ಲೇಖಕ: admin

ಮಡಿಕೇರಿ NEWS DESK  ಫೆ.21 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.6 ರಿಂದ ಏ.19 ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾವಳಿ ಗೋಣಿಕೊಪ್ಪದಲ್ಲಿ ನಡೆಯಲಿದೆ. ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿದ್ದು, 175 ಕ್ಕೂ ಅಧಿಕ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಲಿದ್ದಾರೆ. ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಗಾಗಿ ಫೆ.21 ರಂದು ಮಾಯಮುಡಿಯ ಎಲ್ಲೋ ಬೇಂಬೋ ರೆಸಾರ್ಟ್ ನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಟೀಮ್ ಕೊಡವ ಟ್ರೈಬ್‌, ಕೂರ್ಗ್ ಬ್ಲಾಸ್ಟರ್ಸ್, ಟೀಮ್ ಲಿವರೇಜ್, ಕೂರ್ಗ್ ಯುನೈಟೆಡ್, ಪ್ರಗತಿ ಕ್ರಿಕೆಟ್ ಅಕಾಡೆಮಿ, ಎಂಟಿಬಿ ರಾಯಲ್ಸ್, ಕೊಡವ ರೈಸಿಂಗ್ ಸ್ಟರ‍್ಸ್, ಅಂಜಿಗೇರಿ ನಾಡ್, ಕೂರ್ಗ್ ಟೈಟಾನ್ಸ್ ಹಾಗೂ ಬ್ಲೇಜ಼್ ಬ್ರಿಗೇಡ್ ತಂಡಗಳು ಪಾಲ್ಗೊಳ್ಳಲಿವೆ. ಗೋಣಿಕೊಪ್ಪದ ಕಾವೇರಿ ಕಾಲೇಜು ಮೈದಾನದಲ್ಲಿ ಏ.6 ರಿಂದ 14 ದಿನಗಳ ಕಾಲ ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಎಲ್ಲಾ ಕೊಡವ ಭಾಷಿಕ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಕೊಡಗು ಮಾತ್ರವಲ್ಲದೆ ಜಿಲ್ಲೆಯ ಹೊರಗೆ ನೆಲೆಸಿರುವ…

Read More

ಮಡಿಕೇರಿ ಫೆ.20 NEWS DESK : ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಮೇ 9 ಮತ್ತು 10 ರಂದು ನಡೆಯಲಿರುವ ಮೂರನೇ ರಾಷ್ಟ್ರೀಯ ಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯ ಕರಪತ್ರ (Broucher) ಬಿಡುಗಡೆಗೊಂಡಿತು. ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ವಕೀಲರಾದ ಕೆ.ವಿ.ಮನೋಹರ್ ಪುತ್ತೂರು ಕರಪತ್ರವನ್ನು ಬಿಡುಗಡೆಗೊಳಿಸಿ ಕಾನೂನು ಮಹಾವಿದ್ಯಾಲಯದಲ್ಲಿ ಅಣುಕು ನ್ಯಾಯಾಲಯ ಸ್ಪರ್ಧೆಗಳ ಪ್ರಾಮುಖ್ಯತೆ ಮತ್ತು ವಿಶಿಷ್ಟತೆಯನ್ನು ವಿವರಿಸಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ನಿರ್ದೇಶಕ ಡಾ. ಬಿ.ಕೆ.ರವೀಂದ್ರ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇವರು ಅಣುಕು ನ್ಯಾಯಾಲಯದ ಸಮಿತಿಯನ್ನು ಘೋಷಿಸಿದರು. ಉಡುಪಿ ಸ್ಟೇರಾ ಎಲ್ ಎಲ್ ಸಿ ಲೀಗಲ್ ಎಕ್ಸಿಕ್ಯೂಟಿವ್ ಮನೀಶ್ ಕೆ ಸಾಲಿಯಾನ್ ಅಣುಕು ನ್ಯಾಯಾಲಯದ ರೂಪುರೇಷೆಗಳನ್ನು ವಿವರಿಸಿದರು. ಕಾಲೇಜಿನ ಸಂಚಾಲಕರಾದ ಕೆ.ಎಂ.ವಿಜಯನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಸಹಾಯಕ ಕಾರ್ಯನಿರ್ವಣಾಧಿಕಾರಿ ವೆಂಕಟರಮಣ ರಾವ್, ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲರಾದ ಎ.ಪಿ.ಅಕ್ಷತಾ, ಸಹಾಯಕ ಪ್ರಾಧ್ಯಾಪಕರಾದ ಸುಭಾಷಿನಿ ಜೆ, ಸಂಗೀತಾ ಎಸ್.ಎಂ.,…

Read More

ಮಡಿಕೇರಿ ಫೆ.20 NEWS DESK : ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತಾವು ಈಶ್ವರ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಚೆವೂಟು ಬಾಳಿಯಾಡ ಐನ್ ಮನೆಯ ಪಟ್ಟಿಲ್ ಮುಡಿ ತೆರೆ ಉತ್ಸವದಲ್ಲಿ ಭಾಗವಹಿಸಿದರು.  ಇದೇ ಸಂದರ್ಭ ಬಾಳಿಯಾಡ ಕುಟುಂಬದ ಹಿರಿಯರು ತಮ್ಮ ಕುಟುಂಬದ ಪರವಾಗಿ ಶಾಸಕರನ್ನು ಸನ್ಮಾನಿಸಿ, ಶಾಸಕರು ನೀಡುತ್ತಿರುವ ಅನುದಾನಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಧನ್ಯವಾದಗಳು ಸಲ್ಲಿಸಿದರು. ನಾಪೋಕ್ಲು ವಲಯ ಅಧ್ಯಕ್ಷರಾದ ಕುಶಾಲಪ್ಪ, ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ಶಾಬಾ ತಿಮ್ಮಯ್ಯ, ಬಾಳಿಯಾಡ ಕರುಣ್ ಕಾಳಪ್ಪ, ಬಿ.ಕೆ ಸುಬ್ರಮಣಿ, ಹರೀಶ್, ದಿವ್ಯ, ಪ್ರತೀಶ್, ಅಪ್ಪ ಸ್ವಾಮಿ, ಪೂಣಚ್ಚ, ಕಡಿಯತ್ ಊರಿನವರು, ಅಧ್ಯಕ್ಷರಾದ ನಟೋಳಂಡ ಚರ್ಮಣ್ಣ, ದೇವತಕ್ಕ, ಬಸಪ್ಪ, ತೊರೇರ ಮುದ್ದಾಯ್ಯ, ದೀಪು, ಸರ್ವ ಸದಸ್ಯರುಗಳು ಹಾಗೂ ಪ್ತಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.20 NEWS DESK  : ಮೈಸೂರ್ ನಲ್ಲಿ ನಡೆದ ರಾಜ್ಯಮಟ್ಟದ “ಚಿರಾಯು ಸ್ಟಾರ್ ಚಾಂಪಿಯನ್ ಶಿಪ್-2026” ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕೂರ್ಗ್ ವಿಂಗ್ಸ್ ಆಫ್ ಫ್ಯಾಷನ್ ಡ್ಯಾನ್ಸ್ ಸ್ಟುಡಿಯೋಗೆ ಸೂಪರ್ ಮಾಮ್ ಕ್ಯಾಟಗರಿಯಲ್ಲಿ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

Read More

ಪಾಲಿಬೆಟ್ಟ ಫೆ.19 NEWS DESK : ಅಮ್ಮತ್ತಿ-ಪಾಲಿಬೆಟ್ಟ ಲಯನ್ಸ್ ಕ್ಲಬ್ ಗೆ ಗವರ್ನರ್ ಕುಡ್ಪಿ ಅರವಿಂದ ಶೆಣೈ ವಾರ್ಷಿಕ ಭೇಟಿ ಸಮಾರಂಭದಲ್ಲಿ ಪಾಲ್ಗೊಂಡರು. ಪಾಲಿಬೆಟ್ಟ ಅನುಗ್ರಹ ಲಯನ್ಸ್ ಭವನ ದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆ ಜಗತ್ತಿನ 210 ದೇಶಗಳಲ್ಲಿ ಸುಮಾರು 50 ಸಾವಿರ ಗ್ರಾಮಗಳಲ್ಲಿ ಕೆಲಸ ನಿರ್ವಹಿಸುತ್ತಿದೆ. 14 ಲಕ್ಷ ಸದಸ್ಯತ್ವದಲ್ಲಿ ಭಾರತದಲ್ಲಿ 3 ಲಕ್ಷ ಸದಸ್ವತ ಹೊಂದಿದ್ದು, ಲಯನ್ಸ್ 317 ಡಿ ಸಂಸ್ಥೆಗಳಲ್ಲಿ ನಾಲ್ಕುವರೆ ಸಾವಿರ ಸದಸ್ಯರಿದ್ದಾರೆ ಜಿಲ್ಲೆಯಲ್ಲಿ 12 ಕ್ಲಬ್ ಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಐವತ್ತು ವರ್ಷಗಳು ಪೂರೈಸಿರುವ ಪಾಲಿಬೆಟ್ಟ ಲೈನ್ಸ್ ಕ್ಲಬ್ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಪರಿಸರ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸಮೀಪದ ಅಮ್ಮತ್ತಿ ಕ್ಲಬ್ ಕೂಡ ಎಂಟು ವರ್ಷಗಳಿಂದ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದ ಅವರು ಸಂಸ್ಥೆ ಮೂಲಕ ಸಂಘಟಿತರಾಗಿ ಸೇವಾ…

Read More

ಮಡಿಕೇರಿ ಫೆ.20 NEWS DESK : ರೋಟರಿ ದಿನಾಚರಣೆ ಅಂಗವಾಗಿ ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಫೆ.23 ರಂದು ಸೋಮವಾರ ಮಹಿಳೆಯರಿಗಾಗಿ ರಕ್ತದಾನ ಶಿಬಿರ ಹಾಗೂ ಕೃತಕ ಕೈಕಾಲು ಜೋಡಣಾ ಶಿಬಿರ ಆಯೋಜಿಸಲಾಗಿದೆ. ನಗರದಲ್ಲಿಂದು ಸುದ್ಗಿಗೋಷ್ಟಿಯಲ್ಲಿ ಮಾಹಿತಿ ನೀಡಿದ ರೋಟರಿ ಮಿಸ್ಟಿ ಹಿಲ್ಸ್ ನ ವೃತ್ತಿ ಸೇವಾ ಯೋಜನಾ ನಿದೇ೯ಶಕ ಡಾ.ಚೆರಿಯಮನೆ ಪ್ರಶಾಂತ್, ಮಹಿಳೆಯರೂ ರಕ್ತದಾನ ಮಾಡಬಹುದು ಎಂದು ಸ್ತ್ರೀಯರನ್ನು ರಕ್ತದಾನಕ್ಕೆ ಪ್ರೇರೇಪಿಸುವ ನಿಟ್ಟಿನಲ್ಲಿ ಮಹಿಳೆಯರಿಗಾಗಿಯೇ ವಿಶೇಷವಾಗಿ ರಕ್ತದಾನ ಶಿಬಿರವನ್ನು ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿಸಲಾಗಿದೆ. ಅಂತೆಯೇ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಯ ಸಹಭಾಗಿತ್ವದಲ್ಲಿ 22 ಮಂದಿಗೆ ಕೖತಕವಾದ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ರೋಟರಿ ದಿನಾಚರಣೆ ಸಂದಭ೯ ಫೆ.23 ರಂದು ನಗರದ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ರೋಟರಿ ಜಿಲ್ಲೆ 3092 ನ ಮಾಜಿ ಗವನ೯ರ್ ನಾಗೇಂದ್ರ ಪ್ರಸಾದ್, ಕೊಡಗು ವೈದ್ಯಕೀಯ ಕಾಲೇಜಿನ ರಕ್ತ ನಿಧಿ…

Read More

ಮಡಿಕೇರಿ ಫೆ.20 NEWS DESK : ಕಾರ್ಮಿಕರು ಹಾಗೂ ಜೀಪಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ನಡೆದಿದೆ. ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆಯೊಂದು ಏಕಾಏಕಿ ದಾಳಿ ಮಾಡಿದೆ. ಕಾರ್ಮಿಕರು ಭಯಭೀತರಾಗಿ ಓಡುವ ಸಂದರ್ಭ ಕಾರ್ಮಿಕ ಮಹಿಳೆ ಸುನಿತಾ ಎಂಬುವವರು ಬಿದ್ದು ಗಂಭೀರ ಗಾಯಗಳಾಗಿವೆ. ಇವರಿಗೆ ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಫಿ ತೋಟದಿಂದ ರಸ್ತೆಗೆ ಬಂದ ಕಾಡಾನೆ ಪ್ರವೀಣ ಎಂಬುವವರಿಗೆ ಸೇರಿದ ಜೀಪಿನ ಮೇಲೆ ದಾಳಿ ಮಾಡಿ ಜಖಂಗೊಳಿಸಿದೆ. ಕಾಡಾನೆಯನ್ನು ಕಾಡಿಗಟ್ಟಲು ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೂ ದಾಳಿಗೆತ್ನಿಸಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಕಾರ್ಯಾಚರಣೆ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ಕಾಡಾನೆಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಕಾರ್ಮಿಕ ಮುಖಂಡರು ಆಗ್ರಹಿಸಿದ್ದಾರೆ.

Read More

ಮಡಿಕೇರಿ ಫೆ.20 NEWS DESK : ಕಾಫಿ ತೋಟದಿಂದ ಏಕಾಏಕಿ ರಸ್ತೆಗೆ ಬಂದ ಕಾಡುಕೋಣ ಡಿಕ್ಕಿಯಾದ ಪರಿಣಾಮ ಗೂಡ್ಸ್ ಆಟೋ ಪಲ್ಟಿಯಾದ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಕಾರ್ಮಿಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಡುಕೋಣಕ್ಕೂ ಗಾಯಗಳಾಗಿದ್ದು, ಚಿಕಿತ್ಸೆಗೆಂದು ಆನೆಚೌಕೂರು ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ವಿರಾಜಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ತಿತಿಮತಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್, ಆನೆ ಚೌಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ NEWS DESK ಫೆ.20 : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ (ರಿ) ವತಿಯಿಂದ ಇದೇ ಏ.24 ಮತ್ತು 25 ರಂದು ನಡೆಯಲಿರುವ ಸಂಭ್ರಮದ ಕೆಸಿಎ ಕ್ರಿಕೆಟ್ ಟೂರ್ನಿಯ ಪೂರ್ವಭಾವಿ ಸಭೆ ವಿರಾಜಪೇಟೆಯಲ್ಲಿ ನಡೆಯಿತು. ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳು ಕ್ರಿಕೆಟ್ ಟೂರ್ನಿಯ ಯಶಸ್ಸಿಗೆ ಅಗತ್ಯವಿರುವ ರೂಪರೇಷಗಳ ಕುರಿತು ಚರ್ಚಿಸಿದರು. ಸಮುದಾಯದ ಸಂಘಟನೆ ಹಾಗೂ ಮನೋರಂಜನೆಗಾಗಿ ಕ್ರಿಕೆಟ್ ಟೂರ್ನಿಯೊಂದಿಗೆ ಹಗ್ಗಜಗ್ಗಾಟ, ಥ್ರೋಬಾಲ್ ಮತ್ತು ಶಾಟ್ ಪೂಟ್ ಸ್ಪರ್ಧೆಯನ್ನು ಎರಡು ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಯಿತು. ಕೆಸಿಎ ಕ್ರಿಕೆಟ್ ಟೂರ್ನಿಯ ವಿಜೇತ ತಂಡಕ್ಕೆ ರೂ.1 ಲಕ್ಷ ಮತ್ತು ದ್ವಿತೀಯ ರೂ.50 ಸಾವಿರ ನಗದು ಬಹುಮಾನ ನೀಡಲಾಗುವುದು. ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗಗಳಲ್ಲಿ ಹಗ್ಗಜಗ್ಗಾಟ, ಶಾಟ್ ಪೂಟ್ ಮತ್ತು ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯ ನಡೆಯಲಿದೆ. ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ಪ್ರತಿಯೊಂದು…

Read More

ಮಡಿಕೇರಿ NEWS DESK ಫೆ.20 : 2026-27ನೇ ಸಾಲಿನ ಬಜೆಟ್‌ನಲ್ಲಿ ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಶಾಸಕ ಡಾ.ಮಂತರ್ ಗೌಡ ಅವರಲ್ಲಿ ಮನವಿ ಮಾಡಿಕೊಂಡಿದೆ. ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಮಡಿಕೇರಿ ನಗರಕ್ಕೆ ಭೇಟಿ ನೀಡುವ ಪ್ರವಾಸಿಗರ ಹಿತದೃಷ್ಟಿಯಿಂದ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಮತ್ತು ನಗರದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯ ಯೋಜನೆಗಳಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕೆಂದು ಕೋರಿದ್ದಾರೆ. *ಪ್ರಮುಖ ಬೇಡಿಕೆಗಳು* ಪ್ರವಾಸಿಗರಿಗೆ ಒಂದೇ ಸೂರಿನಡಿ ಮಾಹಿತಿ ಕೇಂದ್ರ, ಪ್ರವಾಸಿ ತಾಣಗಳ ಟಿಕೆಟ್ ಬುಕ್ಕಿಂಗ್ ಮತ್ತು ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸುವ ಸುಸಜ್ಜಿತವಾದ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರದ ಕಚೇರಿಯನ್ನು ಸ್ಥಾಪಿಸಬೇಕು. ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ಎಐ (ಕೃತಕ…

Read More