ಮಡಿಕೇರಿ ಆ.7 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ತಾಯಿಯ ಎದೆಹಾಲಿನ ಮಹತ್ವ ಹಾಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸೋಮವಾರಪೇಟೆಯ ಮೇಲ್ವಿಚಾರಕಿ ಸಾವಿತ್ರವ್ವ ಉದ್ಘಾಟಿಸಿ ಮಾತನಾಡಿ, ತಾಯಿಯ ಎದೆಹಾಲಿನ ಮಹತ್ವ, ಮಗುವಿನ ಪೋಷಣೆಯ ಸರಿಯಾದ ವಿಧಾನ ಹಾಗೂ ಜನನದಿಂದ ಆರು ತಿಂಗಳವರೆಗೆ ಮಗುವಿನ ಬೆಳವಣಿಗೆ ಅತ್ಯಂತ ವೇಗವಾಗಿ ನಡೆಯುವುದರಿಂದ ಈ ಅವಧಿಯಲ್ಲಿ ಮಗು ತಾಯಿಯ ಚಲನವಲನ ಗಮನಿಸಿ ಕಲಿಯುತ್ತದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಮಹಿಳೆಯರ ಸಬಲೀಕರಣ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಅಕ್ಕ ಪಡೆ’ ಯೋಜನೆಯ ಕುರಿತು ಮಾಹಿತಿ ನೀಡಿದರು. ಮಹಿಳಾ ಸಿಬ್ಬಂದಿ…
ಲೇಖಕ: admin
ಮಡಿಕೇರಿ ಆ.7 NEWS DESK : ಆದಿವಾಸಿ ಜನಾಂಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಿಎಂ-ಜನ್ಮನ್ ಮತ್ತು ಡಿಎ-ಜೆಜಿಯುಎ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಪಿಎಂ-ಜನ್ಮನ್ ಮತ್ತು ಡಿಎ-ಜೆಜಿಯುಎ ಯೋಜನೆಗಳಡಿ ಮೂಲಸೌಕರ್ಯ, ವಸತಿ, ಕುಡಿಯುವ ನೀರು, ರಸ್ತೆ, ವಿದ್ಯುತ್, ಶಿಕ್ಷಣ, ಆರೋಗ್ಯ ಹಾಗೂ ಜೀವನೋಪಾಯ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿಯ ಕುರಿತು ಚರ್ಚಿಸಲಾಯಿತು. ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮ ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಈ ಸಂದರ್ಭ ಮಾತನಾಡಿದ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ ಅವರು, ಆಶ್ರಮ ಶಾಲೆಗಳಲ್ಲಿ ಕಲಿಯುತ್ತಿರುವ ಬುಡಕಟ್ಟು ಸಮುದಾಯದ ಮಕ್ಕಳಿಗೆ ಆಧಾರ್…
ಮಡಿಕೇರಿ ಆ.7 NEWS DESK : ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಆಗಸ್ಟ್ 10 ರಂದು ನಡೆಯಲಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಅಲ್ಪೆಂಡಝೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್. ಹಾದಿಮನಿ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಹಾಗೂ ಮಾಪ್ ಅಪ್ ದಿನದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ವಿವಿಧ ಇಲಾಖೆಗಳ ಸಹಕಾರ ಪಡೆದು ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯವಾಗಿದ್ದು, ಸಮಸ್ವಯದಿಂದ ಕಾರ್ಯ ನಿರ್ವಹಿಸುವಂತೆ ಕೋರಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು…
ಮಡಿಕೇರಿ ಆ.7 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಎರಡು ದಿನಗಳ ಅಂತರಶಾಲಾ ಚೆಸ್ ಪಂದ್ಯಾವಳಿಯಲ್ಲಿ ಅತ್ತೂರಿನ ಜ್ಞಾನಗಂಗಾ ರೆಸಿಡೆನ್ಸಿಯಲ್ ಶಾಲೆಯ ಪಿ.ಎಸ್. ಉನ್ನತ್ ಸಾರಥ್ಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಉನ್ನತ್ ಸಾರಥ್ಯ ಅವರ ಚೆಸ್ ಕ್ರೀಡಾಸಾಧನೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಕಾಯ೯ದಶಿ೯ಗಳು, ಟ್ರಸ್ಟಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ಶಾಲಾ ಸಿಬ್ಬಂದಿ ವಗ೯ ಅಭಿನಂದಿಸಿದ್ದಾರೆ.
ಮಡಿಕೇರಿ ಆ.7 NEWS DESK : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಐವರು ಆರೋಪಿಗಳನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಅತ್ತೂರು ಗ್ರಾಮದ ಎಸ್ಟೇಟ್ ವೊಂದರ ಅಸ್ಸಾಂ ಮೂಲದ ಕಾರ್ಮಿಕರು ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ಮಾಡಿ ಆರೋಪಿಗಳ ಸಹಿತ 6 ಕೆಜಿ 950 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದರು. ಅಸ್ಸಾಂ ರಾಜ್ಯದ ದರಾಂಗ್ ಜಿಲ್ಲೆಯ ಮಂಗಲ್ ದೋಹಿ ತಾಲ್ಲೂಕಿನ ಅಜತ್ ಆಲಿ (25), ನೂರ್ ಹಕ್ (23), ಅಜಿತಾಲಿ (24), ಅಸದೊಲ್ ಹಕ್ (34) ಹಾಗೂ ಅಸತುಲ್ಲಾ ಹಕ್ (25) ಬಂಧಿತ ಆರೋಪಿಗಳಾಗಿದ್ದಾರೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಎಸ್. ಗೋಣಿಕೊಪ್ಪ ಸಿಪಿಐ ಶಿವರಾಜ್.ಆರ್. ಮುದೋಳ್ ಅವರ ನೇತೃತ್ವದಲ್ಲಿ ಪಿ.ಎಸ್.ಐ ಕಾಳೇಗೌಡ, ತನಿಖಾ ವಿಭಾಗದ ಪಿ.ಎಸ್.ಐ. ವೆಂಕಟೇಶ್, ಎಎಸ್ಐ ಪಿ.ಟಿ.ಶ್ರೀನಿವಾಸ್, ಸಿಬ್ಬಂದಿಗಳಾದ ಮಹೇಂದ್ರ, ಗಿರೀಶ್, ಎನ್.ಎಸ್.ಲೊಕೇಶ್, ಸತೀಶ್, ಶುಭಂ, ರಘು, ಭರತ್ ಹಾಗೂ ಚಾಲಕ ಬಾಳಪ್ಪ ಅವರು…
ವಿರಾಜಪೇಟೆ, ಆ.6 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಆ.8 ರಂದು ನಡೆಯಲಿದೆ. ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಜಿಲ್ಲಾ ಖಜಾನೆ ಉಪ ನಿರ್ದೇಶಕರಾದ ಡಾ. ರಘುನಾಥ ಬಿ.ಎನ್. ಉದ್ಘಾಟಿಸಲಿದ್ದು, ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಪ್ರಾಸ್ತಾವಿಕ ನುಡಿ ನಡೆಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಘಟಕದ ಮಹಾಪೋಷಕರಾದ ಮಲ್ಲಿಕಾರ್ಜುನ ತೊದಲಬಾಗಿ, ಗೌರವಾಧ್ಯಕ್ಷೆ ಎಲ್.ಐ. ಲಕ್ಕಮ್ಮನವರ್, ರಾಜ್ಯಾಧ್ಯಕ್ಷೆ ರಮಾ ಆರ್., ಪ್ರಧಾನ ಕಾರ್ಯದರ್ಶಿ ಪರ್ವೀನ್ ಬಾನು, ಹಿರಿಯ ಉಪಾಧ್ಯಕ್ಷ ಪ್ರೊ. ಬಸವರಾಜು ಕೆ., ಶಾಮಸುಂದರ್ ಸೇರಿದಂತೆ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಮ್ಮ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತ್ಯ, ಕಲೆ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರಿಗೆ ‘ಆದರ್ಶ ಸೇವಾ ರತ್ನ’…
ಮಡಿಕೇರಿ ಆ.6 NEWS DESK : ನಗರದ ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ಮಾಹಿತಿ ಪಡೆದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ಮಾಹಿತಿ ನೀಡಿ ಪ್ರಸ್ತುತ ಗೋಶಾಲೆಯಲ್ಲಿ 35 ಜಾನುವಾರುಗಳಿದ್ದು, ಜಾನುವಾರುಗಳ ಮೇವಿಗಾಗಿ ಭತ್ತದ ಒಣ ಹುಲ್ಲನ್ನು ಖರೀದಿಸಲು ಪ್ರತೀ ವರ್ಷ ಇ-ಟೆಂಡರ್ ಕರೆದು ಬೇಡಿಕೆಗೆ ಅನುಗುಣವಾಗಿ ಖರೀದಿಸಿ ಶೇಖರಣೆ ಮಾಡಲಾಗುತ್ತಿದೆ ಎಂದರು. ಸರ್ಕಾರಿ ಗೋಶಾಲೆ ಮಡಿಕೇರಿಗೆ 8 ಎಕರೆ ಜಾಗ ಮಂಜೂರಾಗಿದ್ದು, ಇದರಲ್ಲಿ 2 ಎಕರೆ ಜಾಗಕ್ಕೆ ಮಾತ್ರ ಬೇಲಿ ನಿರ್ಮಿಸಲಾಗಿದೆ. ಹೆಚ್ಚುವರಿ ಜಾನುವಾರು ಕೊಠಡಿ ನಿರ್ಮಾಣಕ್ಕಾಗಿ ಮತ್ತು ಹೆಚ್ಚುವರಿ ಮೇವು ದಾಸ್ತಾನು ಕೊಠಡಿ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಗೋಶಾಲೆಯ ಅವರಣದಲ್ಲಿ ಇನ್ನೂ ಹೆಚ್ಚಿನ ಹಸಿರು ಮೇವು ಬೆಳೆಯಲು 2 ಎಕರೆ ಜಾಗಕ್ಕೆ ತಂತಿ ಬೇಲಿಯ ಅವಶ್ಯಕತೆ ಇದ್ದು, ಜಾನುವಾರುಗಳಿಗೆ ಜಿಲ್ಲೆಯಲ್ಲಿ ಪ್ರಸ್ತುತ 53 ವಾರಗಳಿಗೆ ಆಗುವಷ್ಟು ಮೇವು ಲಭ್ಯತೆ ಇದೆ. ಹಾಗಾಗಿ ಯಾವುದೇ ಸಮಸ್ಯೆ…
ಮಡಿಕೇರಿ ಆ.6 NEWS DESK : ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೂಡಿಗೆ ಕೊಡಗು ಇವರ ವತಿಯಿಂದ ಚೆಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 6 ದಿನಗಳ ಉಚಿತ ಇಡಿಪಿ ತರಬೇತಿಯನ್ನು ಮಡಿಕೇರಿ ಲೀಡ್ ಬ್ಯಾಂಕ್ ಚೀಫ್ ಮ್ಯಾನೇಜರ್ ಗಂಗಾಧರ ನಾಯ್ಕ್ ಅವರು ಉದ್ಘಾಟಿಸಿದರು. ಕೂಡಿಗೆ ಯೂನಿಯನ್ ಬ್ಯಾಂಕ್ ತರಬೇತಿ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ಕುಮಾರ ಅವರು ಪ್ರಾಸ್ತಾವಿಕವಾಗಿ ಮಾತಾನಾಡುತ್ತಾ ಈ ಆರು ದಿನಗಳಲ್ಲಿ ನಡೆಯುವ ತರಬೇತಿಯಲ್ಲಿ ಫಿನಾಯಿಲ್, ಸೋಪ್ ಆಯಿಲ್, ಸೋಪ್ ಪೌಡರ್, ಹಾರ್ಪಿಕ್, ಮೇಣದಬತ್ತಿ, ಸರ್ಕಾರಿ ಸಾಲ ಸೌಲಭ್ಯಗಳು ಹಾಗೂ ಇನ್ನೂ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮಾತಾನಾಡಿ, ಮಹಿಳೆಯರು ಇದರ ಸದುಪಯೋಗ ಪಡೆದು ಸ್ವ ಉದ್ಯೋಗ ಮಾಡಿ ಸ್ವಾವಲಂಬಿಗಳಾಗಿ ಎಂದು ಮಾರ್ಗದರ್ಶನ ನೀಡಿದರು. ಜಿಲ್ಲಾ ಪಂಚಾಯತ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಚಾಂದಿನಿ ಅವರು ಮಾತಾನಾಡಿ ಎಲ್ಲರೂ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಕ್ಕೆ ಸೇರಿ ಮಹಿಳೆಯರು ಸ್ವ ಉದ್ಯೋಗಿಗಳಾಗಬೇಕು…
ಮಡಿಕೇರಿ ಆ.6 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡೀನ್ ಮತ್ತು ಡೈರೆಕ್ಟರ್ ಡಾ.ಲೋಕೇಶ್ ಅವರು ಉದ್ಘಾಟಿಸಿದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ರಾಮಚಂದ್ರ ಕಾಮತ್ ಅವರು, ತಾಯಿಯ ಹಾಲು ಅತ್ಯುತ್ತಮ ಸಂಪೂರ್ಣ ಪೌಷ್ಟಿಕ ಆಹಾರ ಜೀವನದ ಸುಸ್ಥಿರ ಆರಂಭವೂ ಆಗಿದೆ. ಅತಿಸಾರ ನಿಮೋನಿಯಾ ಕಿವಿಯ ಸೋಂಕು ಮತ್ತು ಅಲರ್ಜಿಗಳನ್ನು ತಡೆಗಟ್ಟುವ ಶಕ್ತಿ ತಾಯಿಯ ಹಾಲಿನಲ್ಲಿದೆ. ಹೆರಿಗೆಯಾದ ತಕ್ಷಣ ತಾಯಿ ಹಾಲು ಕುಡಿಸುವುದರಿಂದ ರಕ್ತಶ್ರಾವ ತಡೆಗಟ್ಟಲು, ಗರ್ಭಕೋಶ ಸಾಮಾನ್ಯ ಗಾತ್ರಕ್ಕೆ ಮರಳಲು, ಖಿನ್ನತೆ ನಿವಾರಿಸಲು ಸಹಕರಿಸುತ್ತದೆ ಎಂದು ಪ್ರಾಸ್ತಾವಿಕ ನುಡಿ ಆಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಸ್ತನ್ಯಪಾನದಿಂದ ಮಗುವಿನ ಮೆದುಳಿನ ಬೆಳವಣಿಗೆಗೆ ಸಹಕಾರಿ ಆಗಲಿದೆ. ಜೊತೆಗೆ…
ಮಡಿಕೇರಿ ಆ.6 NEWS DESK : ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ‘ಕಾವೇರಿ ನದಿ’ ಉಗಮ ಸ್ಥಾನ ತಲಕಾವೇರಿ ಪವಿತ್ರ ಕ್ಷೇತ್ರಕ್ಕೆ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ ಸಚಿವರು, ನಂತರ ಭಗಂಡೇಶ್ವರ ದೇವಾಲಯದಲ್ಲಿ ಹೆಚ್ಚಿನ ಮಳೆ ಬೆಳೆಯಾಗಿ ನಾಡಿನ ಜನತೆಗೆ ಸಮೃದ್ಧಿ ತರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಮಹಾಗಣಪತಿ, ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ಶ್ರೀ ಮಹಾ ಗಣಪತಿಗೆ ಪೂಜೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ ಕುಂಕುಮಾರ್ಚನೆ ನೆರವೇರಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಾಡಿಗೆ ಜೀವಜಲ ನೀಡುವ ಪುಣ್ಯತಾಯಿ ಕಾವೇರಿ ಮಾತೆ ಸಕಲ ಜೀವಿಗಳಿಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದು, ಕಾವೇರಿ ಕಣಿವೆ ಪಾತ್ರದಲ್ಲಿ ಹೆಚ್ಚಿನ ಮಳೆಯಾಗಿ ಎಲ್ಲರಿಗೂ ಸಮೃದ್ಧಿ ತರುವಂತಾಗಲಿ…






