ಮಡಿಕೇರಿ ಸೆ.1 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1421 ಮತ್ತು ಸ್ಥಳೀಯ ವೃಂದದ 179 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಸೆ.6 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ ಸೆ.6 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಮಡಿಕೇರಿ ಮತ್ತು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಕೊಡಗು ವಿದ್ಯಾಲಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 1421 ಮತ್ತು ಸ್ಥಳೀಯ…
ಲೇಖಕ: admin
ವಿರಾಜಪೇಟೆ ಸೆ.1 NEWS DESK : ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟೈಲರಿಂಗ್ ವೃತ್ತಿಯನ್ನು ನಿರ್ವಹಿಸುತ್ತಿರುವ ಸುನಂದ ಎ.ಪಿ. ಅವರಿಗೆ ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಟೈಲರಿಂಗ್ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಯಂತ್ರೋಪಕರಣಗಳನ್ನು ವಿತರಿಸಿ, ಫಲಾನುಭವಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಘು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸೋಮವಾರಪೇಟೆ ಸೆ.1 NEWS DESK : ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಸ್ಥಳವಾದ ಹೊನ್ನಮ್ಮನ ಕೆರೆ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಯಿತು. ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ವಿ. ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ, ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕೆರೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ವೀರೇಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಗ್ರಾಮ ಸಮಿತಿಯ ಅಧ್ಯಕ್ಷ ವಸಂತ್ ಕುಮಾರ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಗೌಡಳ್ಳಿ, ಗಣಗೂರು, ನೇರುಗಳಲೆ, ಹಾನಗಲ್ಲು ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಎನ್ಆರ್ಎಲ್ಎಂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಸೇರಿದಂತೆ ಹಲವರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.1 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇದೇ ಸೆಪ್ಟೆಂಬರ್ 6 ರಂದು ನಡೆಯುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪೂರ್ವಸಿದ್ಧತೆಗಳ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಲು ಕ್ರಮವಹಿಸಬೇಕು, ಭದ್ರತೆ ವ್ಯವಸ್ಥೆ ಬಿಗಿಗೊಳಿಸಬೇಕು, ಹಾಗೆಯೇ ಪರೀಕ್ಷಾ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸುವಂತೆ ತಿಳಿಸಿದರು. ಪರೀಕ್ಷಾ ದಿನದಂದು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಪರೀಕ್ಷಾ…
ಮಡಿಕೇರಿ NEWS DESK ಸೆ.1: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ವತಿಯಿಂದ 31ನೇ ವಾರ್ಷಿಕ ಸಾರ್ವಜನಿಕ ಕೈಲ್ಪೊವ್ದ್ ಆಚರಣೆ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ಮಂದ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಸಂವಿಧಾನದ ಅಡಿಯಲ್ಲಿ ವಿಶೇಷ ಸ್ಥಾನಮಾನಕ್ಕಾಗಿ ಕೊಡವರು ಮುಂದಿಟ್ಟಿರುವ ಹಕ್ಕೊತ್ತಾಯವು ಸ್ಥಳೀಯ ಕೊಡವರ ಸ್ವಾಭಾವಿಕ ಹಾಗೂ ನ್ಯಾಯಸಮ್ಮತ ಹಕ್ಕಾಗಿದೆ. ಈ ಗುರಿ ತಾರ್ಕಿಕ ಅಂತ್ಯ ತಲುಪುವವರೆಗೂ ಸಿಎನ್ಸಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಕೊಡವ ಸಂಸ್ಕೃತಿಯಲ್ಲಿ ಬಂದೂಕು, ಭೂತಾಯಿ, ಯೋಧತ್ವ, ಮಂದ್, ದೇವಕಾಡ್, ಪಿತ್ರಾರ್ಜಿತ ಭೂಮಿ ಹಾಗೂ ಕೊಡವ ವಂಶಾವಳಿಗಳು ಅವಿಭಾಜ್ಯ ಅಂಗಗಳಾಗಿವೆ. ಪೂರ್ವಜರ ಪರಂಪರೆ ಹಾಗೂ ಯೋಧ ಸಂಸ್ಕೃತಿಯ ಸಂಕೇತವಾಗಿ ಕೈಲ್ಪೊವ್ದ್ ಸಂದರ್ಭದಲ್ಲಿ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಸಂವಿಧಾನದ 51A(f) ಅಡಿಯಲ್ಲಿ ಪ್ರಾಚೀನ ಹಾಗೂ ಅತಿ ಸಣ್ಣ ಜನಾಂಗೀಯ ಸಮುದಾಯದ ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸುವುದು ರಾಜ್ಯ ಹಾಗೂ ಜನರ ಕರ್ತವ್ಯವಾಗಿದೆ. ಸಂವಿಧಾನದ 32ನೇ ವಿಧಿಯಡಿ ಕೊಡವರ ಕುಂದುಕೊರತೆಗಳಿಗೆ ಸಾಂವಿಧಾನಿಕ…
ಮಡಿಕೇರಿ, NEWS DESK ಸೆ.೦1: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿನಾಯಿಗಳ ಉಪಟಳವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೀದಿನಾಯಿಗಳಿಗೆ ರೇಬಿಸ್ ಲಸಿಕೆ ಹಾಕುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವುದರ ಜೊತೆಗೆ ನಗರವನ್ನು ರೇಬಿಸ್ ಮುಕ್ತವನ್ನಾಗಿಸುವ ಉದ್ದೇಶದಿಂದ ನಗರಸಭೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ನಗರದ ವಿವಿಧ ಭಾಗಗಳಿಂದ ಇಂದು 43 ಬೀದಿನಾಯಿಗಳನ್ನು ಸೆರೆಹಿಡಿದು, ರೇಬಿಸ್ ಲಸಿಕೆ ನೀಡುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯ ಕೈಗೊಳ್ಳಲಾಯಿತು. ಬೀದಿನಾಯಿಗಳ ಉಪಟಳದಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಕಡಿಮೆ ಮಾಡುವ ಹಾಗೂ ರೇಬಿಸ್ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮಡಿಕೇರಿ, NEWS DESK ಸೆ. 1-.ನಗರದ ಕೊಡಗು ವಿದ್ಯಾಲಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಸ್ಮರಣಾರ್ಥ ಈದ್ ಮಿಲಾದ್ ಕಾರ್ಯಕ್ರಮ ಆಚರಿಸಲಾಯಿತು. ಈದ್ ಮಿಲಾದ್ನ ಮಹತ್ವ ಹಾಗೂ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನ ಸಂದೇಶಗಳ ಕುರಿತು ಸುದೀಪ್ತ ಬೆಳ್ಳಿಯಪ್ಪ ಕೆ. ಮಾತನಾಡಿದರು. ಶಿಕ್ಷಕಿ ಶಹೀರಾ ಮಾತನಾಡಿ ದಯೆ, ಸಹಾನುಭೂತಿ, ಸೌಹಾರ್ದತೆ, ಪೋಷಕರು ಹಾಗೂ ಶಿಕ್ಷಕರಿಗೆ ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ 6 ನೇ ತರಗತಿಯ ವಿದ್ಯಾರ್ಥಿಗಳು ಗುಂಪು ಗಾಯನ, ದಫ್ ಹಾಗೂ ಕವ್ವಾಲಿ ನೃತ್ಯ-ಸಂಗೀತವನ್ನು ಪ್ರಸ್ತುತಪಡಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಎಲ್ಲರಿಗೂ ಗೌರವ ನೀಡುವಂತಹ ಉತ್ತಮ ಮೌಲ್ಯಗಳು ಹಾಗೂ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು. ಆಡಳಿತ ಮುಖ್ಯಸ್ಥ ರವಿ ಪಿ. ಉಪಸ್ಥಿತರಿದರು. ಅಮೃತ ನೀಲಮ್ಮ ಹಾಗೂ ಆಂಡ್ರಿಯಾ ಫೆರ್ನಾಂಡಿಸ್ ನಿರೂಪಿಸಿ, ಎಂ. ದಕ್ಷಿಕಾ ಬೋಪಣ್ಣ ಸ್ವಾಗತಿಸಿದರು. ಮೋನಾಲಿ ಪ್ರಸಾದ್ ವಂದಿಸಿದರು.
ಸುಂಟಿಕೊಪ್ಪ, NEWS DESK ಸೆ.1: ಯುವಶಕ್ತಿ ದಾರಿ ತಪ್ಪದಂತೆ ಹಿರಿಯರು ಹಾಗೂ ಸಮಾಜವು ನಿಸ್ವಾರ್ಥ ಸಂಘಟನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ಹೇಳಿದರು. ಜಾತಿ, ಧರ್ಮ ಹಾಗೂ ರಾಜಕೀಯ ರಹಿತವಾಗಿ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸುವ ಉದ್ದೇಶದಿಂದ ನೂತನವಾಗಿ ರಚನೆಯಾದ ‘ವೇವ್’ ಸಂಘಟನೆಯ ಅಧಿಕೃತ ಉದ್ಘಾಟನೆಯನ್ನು ಸುಂಟಿಕೊಪ್ಪದಲ್ಲಿ ನೆರವೇರಿಸಿ ಅವರು ಮಾತನಾಡಿದರು. ಕೊರೊನಾ ಮಹಾಮಾರಿ ಹಾಗೂ ಪ್ರಕೃತಿ ವಿಕೋಪದ ಭೂಕುಸಿತದ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು 300–400 ಕುಟುಂಬಗಳಿಗೆ ನೆರವಾದ ಕರುಣಾಮಯಿ ಯುವಕರ ತಂಡ ಇದೀಗ ‘ವೇವ್’ ಎಂಬ ಅಧಿಕೃತ ರೂಪ ಪಡೆದುಕೊಂಡಿದೆ. ಕಡಲಿನ ಅಲೆಯಂತೆ ಈ ಬಳಗದ ನಿಸ್ವಾರ್ಥ ಸೇವೆ ನಿರಂತರವಾಗಿರಲಿ ಎಂದು ಹಾರೈಸಿದರು. ಸಂಘಟನೆಯ ಸಂಚಾಲಕರಾಗಿ ಕೆ.ಎ. ಲತೀಫ್ ಹಾಗೂ ವಕೀಲ ಫರಾಝ್ ಉಸ್ಮಾನ್ ಅವರನ್ನು ನೇಮಕಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್, ಕೋಶಾಧಿಕಾರಿ ಕೆ.ಎಸ್. ಅನಿಲ್ ಕುಮಾರ್,…
ಮಡಿಕೇರಿ, NEWS DESK ಸೆ.1 : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯ ಪರಿಣಾಮ ಭಾಗಮಂಡಲ ಕುಂದಚೇರಿ ಗ್ರಾಮದಲ್ಲಿ ಸಣ್ಣ ಪ್ರಮಾಣದ ಬೆಟ್ಟ ಕುಸಿತ ಸಂಭವಿಸಿದೆ. ಕುಂದಚೇರಿ ಗ್ರಾಮದ ಪೂವಲಮಣಿ ಎಂಬಲ್ಲಿ ಮಣ್ಣು ಹಾಗೂ ಸಣ್ಣ ಗಾತ್ರದ ಕಲ್ಲುಗಳು ಬೆಟ್ಟದ ಮೇಲ್ಭಾಗದಿಂದ ಕೆಳಕ್ಕೆ ಕುಸಿದು ಬಿದ್ದಿವೆ. ಬೆಟ್ಟದ ಕೆಳಭಾಗದಲ್ಲಿ ಜನವಸತಿ ಇದ್ದು ಗ್ರಾಮಸ್ಥರು ಆತಂಕಗೊAಡಿದ್ದಾರೆ. ಮಾಹಿತಿ ತಿಳಿದ ಎನ್ಡಿಆರ್ಎಫ್ ತಂಡದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದ ಪ್ರಸ್ತುತ ಸ್ಥಿತಿ, ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆ ಹಾಗೂ ಸ್ಥಳದಲ್ಲಿರುವ ನೈಜ ಸ್ಥಿತಿಯ ಕುರಿತು ನಿವಾಸಿಗಳಿಂದ ಮಾಹಿತಿ ಕಲೆ ಹಾಕಿದರು. ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಟ್ಟದ ಕೆಳಭಾಗದಲ್ಲಿ ವಾಸವಾಗಿದ್ದ ಎರಡು ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮಳೆ ಮುಂದುವರೆದಲ್ಲಿ ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು…
ಸೋಮವಾರಪೇಟೆ, NEWS DESK ಸೆ.01: ಪಟ್ಟಣದ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಸೋಮವಾರ ಸಂಜೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣಕ್ಕೆ ಸರ್ಕಾರದಿಂದ ಸುಮಾರು 27 ಲಕ್ಷ ರೂ ಗಳ ಅನುದಾನ ಮಂಜೂರು ಮಾಡಲಾಗಿದೆ. ಚಾಲಕರು ಮತ್ತು ಆಟೋ ಮಾಲೀಕರ ಬಹುದಿನಗಳ ಬೇಡಿಕೆಯಾಗಿದ್ದ ಈ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬAಧಿಸಿದ ಇಂಜಿನಿಯರ್ಗಳಿಗೆ ಸೂಚಿಸಲಾಗಿದೆ ಎಂದರು. ಚಾಲಕ ವೃತ್ತಿ ಸುಲಭವಾದುದಲ್ಲ. ಪ್ರತಿನಿತ್ಯ ಬಿಸಿಲು, ಮಳೆ ಎನ್ನದೆ ಸಾರ್ವಜನಿಕರಿಗೆ ಸೇವೆ ನೀಡುವ ಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಬಾಡಿಗೆ ವಾಹನಗಳು ಹಾಗೂ ಆಟೋಗಳನ್ನು ನಿಲುಗಡೆ ಮಾಡಲು ಸೂಕ್ತ ವ್ಯವಸ್ಥೆ ಇಲ್ಲದೆ ಚಾಲಕರು ಪರದಾಡುತ್ತಿರುವುದು ಗಮನಕ್ಕೆ ಬಂದಿದೆ. ಮಳೆಯಲ್ಲಿಯೇ ವಾಹನಗಳನ್ನು…






