ವಿರಾಜಪೇಟೆ ಅ.31 : ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್.ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಪಾ.ಐಸಾಕ್ ರತ್ನಾಕರ್ ವಿದ್ಯಾರ್ಥಿಗಳಿಗೆ ಏಕತಾ ದಿವಸ್ ಪ್ರತಿಜ್ಞೆಯನ್ನು ಭೋದಿಸಿದರು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ದಿನದ ಮಹತ್ವದ ಬಗ್ಗೆ ಮಾತನಾಡಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನವನ್ನು ರಾಷ್ಟ್ರಾದ್ಯಂತ ಆಚರಿಸಲಾಗುತಿದ್ದು, ವಿದ್ಯಾರ್ಥಿಗಳು ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವುದರ ಮೂಲಕ ಭದ್ರ ರಾಷ್ಟ್ರದ ನಿರ್ಮಾಣ ಮಾಡಬೇಕೆಂದರು. ಭಾರತವು ವೈವಿಧ್ಯ ಸಂಸ್ಕೃತಿ ಇರುವ ದೇಶವಾಗಿದ್ದು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಎನ್.ಎಸ್..ಎಸ್ ಅಧಿಕಾರಿ ಶಾಂತಿಭೂಷಣ್, ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಅ.31 : ಪೊನ್ನಂಪೇಟೆ ಸಿ.ಐ.ಟಿ ಕಾಲೇಜ್ ನಲ್ಲಿ ನ.3 ರಿಂದ 5ರ ವರೆಗೆ ನಡೆಯುವ ರಾಜ್ಯ ಮಟ್ಟದ ಕೃಷಿಯಂತ್ರ ಮೇಳದ ಆಹ್ವಾನ ಪತ್ರಿಕೆಯನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮೈಸೂರಿನಲ್ಲಿ ಬಿಡುಗಡೆ ಮಾಡಿದರು. ಕೃಷಿ ಜಿಲ್ಲೆ ಕೊಡಗಿನಲ್ಲಿ ಬೃಹತ್ ಕೃಷಿಮೇಳ ನಡೆಸುತ್ತಿರುವುದರ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿಯಂತ್ರ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಕೃಷಿ ಸಚಿವರನ್ನು ಮೇಳದ ಸಂಚಾಲಕರು ಹಾಗೂ ಪ್ರಾಧ್ಯಾಪಕ ವೃಂದ ವೈಯುಕ್ತಿಕವಾಗಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ರಾಜ್ಯದ ವಿವಿಧೆಡೆಗಳಿಂದ ಕೃಷಿ ಪರಿಕರ, ಉತ್ಪನ್ನ ಮತ್ತು ಉಪಕರಣವನ್ನು ಪ್ರದರ್ಶಿಸಲು ಕೃಷಿ ಉತ್ಪಾದಕರು ಮೇಳಕ್ಕೆ ಆಗಮಿಸುತ್ತಿದ್ದಾರೆ. 180ಕ್ಕೂ ಹೆಚ್ಚು ಮಳಿಗೆಗಳು ಇರಲಿದ್ದು, ಕೃಷಿಕರು ಹಾಗೂ ಸಾರ್ವಜನಿಕರು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕೃಷಿ ಪರಿಕರಗಳನ್ನು ಕೊಂಡುಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ನ.5 ರಂದು ಪಂಡಿತ್ ಪ್ರವೀಣ್ ಗೋಡ್ಖಿಂಡಿ ಅವರ ಸಂಗೀತ ಕಾರ್ಯಕ್ರಮದೊಂದಿಗೆ ಮೇಳ ಸಮಾರೋಪಗೊಳ್ಳಲಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ…
ಮಡಿಕೇರಿ ಅ.31 : ನಮ್ಮ ಸಂಸ್ಕೃತಿ ಈ ಭೂಮಿಯ ಕೃಷಿಯೊಂದಿಗೆ ಬೆಸೆದುಕೊಂಡಿದೆ. ಆದರೆ ಈ ಭೂಮಿಯೊಂದಿಗೆ ಪೂರ್ವಜರು ಹಾಗೂ ಹಿರಿಯರು ಹೊಂದಿದಂತಹ ಪೂಜನೀಯ ಬಾಂಧವ್ಯವನ್ನು ನಾವು ಕೂಡ ಅನುಕರಿಸಬೇಕು ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು. ಟಿ.ಶೆಟ್ಟಿಗೇರಿಯ ಮೂಂದ್ ನಾಡ್ ಕೊಡವ ಸಮಾಜ ಆಶ್ರಯದಲ್ಲಿ ಸಾರ್ವಜನಿಕ ಗೌರಿ ಗಣೇಶೋತ್ಸವ ಸೇವಾ ಸಮಿತಿ, ಸಂಭ್ರಮ ಮಹಿಳಾ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ, ಕೊಡವ ತಕ್ಕ್ ಎಳ್ತ್’ಕಾರಡ ಕೂಟದ ಆಶ್ರಯದಲ್ಲಿ ಟಿ- ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯುತ್ತಿರುವ 7ನೇ ವರ್ಷದ ಕಾವೇರಿ ಚಂಗ್ರಾಂದಿ ಪತ್ತಾಲೋದಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ 10ನೇ ದಿನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಟಿ.ಶೆಟ್ಟಿಗೇರಿ ಕೊಡವ ಸಮಾಜ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಅವರು ಕೊಡಗಿನ ಪಾಳು ಬಿದ್ದಿರುವ ಸಹಸ್ರಾರು ಎಕರೆ ಭತ್ತದ ಗದ್ದೆಗಳನ್ನು ಕೃಷಿ ಭೂಮಿಯಾಗಿ ಸಂರಕ್ಷಣೆ ಮಾಡಲು ಮರುಕೃಷಿ ಮಾಡಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮತ್ತು ಈ ಮೂಲಕ ಅಂತರ್ಜಲ ವೃದ್ಧಿಸುವ…
ಮಂಡ್ಯ ಅ 31: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು. ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000…
ಮಡಿಕೇರಿ ಅ.31 : ಮಕ್ಕಳಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಸಹಯೋಗದಲ್ಲಿ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್ನಿಂದ ನ.8 ರಿಂದ 10 ರವರೆಗೆ ಜಿಲ್ಲೆಯ ಹತ್ತು ಶಾಲೆಗಳಲ್ಲಿ ವಿಶೇಷ ಶಿಬಿರ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಪ್ರಮುಖ ಅಚ್ಚಯ್ಯ ಎಂ.ಎ. ಅವರು 2020 ರಲ್ಲಿ ಮಕ್ಕಳ ಮಾನಸಿಕ ಆರೋಗ್ಯದ ಕಾಳಜಿಯಿಂದ ಆರಂಭಗೊಂಡ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್, ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರದೊಂದಿಗೆ ಅವರ ಅಧೀನದಲ್ಲಿರುವ ಮಕ್ಕಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ವಿವಿಧ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆಯೆಂದು ತಿಳಿಸಿದರು. ಇದರೊಂದಿಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಮಾನ ಡೈನಾಮಿಕ್ಸ್, ಕಲೆ, ತ್ಯಾಜ್ಯ ನಿರ್ವಹಣೆ, ನ್ಯಾಯಾಂಗ, ಕೊಡಗಿನ ಪಕ್ಷಿಗಳು ಹೀಗೆ ವಿವಿಧ ವಿಷಯಗಳ ಕುರಿತು ಶಿಬಿರಗಳನ್ನು ಆಯೋಜಿಸಿಕೊಂಡು ಬಂದಿದೆ. 2021 ರಿಂದ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಮಾನಸಿಕ ಆರೋಗ್ಯದ ಅರಿವಿಗೆ ‘ಪೈಂಟ್ ದಿ ವಾಲ್’ ಕಾರ್ಯಕ್ರಮಗಳನ್ನು…
ಸೋಮವಾರಪೇಟೆ ಅ.31 : ಮೊಗೇರ ಸೇವಾ ಸಮಾಜದ ಕುಸುಬೂರು ಗ್ರಾಮ ಶಾಖೆಯ ವತಿಯಿಂದ ಬಜೆಗುಂಡಿ ಗ್ರಾಮದಲ್ಲಿ ಮೊಗೇರ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಶಾಖೆಯ ಅಧ್ಯಕ್ಷ ಎಚ್.ಬಿ. ರಾಮಚಂದ್ರ ವಹಿಸಿದ್ದರು. ಕ್ರೀಡಾಕೂಟವನ್ನು ಸಮಾಜದ ಜಿಲ್ಲಾಯಕ್ಷ ಪಿ.ಬಿ.ಜನಾರ್ಧನ್ ನೆರವೇರಿಸಿದರು. ರಾಜ್ಯಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಜೆ.ರಕ್ಷಿತಾ ಮತ್ತು ಎಂ.ರಶ್ಮಿ ಅವರುಗಳಿಗೆ ಕುಸುಬೂರು ಎಸ್ಟೇಟ್ ಮಾಲೀಕರಾದ ನಂದಿನಿ ಆನಂದ್ ಬಸಪ್ಪ ಅವರು ತಲಾ ರೂ. 5 ಸಾವಿರ ರೂ.ಪ್ರೋತ್ಸಾಹ ಧನ ವಿತರಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೇಳೂರು ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೊಗೇರ ಸಮಾಜದ ಜಿಲ್ಲಾ ಉಪಾಧ್ಯಕ್ಷ ಬಿ.ಎಂ.ದಾಮೋಧರ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಪಿ.ಕೆ.ಚಂದ್ರು, ಸಂಘದ ಜಿಲ್ಲಾ ಗೌರವಾಧ್ಯಕ್ಷ ಗೌತಮ್ ಶಿವಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಬಿ. ವಸಂತ, ಗೌರವಾಧ್ಯಕ್ಷ ನಂದ, ಗ್ರಾ.ಪಂ. ಸದಸ್ಯೆ ಸುಧಾ ಗಣೇಶ್ ಇದ್ದರು.
ಸೋಮವಾರಪೇಟೆ ಅ.31 : ತಾಲ್ಲೂಕು ರೈತ ಸಂಘದ ನೂತನ ಕಚೇರಿಯನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ಉದ್ಘಾಟಿಸಿದರು. ಸೋಮವಾರಪೇಟೆಯ ಸಿ.ಕೆ.ಸುಬ್ಬಯ್ಯ ರಸ್ತೆಯಲ್ಲಿ ತೆರೆದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಮನು ಸೋಮಯ್ಯ, ಸಂಘದ ಕಚೇರಿ ಪ್ರಾರಂಭ ಮಾಡಿ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಕಂದಾಯ, ಸರ್ವೇ ಇಲಾಖೆ ಸೇರಿದಂತೆ ಹಲವು ಕಚೇರಿಗಳಲ್ಲಿ ರೈತರ ಕೆಲಸ ಕಾರ್ಯಗಳನ್ನು ಮಾಡಿಕೊಡದೆ, ಸಣ್ಣ ಮತ್ತು ಅತೀ ಸಣ್ಣ ರೈತರನ್ನು ಅಲೆಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳನ್ನು ಕಂಡು, ಕೆಲಸ ತಡವಾಗುತ್ತಿರುವ ಬಗ್ಗೆ ಮಾಹಿತಿ ಪಡೆದು, ಸರಿಯಾದ ದಾಖಲಾತಿ ಒದಗಿಸಿ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಿಸಿಕೊಡಬೇಕಿದೆ ಎಂದರು. ಕೆಲವು ಅಧಿಕಾರಿಗಳು ಹಣಕ್ಕಾಗಿ ಕೆಲಸ ಮಾಡದಿದ್ದಲ್ಲಿ ಅಂತಹವರ ವಿರುದ್ಧ ಜಿಲ್ಲೆಯಾದ್ಯಂತ ಹೋರಾಟ ಮಾಡುವ ಕೆಲಸವನ್ನು ರೈತ ಸಂಘದಿಂದ ಹಮ್ಮಿಕೊಳ್ಳಲಾಗುವುದು. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ದಿನೇಶ್, ಉಪಾಧ್ಯಕ್ಷ ಜಿ.ಎಂ.ಹೂವಯ್ಯ, ಪದಾಧಿಕಾರಿಗಳಾದ ಕೊಡ್ಲಿಪೇಟೆ ಪ್ರಸನ್ನ, ಮಚ್ಚಂಡ ಅಶೋಕ್, ಗರಗಂದೂರು ಲಕ್ಷ್ಮಣ, ಯಡವಾರೆ ರಾಜೇಶ್, ಬಿ.ಪಿ. ಅನಿಲ್, ಸುಭಾಶ್,…
ಮಡಿಕೇರಿ ಅ.31 : ಹುಲಿ ಉಗುರು ಸೇರಿದಂತೆ ವನ್ಯಜೀವಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ಯಾವುದೇ ಕಾರಣಕ್ಕು ಕಾನೂನು ಮೀರಬಾರದು. ಈ ವಿಚಾರದಲ್ಲಿ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯ ಅಧಿಕಾರಿಗಳಿಗೆ ಸಚಿವರು ಯಾವುದೇ ನಿರ್ದೇಶನ ನೀಡಿಲ್ಲ. ಅಧಿಕಾರಿಗಳು ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದು, ಕಾನೂನು ಮೀರುತ್ತಿರುವುದು ಕಂಡು ಬಂದಿದೆ. ನಟ ಜಗ್ಗೇಶ್ ಅವರ ಪ್ರಕರಣ ಹೈಕೋರ್ಟ್ನಲ್ಲಿರುವುದರಿಂದ ಇದು ಇತ್ಯರ್ಥವಾಗುವವರೆಗೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಬಾರದು ಎಂದು ಒತ್ತಾಯಿಸಿದರು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡಲಾಗುವುದು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು. ಪೂರ್ವಜರ ಕಾಲದಿಂದಲೂ ಇರುವ ವನ್ಯಜೀವಿ…
ಮಡಿಕೇರಿ ಅ.31 : ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ತಿನ ಅಧೀನ ಸಂಘವಾದ ಕುಂಜಿಲದ ಖುತುಬುಲ್ ಆರಿಫೀನ್ ರಾತೀಬ್ ಸಂಘದ ಸಂಯುಕ್ತ ಆಶ್ರಯದಲ್ಲಿ 108ನೇ ವಾರ್ಷಿಕ ರಾತೀಬ್ ಮಜ್ಲಿಸ್ ಹಾಗೂ ದುವಾ ಮಜ್ಲಿಸ್ ನ.3 ರಂದು ನಡೆಯಲಿದೆ. ಅಂದು ಮಗ್ರಿಬ್ ನಮಾಝಿನ ಬಳಿಕ ಮುಹಿಯದ್ದೀನ್ ರಾತೀಭ್ ಹಾಗೂ ಇಶಾ ನಮಾಜ್ ಬಳಿಕ ಭ್ರಹತ್ ಕುತ್ತಾರಾತೀಭ್ ಪಯ್-ನರಿ ಸಭಾಂಗಣದಲ್ಲಿ ನಡೆಯಲಿದ್ದು, ನಿಝಾರ್ ಅಹ್ಸನಿ ಕಕ್ಕಡಿಪುರಮ್ ಉಸ್ತಾದ್ ದುವಾ ನೇತೃತ್ವ ವಹಿಸಲಿದ್ದಾರೆ. ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ ನಡೆಯುವ ಈ ಬೃಹತ್ ರಾತೀಭ್ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲು ಸಂಘಾಟಕರು ಮನವಿ ಮಾಡಿದ್ದಾರೆ. ವರದಿ : ನೌಫಲ್ ಕಡಂಗ
ಮಡಿಕೇರಿ ಅ.31 ; ಅಧಿಕಾರಿಗಳು ಲಂಚ ಕೇಳಿದರೆ ವಿಡಿಯೋ ಮಾಡಿ, ಸೂಕ್ತ ಸಾಕ್ಷ್ಯ ಸಹಿತ ದೂರು ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಭ್ರಷ್ಟಾಚಾರ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ, ವಿರಾಜಪೇಟೆ ಕ್ಷೇತ್ರದಲ್ಲಿ ಲಂಚದ ಕುರಿತು ಯಾವುದೇ ದೂರುಗಳು ಕೇಳಿ ಬಂದಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಕೇವಲ ನನ್ನಿಂದ ಮಾತ್ರ ಸಾಧ್ಯವಿಲ್ಲ, ಜನರು ಕೂಡ ಜಾಗೃತರಾಗಬೇಕು. ಲಂಚ ಕೇಳಿದಾಕ್ಷಣ ನೀಡದೆ ಅದನ್ನು ಪ್ರತಿಭಟಿಸಬೇಕು, ಧ್ವನಿ ಮುದ್ರಣ ಅಥವಾ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಬೇಕು. ಸೂಕ್ತ ಸಾಕ್ಷ್ಯ ಸಹಿತ ದೂರು ನೀಡಿದರೆ ನಾನು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಅವರು ತಿಳಿಸಿದರು. ಈಗಾಗಲೇ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಭ್ರಷ್ಟಾಚಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದರು.






