ಲೇಖಕ: admin

ವಿರಾಜಪೇಟೆ ಅ.4 :  ನಗರದ ಕಾಫಿ ತೋಟದ ಒಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞರಾದ ಸತೀಶ್ ಮತ್ತು ಅಮಾನ್  ರಕ್ಷಿಸಿದ್ದಾರೆ. ವಿರಾಜಪೇಟೆ ನಗರದ ಪಂಜರ್ ಪೇಟೆಯ ನಿವಾಸಿ ದಿವಂಗತ ಜನರಲ್ ಕೊದಂಡ ಸೋಮಣ್ಣ ಅವರ ಮನೆಯ ತೋಟದಲ್ಲಿ ಬೃಹತ್  ಗಾತ್ರದ ಕಾಳಿಂಗ ಸರ್ಪ  ಇರುವ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಉರಗ ತಜ್ಞರಾದ ಸತೀಶ್ ಹಾಗೂ ಅಮಾನ್  ಸತತ ಎರಡು ಗಂಟೆಯ  ಪ್ರಯತ್ನದಿಂದ  ಸುಮಾರು 11 ಅಡಿ ಉದ್ದ  ಬೃಹತ್ ಗಾತ್ರದ ಕಾಳಿಂಗ ಸರ್ಪ ವನ್ನು  ರಕ್ಷಿಸಿದ್ದಾರೆ.  ನಂತರ ಕಾಳಿಂಗ ಸರ್ಪವನ್ನು ಮಾಕುಟ್ಟ ವಲಯ ಅರಣ್ಯಕ್ಕೆ ಬಿಟ್ಟರು. ವರದಿ :  ಕಿಶೋರ್ ಕುಮಾರ್ ಶೆಟ್ಟಿ  

Read More

ಕಡಂಗ ಅ.3 :  ನರಿಯಂದಡ ಗ್ರಾಮ ಪಂಚಾಯಿತಿ  ಹಾಗೂ ಆಟೋ ಚಾಲಕರ ಸಂಘದ ವತಿಯಿಂದ ಅರಪಟ್ಟು ಕಡಂಗ ಪಟ್ಟಣದಲ್ಲಿ ಸ್ವಚ್ಛತಾ ಶ್ರಮದಾನ  ನಡೆಯಿತು. ಮಹಾತ್ಮ ಗಾಂಧೀಜಿಯವರ ಜನ್ಮ ದಿನದ  ಅಂಗವಾಗಿ ಪಟ್ಟಣದ ಮುಖ್ಯರಸ್ತೆಗಳ ಬದಿ ಕಸ ಕಟ್ಟಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಮಾತನಾಡಿದ  ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ,  ಸ್ವಚ್ಛತೆ ಕಾಪಾಡಲು ನಮ್ಮೆಲ್ಲರ ಕರ್ತವ್ಯ ಹಾಗೂ ಸ್ವಚ್ಛತೆಯಿಂದ ಆಗುವ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಸಿ.ಇ.ಸುಬ್ಬೀರ್ , ಪಾಂಡ0ಡ ರಾಣಿ ಗಣಪತಿ , ವಾಣಿ ತಮ್ಮಯ್ಯ ,ಗ್ರಾಮ ಪಂಚಾಯಿತಿ ಅಧಿಕಾರಿ ಆಶಾ ಕುಮಾರಿ, ದಿನೇಶ್, ಗಣಪತಿ ದೇವಸ್ಥಾನ ಅಧ್ಯಕ್ಷ  ಕುಲ್ಲಚಂಡ ಸಾಬಾ ಕರುಂಬಯ್ಯ, ಸ್ಥಳೀಯರಾದ ಝಕರಿಯ , ಆಟೋ ಚಾಲಕರಾದ, ಸಿದ್ದಿಕ್, ತಿಮ್ಮಯ್ಯ, ಹಂಸ, ಲೋಕೇಶ್, ಮಮ್ಮುಟ್ಟಿ ಸುನಿಲ್  ಹಾಜರಿದ್ದರು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಅ.3 : ಗಾಂಧಿ ಜಯಂತಿಯ ಅಂಗವಾಗಿ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಆವರಣದಲ್ಲಿ ನಿರ್ಮಾಣಗೊಂಡ 9 ಅಡಿಯ ಗಾಂಧಿ ಪ್ರತಿಮೆನ್ನು ಶಾಸಕ ಡಾ.ಮಂತರ್ ಗೌಡ ಅವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆ ಮತ್ತು ಉತ್ತಮ ಚಾರಿತ್ರ್ಯವನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ನವೋದಯ ವಿದ್ಯಾಲಯ ಸಮಿತಿಯ ನಿವೃತ್ತ ಉಪ ನಿರ್ದೇಶಕ ರಾಘವನ್ ಮಾತನಾಡಿದರು. ಆರ್ಟ್ ಇನ್ ಎಜುಕೇಶನ್ ಯೋಜನೆಯಡಿಯಲ್ಲಿ ಪ್ರತಿಮೆ ನಿರ್ಮಾಣ ಮಾಡಿದ ಮಡಿಕೇರಿ ಕಲಾವಿದ ಆರ್.ಸಂದೀಪ್ ಕುಮಾರ್ ಅವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹಾಗೂ ವಿದ್ಯಾಲಯದ ಪೋಷಕ ಶಿಕ್ಷಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು. ಗಾಂಧೀಜಿಯ ಮೆಚ್ಚಿನ ಭಜನ್ ವೈಷ್ಣವ ಜನತೋ ಹಾಡಿನೊಂದಿಗೆ ಸಭಾ ಕಾರ್ಯಕ್ರಮ ಆರಂಭವಾಯಿತು. ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಕೊಡವ ನೃತ್ಯ ನಡೆಯಿತು. ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ಸ್ವಾಗತಿಸಿದರು. ಉಪ ಪ್ರಾಚಾರ್ಯರಾದ ಸುಧಾಮಣಿ ಅವರು ವಂದಿಸಿದರು. ಕನ್ನಡ ಶಿಕ್ಷಕರಾದ ಮಾರುತಿ ದಾಸಣ್ಣವರ್ ಕಾರ್ಯಕ್ರಮ ನಿರ್ವಹಿಸಿದರು. :::…

Read More

ಮಡಿಕೇರಿ ಅ.3 : ಪೌರಕಾರ್ಮಿಕರಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ, ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಮಡಿಕೇರಿ ನಗರಸಭೆಯ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ನಗರಸಭೆಯ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪೌರ ಕಾರ್ಮಿಕರು ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಸಂಘದ ಉಪಾಧ್ಯಕ್ಷ ಹೆಚ್.ಎಂ.ಲೋಕೇಶ್ ಮಾತನಾಡಿ ಸರಕಾರದಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ನಮಗೆ ಸಿಗುತ್ತಿಲ್ಲ. ವಸತಿ ಮತ್ತು ಆಹಾರ ಸೌಲಭ್ಯದಿಂದ ನಾವು ವಂಚಿತರಾಗಿದ್ದೇವೆ. ಗಾಂಧಿ ಜಯಂತಿಯಂದು ಸರಕಾರಿ ರಜೆ ಇದ್ದರೂ ಪೌರಕಾರ್ಮಿಕರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ ನಗರಸಭೆಯ ಆರೋಗ್ಯಾಧಿಕಾರಿ ಹಾಜರಿ ಪುಸ್ತಕದಲ್ಲಿ ಗೈರು ಹಾಜರೆಂದು ನಮೂದಿಸಿದ್ದಾರೆ. ಇದು ಪೌರಕಾರ್ಮಿಕರಿಗೆ ಅತೀವ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ನಗರಸಭೆಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಿಲ್ಲ, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.  …

Read More

ಮಡಿಕೇರಿ ಅ.3 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ‘ಸೇವಾ ಸಿಂಧು ಪೋರ್ಟಲ್‍ನ’ ವೆಬ್‍ಸೈಟ್ https://sevasindhu.karnataka.gov.in ನಾಮ ನಿರ್ದೇಶನ ಮಾಡಬಹುದಾಗಿದ್ದು, ನಾಮ ನಿರ್ದೇಶನಕ್ಕೆ ಅ. 15 ಕಡೆ ದಿನವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಅ.3 : ಪೌರಕಾರ್ಮಿಕರಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ, ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಮಡಿಕೇರಿ ನಗರಸಭೆಯ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ನಗರಸಭೆಯ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪೌರ ಕಾರ್ಮಿಕರು ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಸಂಘದ ಉಪಾಧ್ಯಕ್ಷ ಹೆಚ್.ಎಂ.ಲೋಕೇಶ್ ಮಾತನಾಡಿ ಸರಕಾರದಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ನಮಗೆ ಸಿಗುತ್ತಿಲ್ಲ. ವಸತಿ ಮತ್ತು ಆಹಾರ ಸೌಲಭ್ಯದಿಂದ ನಾವು ವಂಚಿತರಾಗಿದ್ದೇವೆ. ಗಾಂಧಿ ಜಯಂತಿಯಂದು ಸರಕಾರಿ ರಜೆ ಇದ್ದರೂ ಪೌರಕಾರ್ಮಿಕರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ ನಗರಸಭೆಯ ಆರೋಗ್ಯಾಧಿಕಾರಿ ಹಾಜರಿ ಪುಸ್ತಕದಲ್ಲಿ ಗೈರು ಹಾಜರೆಂದು ನಮೂದಿಸಿದ್ದಾರೆ. ಇದು ಪೌರಕಾರ್ಮಿಕರಿಗೆ ಅತೀವ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ನಗರಸಭೆಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಿಲ್ಲ, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.

Read More

ಮಡಿಕೇರಿ ಅ.3 : ಮಡಿಕೇರಿ ನಗರದ ರಸ್ತೆಗಳ ಅಭಿವೃದ್ಧಿಗೆ ನಗರಸಭೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿ ಕೊಡಗು ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು. ಸ್ಥಳಕ್ಕೆ ಆಗಮಿಸಿದ ಶಾಸಕ ಡಾ.ಮಂತರ್ ಗೌಡ ಅವರು ರಸ್ತೆ ದುರಸ್ತಿ ಸಂದರ್ಭ ಗುಣಮಟ್ಟ ಕಾಯ್ದುಕೊಳ್ಳುವ ಭರವಸೆ ನೀಡಿದರು. ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಅವರ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಗರಸಭೆ ವಿರುದ್ಧ ಘೋಷಣೆಗಳನ್ನು ಕೂಗಿದರು. ನಗರದ ಜನತೆಗೆ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪವನ್ ಪೆಮ್ಮಯ್ಯ ಮಾತನಾಡಿ ನಗರದ ಎಲ್ಲಾ ರಸ್ತೆಗಳು ಹದಗೆಟ್ಟು ಹೊಂಡ ಗುಂಡಿಗಳಾಗಿವೆ, ಪಾದಾಚಾರಿಗಳು ಹಾಗೂ ದ್ವಿಚಕ್ರ ವಾಹನ ಚಾಲಕರು ಬಿದ್ದು ಗಾಯಗೊಂಡ ಘಟನೆಗಳೂ ನಡೆದಿದೆ. ಕೆಲವು ಬಡಾವಣೆಗಳಲ್ಲಿ ವಾಹನ ಸಂಚಾರವೇ ದುಸ್ತರವಾಗಿದೆ. ಹೊಂಡ ಗುಂಡಿಗಳಾದ ಅಶುಚಿತ್ವದ ರಸ್ತೆಗಳಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಬಗ್ಗೆ ಕಾಳಜಿ ತೋರದ ನಗರಸಭೆ ಕಳಪೆ…

Read More

ಮಡಿಕೇರಿ ಅ.3 : ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಅಕ್ಟೋಬರ್, 4 ರಂದು ಬೆಳಗ್ಗೆ 10.30 ರಿಂದ 11.30 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಅಕ್ಟೋಬರ್, 4 ರಂದು ಮಧ್ಯಾಹ್ನ 12.30 ಗಂಟೆಯಿಂದ 01.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಅಕ್ಟೋಬರ್, 4 ರಂದು ಸಂಜೆ 4 ಗಂಟೆಯಿಂದ 5 ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ, ಕುಶಾಲನಗರ ಮತ್ತು…

Read More

ಮಡಿಕೇರಿ ಅ.3 : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಓಂಕಾರೇಶ್ವರ ಫೀಡರ್‍ನಲ್ಲಿ ದಸರಾ ಹಬ್ಬದ ಪ್ರಯುಕ್ತ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಅ.4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗೌಡ ಸಮಾಜ, ಕನ್ನಂಬಾಣೆ, ವೈವಸ್, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ ಸುತ್ತಮುತ್ತ, ಬ್ರಾಹ್ಮಣಬೀದಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಗದ್ದಿಗೆ ಫೀಡರ್‍ನಲ್ಲಿ ದಸರಾ ಹಬ್ಬದ ಪ್ರಯುಕ್ತ ವಿದ್ಯುತ್ ಮಾರ್ಗದಲ್ಲಿ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಅಕ್ಟೋಬರ್, 5 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಎ.ವಿ.ಶಾಲೆ, ಆಜಾದ್‍ನಗರ, ಸಂಪಿಗೆಕಟ್ಟೆ, ತ್ಯಾಗರಾಜ ಕಾಲೋನಿ, ಮಾರುಕಟ್ಟೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಕಾವೇರಿ ಬಡಾವಣೆ, ಭಗವತಿನಗರ, ಮಲ್ಲಿಕಾರ್ಜುನ ನಗರ, ಮುತ್ತಪ್ಪ ದೇವಸ್ಥಾನ, ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.…

Read More

ಮಡಿಕೇರಿ ಅ.3 : ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ವತಿಯಿಂದ ಅಕ್ಟೋಬರ್, 08 ರಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಕೊಡಗು ಜಿಲ್ಲಾ ಮಟ್ಟದ ಚದುರಂಗದ ಆಟ ಪಂದ್ಯಾವಳಿ ನಡೆಯಲಿದೆ. ಅಕ್ಟೋಬರ್, 08 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. 7 ರಿಂದ 9 ವರ್ಷದೊಳಗಿನವರಿಗೆ 7 ಟ್ರೋಪಿಗಳು, 11 ರಿಂದ 13 ವರ್ಷದೊಳಗಿನವರಿಗೆ 9 ಟ್ರೋಪಿಗಳು ಹಾಗೂ ಯುವಕರಿಗೆ ಉತ್ತಮ ಆಟಗಾರರಿಗೆ (ಹುಡುಗರಿಗೆ 1, ಹುಡುಗಿಯರಿಗೆ 1) ಟ್ರೋಪಿ ಇರುತ್ತದೆ. ಚೆಸ್ ಆಟಗಾರರು ತಮ್ಮ ಸ್ವಂತ ಚೆಸ್ ಸೆಟ್‍ಗಳನ್ನು ತರಬೇಕು. ಪ್ರವೇಶ ಶುಲ್ಕ ರೂ.300, ಆಟಗಾರರು ಅಕ್ಟೋಬರ್, 08 ರಂದು ಬೆಳಗ್ಗೆ 9.30 ರೊಳಗೆ ಹಾಜರಿರಬೇಕು. 1 ನೇ ಸುತ್ತು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ. ಅಕ್ಟೋಬರ್, 06 ರೊಳಗೆ ನೋಂದಣಿ ಮಾಡಿಕೊಳ್ಳಬೇಕು(7 ರಿಂದ 9 ವರ್ಷದೊಳಗಿನ ಮತ್ತು 11…

Read More