ಲೇಖಕ: admin

ಮಡಿಕೇರಿ ಅ.2 : ಮಡಿಕೇರಿ ನಗರದ ಕಲಾವಿದ ಸಂದೀಪ್ ಕುಮಾರ್ ಆರ್. ಅವರು ರಚಿಸಿದ 9 ಅಡಿ  ಎತ್ತರದ ಸುಂದರವಾದ ಮಹಾತ್ಮಗಾಂಧಿ ಪ್ರತಿಮೆಯನ್ನು ಗಾಳಿಬೀಡು ನವೋದಯ ವಿದ್ಯಾಸಂಸ್ಥೆಯ ಆವರಣದಲ್ಲಿ ಅನಾವರಣಗೊಳಿಸಲಾಯಿತು. ಗಾಂಧಿ ಜಯಂತಿಯ ದಿನವಾದ ಇಂದು ಪ್ರತಿಮೆಯನ್ನು ಅನಾವರಣಗೊಳಿಸಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಲಾವಿದ ಸಂದೀಪ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

Read More

ಸುಂಟಿಕೊಪ್ಪ ಅ.2 : ಮಲಯಾಳಿ ಸಮಾಜದ ಸಂಸ್ಕೃತಿ ವಿಶಿಷ್ಟವಾಗಿದ್ದು, ಇದನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಯುವ ಜನಾಂಗ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಹೇಳಿದರು. ಸುಂಟಿಕೊಪ್ಪ ಮಲಯಾಳಿ ಸಮಾಜದ 16ನೇ ವಾರ್ಷಿಕೋತ್ಸವ ಮತ್ತು ಓಣಂ ಹಬ್ಬದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಘೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ಮಲಯಾಳಿ ಸಮಾಜದಲ್ಲಿ ಬಡವರು, ಅವಿದ್ಯಾವಂತರು ಇನ್ನೂ ಇದ್ದಾರೆ. ಇವರುಗಳನ್ನು ಮುಖ್ಯ ವಾಹಿನಿಗೆ ತರಬೇಕು. ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಶಕ್ತರಾಗಬೇಕೆಂದು ಕರೆ ನೀಡಿದರು. ಸುಂಟಿಕೊಪ್ಪ ಮಲಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಪಿ.ಆರ್.ಸುಕುಮಾರ್ ಮಾತನಾಡಿ 16 ವರ್ಷದ ಹಿಂದೆ ಸ್ಥಾಪಿಸಲಾದ ಸಮಾಜ ಈಗ ಪ್ರವರ್ಧಮಾನಕ್ಕೆ ಬರುತ್ತಿದೆ. ಕೊಡಗಿನಲ್ಲಿ ಪ್ರಥಮವಾಗಿ ಸ್ಥಾಪಿಸಿದ ಮಲಯಾಳಿ ಸಮಾಜ ಎಂಬ ಹೆಗ್ಗಳಿಕೆಗೆ ನಾವು ಪಾತ್ರರಾಗಿದ್ದೇವೆ. ಸರಕಾರದ ಸೌಲಭ್ಯ ಪ್ರತಿಯೊಬ್ಬರು ಪಡೆದುಕೊಳ್ಳವಂತಾಗಬೇಕು, ರಾಜಕೀಯವಾಗಿ ಮುಂದೆ ಬರಬೇಕು ಎಂದು ಹೇಳಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಅಪ್ಪಟ ಮನುಷ್ಯ ಪ್ರೀತಿಯ…

Read More

ಸುಂಟಿಕೊಪ್ಪ ಅ.2 : ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜೀವನ ಮೌಲ್ಯ, ಆದರ್ಶಗಳನ್ನು ವಿದ್ಯಾರ್ಥಿಗಳು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಹೇಳಿದರು. ಮಹಾತ್ಮಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕಾಲೇಜ್ ನಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳು ಸರ್ವ ಧರ್ಮ ಸಮನ್ವಯತೆ ಕುರಿತಾದ ಋಘುಪತಿ ರಾಘವರಾಜಾರಾಮ್ ಪ್ರಾರ್ಥನೆ ಮಾಡಿದರು. ವಿದ್ಯಾರ್ಥಿಗಳಿಂದ ವಿವಿಧ ಧಾರ್ಮಿಕ ಗ್ರಂಥಗಳ ಪಠನ ವಾಚನ ನಡೆಯಿತು. ಕಾಲೇಜಿನ ಇತಿಹಾಸ ಉಪನ್ಯಾಸಕಿ ಕವಿತಾ ಕೆ.ಸಿ. ದಿನದ ಮಹತ್ವ ಕುರಿತು ಮಾತನಾಡಿ ಗಾಂಧೀಜಿ ಅವರ ಜೀವನ ಕ್ರಮ ಎಲ್ಲಾ ಕಾಲಕ್ಕೂ ಪ್ರಸ್ತುವಾದುದು ಎಂದು ಹೇಳಿದರು. ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಈ ಸಂದರ್ಭ ಉಪನ್ಯಾಸಕರುಗಳಾದ ಅಭಿಷೇಕ್, ಸುನೀತಾ, ಪದ್ಮಾವತಿ, ಸುಚಿತ್ರಾ, ಕವಿತ, ಮಂಜುಳಾ ಕೆ.ಸಿ, ಅನುಷಾ, ಸಂಧ್ಯಾ, ಕನಕ ಇದ್ದರು.

Read More

ಮಡಿಕೇರಿ ಅ.2 : ಬಾಳೆಲೆ ಗ್ರಾಮ ಪಂಚಾಯಿತಿ, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಮತ್ತು ಶಾಲಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬಾಳೆಲೆ ಮುಖ್ಯ ರಸ್ತೆ,  ಪದವಿಪೂರ್ವ ಕಾಲೇಜಿನ  ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ಗ್ರಾ.ಪಂ ಪ್ರತಿನಿಧಿಗಳು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ಸದಸ್ಯರು,  ಶಾಲಾ  ಕಾಲೇಜು  ವಿದ್ಯಾರ್ಥಿಗಳು ಏಕಕಾಲಕ್ಕೆ ಸ್ವಚ್ಛತಾ ಕಾರ್ಯ ಕೈಗೊಂಡರು. ಪಂಚಾಯತಿ ಅಧ್ಯಕ್ಷೆ ಮುಕ್ಕಾಟಿರ ಜಾನಕಿ ಕಾವೇರಪ್ಪ, ಮಾಜಿ ಅಧ್ಯಕ್ಷ ಪೊಡಮಾಡ ಸುಕೇಶ್ ಭೀಮಯ್ಯ, ಸದಸ್ಯರಾದ ಅದೇಂಗಡ ವಿನು ಉತ್ತಪ್ಪ, ಕಾಲೇಜು ಪ್ರಾಂಶುಪಾಲ ಎನ್.ಕೆ ಪ್ರಭು, ಪ್ರೌಢಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಪ್ರಮುಖರಾದ ಅಡ್ಡೇಂಗಡ ಅರುಣ್, ಸಜನ್, ರಾಖಿ, ಅಜಯ್, ಕಾವೇರಮ್ಮ, ಶೌರ್ಯ, ಪಡಿಞರಂಡ ಪ್ರಭು ಕುಮಾರ್, ಲಕ್ಷ್ಮಿ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಸುಜಾತಾ ವಿಜಯನಾಥನ್ ಹಾಗೂ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Read More

ಕುಶಾಲನಗರ ಅ.2 : ರಾಷ್ಟ್ರಪಿತ ಮಹಾತ್ಮ ಗಾಂಧಿ  ಅವರ 154 ನೇ ಜಯಂತಿ ಅಂಗವಾಗಿ  ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ  ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಚತಾ ಹಿ ಸೇವಾ ( ಸ್ವಚ್ಚತೆಯೇ ಸೇವೆ) ಅಭಿಯಾನದ ಮೂಲಕ ಶ್ರಮದಾನ ಕಾರ್ಯ ನಡೆಸಲಾಯಿತು.  ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್) ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ‌ಘಟಕ, ಸುಂಟಿಕೊಪ್ಪ ಜೆಸಿಐ ಸಂಸ್ಥೆ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ‌ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿಗೆ ಮುನ್ನಾ ದಿನ ಕೂಡ್ಲೂರು ಗ್ರಾಮದ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಶಾಲಾವರಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ತೆರವುಗೊಳಿಸುವ ಮೂಲಕ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.    ವಿದ್ಯಾರ್ಥಿಗಳಿಗೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ “ಸ್ವಚ್ಛ ತಾ ಹಿ ಸೇವೆ” ಹಾಗೂ ಶ್ರಮದಾನದ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್,‌ ಸ್ವಚ್ಛ ಭಾರತ್ ಮಿಷನ್…

Read More

ಮಡಿಕೇರಿ ಅ.2 : ಮಡಿಕೇರಿ ನಗರದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ಡಾಂಬರೀಕರಣ ಕಾರ್ಯ ಆರಂಭಿಸಬೇಕೆಂದು ಒತ್ತಾಯಿಸಿ ಅ.3 ರಂದು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಮತ್ತು ನಗರಸಭೆಯ ಎದುರು ಮುಖ್ಯ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದ್ದು, ನಗರದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜನಪರವಾಗಿ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಆಟೋ ಚಾಲಕರ ಸಂಘ, ಲಾರಿ ಚಾಲಕರ ಸಂಘ, ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿಗಳ ಸಂಘ, ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ಸಾರ್ವಜನಿಕರು ಕೂಡ ಬೃಹತ್ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ಮೂಲಕ ಬಂದು ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

Read More

ಮಡಿಕೇರಿ ಅ.2 : ಮಡಿಕೇರಿ ನಗರದ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ನಗರಸಭೆ ವಿರುದ್ಧ ಕೊಡಗು ರಕ್ಷಣಾ ವೇದಿಕೆ ಅ.3 ರಂದು ನಡೆಸುತ್ತಿರುವ ಪ್ರತಿಭಟನೆಗೆ ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ ಘಟಕ ಬೆಂಬಲ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಟೋ ಘಟಕದ ನಗರಾಧ್ಯಕ್ಷ ಪಿ.ವೈ.ಸುಲೈಮಾನ್ ಮಂಗಳವಾರ ಬೆಳಗ್ಗೆ 10.30 ರಿಂದ 11.30 ಗಂಟೆಯವರೆಗೆ ಚಾಲಕರು ಆಟೋ ರಿಕ್ಷಾಗಳ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

Read More

ಮಡಿಕೇರಿ ಅ.2 : ಶಾಂತಿನಿಕೇತನ ಯುವಕ ಸಂಘದ 45ನೇ ವರ್ಷದ ಗಣೇಶ ವಿಸರ್ಜನೋತ್ಸವವು ಅ.3 ರಂದು ನಡೆಯಲಿದೆ. “ಲೋಕ ಕಲ್ಯಾಣಕ್ಕಾಗಿ ಸಿಂದೂರ ರಾಕ್ಷಸನನ್ನು ವಧಿಸುವ ಮೂಲಕ ಗಣಪತಿಗೆ ಸಿಂದೂರ ಗಣಪತಿ” ಎಂಬ ಹೆಸರು ಬಂದ ಕಥಾ ಹಂದರವಿರುವ ಕಲಾಕೃತಿಗಳ ಚಲನವಲನಗಳಿರುವ ಶೋಭಯಾತ್ರೆ ನಡೆಯಲಿದೆ. ಸೆ.19 ರಂದು ಪ್ರತಿಷ್ಠಾಪಿಸಲ್ಪಟ್ಟು 15 ದಿನಗಳ ಕಾಲ ನಿತ್ಯ ಪೂಜೆಯೊಂದಿಗೆ ಅ.3 ರಂದು ಸಂಜೆ 5 ಗಂಟೆಗೆ ವಿಸರ್ಜನ ಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಪೂಜೆ ಜರುಗಲಿದ್ದು, ನಂತರ ಭಕ್ತಾಧಿಗಳಿಗೆ ಅನ್ನದಾನ ನೆರವೇರಲಿದೆ. ಸಂಜೆ 6 ಗಂಟೆಗೆ ಹೊರಲಿರುವ ಶೋಭಯಾತ್ರೆಯು ಶಾಂತಿನಿಕೇತನ, ಕೆಎಸ್‍ಆರ್‍ಟಿಸಿ ಡಿಪೋ ಮುಂಭಾಗ, ಜನರತ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಇಂದಿರಾಗಾಂಧಿ ವೃತ್ತ, ಚೌಡೇಶ್ವರಿಯಲ್ಲಿ ಪ್ರದರ್ಶನ ನೀಡಲಾಗುತ್ತದೆ. ಮಂಟಪದಲ್ಲಿ ಬೆಂಗಳೂರಿನ ಆರ್.ಜೆ. ಸ್ಟುಡಿಯೋ ದವರಿಂದ ಅತ್ಯಾಧುನಿಕ ಕೂಲ್ ಫೈರ್ ಹಾಗೂ ಸ್ಟುಡಿಯೋ, ಸೆಟ್ಟಿಂಗ್, ಮಡಿಕೇರಿಯ ಗುರು ಲೈಟಿಂಗ್ಸ್‍ನ ಲೋಕೇಶ್ ಅವರ ಸೌಂಡ್ಸ್, ವಿಜಯ್ ಮತ್ತು ತಂಡದಿಂದ ಚಲನವಲನ, ಡಿಕೇರಿಯ ಕಲಾವಿದ…

Read More

ಮಡಿಕೇರಿ ಅ.2 :  ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಇಕೋ ಕ್ಲಬ್,ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜಂಟಿಯಾಗಿ  ಸ್ವಚ್ಚತಾ ಶ್ರಮದಾನ ನಡೆಸಿದರು. ಮಡಿಕೇರಿ ಬಸ್ ಡಿಪೋದಿಂದ ಕೊಡಗು ವಿದ್ಯಾಲಯ ಶಾಲೆಯವರೆಗೆ  ಹಾಗೂ  ಮಡಿಕೇರಿಯ ಸುದರ್ಶನ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಪ್ರತಿಮೆಯನ್ನು ಸ್ವಚ್ಛಗೊಳಿಸಿದರು. ಒಟ್ಟು 45 ಎನ್‌ಸಿಸಿ ಕೆಡೆಟ್‌ಗಳು, 20 ಸ್ಕೌಟ್ಸ್ ಮತ್ತು ಗೈಡ್ಸ್, 25 ವಿದ್ಯಾರ್ಥಿಗಳು ಮತ್ತು 24 ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲೆ  ಕೆ.ಎಸ್. ಸುಮಿತ್ರಾ ಮತ್ತು ಆಡಳಿತ ವ್ಯವಸ್ಥಾಪಕ ಪಿ.ರವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Read More

ನಾಪೋಕ್ಲು ಅ.2 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪೆರಾಜೆ ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಶ್ರಮದಾನ ನಡೆಯಿತು. ಕೃಷಿ ಪತ್ತಿನ ಸಹಕಾರ ಸಂಘದ ಆವರಣದಿಂದ ಗಡಿಗುಡ್ಡೆ ತನಕ ಮುಖ್ಯ ರಸ್ತೆಯ ಬದಿಗಳ ಕಾಡು ಗಿಡಗಂಟಿಗಳನ್ನು ಕಡಿದು, ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಪಿ.ಎಂ.ಅಶೋಕ್, ಗ್ರಾಮ ಪಂಚಾಯತ್ ಪಿಡಿಒ ಮಹದೇವ ಪ್ರಭು, ಗ್ರಾ.ಪಂ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸಹಕಾರ ಸಂಘದ ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಡಿ.ಸಿ.ಧೀನರಾಜ್, ಎನ್.ವಿ.ಶೇಷಪ್ಪ, ಪಿ.ಟಿ.ಜಯರಾಮ, ಕಿರಣ ಬಂಗಾರಕೋಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಸ್ವಚ್ಛತಾ ವಾಹನ ಚಾಲಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More