ಮಡಿಕೇರಿ, ಅ.2: ‘ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊoದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದು ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ ಸೋಮವಾರ ಮಡಿಕೇರಿಯಲ್ಲಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ , ರಾಷ್ಟ್ರೀಯ ಸೇವಾ ಯೋಜನೆ ( ಎನ್ನೆಸ್ಸೆಸ್ ) ಘಟಕಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕ ಮತ್ತು ಎನ್.ಸಿ.ಸಿ.,ಘಟಕ ಹಾಗೂ ನಗರದ ಗ್ರೀನ್ ಸಿಟಿ ಪೋರಂ ನ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಅರಣ್ಯ ಭವನದ ಆವರಣದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ನಡಿಗೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ : 2023…
ಲೇಖಕ: admin
ಚೆಟ್ಟಳ್ಳಿ ಅ.2 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಬಲ್ಲಾರಂಡ ಮಣಿ ಉತ್ತಪ್ಪ ಅವರ ಬಳಗ ಭರ್ಜರಿ ಗೆಲವು ಸಾಧಿಸಿದೆ. ಎಲ್ಲಾ 12 ಸ್ಥಾನಗಳಲ್ಲಿ ಮಣಿ ಉತ್ತಪ್ಪ ಅವರ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಒಟ್ಟು 12 ಸ್ಥಾನಗಳಲ್ಲಿ 2ಮಹಿಳಾ ಮೀಸಲು ಸ್ಥಾನಕ್ಕೆ ಕೊಂಗೇಟಿರ ವಾಣಿಕಾಳಪ್ಪ ಹಾಗೂ ಮುಳ್ಳಂಡ ಮಾಯಮ್ಮ, ಪರಿಶಿಷ್ಟ ಜಾತಿ ಸ್ಥಾನಕ್ಕೆ ಪಿ.ಟಿ.ಗಣೇಶ್ ಹಾಗೂ ಪರಿಶಿಷ್ಟ ಪಂಗಡ ಸ್ಥಾನಕ್ಕೆ ಜೆ.ಅರ್.ರವಿ, ಹಿಂದುಳಿದ ವರ್ಗದ ಪ್ರವರ್ಗ- ಎ ಸ್ಥಾನಕ್ಕೆ ಬಿ.ಎಂ.ಕಾಶಿ ಹಾಗೂ ಪ್ರವರ್ಗ- ಬಿ ಸ್ಥಾನಕ್ಕೆ ಪೇರಿಯನ ಪೂಣಚ್ಚ, ಸಾಲಗಾರರಲ್ಲದ ಸ್ಥಾನಕ್ಕೆ ಮರದಾಳು ಚೇತನ್ (ಹರಿ) ಸೇರಿ 7 ಮಂದಿ ಅವಿರೋಧವಾಗಿ ಆಯ್ಕೆಯಾದರು. ಉಳಿದ 5 ಸ್ಥಾನಗಳಿಗೆ ಚುನಾವಣೆ ನಡೆದು ಬಲ್ಲಾರಂಡ ಮಣಿ ಉತ್ತಪ್ಪ (497), ಶಿವುನಂಜಪ್ಪ ಪುತ್ತರಿರ (473), ವೇಣುಗೋಪಾಲ ಬಟ್ಟೀರ (465) ದಯಾನಂದ ಅಕ್ಕಾರಿ(406) ಹಾಗೂ ಪ್ರಜ್ವಲ್ ಕರ್ಣಯ್ಯನ (422) ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿಗಳಾದ ತೀರ್ಥ ಕುಮಾರ್ ಚೆಟ್ಟೋಳಿರ…
ಕಕ್ಕಬ್ಬೆ ಅ.2 : ಕಕ್ಕಬ್ಬೆ ಸಮೀಪದಲ್ಲಿರುವ ಇತಿಹಾಸ ಪ್ರಸಿದ್ಧ ಪಯ್-ನರಿ ದರ್ಗಾ ವಠಾರದಲ್ಲಿ ಬೃಹತ್ ಮೀಲಾದ್ ಸಮ್ಮೇಳನ ಹಾಗೂ ಶಅರೇ ಮುಬಾರಕ್ ಪ್ರದರ್ಶನ ಅ.22 ಮತ್ತು 23 ರಂದು ನಡೆಯಲಿದೆ. ಪ್ರಮುಖ ಧರ್ಮಗುರುಗಳು ಹಾಗೂ ವಾಗ್ಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕುಶಾಲನಗರ, ಅ.1: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 154ನೇ ಜಯಂತಿ ಅಂಗವಾಗಿ ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ ( ಸ್ವಚ್ಚತೆಯೇ ಸೇವೆ) ಅಭಿಯಾನದ ಮೂಲಕ ಶ್ರಮದಾನ ಕಾರ್ಯ ನಡೆಸಲಾಯಿತು. ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್) ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಸುಂಟಿಕೊಪ್ಪ ಜೆಸಿಐ ಸಂಸ್ಥೆ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿಗೆ ಮುನ್ನಾ ದಿನ ಕೂಡ್ಲೂರು ಗ್ರಾಮದ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಶಾಲಾವರಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ತೆರವುಗೊಳಿಸುವ ಮೂಲಕ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ “ಸ್ವಚ್ಛ ತಾ ಹಿ ಸೇವೆ” ಹಾಗೂ ಶ್ರಮದಾನದ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸ್ವಚ್ಛ ಭಾರತ್ ಮಿಷನ್…
ಮಡಿಕೇರಿ ಅ.2 : ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅ. 20 ರಂದು ಶುಕ್ರವಾರ ನಗರದ ಗಾಂಧಿ ಮೈದಾನದಲ್ಲಿ 10 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಮಕ್ಕಳ ದಸರಾ ಸ್ಪಧೆ೯ಗಳು ಅ. 20 ರಂದು ಶುಕ್ರವಾರ ಬೆಳಗ್ಗೆ 9.30 ಗಂಟೆಯಿಂದ ಪ್ರಾರಂಭವಾಗಲಿದೆ. ಮಕ್ಕಳಿಂದ ಸಂತೆ ಮತ್ತು ಮಕ್ಕಳಿಂದ ಅಂಗಡಿ – ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು.. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ. ಮಕ್ಕಳಿಂದ ಮಂಟಪ- 10 ನಿಮಿಷದ ಪ್ರದಶ೯ನಾವಧಿಯುಳ್ಳ ಮಂಟಪ ತಯಾರಿಕಾ ಸ್ಪಧೆ೯ಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು.…
ಮಡಿಕೇರಿ ಅ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಹಿರಿಯ ಸದಸ್ಯ ಟಿ.ಪಿ.ರಮೇಶ್, ಪ್ರಧಾನ ಕಾರ್ಯದರ್ಶಿ ಮುನಿರ್ ಅಹಮ್ಮದ್, ಕಾರ್ಯದರ್ಶಿ ಕೆ.ಟಿ.ಬೇಬಿಮ್ಯಾಥ್ಯು, ಸಮಿತಿ ಸದಸ್ಯರು ಹಾಗೂ ಮತ್ತಿತರರು ಹಾಜರಿದ್ದರು.
ಮಡಿಕೇರಿ ಅ.2 : ಶಿಕ್ಷಣ ಇಲಾಖೆ ವತಿಯಿಂದ ಮಾದಾಪುರದ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕಿನ ಅರುವತ್ತೋಕ್ಲುವಿನ ಸರ್ವಧೈವತ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಗೆಲವು ಸಾಧಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ. ತಂಡದ ವ್ಯವಸ್ಥಾಪಕರಾಗಿ ಕಲ್ಲುಮುಟ್ಲು ಜಶ್ಮಿ, ನಿಧಿ ಸೋಮಣ್ಣ ಹಾಗೂ ತರಬೇತುದಾರರಾಗಿ ಪ್ರಮೋದ್ ಕಾರ್ಯನಿರ್ವಹಿಸಿದರು.
ಬೆಂಗಳೂರು ಅ.2 : ಗ್ರಾಮಗಳ ಉದ್ದಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಮತ್ತು ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ ಕೊಟ್ಟವರು ಮಹಾತ್ಮಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮಗಾಂಧಿ ಅವರ 154ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿ ಅವರ ಅಭಿವೃದ್ಧಿ ಮಾದರಿ ಇವತ್ತಿಗೂ ಶ್ರೇಷ್ಠವಾದದ್ದು. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಘನತೆ ಮತ್ತು ಗೌರವದಿಂದ ಬಾಳಬೇಕು ಎನ್ನುವುದು ಅವರ ಗುರಿಯಾಗಿತ್ತು. ಹೀಗಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯಂತೆ ಅರೆ ಬೆತ್ತಲೆಯಾಗಿ ಉಡುಪು ಧರಿಸುತ್ತಿದ್ದರು. ನುಡಿದಂತೆ ನಡೆಯುವುದು ಗಾಂಧಿ ಅವರ ಬದುಕಾಗಿತ್ತು ಎಂದು ವಿವರಿಸಿದರು. ಮಹಾತ್ಮಗಾಂಧಿ ಅಪರೂಪದ ಸಂತರಾಗಿದ್ದರು. ಇವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾದದ್ದು. ನೆಹರೂ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನ ಗಾಂಧಿಯವರು ದೆಹಲಿಯಲ್ಲಿ ಇರಲಿಲ್ಲ. ಕೋಲ್ಕತ್ತಾದಲ್ಲಿ ದೇಶ ವಿಭಜನೆಯಿಂದಾದ ಅನಾಹುತಗಳಲ್ಲಿ ನೊಂದವರ ಜನರ ಕಣ್ಣೀರು ಒರೆಸುತ್ತಿದ್ದರು ಎಂದು ಅವರ ಸರಳತೆ ಮತ್ತು ಸೌಹಾರ್ದದ ಬದುಕನ್ನು ವಿವರಿಸಿದರು. ರವೀಂದ್ರನಾಥ…
ಮಡಿಕೇರಿ ಅ.2 : ಹಿರಿಯರು ಕಾನೂನಿನ ಹಾಗೂ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಿ ಎಂದು ಉಪ ವಿಭಾಗಾಧಿಕಾರಿ ಯತೀಶ್ ಕುಮಾರ್ ಉಳ್ಳಾಲ್ ತಿಳಿಸಿದರು. ನಗರದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಅವರು ಮಾತನಾಡಿ “ಬದಲಾಗುತ್ತಿರುವ ಜಗತ್ತಿನಲ್ಲಿ ಹಿರಿಯ ನಾಗರಿಕರ ಸ್ಥಿತಿಸ್ಥಾಪಕತ್ವ” ಎಂಬ ಘೋಷ ವಾಕ್ಯ ದಡಿಯಲ್ಲಿ ಬದಲಾಗುತ್ತಿರುವ ಈ ಆಧುನಿಕ ಸನ್ನಿವೇಶದಲ್ಲಿ ತಂತ್ರಜ್ಞಾನವು ಒಂದಾಗಿದೆ ಹಿರಿಯ ನಾಗರಿಕರು ಇದನ್ನು ಬಳಸಿ ಉಪಯುಕ್ತ ಮಾಹಿತಿ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪಾದನೆಯಲ್ಲಿ ಮಕ್ಕಳ ಜತೆಗೆ ತಮಗೂ ಸ್ವಲ್ಪ ಉಳಿಸಿಕೊಳ್ಳಬೇಕು ಎಂದರು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಮಾತನಾಡಿ ಹಿರಿಯ ನಾಗರಿಕರು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು. ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಹಳ ಉತ್ತಮವಾಗಿಟ್ಟುಕೊಳ್ಳಬೇಕು ದಿನನಿತ್ಯ ಯೋಗ, ಒಳ್ಳೆಯ ಆಹಾರ ಸೇವನೆ, ವಿಶ್ರಾಂತಿ ಪಡೆಯುವುದು ಮುಂತಾದ ಚಟುವಟಿಕೆಗಳಲ್ಲಿ ತೊಡಗುವುದು ಮುಖ್ಯ ಎಂದರು. ಜಿಲ್ಲಾ ಹಿರಿಯ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಮಾತನಾಡಿ, ನ್ಯಾಯಾಲಯದ…
ಮಡಿಕೇರಿ ಅ.2 : ಸಾಹಿತಿ ನಾ ಡಿಸೋಜ ಅವರ ಸಾಹಿತ್ಯ ಜೈಮಿನ ಭಾರತದ ಅಶ್ವಮೇಧ ಯಜ್ಞದ ಕುದುರೆಯಂತೆ. ಕುದುರೆ ಚಲಿಸಿದಂತೆ ಕಥೆಗಳು ನಿಲ್ಲುತ್ತದೆ. ಕುದುರೆ ನಿಂತರೆ ಕಥೆಗಳು ಚಲಿಸಲಾರಂಭಿಸುತ್ತದೆ. ಅದೇ ರೀತಿಯಲ್ಲಿ ನಾ. ಡಿಸೋಜ ಅವರ ಕಾದಂಬರಿಗಳಲ್ಲಿ ಅಣೆಕಟ್ಟು, ಒಡ್ಡುಗಳ ಕಾರಣದಿಂದ ನೀರು ನಿಂತರೆ ಒಂದೊಂದು ಕಥೆಗಳು ಹುಟ್ಟಿಕೊಳ್ಳುತ್ತವೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ ಡಾ. ಕೆ. ಹೆಚ್.ಮುಸ್ತಾಫ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡ ಸಂದರ್ಭದಲ್ಲಿ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಡಾ. ನಾ ಡಿಸೋಜ ಅವರ ಸಾಹಿತ್ಯದ ಕುರಿತು ದತ್ತಿ ಉಪನ್ಯಾಸ ನೀಡಿದ ಅವರು ನಾ. ಡಿಸೋಜ ಅವರ ಸಾಹಿತ್ಯದಲ್ಲಿ ಕಾಣುವ ದಟ್ಟ ಜೀವನಾನುಭವ, ಪ್ರಕೃತಿಯ ನಿರೂಪಣೆಗೆ…






