ಸುಂಟಿಕೊಪ್ಪ ನ.27 NEWS DESK : ಕುಡಿಯುವ ನೀರಿನ ವ್ಯತ್ಯಯ, ಆಮೆಗತಿಯ ಜಲಜೀವನ್ ಕಾಮಗಾರಿ, ಕಸ ವಿಲೇವಾರಿ ಘಟಕದ ಅವೈಜ್ಞಾನಿಕ ನಿರ್ಮಾಣದಿಂದ ಕಲುಷಿತಗೊಂಡ ವಾತಾವರಣ, ಆರೋಗ್ಯ ಕೇಂದ್ರ ತುರ್ತು ಪ್ರಾಥಮಿಕ ಚಿಕಿತ್ಸೆ ಆಲಭ್ಯ, ಪಶುವೈಧ್ಯ ಇಲಾಖೆಯಿಂದ ರೈತರಿಗೆ ಸಿಗದೆ ಮನ್ನಣೆ, ಬೀದಿ ನಾಯಿಗಳ ಹಾವಳಿ, ಆಸ್ಸಾಂ ಕಾರ್ಮಿಕರ ಅನಧಿಕೃತ ಆಧಾರಕಾರ್ಡ್ ಬಳಕೆ ಬಗ್ಗೆ ಮಾದಾಪುರ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಯಿತು. ಮಾದಾಪುರ ಗ್ರಾಮ ಪಂಚಾಯಿತಿ ಗ್ರೇಡ್-1 ರ 2025-26ನೇ ಸಾಲಿನ ವಾರ್ಷಿಕ ಗ್ರಾಮ ಸಭೆಯು ಮಾದಾಪುರ ಸಮುದಾಯ ಭವನದಲ್ಲಿ ಗ್ರಾ.ಪಂ.ಅಧ್ಯಕ್ಷ ಮರುವಂಡ ಜಾಲಿ ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗೆ ಪಂಚಾಯಿತಿಯಿಂದ ಕ್ರಮ ಕೈಗೊಂಡಿಲ್ಲ. ಕಾರೆಕಾಡು ಜಂಬೂರು ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಜನಸಾಮಾನ್ಯರಿಗೆ ಲಭಿಸುತ್ತಿಲ್ಲ. ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕನಿಷ್ಠ ಗಾಯಗೊಂಡವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗದಲ್ಲಿ ಜನರ ಉಪಯೋಗಕ್ಕಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ…
ಲೇಖಕ: admin
ಸೋಮವಾರಪೇಟೆ ನ.27 NEWS DESK : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿಂದ ಕೊಡಗು ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಡಿ.6 ರಂದು ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹೆಚ್.ಎನ್.ರವೀಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಡಿ.6 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಘದ ನಿರ್ದೇಶಕರುಗಳು ಭಾಗಿಯಾಗಲಿದ್ದಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಮಕ್ಕಳನ್ನು ಕರೆತಂದರೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರೊಂದಿಗೆ ಸಮುದಾಯದ ಇತರರಿಗೂ ಪ್ರೇರಣೆಯಾಗುತ್ತದೆ ಎಂದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಗುವುದು ಎಂದರು. ಈ ಹಿಂದೆಯೇ ಸೋಮವಾರಪೇಟೆಯಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಕ್ರಮ ವಹಿಸಲಾಗಿತ್ತು. ಕಾಣದ ಕೈಗಳ ರಾಜಕೀಯ ಕುತಂತ್ರದಿಂದಾಗಿ ಅಲ್ಪ ಹಿನ್ನಡೆಯಾಗಿತ್ತು. ಇದೀಗ ಒತ್ತಡ ಹಾಕಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.…
ಸೋಮವಾರಪೇಟೆ ನ.27 NEWS DESK : ವಿದ್ಯಾರ್ಥಿಗಳು ಪರಿಸರ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕೆಂದು ಪಟ್ಟಣದ ಸಾಯಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಇಮಾನಿ ಸಲಹೆ ನೀಡಿದರು. ವಿಶ್ವ ವೃಕ್ಷ ಮತ್ತು ಸ್ವಾಸ್ಥ್ಯ ಫೌಂಡೇಷನ್ ಹಾಗೂ ಸಾಯಿ ಆಸ್ಪತ್ರೆಯ ಸಹಯೋಗದೊಂದಿಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರಿಸರ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ, ಉತ್ತಮ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡವನ್ನು ನೆಡಬೇಕು ಎಂದು ಮನವಿ ಮಾಡಿದರು. ವಿಶ್ವ ವೃಕ್ಷಮತ್ತು ಸ್ವಾಸ್ಥ್ಯ ಫೌಂಡೇಷನ್ ಸಂಯೋಜಕ ದೇವರಾಜ್ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಮತ್ತು ಸಮುದಾಯಗಳು ಒಂದು ಕೋಟಿಗೂ ಹೆಚ್ಚು ಗಿಡ ನೆಡುವುದಕ್ಕೆ ಗುರಿಯನ್ನು ಹೊಂದಬೇಕು ಎಂದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ, ಸಂಪನ್ಮೂಲ ವ್ಯಕ್ತಿ ಎನ್.ವಿ.ಅಭಿಶೇಕ್ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ಕಾರ್ಡ್ ನೀಡಲಾಯಿತು.
ಪುತ್ತೂರು ನ.27 NEWS DESK : ಹೊಸತನದ ಮತ್ತು ಶ್ರೇಷ್ಟವಾದ ವಿಚಾರಗಳನ್ನು ಕಷ್ಟಪಟ್ಟಾದರೂ ಕಲಿಯಬೇಕು. ಕಲಿಯುವ ವಿಷಯದಲ್ಲಿ ನಾವು ಪರಿಣಿತರಾದರೆ ಅದು ಜ್ಞಾನದ ಜತೆಯಲ್ಲಿ ಸಾಮಾಜಿಕ ಸ್ಥಾನಮಾನವನ್ನೂ ತಂದುಕೊಡುತ್ತದೆ ಎಂದು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಫ್ರೊಫೆಸರ್ ಡಾ.ಪಲ್ಲವಿ.ಕೆ.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2025 ಕ್ಕೆ ಚಾಲನೆ ನೀಡಿ ಮಾತಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಯಕ್ಷೇತ್ರದಲ್ಲಿ ಒದಗಿಬರುವ ಸವಾಲುಗಳನ್ನು ಎದುರಿಸಲು ಅಪಾರವಾದ ಮತ್ತು ಅಗಾಧವಾದ ಜ್ಞಾನಶಕ್ತಿ ಹಾಗೂ ಮನೋಶಕ್ತಿಗಳು ಅಗತ್ಯ ಎಂದರು. ಪ್ರತಿಯೊಬ್ಬರೂ ಕೂಡಾ ತಾವು ಕಲಿತ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗಾಗಿ ಬಳಸಬೇಕು, ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಮೂಲಕ ನೆಲದ ಸಂಸ್ಕೃತಿಯನ್ನು…
ಮಡಿಕೇರಿ ನ.27 NEWS DESK : ಸಂವಿಧಾನವು ಭಾರತ ದೇಶದ ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದ್ದು, ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಬಲಪಡಿಸುವ ಮಹತ್ವದ ದಾಖಲೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ರಾಘವ.ಬಿ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ಸಿಸಿ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ಸಭಾ ಸದಸ್ಯರ ಅಮೂಲ್ಯ ಕೊಡುಗೆಯನ್ನು ಅವರು ಸ್ಮರಿಸಿದರು. 1949 ರ ನವೆಂಬರ್ 26 ರ ದಿನ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಧಿಕೃತವಾಗಿ ಅಂಗೀಕರಿಸಿದ್ದನ್ನು ಸ್ಮರಿಸುವ ಉದ್ದೇಶದಿಂದ ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವಾಗಿಯಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಭಾಗವಾಗಿ ಸಂವಿಧಾನ ಪ್ರಸ್ತಾವನೆಯ ಸಾಮೂಹಿಕ…
ವಿರಾಜಪೇಟೆ ನ.27 NEWS DESK : ವಿರಾಜಪೇಟೆ ವಿವೇಕ ಜಾಗ್ರತ ಬಳಗದ ವತಿಯಿಂದ ನ.30 ರಂದು ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಕಾವೇರಿ ಆಶ್ರಮ ಸಭಾಂಗಣದಲ್ಲಿ ಓದುಗರ ಸಮಾವೇಶವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಓದುಗರ ಸಮಾವೇಶ ನಡೆಯಲಿದೆ. ಹಾಗಾಗಿ ಸಮಸ್ತ ಆಸಕ್ತರು ಆಗಮಿಸಿ ಆಧ್ಯಾತ್ಮಿಕ ವಿಚಾರವನ್ನು ಸವಿಯ ಬೇಕೆಂದು ಬಳಗದ ಅಧ್ಯಕ್ಷ ರಾಜಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : ಮಕೇ೯ರಾ ಡೌನ್ಸ್ ಗಾಲ್ಫ್ ಕ್ಲಬ್ ವತಿಯಿಂದ 39 ನೇ ಆವೖತ್ತಿಯ ಸತ್ಯ ಕೂಗ್೯ ತ್ರಿಕೋನ ಗಾಲ್ಫ್ ಚಾಂಪಿಯನ್ ಶಿಪ್ ಪಂದ್ಯಾವಳಿ ಆಯೋಜಿಸಲ್ಪಟ್ಟಿತ್ತು. ಮಡಿಕೇಯ ಮಕೇ೯ರಾ ಡೌನ್ಸ್ ಗಾಲ್ಫ್ ಕೋಸ್೯, ಬಿಟ್ಟಂಗಾಲದ ಕೂಗ್೯ ಗಾಲ್ಫ್ ಲಿಂಕ್ ಮತ್ತು ಪಾಲಿಬೆಟ್ಟದಲ್ಲಿನ ಟಾಟಾ ಕಾಫಿ ಗಾಲ್ಪ್ ಕೋಸ್೯ಗಳಲ್ಲಿ ಮೂರು ದಿನಗಳು ಆಯೋಜಿತ ಗಾಲ್ಫ್ ಪಂದ್ಯಾವಳಿಗಳಲ್ಲಿ ವಿವಿಧೆಡೆಗಳ 110 ಗಾಲ್ಫ್ ಆಟಗಾರರು ಪಾಲ್ಗೊಂಡಿದ್ದರು. ಎಲ್ಲಾ ವಿಭಾಗಗಳಲ್ಲಿ ವರುಣ್ ಗಣಪತಿ ವಿಜೇತರಾಗಿ ಪಂದ್ಯಾವಳಿಯ ಚಾಂಪಿಯನ್ ಆಗಿ ಹೊರಹೊಮ್ಮಿದರು. ಮಾಲಿ ಶಶಿಕಿರಣ್ ದ್ವಿತೀಯ ಸ್ಥಾನ ಪಡೆದರು. ವಿವಿಧ ವಿಭಾಗಗಳಲ್ಲಿ ಅಖಿಲ್ ಮುತ್ತಣ್ಣ, ಫೆಯಾಜ್ ಮೂಸಕುಟ್ಟಿ, ಬಿ.ಎ.ಗಣಪತಿ, ಸತ್ಯನಾರಾಯಣ ಹೆಚ್.ಎಲ್. ಗ್ರೂಪ್ ಕ್ಯಾಪ್ಟನ್ ಮೂತಿ೯, ಐ.ಕೆ. ಅನಿಲ್, ಐ.ಕೆ. ಪೊನ್ನಪ್ಪ, ಕೆ.ಯು. ವಿಕ್ತಾಂತ್, ಕೆ.ಪಿ. ರಂಜಿತ್, ಚನ್ನರಾಜ ಮಹೀಂದ್ರ, ಬಿ.ಎಂ. ನಾಚಪ್ಪ, ಎಂ.ಎಂ. ಪ್ರದೀಪ್ ಕುಮಾರ್ ದಾಸ್, ಎಂ.ಎ.ರಮೇಶ್, ಬೋಪಣ್ಣ, ಪಿ.ಕೆ. ಅಮೖತ್ ಪೂವಣ್ಣ, ಅಖಿಲ್ ಮುತ್ತಣ್ಣ, ಪ್ರಥ್ವಿ ಡಿಸೋಜಾ, ಜೈದೀಪ್, ಟಿ.ಕೆ. ಸತ್ಯಪ್ರಸಾದ್,…
ಮಡಿಕೇರಿ ನ.27 NEWS DESK : ಯುವಪೀಳಿಗೆಯಲ್ಲಿ ಹೆಚ್ಚಾಗುತ್ತಿರುವ ಮಾದಕ ವ್ಯಸನಗಳ ವಿರುದ್ದ ಪೋಷಕರು ಮತ್ತು ಸಮಾಜವನ್ನು ಜಾಗ್ರತಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾಯ೯ಕ್ರಮಗಳನ್ನು ಆಯೋಜಿಸಬೇಕೆಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ದವಾಗಿರುವ ಮೈಸೂರಿನಲ್ಲಿಯೇ 400 ಕೋಟಿ ಮೌಲ್ಯದ ಮಾದಕ ಪದಾಥ೯ಗಳು ದೊರಕಿರುವುದು ಕಳವಳಕಾರಿ ಸಂಗತಿಯಾಗಿದೆ. ಶಾಲಾ, ಕಾಲೇಜುಗಳಲ್ಲಿ ಚಾಕೋಲೇಟ್ ಸೇರಿದಂತೆ ವಿವಿಧ ರೂಪಗಳಲ್ಲಿ ಮಾದಕ ದ್ರವ್ಯ ವಿತರಿಸುವ ಜಾಲ ಬೖಹದಾಕಾರದಲ್ಲಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಮಾದಕ ವ್ಯಸನದ ಅಪಾಯವನ್ನು ವಿದ್ಯಾಥಿ೯ಗಳು, ಪೋಷಕರಿಗೆ ತಿಳಿಸಿ, ಜಾಗೃತಿ ಉಂಟು ಮಾಡುವ ಕಾಯ೯ಕ್ರಮಗಳು ಹೆಚ್ಚಾಗಿ ಆಯೋಜಿತವಾಗಬೇಕೆಂದು ಅವರು ಕರೆ ನೀಡಿದರು. ಮನೆ ಮತ್ತು ಶಾಲೆಯಲ್ಲಿ ಮಕ್ಕಳ ವಿಚಿತ್ರ ಅಥವಾ ಅತಿರೇಕದ ವತ೯ನೆ ಕಂಡುಬಂದಾಗ ಸೂಕ್ಷ್ಯವಾಗಿ ಇಂಥ ವತ೯ನೆಗಳನ್ನು ಶಿಕ್ಷಕರು, ಪೋಷಕರು ಗಮನಿಸಿ ಎಚ್ಚತ್ತುಕೊಂಡು ಸೂಕ್ತ ಚಿಕಿತ್ಸೆ…
ವಿರಾಜಪೇಟೆ ನ.27 NEWS DESK : ಪೊನ್ನಂಪೇಟೆಯ ಸರ್ಕಾರಿ ಶಾಲೆಯಲ್ಲಿ 1994-1999 ಬ್ಯಾಚ್ ನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ದೇವಗೇರಿ, ಗುರುಗಳು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಾರೆ. ಗುರುಗಳ ಆಶೀರ್ವಾದದಿಂದ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಗುರುಗಳಿಗೆ ಗೌರವವನ್ನು ಸೂಚಿಸುದರ ಮೂಲಕ ಕಾರ್ಯಕ್ರಮವನ್ನು ಆಯೋಜಿಸಿರುವುದು ಗಮನಾರ್ಹ ಎಂದು ಹೇಳಿದರು. ಪೊನ್ನಂಪೇಟೆ ಸರ್ಕಾರಿ ಶಾಲೆಯ ಶಿಕ್ಷಕಿ ಅಂಬುಜ, ದೇವಕಿ ಹಾಗೂ ಶಾಂತಿ ಮಾತನಾಡಿ, ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಕರೆ ನೀಡಿದರು. ಕಾರ್ಯಕ್ರಮದಲ್ಲಿ 16 ಶಿಕ್ಷಕರುಗಳನ್ನು ಸನ್ಮಾನಿಸುವುದರ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು. ಪೊನ್ನಂಪೇಟೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಚಂಗಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ರಾಮಕೃಷ್ಣ, ಅನೀಶ್, ಸೌಕಾತಾಲಿ, ಪೊನ್ನಣ್ಣ, ಮಹಮದ್ ಆಲಿ, ಜೀಷ, ಶ್ರೀಜ ಮೊದಲಾದವರು ಹಾಜರಿದ್ದರು. ಅಬ್ದುಲ್…
ಸಿದ್ದಾಪುರ ನ.27 NEWS DESK : ಇತಿಹಾಸ ಪ್ರಸಿದ್ಧ ಬೈರಂಬಾಡದ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕರ ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು. ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಮೂರ್ನಾಡು, ನಾಪೊಕ್ಲು, ವಿರಾಜಪೇಟೆ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ, ಒಂಟಿಯಂಗಡಿ, ಮರಗೋಡು, ಹಾಕತ್ತೂರು ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ತೀರ್ಥಪ್ರಸಾದ ಸ್ವೀಕರಿಸಿದರು. ದೇವರಿಗೆ ಮಹಾಮಂಗಳಾರತಿ ಸೇವೆ ನಡೆದ ಬಳಿಕ ಮಧ್ಯಾಹ್ನ ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂರ್ತಪಣೆ ನಡೆಯಿತು. ದೇವಾಲಯದ ಹೊರಭಾಗದಲ್ಲಿ ಹರಕೆ ಹೊತ್ತ ಭಕ್ತಾದಿಗಳು ಬೆಳಿಗ್ಗೆಯಿಂದ ಕೇಶ ಮುಂಡನ ನೆರವೇರಿಸಿದರು. ಭಕ್ತಾದಿಗಳಿಗೆ ಕುಳಿತುಕೊಳ್ಳಲು ಸೂಕ್ತ ಪೆಂಡಾಲ್ ವ್ಯವಸ್ಥೆ ಮಾಡಲಾಗಿತ್ತು. ಸರ್ಕಲ್ ಇನ್ಸ್ಪೆಕ್ಟರ್ ಪಿ.ಕೆ.ರಾಜು, ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು. ದೇವಸ್ಥಾನ ಸಮಿತಿ ಮುಖ್ಯಸ್ಥರಾದ ಬೆಳ್ಳಿಯಪ್ಪ, ಅಯ್ಯಪ್ಪ, ಕರುಂಬಯ್ಯ, ಮುತ್ತಣ್ಣ, ಮಾದಪ್ಪ, ಪೆಮ್ಮಯ್ಯ, ಸುಬ್ರಮಣಿ,…






