ಲೇಖಕ: admin

ಮಡಿಕೇರಿ, ನ.3 : ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ  ನಗರದ  ಫೀಲ್ಡ್ ಮಾರ್ಷಲ್  ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ನಗರದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸುವ ಮೂಲಕ ತೆರಳಿ ಭ್ರಷ್ಟಾಚಾರದ ವಿರುದ್ಧ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.

Read More

ವಿರಾಜಪೇಟೆ ನ.3 :  ಕೊಡಗು ಹೆಗ್ಗಡೆ ವಿದ್ಯಾಭಿವೃದ್ಧಿ ಸಂಘ ಮತ್ತು ಸಮಾಜದ ವಾರ್ಷಿಕ ಮಹಾಸಭೆಯು ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ   ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಸದಸ್ಯತ್ವ ಪಡೆಯುವುದರೊಂದಿಗೆ ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು. ಈ ನಿಟ್ಟಿನಲ್ಲಿ ಹೊಸ ಸದಸ್ಯತ್ವ ಪಡೆಯುವರಿಗೆ ಸದಸ್ಯತ್ವ ಶುಲ್ಕವನ್ನು ಹಂತ ಹಂತವಾಗಿ ಮೂರು ವರ್ಷಗಳ ಕಂತಿನಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಭಿಪ್ರಾಯಪಟ್ಟರು. ಸಭೆಯಲ್ಲಿ  2024ರ  ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಕೂಟ  ಮೇ ತಿಂಗಳ 3 ರಿಂದ 5ರೊಳಗೆ  ಹಾತೂರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾರ್ಯಪ್ಪ ಕ್ರೀಡಾಂಗಣದಲ್ಲಿ ನಡೆಲಿದೆಯೆಂದು ಘೋಷಣೆ ಮಾಡಲಾಯಿತು. ಬೆಟ್ಟಗೇರಿ ಗ್ರಾ.ಪಂ  ಅಧ್ಯಕ್ಷ  ಚಳಿಯಂಡ ಕಮಲಾ ಮತ್ತು ಹಾಲುಗುಂದ ಗ್ರಾ.ಪಂ  ಅಧ್ಯಕ್ಷ  ಪಂದಿಕಂಡ ಕುಶ ದಿನೇಶ್  ಅವರನ್ನು ಸನ್ಮಾನಿಸಲಾಯಿತು.  ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪಡಿಞರಂಡ ಚಂಗಪ್ಪ, ಸಮಾಜದ ಕಾರ್ಯದರ್ಶಿ ಚಂಗಚಂಡ…

Read More

ಕಡಂಗ ನ 3 : ವಿರಾಜಪೇಟೆ ಡೊನೇಟರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತಿ ತಾಲ್ಲೂಕು ಅಧ್ಯಕ್ಷ  ರಾಜೇಶ್ ಪದ್ಮನಾಭ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಟ್ರಸ್ಟ್ ಗೌರವಾಧ್ಯಕ್ಷ  ರಾಫಿ, ಕಾರ್ಯದರ್ಶಿ ಇರ್ಷಾದ್, ಉಮ್ಮರ್, ಮೊಹಮ್ಮದ್ ರಜಿ, ನಿಸಾರ್ ಅಹಮದ್  ಹಾಜರಿದ್ದರು. ವರದಿ : ನೌಫಲ್ ಕಡಂಗ 

Read More

ವಿರಾಜಪೇಟೆ ನ.3 : ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ನ.17, 18 ಹಾಗೂ 19 ರಂದು ನಡೆಯಲಿರುವ ಕಲ್ಲುಬಾಯ್ಸ್ ನೈಸ್- ಹೈಟೆಕ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಲೋಗೋವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅನಾವರಣಗೊಳಿಸಿದರು. ಕಲ್ಲುಬಾಣೆಯ ಬದ್ರಿಯ ಶಾಲಾ ಆವರಣದಲ್ಲಿ ನಡೆದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಾಂಛನ ಅನಾವರಣಗೊಳಿಸಿ, ಕಾರ್ಯಕ್ರಮದ ಪೋಸ್ಟರ್‍ನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂದರ್ಭ ಕಲ್ಲುಬಾಯ್ಸ್ ತಂಡದ ಅಧ್ಯಕ್ಷ ರಹೀಂ ಮಾತನಾಡಿ, ಟಿ.17ರಂದು ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ನಡೆಯಲಿದ್ದು, ಇಂಡಿಯನ್ ಪೂಟ್ಬಾಲ್ ಆಟಗಾರ ಮಹಮ್ಮದ್ ರಾಫಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇನ್ನಿತ್ತರ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ ಎಂದು ಮಾಹಿತಿ ನೀಡಿದರು. ಕಲ್ಲುಬಾಯ್ಸ್ ತಂಡದ ಸದಸ್ಯರಾದ ನೌಫಲ್, ಫೈಜಲ್, ಶಾಫಿ, ಫಾಜಿಲ್, ಆರ್ಜಿ ಗ್ರಾಮ ಪಂಚಾಯಿತಿಯ ಸದಸ್ಯ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಅಧ್ಯಕ್ಷ ಕೆ.ಟಿ. ಬಷೀರ್, ಕೊಡಗು…

Read More

ಮಡಿಕೇರಿ ನ.2 : ನಮ್ಮ ಸಂಸ್ಕೃತಿಯೊಳಗಿನ ಮೂಲಾಂಶಗಳು ದಾಖಲಾತಿಗೊಳ್ಳುವ ಅಗತ್ಯ ಇದೆ. ಆದರೆ ಕೇಡನ್ನು ಮುಂದಿಡುವ ಸಂಸ್ಕೃತಿಯನ್ನು ಇಲ್ಲವಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸುವ ಪ್ರಯತ್ನವನ್ನು ಮಾಡಬೇಕಾಗಿದೆ. ಅಂತಹ ಪ್ರಯತ್ನವನ್ನು ಸಂಶೋಧಕಿ ಪೂರ್ಣಿಮಾ ರವಿ ಅವರು ತಮ್ಮ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್” ಎಂಬ ಸಾಕ್ಷ್ಯಚಿತ್ರದ ಮೂಲಕ ಮಾಡಿ ತೋರಿಸಿದ್ದಾರೆ ಎಂದು ಖ್ಯಾತ ಚಲನಚಿತ್ರೋದ್ಯಮಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಇಂಗ್ಲೀಷ್ (ಯುಜಿ), ಸಮಾಜಶಾಸ್ತ್ರ, ಸಮಾಜಕಾರ್ಯ, ಕನ್ನಡ ಹಾಗೂ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಕ್ಷ್ಯಚಿತ್ರ ತಯಾರಿಸಿದ ಪೂರ್ಣಿಮಾ ರವಿ ಅವರನ್ನು ಅಭಿನಂದಿಸಿ ಅಂತರರಾಷ್ಟ್ರೀಯ ಮಟ್ಟದ ಚಿತ್ರೋತ್ಸವಕ್ಕೆ ಸಾಕ್ಷ್ಯಚಿತ್ರವನ್ನು ಕಳುಹಿಸುವಂತೆ ಸಲಹೆ ನೀಡಿದರು. ಸಂಶೋಧನಾ ಮಾರ್ಗದರ್ಶಕರಾದ ಡಾ.ನಯನ ಕಶ್ಯಪ್ ಮಾತನಾಡಿ ಪೂರ್ಣಿಮಾ ರವಿ ಅವರು ಇಂಗ್ಲೀಷ್ ಸಾಹಿತ್ಯ ಕೃತಿಗಳಲ್ಲಿ ದೇವದಾಸಿಗಳ…

Read More

ಕುಶಾಲನಗರ, ನ.2 : ಸ್ಥಳೀಯ ಸ್ನೇಹಿತರ ಬಳಗದ ವತಿಯಿಂದ ಹಿರಿಯ ಪತ್ರಿಕಾ ವಿತರಕ ವಿ ಪಿ ಪ್ರಕಾಶ್ ಅವರಿಗೆ ನೂತನ ಬೈಸಿಕಲ್ ಒಂದನ್ನು ಕೊಡುಗೆ ನೀಡಲಾಯಿತು.  ಕಳೆದ ಆರು ದಶಕಗಳಿಂದ ಕುಶಾಲನಗರದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ವಿ ಪಿ ಪ್ರಕಾಶ್ ಅವರ ಸೈಕಲ್ ಅನ್ನು ಇತ್ತೀಚೆಗೆ ಕಳ್ಳರು ಕದ್ದಿದ್ದು, ಇದರಿಂದ ಪತ್ರಿಕೆಗಳ ವಿತರಣೆಗೆ ಅನಾನುಕೂಲ ಉಂಟಾಗಿತ್ತು. ಇದನ್ನು ಮನಗಂಡ ಕುಶಾಲನಗರದ ಸಮಾಜಸೇವಕ ಕೆ ಎಸ್ ಶಶಿಕುಮಾರ್ ಗೌಡ, ಕೆ ಜಿ ಮನು ಮತ್ತು ಸ್ನೇಹಿತರ ಬಳಗ ಸೇರಿ ಗುರುವಾರ ಬೆಳಗ್ಗೆ ಸೈಕಲ್ ಒಂದನ್ನು ಪ್ರಕಾಶ್  ಅವರಿಗೆ ಹಸ್ತಾಂತರಿಸಿದರು.  ಈ ಸಂದರ್ಭ ಬಳಗದ ಪ್ರಮುಖರಾದ ಶಿವಾಜಿ, ಎಂ ಡಿ ಕೃಷ್ಣಪ್ಪ,ರವಿ, ಕೆ ಎನ್ ದೇವರಾಜ, ಪ್ರಶಾಂತ್, ದಯಾನಂದ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಇದ್ದರು.

Read More

ಮಡಿಕೇರಿ ನ.2 : ಕಥೆ, ಕವನ, ಬರೆಯುವವರು, ಒಂದು ಪುಸ್ತಕ ಬರೆದವರು ಸಾಹಿತಿಗಳಾಗಲು ಸಾಧ್ಯವಿಲ್ಲ. ಅವರು ಕೇವಲ ಬರಹಗಾರರಷ್ಟೆ, ಹಲವು ಪುಸ್ತಕ ಬರೆದು, ಅಪಾರ ಜ್ಞಾನ ಹೊಂದಿದವರು ಮಾತ್ರ ನಿಜವಾದ ಸಾಹಿತಿಗಳು ಎಂದು ಬ್ರಹ್ಮಗಿರಿ ವಾರಪತ್ರಿಕೆಯ ಸಂಪಾದಕ ಡಾ.ಉಳ್ಳಿಯಡ ಎಂ.ಪೂವಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾಭವನದ ಸಭಾಂಗಣದಲ್ಲಿ ಕೊಡವ ಮಕ್ಕಡ ಕೂಟದ ವತಿಯಿಂದ ಲೇಖಕಿ ತೆನ್ನಿರ ಟೀನಾ ಚಂಗಪ್ಪ ಬರೆದಿರುವ “ಮರ್‍ಂಜ ಪಾಳೆ” ಕೊಡವ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪುಸ್ತಕ ಪ್ರಕಟಿಸುವವರಿಗೆ ತಾಳ್ಮೆ, ಮುಂದಾಲೋಚನೆ, ತ್ಯಾಗಮನೋಭಾವ ಮತ್ತು ವಿಮರ್ಶಾ ಶಕ್ತಿ ಇರಬೇಕು. ಆಗ ಮಾತ್ರ ಪುಸ್ತಕ ಪ್ರಕಟಣೆಗೆ ಅರ್ಹತೆ ಪಡೆದುಕೊಳ್ಳುತ್ತದೆ. ಕನ್ನಡ ಭಾಷೆಯಲ್ಲಿ ಲಕ್ಷೋಪ ಲಕ್ಷ ಪುಸ್ತಕಗಳು ಇದ್ದು, ಅದನ್ನು ಯಾರಿಗೂ ಎಣಿಕೆ ಮಾಡಲು ಸಾಧ್ಯವಿಲ್ಲ. ಆದರೆ ಕೊಡವ ಭಾಷಾ ಪುಸ್ತಕ ಅಂದಾಜು 700 ರಷ್ಟು ಇದ್ದು, ಅದರ ಬೆಳವಣಿಗೆಗೆ ಎಲ್ಲರೂ ಮುಂದಾಗಬೇಕು ಎಂದರು. 1900ರಲ್ಲಿ ಆದಿಕವಿ ಹರಿದಾಸ ಅಪ್ಪಚ್ಚ ಕವಿ ಕೊಡವ ಭಾಷೆಯ ಪ್ರಥಮ ಮುದ್ರಣವನ್ನು ಹೊರತಂದಿದ್ದು, ಅಂದಿನಿಂದ ಕೊಡವ…

Read More

ಮಡಿಕೇರಿ ನ.2 : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2022-23 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‍ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ 6 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರ ಒಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ನವೆಂಬರ್, 18 ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ ಮಾನ್ಯ ಯೋಜನಾಧಿಕಾರಿಗಳು, ಚಂದ್ರಿಕಾ ಬಡಾವಣೆ ಹಿಂಭಾಗ ಕೆಎಚ್‍ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ 0836-2461666 ಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೆಯೇ ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಈ ಪ್ರಶಸ್ತಿಯ ಅರ್ಜಿ ನಮೂನೆ/…

Read More

ಮಡಿಕೇರಿ ನ.2 : 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್‍ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-225531 ಅನ್ನು ಸಂಪರ್ಕಿಸಬಹುದು. ಯೋಜನೆಗಳ ವಿವರ: ಪರಿಶಿಷ್ಟ ಜಾತಿಯವರಿಗೆ ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ(ಘಟಕ ವೆಚ್ಚ ರೂ.1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2 ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಣಿಕೆ/ ನಾಲ್ಕು ಚಕ್ರಗಳ ವಾಹನ ಮತ್ತಿತರ) (ಘಟಕ ವೆಚ್ಚ ರೂ.4 ಲಕ್ಷ), ಭೂ ಒಡೆತನ ಯೋಜನೆ, ಪರಿಶಿಷ್ಟ ಪಂಗಡದವರಿಗೆ ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ(ಘಟಕ ವೆಚ್ಚ ರೂ.1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2 ಲಕ್ಷ), ಉದ್ಯಮಶೀಲತಾ ಯೋಜನೆ(ಸರಕು ಸಾಗಣಿಕೆ/…

Read More

ಮಡಿಕೇರಿ ನ.2 : ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.50 ಗಂಟೆಗೆ ಶ್ರೀಮಂಗಲ 66 ಕೆ.ವಿ.ವಿದ್ಯುತ್ ಉಪ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಕೃಷಿ ಪ್ರಶಸ್ತಿ ವಿಜೇತರಾದ ರವಿಶಂಕರ್ ಅವರ ಹುದ್ದೂರು ಬಳಿಯ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ(ಜಿಲ್ಲಾಧಿಕಾರಿ ಕಚೇರಿ) ನಡೆಸಲಿದ್ದಾರೆ ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಎಚ್.ಜಿ.ಪ್ರಭಾಕರ್  ತಿಳಿಸಿದ್ದಾರೆ.

Read More