಳಲಾದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೊದ್ದೂರು ಗ್ರಾಮದ ರಸ್ತೆಯಂಚಿನಲ್ಲಿ ಹರಿಯುವ ಕಾವೇರಿ ನದಿ ಮಲಿನವಾಗುತ್ತಿದ್ದು, ಪ್ರವಾಸಿಗರು,ಜನರು ಕಸ ತ್ಯಾಜ್ಯಗಳನ್ನು ಕಾವೇರಿ ನದಿ ತಟದಲ್ಲಿ ಸುರಿಯುತ್ತಿದ್ದಾರೆ. ಈ ಹಿಂದೆ ಕಾವೇರಿ ಹೊಳೆ, ರಸ್ತೆಯ ಎರಡು ಬದಿ ಸುಂದರವಾಗಿ ಕಾಣುತ್ತಿತ್ತು. ಆದರೆ ತ್ಯಾಜ್ಯಗಳು ತುಂಬಿ ಮಲೀನವಾಗಿದೆ. ಇಂತಹ ನದಿಯ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು. ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಸಹಸ್ರಾರು ಮಂದಿ ಕುಡಿಯುತ್ತಿದ್ದು, ಜನರು ಕಸ ತ್ಯಾಜ್ಯವನ್ನು ಎಸೆಯುವುದರಿಂದ ನೀರು ಮಲೀನವಾಗುತ್ತಿದೆ. ಇದೀಗ ಕಾವೇರಿ ಸಂಕ್ರಮಣ, ದಸರಾ ಹಬ್ಬಗಳಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದರಿಂದ…

Read More

ಮಡಿಕೇರಿ ಅ.6 : ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ, ಎಲ್ಲಿ ನೋಡಿದರೂ ಕಾಂಗ್ರೆಸ್ ಕಾರ್ಯಕರ್ತರೇ ಕಾಣಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಭಯದ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಉಪಾಧ್ಯಾಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಮೇಲೆ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಮಯವಾಗಿವೆ. ಇತ್ತೀಚೆಗೆ ಸಂಪಾಜೆಯಲ್ಲಿ ನಡೆದ ಕಾಂಗ್ರೆಸ್ ಸಭೆಗೆ ತಹಶೀಲ್ದಾರ್ ರನ್ನು ಕರೆಸಿ ಕುಂದುಕೊರತೆ ಸಭೆ ಎಂದು ಪ್ರತಿಬಿಂಬಿಸಲಾಗಿದೆ. ತಾಲ್ಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿಗೆ ದೂರವಾಣಿ ಮಾಡಿದಾಗ ಕಾಂಗ್ರೆಸ್ ಅಧ್ಯಕ್ಷರ ಕೈಗೆ ಫೋನ್ ಕೊಟ್ಟ ಪ್ರಸಂಗವೂ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಅರ್ಜಿದಾರರ ಬದಲು ಕಾಂಗ್ರೆಸ್ ಕಾರ್ಯಕರ್ತರೇ ತುಂಬಿರುತ್ತಾರೆ ಎಂದು ಟೀಕಿಸಿದರು. ಹಿಂದಿನ ಶಾಸಕರುಗಳು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ. ಆದರೆ ಈಗಿನ ಶಾಸಕರುಗಳು ತಾವು ಮಾಡಿದ ಪ್ರತಿಯೊಂದು ಕೆಲಸಕ್ಕೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ತಾವು ಮಾಡಿದ ಕೆಲಸ ಜನಪರವಾಗಿರಬೇಕೆ ಹೊರತು ಪ್ರಚಾರದ…

Read More

ನಾಪೋಕ್ಲು ಅ.6 : ಆರು ತಿಂಗಳ ನಂತರ ಮೂರು ವರ್ಷದವರೆಗಿನ ಮಕ್ಕಳ ತಾಯಂದಿರು ಉದ್ಯೋಗಕ್ಕಾಗಿ ಬಂದಾಗ ಈ ಮಕ್ಕಳ ರಕ್ಷಣೆ ಮತ್ತು ಪಾಲನೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಸಿಆರ್ ಪಿ ಮಂಜುಳಾ ಚಿತ್ರಾಪುರ ಹೇಳಿದರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಗು ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯಿತಿ ಗಳ ಸಹಯೋಗದೊಂದಿಗೆ ಸ್ಥಳೀಯ ಕೆಪಿಎಸ್ ಪ್ರಾರ್ಥಮಿಕ ಶಾಲಾ ಆವರಣದಲ್ಲಿ” ಕೂಸಿನ ಮನೆ ‘ ಶಿಶುವಿಹಾರ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಕೆಪಿಎಸ್ ಶಾಲೆ ಉಪಾಧ್ಯಕ್ಷ ಹ್ಯಾರಿಸ್ ಮಾತನಾಡಿ, ಶುಭಹಾರೈಸಿದರು. ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಲ್ಲೇಟಿರ ಹೇಮಾ ಅರುಣ್, ಪಂಚಾಯಿತಿ ಸದಸ್ಯರು ಮಹಮ್ಮದ್ ಖುರೇಶಿ, ಕಂಗಂಡ ಶಶಿ ಮಂದಣ್ಣ, , ಮುಖ್ಯ ಶಿಕ್ಷಕಿ ಚಂದ್ರಕಲಾ ,ಶಿಕ್ಷಕರು ,ಅಂಗನವಾಡಿ, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಹಾಗೂ ಪೋಷಕರು ಹಾಜರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚೋ0ದಕ್ಕಿ…

Read More

ಸೋಮವಾರಪೇಟೆ ಅ.6 : ಸೋಮವಾರಪೇಟೆ ಪ.ಪಂ ವತಿಯಿಂದ ಎಸ್.ಮಹೇಶ್ ಅವರನ್ನು ಸನ್ಮಾನಿಸಲಾಯಿತು. ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ನಾಮಕರಣ ಸದಸ್ಯರಾಗಿದ್ದ ಸಂದರ್ಭ ಕರ್ಕಳ್ಳಿ ಬಾಣೆಯಲ್ಲಿ ಸ್ಮಶಾನಕ್ಕೆ 1.75 ಎಕರೆ ಸರ್ಕಾರಿ ಜಾಗ ಮಂಜೂರು ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರ ನೀಡಿದ ಸಲುವಾಗಿ ಎಸ್.ಮಹೇಶ್ ಅವರನ್ನು ಶಾಸಕ ಡಾ.ಮಂತರ್‍ಗೌಡ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ತಹಶೀಲ್ದಾರ್ ಎನ್.ಎಸ್.ನರಗುಂದ, ಸದಸ್ಯರಾದ ಪಿ.ಕೆ.ಚಂದ್ರು, ಶೀಲಾ ಡಿಸೋಜ, ಮೃತ್ಯಂಜಯ, ಮಹೇಶ್, ಮೋಹಿನಿ, ಮುಖ್ಯಾಧಿಕಾರಿ ನಾಚಪ್ಪ ಹಾಜರಿದ್ದರು.

Read More

ಸೋಮವಾರಪೇಟೆ ಅ.6 : ಅಮರಸುಳ್ಯ ದಂಗೆಯ ಮೂಲಕ ಕೊಡಗಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಧ್ವನಿ ಎತ್ತಿ ಹೋರಾಡುವ ಮೂಲಕ ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಅಡಿಪಾಯ ಹಾಕಿದರು ಎಂದು ಸಂತ ಜೊಸೇಫರ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಛಾಯ ಹೇಳಿದರು. ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಸಂತಜೊಸೇಫರ ಪದವಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಗಂಗಾಧರ್‍ಶೇಟ್ ಸುಲೋಚನಾ ಬಾಯಿ ಸ್ಮಾರಕ ದತ್ತಿ ಉಪನ್ಯಾಸ “ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು” ವಿಷಯದಲ್ಲಿ ಮಾತನಾಡಿದರು. 1852 ಭಾರತದ ಇತಿಹಾಸದಲ್ಲಿ ಮಹತ್ವದ ವರ್ಷ, ಮೊದಲ ಭಾರತ ಸ್ವಾತಂತ್ರ್ಯ ಸಂಗ್ರಾಮವಾಗಿತ್ತು. ಬ್ರಿಟಿಷರು ಅದನ್ನು ದಂಗೆ ಎಂದೇ ಕರೆದರು. ಅದಕ್ಕಿಂತ ಮೊದಲು 1834ರಲ್ಲಿ ಬ್ರಿಟಿಷರ ವಿರುದ್ಧ ಕೊಡಗಿನಲ್ಲಿ ಅಮರಸುಳ್ಯ ದಂಗೆ ನಡೆಯಿತು. ಕೆದಂಬಾಡಿ ರಾಮೇಗೌಡ, ಗುಡ್ಡೆಮನೆ ಅಪ್ಪಯ್ಯಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಯಿತು. ಬ್ರಿಟಿಷರು ರೈತರ ಹೋರಾಟವನ್ನು ದರೋಡೆ, ಸುಲಿಗೆ ಎಂದು ಕರೆದು ರಾಮೇಗೌಡ, ಅಪ್ಪಯ್ಯಗೌಡರನ್ನು ಮಡಿಕೇರಿಯಲ್ಲಿ ಗಲ್ಲಿಗೇರಿಸಿದರು. ಹೋರಾಟಗಾರರ ಆಸ್ತಿಗಳನ್ನು ಮುಟ್ಟುಗೋಲು…

Read More

ವಿರಾಜಪೇಟೆ ಅ.6 : ಗೋಣಿಕೊಪ್ಪಲಿನ ಜಿಮ್ ಫಿಟ್ನೆಸ್ ಮಂತ್ರ ತರಬೇತಿ ಕೇಂದ್ರದಲ್ಲಿ ಪುಲ್ಲಪ್ಸ್, ಫ್ಲಾಂಕ್ ಮತ್ತು ಪುಶ್ ಅಪ್ ಸ್ಪರ್ಧೆ ನಡೆಯಿತು. ಸ್ಪರ್ಧೆಗಳಲ್ಲಿ ಶಿಲ್ಪ, ಧನುಷ್ ತಿಮ್ಮಯ್ಯ, ಪ್ರಿಯಾ ಹಾಗೂ ಅನೇಕ ತರಬೇತಿದಾರರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡರು. ತೀರ್ಪುಗಾರರಾಗಿ ಲಾಲ್ ಕುಮಾರ್ ಹಾಗೂ ಸಂತೋಷ್ ಕುಮಾರ್ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಜಿಮ್‍ನ ಮುಖ್ಯ ತರಬೇತಿದಾರರಾದ ರಫಿಕ್ ಇದ್ದರು.

Read More

ವಿರಾಜಪೇಟೆ ಅ.6 : ವಿರಾಜಪೇಟೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಅನನ್ಯ, ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ವಂಶಿ ಡಬಲ್ಸ್‍ನಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ ಎಂದು ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಕಾರ್ಲ ತಿಳಿಸಿದ್ದಾರೆ.

Read More

ವಿರಾಜಪೇಟೆ ಅ.6 : ಕೊಡವರು ತಮ್ಮ ಆಚಾರ ವಿಚಾರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲೂ ರಾಜಕೀಯ ಬೆರೆಸಬಾರದು ಎಂದು ಬ್ರಹ್ಮಗಿರಿ ಕೊಡವ ವಾರಪತ್ರಿಕೆ ಸಂಪಾದಕ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಸ್ಥಾಪಕ ಅಧ್ಯಕ್ಷ ಡಾ.ಉಳ್ಳಿಯಡ ಪೂವಯ್ಯ ಹೇಳಿದರು. ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವ ಸಮಾಜದ ಆವರಣದಲ್ಲಿ ಕೈಲ್ ಪೋಳ್ಡ್ ಹಬ್ಬದ ಪ್ರಯುಕ್ತ ನಡೆದ ಒತ್ತೊರ್ಮೆ ಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೊಡವಾಮೆ ಬಗ್ಗೆ, ಕೊಡವ ಜನಾಂಗದ ಬಗ್ಗೆ, ಸಂಸ್ಕೃತಿ, ಆಚಾರ, ವಿಚಾರ ಪದ್ಧತಿ ಪರಂಪರೆ ಬಗ್ಗೆ ಸವಿಸ್ತಾರವಾಗಿ ತಿಳಿಸಿದರಲ್ಲದೆ ಕೊಡವರ ಜನಸಂಖ್ಯೆ ಇಳಿಮುಖವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೊಡವರು ಸ್ವಾಭಿಮಾನಿಗಳು, ಸರ್ಕಾರದ ಯಾವುದೇ ಮೀಸಲಾತಿ, ಸವಲತ್ತುಗಳು ಸಿಗಬೇಕಾದರೂ ಕೂಡ ಎಲ್ಲಾರು ರಾಜಕೀಯ ರಹಿತವಾಗಿ ಹೋರಾಟ ಮಾಡಬೇಕು. ಹಾಗೂ ಬದುಕಿನ ಪ್ರತಿ ಹೆಜ್ಜೆಯಲ್ಲೂ ಕೊಡವತನವನ್ನು ಮರೆಯಬಾರದು ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಗ್ರೀನ್ ಸಿಟಿ ಪೋರಮ್ ಅಧ್ಯಕ್ಷ,…

Read More

ಮಡಿಕೇರಿ ಅ.6 : ರಾಷ್ಟ್ರೀಯ ಆರ್ಥೋಡಾಂಟಿಕ್ ಜಾಗೃತಿ ವಾರದ ಅಂಗವಾಗಿ ಮಡಿಕೇರಿಯ ಹಿಲ್ ರೋಡ್ ನಲ್ಲಿರುವ ‘ ಹ್ಯಾಪಿ ಟೀತ್ ‘ ಡೆಂಟಲ್ ಕ್ಲಿನಿಕ್ ನಲ್ಲಿ ಉಚಿತ ವಕ್ರ ಹಲ್ಲು ತಪಾಸಣೆ (ಬ್ರೇಸಸ್ ಗಾಗಿ ಆರ್ಥೋಡಾಂಟಿಕ್ ಕನ್ಸಲ್ಟೇಷನ್ ) ಶಿಬಿರ ನಡೆಯಲಿದೆ ಎಂದು ದಂತ ತಜ್ಞೆ ಡಾ. ಅನುಶ್ರೀ ತಿಳಿಸಿದ್ದಾರೆ . ಇಂದಿನಿಂದ (ಅ.6) ಅ.13 ರವರೆಗೆ ಶಿಬಿರ ನಡೆಯಲಿದೆ. ವಕ್ರ ಹಲ್ಲು ಹಾಗೂ ಹಲ್ಲುಗಳ ನಡುವಿನ ಅಂತರವನ್ನು ಸರಿಪಡಿಸುವ ಚಿಕಿತ್ಸೆಗೆ, ತಪಾಸಣೆಯು ವಯಸ್ಸಿನ ಮಿತಿ ಇಲ್ಲದೆ ಉಚಿತವಾಗಿ ನಡೆಯಲಿದೆ. ತಪಾಸಣೆಗೆ ಬರುವವರು ಲಕ್ಕಿ ಡ್ರಾ ದಲ್ಲಿ ಹೆಸರು ಹಾಕಿ ಆಯ್ಕೆಯಾದಲ್ಲಿ ಚಿಕಿತ್ಸೆಯು ಕೂಡ ಉಚಿತವಾಗಿ ನಡೆಸಲಾಗುವುದು. 2ನೆ ಸ್ಥಾನ ಪಡೆಯುವವರಿಗೆ ಶೇ.50 ರ ರಿಯಾಯಿತಿಯಲ್ಲಿ ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಫೋ : 7624960691 ಅನ್ನು ಸಂಪರ್ಕಿಸಬಹುದು. ಸಮಯ : ಸೋಮ – ಶನಿ : ಬೆ :11 ರಿಂದ ಸಂಜೆ 5, ಭಾನು : ಮಧ್ಯಾಹ್ನ 3 ರಿಂದ…

Read More

ಮಡಿಕೇರಿ ಅ.5 : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕೊಡಗು ಜಿಲ್ಲೆಯ ಬಿ.ಎಸ್ .ಆನಂದ ಅವರನ್ನು ನೇಮಕ ಮಾಡಲಾಗಿದೆ. ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ಅವರು ಆದೇಶ ಪತ್ರ ಹಸ್ತಾಂತರಿಸುವ ಸಂದರ್ಭ ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಹಾಜರಿದ್ದರು.

Read More