ಲೇಖಕ: admin

ಮಡಿಕೇರಿ ಡಿ.26 NEWS DESK : ಮಡಿಕೇರಿ ಹಾಗೂ ಕುಶಾಲನಗದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧಿಸಿ ಹೊರಡಿಸಿರುವ ಆದೇಶ ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ತಕ್ಷಣ ಪುನರ್ ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಎಂ.ಎಂ.ದಾವೂದ್, ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧದಿಂದ ಜನಸಾಮಾನ್ಯರು ಮತ್ತು ವರ್ತಕರು ಅನುಭವಿಸುವ ತೊಂದರೆಗಳ ಬಗ್ಗೆ ಗಮನ ಸೆಳೆದರು.  ಪ್ರವಾಸಿಗರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ನಿಷೇಧದಿಂದಾಗಿ ಜನ ಸಾಮಾನ್ಯರು ಹಾಗೂ ವರ್ತಕರಿಗೆ ತೊಂದರೆಯಾಗಲಿದೆ. ಆರೋಗ್ಯಕ್ಕೆ ಹಾನಿಕಾರಕವೆಂದು ವೈಜ್ಞಾನಿಕವಾಗಿ ಸಾಬೀತಾಗಿರುವ ತಂಪು ಪಾನೀಯಗಳು ಅದೇ ಪ್ಲಾಸ್ಟಿಕ್ ಬಾಟಲಿನಲ್ಲಿ ನಿರ್ಬಂಧವಿಲ್ಲದೆ ಮಾರಾಟವಾಗುತ್ತಿದೆ. ಇದಕ್ಕೆ ಯಾವುದೇ ಬ್ಯಾನ್‍ಗಳಿಲ್ಲ. ಆದರೆ, ಮಾನವನ ಜೀವಕ್ಕೆ ಅಗತ್ಯವಾದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳನ್ನೇ ನಿಷೇಧಿಸಿರುವುದು ಮಲತಾಯಿ ಧೋರಣೆ ಎಂದರು. ಜಿಲ್ಲೆಯ ನಾಗರಿಕರಾಗಿ,…

Read More

ಮಡಿಕೇರಿ ಡಿ.27 NEWS DESK : ಮಡಿಕೇರಿಯಿಂದ ಶಬರಿಮಲೆಗೆ ಮೂವರು ಮಾಲಾಧಾರಿಗಳು ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಮಾಲಾಧಾರಿಗಳಾದ ವೇಣು, ಅಪ್ಪಣ್ಣ ಹಾಗೂ ಸಂತೋಷ್ ಮಡಿಕೇರಿಯಿಂದ ಶಬರಿಮಲೆಗೆ ಪಾದಯಾತ್ರೆ ಆರಂಭಿಸಿದ್ದು,  ಸುಮಾರು 15 ದಿನಗಳು ಈ‌ ಪಾದಯಾತ್ರೆ ನಡೆಯಲಿದೆ.

Read More

ಮಡಿಕೇರಿ ಡಿ.26 NEWS DESK : 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ  ಹೊರಹೊಮ್ಮುವ ಈ2 ನಾಪೋಕ್ಲು ಹಾಗೂ ಈ5 ಹೊದ್ದೂರು ಫೀಡರ್‌ಗಳಲ್ಲಿ ದಿನಾಂಕ 27.12.2025ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಡಿ.26 NEWS DESK :  ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ 66/11 ಕೆ.ವಿ ನೂತನ ಬ್ರೇಕರ್‌ಗಳ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ F1-ನಲ್ಲೂರು, F2-ಬಾಳೆ, F4 ತಿತಿಮತಿ, F5-ಪಾಲಿಬೆಟ್ಟ, F6-ಬೇಗೂರು, F7-ಗೋಣಿಕೊಪ್ಪ, F8-ಪೊನ್ನಂಪೇಟೆ, F9-ಹಾತೂರು, F10-ಹೈಸೊಣ್ಣೂರು, ಫೀಡರ್‌ನಲ್ಲಿ ದಿನಾಂಕ 27.12.2025 ರಂದು ಬೆಳಿಗ್ಗೆ 10.00ರಿಂದ ಸಂಜೆ 4.00 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಿರುಗೂರು, ದೇವರಪುರ, ಮಾಯಮುಡಿ ಧನುಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಡಿ.26 NEWS DESK : ರಸ್ತೆ ದುರಸ್ತಿಗೆ ಆಗ್ರಹಿಸಿ ಮರಗೋಡು ಆಟೋ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಮರಗೋಡು ಮುಖ್ಯರಸ್ತೆಯಲ್ಲಿ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ರಸ್ತೆ ತಡೆದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯ ಹಿನ್ನೆಲೆ ಗ್ರಾಮದಲ್ಲಿನ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯವೇ ಈ ಸ್ಥಿತಿಗೆ ಕಾರಣ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಮರಗೋಡು, ಹೊಸ್ಕೇರಿ, ಕಟ್ಟೆಮಾಡು, ಅರೆಕಾಡು ಮತ್ತು ಹುಲಿತಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸವ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದೆ. ಗುಂಡಿಮಯ ರಸ್ತೆಯಿಂದಾಗಿ ವಾಹನಗಳ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಕಳಪೆ ರಸ್ತೆಯಿಂದಾಗಿ ಕೆಎಸ್‍ಆರ್‍ಟಿಸಿ ಬಸ್ಸುಗಳು ಗ್ರಾಮಕ್ಕೆ ಬರಲು ಹಿಂದೇಟು…

Read More

ಮಡಿಕೇರಿ   ಡಿ.26 :  1935 ನೇ ಇಸವಿ ಮಾರ್ಚ್ 15 ರಂದು ಪಾಂಡಂಡ ಕುಟ್ಟಪ್ಪ ಅವರು ವಿರಾಜಪೇಟೆಯಲ್ಲಿ ಜನಿಸಿದರು. ಕರಡ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿದರು. ಇವರ ಧರ್ಮಪತ್ನಿ ಅಮ್ಮಣಿಚಂಡ ಲೀಲಾ ಕುಟ್ಟಪ್ಪ. ಇವರ ಮಗಳು ಸುಮನ್ ಬಿದ್ದಾಟಂಡ  ಪ್ರದೀಪ್ ಅವರನ್ನು, ಇನ್ನೊಬ್ಬಳು ಮಗಳು ಸುಚಿತ ಬಲ್ಲಚಂಡ ಸುಬ್ರಮಣಿ ಅವರನ್ನು ಹಾಗೂ ಅವರ ಮಗ ಬೋಪಣ್ಣ ನುಚ್ಚಿಮಣಿಯಂಡ ಜ್ಯೋತಿ ಅವರನ್ನು ಮದುವೆಯಾದರು. ಹಾಕಿಯಲ್ಲಿ ಬಹಳಷ್ಟು ಪ್ರೀತಿ ಹೊಂದಿದ್ದ ಇವರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೌಕರಿಗೆ ಸೇರಿದರು. ಅತಿ ಉನ್ನತ ತೀರ್ಪುಗಾರರಾಗಿ ಹೊರಹೊಮ್ಮಿದರು ಹಾಗೂ ಉನ್ನತ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. 1997ರಲ್ಲಿ ಕರಡದಲ್ಲಿ ಕೌಟಂಬಿಕ ಹಾಕಿ ಹಬ್ಬವನ್ನು ಆಯೋಜಿಸಬೇಕೆಂಬ ಚಿಂತನೆಯನ್ನು ತನ್ನ ಸಹೋದರ ಹಾಗೂ ಗ್ರಾಮಸ್ಥರೋಡನೆ ಚರ್ಚಿಸಿ, 60 ಕುಟುಂಬಗಳನ್ನು ಒಳಗೊಂಡ ಕೌಟುಂಬಿಕ ಹಾಕಿಯನ್ನು ಪ್ರಥಮವಾಗಿ ಪ್ರಾರಂಭಿಸಿದರು. *ಉದ್ದೇಶ* ಗ್ರಾಮದಲ್ಲಿ ಎಲ್ಲರೂ ಒಂದೆಡೆ ಸೇರುವಂತೆ, ಮಹಿಳೆಯರಿಗೆ ಸಮಾನವಾದ ಹಕ್ಕು, ಕೊಡಗಿನ ಆಚಾರ, ವಿಚಾರ, ಪದ್ಧತಿ, ಪರಂಪರೆಯನ್ನು ಕಾಪಾಡುವ, ವಧು-ವರರನ್ನು ನೋಡುವ,  ಸಾಂಪ್ರದಾಯಿಕ ಕ್ರೀಡೆಯನ್ನು…

Read More

ಮಡಿಕೇರಿ ಡಿ.26 NEWS DESK : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರುಗಳ ನಿಯೋಗ ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು. ಮೈಸೂರಿನ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿದ ಪಕ್ಷದ ಮುಖಂಡರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಮಸೀದಿ, ಮದರಸ, ಕಬರ್ ಸ್ಥಾನ ಹಾಗೂ ಸಮುದಾಯದ ಭವನಗಳಿಗೆ ಮೂಲ ಸೌಕರ್ಯ ಒದಗಿಸಲು ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿ ವಾಸವಿರುವ ಭಾಗಗಳಿಗೆ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು, ವಿಶೇಷ ಯೋಜನೆಯನ್ನು ರೂಪಿಸಲು ಹಾಗೂ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಲು ಮನವಿ ಮಾಡಿದರು. ನಿಯೋಗದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಿಯಾಬುದ್ದೀನ್, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಸೈಫುದ್ದೀನ್ ಜಾಮಿಯಾಳ ,ಮೈಸೂರು ಜಿಲ್ಲಾ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಹಬಿದ್ ಹುಸೈನ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.

Read More

ನವದೆಹಲಿ ಡಿ.26 NEWS DESK : ಕೇಂದ್ರ ರೈಲ್ವೆ ಸಚಿವಾಲಯವು ಡಿಸೆಂಬರ್ 21ರಂದು ಘೋಷಿಸಿದ್ದ ರೈಲು ಟಿಕೆಟ್ ದರ ಏರಿಕೆ ಇಂದಿನಿಂದ (ಶುಕ್ರವಾರ) ಜಾರಿಗೆ ಬಂದಿದೆ. 215 ಕಿಲೋಮೀಟರ್‌ಗಿಂತ ಹೆಚ್ಚು ದೂರದ ಪ್ರಯಾಣಗಳಿಗೆ ಅನ್ವಯವಾಗುವಂತೆ ಈ ಹೊಸ ದರವನ್ನು ಜಾರಿಗೊಳಿಸಲಾಗಿದೆ. ಸಾಮಾನ್ಯ (ಆರ್ಡಿನರಿ) ರೈಲುಗಳಲ್ಲಿ ಪ್ರತಿ ಕಿಲೋಮೀಟರ್‌ಗೆ 1 ಪೈಸೆ, ಹಾಗೂ ಎಸಿ ಮತ್ತು ಎಸಿ ಇಲ್ಲದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಪ್ರತಿ ಕಿಲೋಮೀಟರ್‌ಗೆ 2 ಪೈಸೆಯಷ್ಟು ದರ ಹೆಚ್ಚಳ ಮಾಡಲಾಗಿದೆ. ಈ ದರ ಪರಿಷ್ಕರಣೆ ಅಲ್ಪ ಪ್ರಮಾಣದ ಏರಿಕೆಯಾಗಿದ್ದು, ಸಾಮಾನ್ಯ ಪ್ರಯಾಣಿಕರ ಮೇಲೆ ಅತಿಯಾದ ಹೊರೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

Read More

ಮಡಿಕೇರಿ ಡಿ.26 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಟ್ರಕ್ ನಡುವೆ, ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ಸಂಭವಿಸಿ, ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದು, ಉಳಿದವರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಅವರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Read More

ಹೊಸದಿಲ್ಲಿ ಡಿ.26 NEWS DESK : ವಿಳಂಬ ಶುಲ್ಕವನ್ನು ಪಾವತಿಸದ ಮತ್ತು ಆಧಾರ್ ಕಾರ್ಡ್‌ನ್ನು ತಮ್ಮ ಪಾನ್ ಕಾರ್ಡ್‌ ನೊಂದಿಗೆ ಜೋಡಣೆ ಮಾಡದವರಿಗೆ ಆ ಕಾರ್ಯವನ್ನು ಮುಗಿಸಲು ಡಿ.31 ಕೊನೆಯ ದಿನಾಂಕವಾಗಿದೆ ಮತ್ತು ಅಷ್ಟರೊಳಗೆ ಆಧಾರ್‌ ನೊಂದಿಗೆ ಜೋಡಣೆಯಾಗಿರದ ಪಾನ್ ಕಾರ್ಡ್‌ ಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಆದಾಯ ತೆರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ. ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವ ಅಪಾಯದ ಜೊತೆಗೆ ಅಂತಹವರು ಪಾನ್ ಕಾರ್ಡ್‌ಗಳ ಬಳಕೆಯನ್ನೊಳಗೊಂಡಿರುವ ಸೇವೆಗಳ ಅಲಭ್ಯತೆಯ ಸಂಭಾವ್ಯ ಅಪಾಯವನ್ನೂ ಎದುರಿಸಬೇಕಾಗಬಹುದು.  ಜುಲೈ 1,2017ರಂದು ಅಥವಾ ಅದಕ್ಕೂ ಮುನ್ನ ಪಾನ್ ಕಾರ್ಡ್ ಪಡೆದಿರುವರು ಅದನ್ನು ಆಧಾರ್ ಜೊತೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಜೋಡಣೆ ಸೇವೆಯು ಇ-ಫೈಲಿಂಗ್ ಪೋರ್ಟಲ್‌ ನಲ್ಲಿ ಲಭ್ಯವಿದೆ ಎಂದು ಇಲಾಖೆಯು ತಿಳಿಸಿದೆ. ಹೊಸ ಪಾನ್‌ ಕಾರ್ಡ್ ಅರ್ಜಿದಾರರಿಗೆ ಆಧಾರ್ ಆಧರಿತ ಪರಿಶೀಲನೆಯನ್ನು ನಿಯಮಗಳು ಕಡ್ಡಾಯಗೊಳಿಸಿವೆ.

Read More