ವಿರಾಜಪೇಟೆ ಜೂ.3 NEWS DESK : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಲೋಕಭವನದಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದ ಹಿನ್ನೆಲೆಯಲ್ಲಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಸಂಭ್ರಮಾಚರಣೆ ಮಾಡಲಾಯಿತು. ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಹಾಗೂ ನಗರ ಕಾಂಗ್ರೇಸ್ ಸಮಿತಿ ವತಿಯಿಂದ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ನಗರ ಕಾಂಗ್ರೇಸ್ ಅಧ್ಯಕ್ಷ ಮಾಳೇಟಿರ ಬೋಪಣ್ಣ ಅವರ ನೇತೃತ್ವದಲ್ಲಿ ಡಿ.ಕೆ ಶಿವಕುಮಾರ್ ಪರವಾಗಿ ಘೋಷಣೆಗಳನ್ನು ಕೂಗಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೇಸ್ಸಿನ ಹಿರಿಯ ಮುಖಂಡ ಪೋರೆರ ಎಂ ಬಿದ್ದಪ್ಪ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಅಧಿಕಾರದ ದಾಹವಿಲ್ಲದೆ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ರವರಿಗೆ ನೀಡಿದ್ದು ಇದು ಎಲ್ಲರಿಗೂ ಮಾದರಿಯಾದ ನಡೆಯಾಗಿದೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರವು ಹೆಚ್ಚಿನ ಜನಪರ ಕಾರ್ಯವನ್ನು ಮಾಡಲಿ. ಡಿ,ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೇಸ್ ಸರಕಾರ ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಲಿದೆ. ಕಳೆದ 20 ವರ್ಷಗಳಿಂದ ನಮ್ಮ ಕೊಡಗಿನಲ್ಲಿ ಕಾಂಗ್ರೇಸ್ ಆಡಳಿತ…
ಲೇಖಕ: admin
ಮಡಿಕೇರಿ ಜೂ.3 NEWS DESK : ಕೊಡಗು ಪ್ರೆಸ್ ಕ್ಲಬ್ನ 2026ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಜೂ.7 ರಂದು ಭಾನುವಾರ ಬೆಳಿಗ್ಗೆ 11:30 ಗಂಟೆಗೆ ನಗರದ ಕೈಗಾರಿಕಾ ಬಡಾವಣೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಸಮಾಜ ಸೇವಕ ಹಾಗೂ ಉದ್ಯಮಿ, ಲೀಡಿಂಗ್ ಎಡ್ಜ್ ಅಡ್ವಟೈಸಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಎಡಿಕೇರಿ ಪ್ರಸನ್ನ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣೆಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ…
ವಿರಾಜಪೇಟೆ ಜೂ.3 NEWS DESK : ನೂತನ ಸಚಿವ ಸಂಪುಟದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಹಾಗೂ ವಿರಾಜಪೇಟೆ ತಾಲೂಕು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹಿಸಿದೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ನ ಜಿಲ್ಲಾ ಉಪಾಧ್ಯಕ್ಷರಾದ ಜೋಕೀಂ ರಾಡ್ರಿಗೀಸ್ ಅವರು, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ರವರು ಪ್ರಮಾಣ ವಚನ ಸ್ವೀಕರಿಸಿದ್ದು, ಕ್ರೈಸ್ತ ಬಾಂಧವರ ಪರವಾಗಿ ಅವರಿಗೆ ಶುಭಾಶಯಗಳನ್ನು ಕೋರಿದರು. ವಿರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಅವರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು. ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ಕೊಡಗು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ. ಇಂದು ಶಾಸಕರು ಸಂಪೂರ್ಣವಾಗಿ ಅನುದಾನವನ್ನು ತಂದು ಅಭಿವೃದ್ಧಿಯ ಹರಿಕಾರರು ಆಗಿದ್ದಾರೆ. ಎಲ್ಲೆಡೆ ರಸ್ತೆಗಳು ಕಾಂಕ್ರಿಟೀಕರಣಗೊಳ್ಳುತಿದ್ದು ಶಾಸಕರ ಕಾರ್ಯವೈಖರಿಗೆ ಒಂದು ಉದಾಹರಣೆಯಾಗಿದೆ ಎಂದು…
ವಿರಾಜಪೇಟೆ ಜೂ.3 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕಗೊಂಡಿದ್ದಾರೆ. ರಾಜ್ಯ ಸಮಿತಿಯ ಅಧ್ಯಕ್ಷರಾದ ಹೆಚ್.ಪಿ.ಸೋಮಶೇಖರ್ ಕಾರ್ಯಕಾರಿ ಮಂಡಳಿಯ ಸಭೆ ಕರೆದು ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಉದ್ದೇಶದಿಂದ ಮತ್ತು ಬಡವರನ್ನು ರಕ್ಷಣೆ ಮಾಡಲು ಸರ್ಕಾರದ ಅನುದಾನದ ಆದೇಶದಂತೆ, ರಾಜ್ಯ ಕಾರ್ಯಕಾರಿ ಮಂಡಳಿ ಆದೇಶದಂತೆ ಈ ನೇಮಕಾತಿಯನ್ನು ಮಾಡಿದ್ದಾರೆ. ಕೊಡಗು ಜಿಲ್ಲೆಯ ಸಂಪೂರ್ಣ ಹಿಂದುಳಿದ ಬಡ ಒಕ್ಕಲಿಗರನ್ನು ರಕ್ಷಿಸಲು ಮತ್ತು ಸರ್ಕಾರದ ಸವಲತ್ತುಗಳನ್ನು ಒದಗಿಸಲು ಸಂಘಟನೆಯಲ್ಲಿ ತೊಡಗಿಸಿಕೊಂಡು ಸಂಘವನ್ನು ಮುನ್ನಡೆಸಲು ಆದೇಶ ಆದೇಶಿಸಿದ್ದಾರೆ. ಮೂಲತಃ ವಿರಾಜಪೇಟೆ ಸಮೀಪದ ಕಣ್ಣಂಗಾಲ ಗ್ರಾಮದವರಾದ ಕೆ.ಎಸ್.ಗೋಪಾಲಕೃಷ್ಣ ಅವರು ಕಣ್ಣಂಗಾಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಪಂಚಾಯತ್ ಪರಿಷತ್ ಸದಸ್ಯರಾಗಿ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕಣ್ಣ೦ಗಾಲ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಹಾರಂಗಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸದಸ್ಯರಾಗಿ, ಕಣ್ಣ೦ಗಾಲ ದ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಡಿಕೇರಿ ಜೂ.3 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆ 2026”ಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ, ಯುವ ಸಮೂಹವು ಇತ್ತೀಚಿನ ದಿನಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಅಂತಹ ಯುವ ಸಮೂಹಕ್ಕೆ ಹೆಚ್ಚು ಜಾಗೃತಿ ಮೂಡಿಸಿ ಇಂತಹ ದುಶ್ಚಟಗಳಿಂದ ಹೊರತರಬೇಕಾಗಿದೆ ಎಂದು ನುಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಲೋಕೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ…
ಮಡಿಕೇರಿ ಜೂ.3 NEWS DESK : ಇದೇ ಜೂನ್ 21 ರಂದು ನಡೆಯುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಬುಧವಾರ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ, ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಆಯುಷ್ ಇಲಾಖೆಯಿಂದ ಯೋಗಾಭ್ಯಾಸ ಮಾಡಿಸಬೇಕು ಮತ್ತು ಆಯುಷ್ ಇಲಾಖೆಯಲ್ಲಿ ಲಭ್ಯವಾಗುವ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ಯೋಗ ಮತ್ತು ಪ್ರವಾಸೋದ್ಯಮದ ಸಹಯೋಗದಿಂದ ಜಿಲ್ಲೆಗೆ ಪ್ರವಾಸಿಗರು ಆಕರ್ಷಿಸುತ್ತಾರೆ. ಆ ಮೂಲಕ ಪ್ರವಾಸೋದ್ಯಮದ ಸೃಷ್ಟಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಆಯುಷ್…
ಮಡಿಕೇರಿ ಮೇ 3 NEWS DESK : ಕಳೆದ ಹಲವು ದಿನಗಳಿಂದ ಸಾರ್ವಜನಿಕರು ಹಾಗೂ ಸಂಚಾರಕ್ಕೆ ಸವಾಲಾಗಿದ್ದ ಮಡಿಕೇರಿ ನಗರದ ರಾಜಾಸೀಟು ರಸ್ತೆಯ ಗುಂಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಆಟೋ ಚಾಲಕ ಮುಚ್ಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾವುದೇ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಗಮನ ಹರಿಸದಿದ್ದರೂ, ತಮ್ಮ ಆಟೋದಲ್ಲಿ ಇಟ್ಟಿಗೆ ತುಂಡುಗಳು ಮತ್ತು ಮಣ್ಣನ್ನು ತಂದುಕೊಟ್ಟರು ಗುಂಡಿಗಳನ್ನ ಮುಚ್ಚಿ ಸವಾರರಿಗೆ ನೆರವಾದರು. ವರದಿ : ಸುಮನ್ ಸುರೇಶ್ ಲಾಲಿಪಾಳ್ಯ
ಮಡಿಕೇರಿ ಜೂ.3 NEWS DESK : ಮನ-ಮನೆಯಲ್ಲಿ ಸರಸ್ವತಿ ನೆಲೆಸಿದರೆ ಲಕ್ಷ್ಮಿ ತನಿಷ್ಟಕ್ಕೆ ಒಲಿಯುವಳು. ಲಕ್ಷ್ಮಿ ಖಾಲಿಯಾದರೂ ಸರಸ್ವತಿ ಸಂಪನ್ನಳು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ದೃಢವಾದ ನುಡಿಗಳನ್ನಾಡಿದರು. ಕಡಿಯತ್ತನಾಡು ಬಲಂಬೇರಿಯಲ್ಲಿರುವ ಪಾಲಂದಿರ ಮುಂದುಮನೆಯಲ್ಲಿ ನಡೆದ ಕೊಡವ ಪುಸ್ತಕ ಪತ್ತಾಯದ 11 ನೇ ಆವೃತ್ತಿಯನ್ನು ತೆರೆಯುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಚಯ್ಯ, ನಮ್ಮ ಬದುಕಿನಲ್ಲಿ ಓದಿ, ಕೇಳಿ, ತಿಳಿದು ಕಲಿತದ್ದು ಎಂದಿಗೂ ನಮ್ಮ ಮನಸ್ಸಿನಿಂದ ಮರೆಯಾಗುವುದಿಲ್ಲ. ಇದರೊಂದಿಗೆ ಪುಸ್ತಕಗಳಲ್ಲಿ ಅಡಗಿರುವ ಅಗಾದವಾದ ಜ್ಞಾನ ಎಂದಿಗೂ ಮಾಸುವುದಿಲ್ಲ. ಆದ್ದರಿಂದ ಪುಸ್ತಕದ ಜ್ಞಾನ ಎಂಬುವುದು ಒಳ್ಳೆಯ ಸಂಸ್ಕಾರ-ಸಂಸ್ಕೃತಿಗೆ ದಾರಿ ತೋರಿಸಬಲ್ಲದು. ಕೊಡವರ ವಿಶೇಷ ಸಂಸ್ಕೃತಿ ಇಡೀ ಜನಾಂಗದ ಹೆಸರನ್ನು ಎತ್ತಿ ಹಿಡಿಯಲು ಕಾರಣವಾಗಿದೆ. ಹೀಗಿರುವಾಗ ದಿನಕ್ಕೆ ಅರ್ಧ ಗಂಟೆಗಳ ಸಮಯವಾದರೂ ಮೊಬೈಲನ್ನು ದೂರವಿಟ್ಟು ಪುಸ್ತಕ ಓದುವ ಸಂಸ್ಕøತಿ ಬೆಳೆಸಿಕೊಳ್ಳುವುದು ಉತ್ತಮ ಎಂದರು. ಮುಂದುವರಿದು ಮಾತನಾಡಿದ ಅವರು, ಪಾಲಂದಿರ ಕುಟುಂಬದ ಹಿನ್ನಲೆ, ಹಿರಿಯರ ಸಾಮಾಜಿಕ, ಸಾಂಸ್ಕøತಿಕ ಕ್ಷೇತ್ರದಲ್ಲಿ ನೀಡಿರುವ…
ಮಡಿಕೇರಿ NEWS DESK ಜೂ.3 : ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸ್ಥಳೀಯ ಆದಿಮಸಂಜಾತ ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ ಮಾಡಬೇಕು, 2027ರ ಜನಗಣತಿ ಹಾಗೂ ರಾಷ್ಟಿçÃಯ ಜಾತಿ ಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು. ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಯಲ್ಲಿ ಸಂಶಯಾಸ್ಪದ ಪೌರತ್ವ ಹೊಂದಿರುವವರನ್ನು ಸೇರ್ಪಡೆಗೊಳಿಸುತ್ತಿರುವುದರಿಂದ ಕೊಡವ ಭೂಮಿಯು ದೊಡ್ಡ ಪ್ರಮಾಣದ ಜನಸಂಖ್ಯಾ ಬದಲಾವಣೆಯನ್ನು ಎದುರಿಸುತ್ತಿದೆ. ಈ ಅಕ್ರಮ ಮತದಾರರ ಗುರುತಿನ ಚೀಟಿಗಳೇ ಕೊಡವರ ರಾಜಕೀಯ ಅಸ್ತಿತ್ವದ ವಿರೂಪಕ್ಕೆ ಮೂಲ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿಯೊಬ್ಬ ಮತದಾರನನ್ನು ಭೌತಿಕವಾಗಿ ಪರಿಶೀಲಿಸಲು ಕೊಡಗು ಜಿಲ್ಲೆಯಲ್ಲಿ ಬೂತ್ ಮಟ್ಟದ ‘ವಿಶೇಷ ತೀವ್ರ ಪರಿಷ್ಕರಣೆ’ ನಡೆಸಬೇಕು. ಕೊಡವ ಭೂಮಿಯ ಮಣ್ಣಿಗೆ ಸಂಬAಧಿಸಿದ 1971ರ ಪೂರ್ವದ ಸಿಂಧು ಪೌರತ್ವ/ಪೂರ್ವಜರ ದಾಖಲೆಗಳನ್ನು…
ಮಡಿಕೇರಿ NEWS DESK ಜೂ.3 : ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಇಂದಿರಾಗಾoಧಿ ವೃತ್ತ ಚೌಕಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಾಂಗ್ರೆಸ್ ನಗರಾಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಘೋಷಣೆಗಳನ್ನು ಕೂಗಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಶಿಕಲಾ, ಕಾಂಗ್ರೆಸ್ ಮುಖಂಡರುಗಳಾದ ಕಲೀಲ್ ಬಾಷಾ, ಯಶ್ ದೋಲ್ಪಾಡಿ, ಫ್ಯಾನ್ಸಿ ಪಾರ್ವತಿ, ದಿನೇಶ್ ಶೆಟ್ಟಿ, ಚಂದ್ರಶೇಖರ್ ಆರ್.ಪಿ, ಮುದ್ದುರಾಜು, ರವುಫ್ ಅಹಮದ್, ಕೋಚನ ಚೇತನ್, ಪುಷ್ಪ ಪೂರ್ಣಚ್ಚ, ನಂದ, ಸುಬ್ರಮಣಿ ಎಚ್.ಕೆ, ಜಿ.ಆರ್.ರಾಜು, ವಿ.ಕೆ.ನಜಿರ್ ಹುಸೇನ್, ಸದಾ ಮುದ್ದಪ್ಪ, ಜಗದೀಶ್ ಜಿ.ಸಿ, ಪವಿತ್ರ, ವಿಮಲಾ, ಪ್ರೇಮಾ, ಲೀಲಾ ಶೇಷಮ್ಮ,…






