ಲೇಖಕ: admin

ಮಡಿಕೇರಿ ಅ.5 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಮುಖ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯ ಕುರಿತು ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ವಿಳಂಬ ಧೋರಣೆ ತೋರುತ್ತಿರುವ ಕೇಂದ್ರ ಗೃಹ ಇಲಾಖೆಗೆ ರೂ.5 ಸಾವಿರ ದಂಡ ವಿಧಿಸಿದೆ. ಉಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರುಗಳ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ಡಾ.ಸುಬ್ರಮಣ್ಯನ್ ಸ್ವಾಮಿ ಹಾಗೂ ವಕೀಲ ಕೀರನ್ ನಾರಾಯಣ್ ಅವರು ವಾದ ಮಂಡಿಸಿದರು. ನ್ಯಾಯಾಲಯದ ಮುಂದೆ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದಿದ್ದು, ಪ್ರತಿವಾದಿಗಳಲ್ಲಿ ಒಂದಾದ ಕೇಂದ್ರವು ಅರ್ಜಿಗೆ ಆಕ್ಷೇಪಿಸಲು ಹೆಚ್ಚಿನ ಸಮಯ ಬಯಸಿ ಹಲವು ಬಾರಿ ವಿಚಾರಣೆಯನ್ನು ಮುಂದೂಡುವಂತೆ ಮಾಡಿದ ಕಾರಣ ದಂಡ ವಿಧಿಸಲಾಗಿದೆ. ಮುಂದಿನ ವಿಚಾರಣೆಯನ್ನು ನ.29 ಕ್ಕೆ ಮುಂದೂಡಿದ್ದು, ಆಕ್ಷೇಪಣೆಯನ್ನು ಸಲ್ಲಿಸುವಂತೆಯೂ ಅದೇಶಿಸಿದೆ. ಕರ್ನಾಟಕ ರಾಜ್ಯ ಸರಕಾರ, ಕೇಂದ್ರ ಕಾನೂನು ಇಲಾಖೆ ಹಾಗೂ…

Read More

ಸೋಮವಾರಪೇಟೆ ಅ.5 : ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾಳೆ. ಇವರು ಸೋಮವಾರಪೇಟೆಯ ಪುಟ್ಟಸ್ವಾಮಿ ಮತ್ತು ಶೋಭಾ ದಂಪತಿಯ ಪುತ್ರಿಯಾಗಿದ್ದು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

Read More

ಮಡಿಕೇರಿ ಅ.5 :   ಭಾಗಮಂಡಲ ಮತ್ತು ತಲಕಾವೇರಿ ಮಾರ್ಗದ ರಸ್ತೆ ಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇಂದು  ಪರಿಶೀಲಿಸಿದರು. ಈ ಸಂದರ್ಭ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Read More

ಮಡಿಕೇರಿ ಅ.5 :  ಕಾವೇರಿ ಚಂಗ್ರಾಂದಿಯ ತೀರ್ಥೋದ್ಭವ ಸಂದರ್ಭ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ಮೂಲಕ ಬರುವವರಿಗೆ ಪೊನ್ನಂಪೇಟೆಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಹಾಗೂ ಕೊಡವ ರೈಡರ್ಸ್ ಕ್ಲಬ್ ತಿಳಿಸಿದ್ದಾರೆ. ಈ ಕುರಿತು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅಖಿಲ ಕೊಡವ ಸಮಾಜ ಯೂತ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಹಾಗೂ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪೃಥ್ವಿ ಸುಬ್ಬಯ್ಯ ಅ.10ರ ಒಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕಾಗಿದ್ದು, ಅ.17ರ ತೀರ್ಥೋದ್ಭವದ ಸಂದರ್ಭದಲ್ಲಿ ಕಾಲ್ನಡಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಪೊನ್ನಂಪೇಟೆಯಿಂದ ಭಾಗಮಂಡಲದವರೆಗೆ ಉಚಿತ ಬಸ್ಸಿನ ವ್ಯವಸ್ಥೆ ಏರ್ಪಡಿಸಲಾಗಿದೆ. ಕೊಡವ ಸಮುದಾಯದ ಮಂದಿ ನಮ್ಮ ಕುಲಮಾತೆಯಾದ ಕಾವೇರಿ ಮಾತೆಯನ್ನು ಬರಮಾಡಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಿದೆ ಎಂದು ಅವರು ಕೇಳಿಕೊಂಡಿದ್ದಾರೆ. ಪ್ರತಿವರ್ಷ ಕೊಡವ ಯುವಕ ಯುವತಿಯರನ್ನು ಮಾತ್ರವಲ್ಲ ಅವರ ಪೋಷಕರನ್ನು ಸೇರಿದಂತೆ ಭಾಗಮಂಡಲದಿಂದ ತಲಕಾವೇರಿಗೆ ನಡೆಯಲು ಆಸಕ್ತಿ ಇರುವವರನ್ನು ಉಚಿತವಾಗಿ ಕರೆದುಕೊಂಡು ಹೋಗುತ್ತಿದ್ದು, ತಲಕಾವೇರಿಯಲ್ಲಿ ಕರೆದುಕೊಂಡು ಹೋಗಿ ಬರುವವರೆಗೂ…

Read More

ಮಡಿಕೇರಿ ಅ. 5  :  ಕೊಡಗು ವಿದ್ಯಾಲಯದ ಶಾಲೆಯ 9ನೇ ತರಗತಿ ವಿದ್ಯಾಥಿ೯ ಗೋಲ್ಡನ್ ಸಾರ್ಜೆಂಟ್  ಜಿ.ಎಸ್.ಸುಹಿತ್  ನ್ನು ಸನ್ಮಾನಿಸಲಾಯಿತು. ಸೆ.19 ರಿಂದ 30ರ ವರೆಗೆ ದೆಹಲಿಯಲ್ಲಿ ನಡೆದ ಅಖಿಲ ಭಾರತ ತಳ ಸೈನಿಕ ಶಿಬಿರದ, ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಗಳಿಸಿರುತ್ತಾನೆ. ಈ ಶಿಬಿರದ ಆಯ್ಕೆಯ ಮೊದಲು 3 ತಿಂಗಳ ತರಬೇತಿ ಆಯ್ಕೆಯ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕರ್ನಾಟಕ ಮತ್ತು ಗೋವ ಡೈರೆಕ್ಟರೇಟ್ ನಲ್ಲಿ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ನಡೆದ ಅಖಿಲ ಭಾರತ ತಳ ಸೈನಿಕ ಶಿಬಿರಕ್ಕೆ ಸುಹಿತ್ ಆಯ್ಕೆಯಾಗಿದ್ದ. ಕೊಡಗು ವಿದ್ಯಾಲಯದ ಎನ್. ಸಿ. ಸಿ. ಅಧಿಕಾರಿ ಮೇಜರ್ ದಾಮೋದರ್ ರ ಅವರ ತರಬೇತಿಯಿಂದ ಈ ಸಾಧನೆಯನ್ನು ಮಾಡಿರುವುದಾಗಿ 19 ನೇ ಕನಾ೯ಟಕ ಎನ್ ಸಿಸಿ ಬೆಟಾಲಿಯನ್ ಕೆಡೆಟ್ ಸುಹಿತ್ ಹೇಳಿದ್ದಾರೆ. ಎನ್ ಸಿಸಿಯಲ್ಲಿ ಸಾಧನೆ ಮಾಡಿದ ಹೆಮ್ಮೆಯ ವಿದ್ಯಾರ್ಥಿಯನ್ನು ಕೊಡಗು ವಿದ್ಯಾಲಯದ ವತಿಯಿಂದ ಬ್ಯಾಂಡ್ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಪೋಷಕರಾದ ಸುರೇಂದ್ರ, ಗೀತಾ ಸುರೇಂದ್ರರ ಸಮ್ಮುಖದಲ್ಲಿ…

Read More

ಗೋಣಿಕೊಪ್ಪ ಅ.5 : ಶ್ರೀ ಕಾವೇರಿ ದಸರಾ ಸಮಿತಿ 45ನೇ ವರ್ಷದ ದಸರಾ ಜನೋತ್ಸವದ ಆಂಗವಾಗಿ ಅ.22ರಂದು (ಭಾನುವಾರ) ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ‘ದಸರಾ ಬಹುಭಾಷಾ ಕವಿಗೋಷ್ಠಿ’ಯನ್ನು ಕಾವೇರಿ ಕಲಾ ವೇದಿಕೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಕವಿಗೋಷ್ಟಿ ಸಮಿತಿ ಸಂಚಾಲಕ ಜಗದೀಶ್ ಜೋಡುಬೀಟಿ ತಿಳಿಸಿದ್ದಾರೆ. ಯಾವುದೇ ವಯೋಮಾನದವರು ಯಾವುದೇ ವಸ್ತು-ವಿಷಯ ಕುರಿತು ರಚಿಸಿದ ಸ್ವ-ರಚಿತ ಕವಿತೆಗಳು, ಗಜಲ್, ಚುಟುಕುಗಳು, ಕನ್ನಡ,  ಅರೆಭಾಷೆ, ಕೊಡವ, ಎರವ, ತುಳು, ಹಿಂದಿ, ಇಂಗ್ಲೀಷ್, ತೆಲುಗು, ತಮಿಳು, ಮಲಯಾಳಿ ಮತ್ತು ಇನ್ನಿತರ ಭಾಷೆಗಳಲ್ಲಿ ರಚಿಸಿದ ಮತ್ತು ಇದುವರೆಗೆ ಎಲ್ಲಿಯೂ ಪ್ರಕಟವಾಗದ ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ. ಆಯ್ಕೆಯಾದ ಕವಿತೆಗಳನ್ನು ಕವಿಗಳಿಗೆ 22ರಂದು ನಡೆಯುವ ಕವಿಗೋಷ್ಠಿಯಲ್ಲಿ ವಾಚಿಸಲು ಅವಕಾಶವಿರಲಿದೆ. ಕವಿತೆಗಳನ್ನು ಅ.14ರೊಳಗೆ ತಲುಪುವಂತೆ ಜಗದೀಶ್ ಜೋಡುಬೀಟಿ, ಸಂಚಾಲಕ, ಕವಿಗೋಷ್ಠಿ ಸಮಿತಿ, ಶ್ರೀ ಉಮಾಮಹೇಶ್ವರಿ ಬಡಾವಣೆ , ಒಂದನೇ ವಿಭಾಗ, ಮೂರನೇ ಕ್ರಾಸ್ –571213, ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ…

Read More

ಮಡಿಕೇರಿ ಅ.5 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 3ನೇ ಹಂತದ ಪಾದಯಾತ್ರೆ ಅ.7 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅ.7 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲಿನಲ್ಲಿ ಪಾದಯಾತ್ರೆ, ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ) 3.00 ಗಂಟೆಗೆ ಅರ್ಕೇರಿನಾಡ್ (ಬಾಳೆಲೆ) (ಪೊನ್ನಂಪೇಟೆ ತಾಲೂಕು), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್‍ನಾಡ್ (ಕಿರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್‍ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) (ಪೊನ್ನಂಪೇಟೆ ತಾಲೂಕು), ಅ.9 ರಂದು ಬೆಳಗ್ಗೆ 10 ಗಂಟೆಗೆ ತೊಡನಾಡ್ (ಕುಮಟೂರ್-ಶ್ರೀಮಂಗಲ), 2:30 ಗಂಟೆಗೆ, ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು), ಅ.10 ರಂದು ಬೆಳಗ್ಗೆ 10 ಗಂಟೆಗೆ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ಈ ನಾಲ್ಕು ನಾಡು ಮಂದ್‍ಗಳಲ್ಲಿ ಸಭೆ (ಬಾಡಗರ ಕೇರಿ-ತೆರಾಲ್-ಬಿರುನಾಣಿ) (ಪೊನ್ನಂಪೇಟೆ ತಾಲ್ಲೂಕು), ಅ.11 ರಂದು ಬೆಳಗ್ಗೆ…

Read More

ಸೋಮವಾರಪೇಟೆ ಅ.5 : ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಓಎಲ್‍ವಿ ಪ್ರೌಢಶಾಲೆ ವಿದ್ಯಾರ್ಥಿನಿ ಅಪೂರ್ವ ಕಿರಣ್ ಪ್ರಥಮ ಸ್ಥಾನ ಪಡೆದು, ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರು ಸೋಮವಾರಪೇಟೆ ಕಿರಣ್ ಮತ್ತು ರೇಶ್ಮಾ ದಂಪತಿಗಳ ಪುತ್ರಿಯಾಗಿದ್ದು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದಾರೆ.

Read More

ವಿರಾಜಪೇಟೆ ಅ.5 : ಕ್ರೀಡಾಪಟುಗಳಲ್ಲಿ ಶಿಸ್ತು ಮುಖ್ಯ ಎಂದು ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜು ಜೀವನ ಅತೀ ಮುಖ್ಯವಾಗಿದೆ. ಆಟಗಾರರು ಶಿಸ್ತನ್ನು ಕಾಪಾಡುವುದರ ಮೂಲಕ ಆರೋಗ್ಯಕರ ಜೀವನ ನಡೆಸುವಂತಾಗಬೇಕು. ಆಟದಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಹೇಳಿದರು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯು ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು. ಮಾತ್ರವಲ್ಲದೆ ಕ್ರೀಡಾಕೂಟಗಳು ಸಾಮರಸ್ಯವನ್ನು ಬೆಳೆಸುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್ ಮಾತನಾಡಿ, ಸಂಸ್ಥೆಯ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಇದೀಗ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಮಹತ್ವದ್ದಾಗಿದೆ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ…

Read More

ಮಡಿಕೇರಿ ಅ.5 : ಕ್ಲುಲ್ಲಕ ಕಾರಣಕ್ಕಾಗಿ ಗ್ರಾಮದ ನಾಲ್ವರಿಗೆ ಎಮ್ಮೆಮಾಡು ಜಮಾಅತ್ ನಿಂದ ಸಾಮಾಜಿಕ ಬಹಿಷ್ಕಾರ ಮಾಡಲಾಗಿದೆ ಎಂದು ಆರೋಪಿಸಿರುವ ಎಮ್ಮೆಮಾಡು ಗ್ರಾ.ಪಂ ಸದಸ್ಯ ಸಿ.ಎ.ಇಸ್ಮಾಯಿಲ್, ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್‍ಮಿಲಾದ್ ಸಂದರ್ಭ ಕಲಹ ನಡೆದಿದೆ ಎಂಬ ಕ್ಷುಲ್ಲಕ ಕಾರಣ ನೀಡಿ ಗ್ರಾಮದ ನಾಲ್ವರಿಗೆ ಯಾವುದೇ ನೋಟಿಸ್ ನೀಡದೆ ಜಮಾಅತ್‍ಗೆ ಒಳಪಡುವ ಯಾವುದೇ ಖಾಸಗಿ ಮತ್ತು ಸಾಮೂಹಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು, ಅವರ ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಬಾರದೆಂಬ ಹೇಳಿಕೆಯನ್ನು ಜಮಾಅತ್ ನ ಆಡಳಿತ ಮಂಡಳಿ ನೋಟಿಸ್ ಬೋರ್ಡ್‍ನಲ್ಲಿ ಪ್ರದರ್ಶನ ಮಾಡಿದೆ. ಇದು ಕಾನೂನು ಬಾಹಿರ ನಡೆಯಾಗಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಜಮಾಅತ್‍ನ ಲೆಕ್ಕ ಪರಿಶೋಧನೆಗೆ ನೇಮಕ ಮಾಡಿರುವವರನ್ನು ಸಹ ಸಾಮಾಜಿಕ ಬಹಿಷ್ಕಾರ ಹಾಕಿರುವುದು ಆಡಳಿತ ಮಂಡಳಿಯ ವೈಫಲ್ಯವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆರೋಪಿಸಿದರು. ಕಾನೂನು ವ್ಯವಸ್ಥೆ ಇರುವಾಗ ಕಾನೂನು ಕ್ರಮ ಕೈಗೊಳ್ಳದೆ…

Read More