ಮಡಿಕೇರಿ ಅ.2 : ಗಾಂಧಿ ಜಯಂತಿಯ ಹಿನ್ನೆಲೆ ಮಡಿಕೇರಿ ನಗರದ ಸಾಯಿ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ಮಹಾತ್ಮಗಾಂಧಿ ಅವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯಡಿ ಸ್ವಚ್ಛ ಪರಿಸರಕ್ಕೆ ಆದ್ಯತೆ ನೀಡಿ ಶ್ರಮದಾನ ನಡೆಸುತ್ತಿರುವುದಾಗಿ ವಿದ್ಯಾರ್ಥಿಗಳು ಹೇಳಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಶ್ವೇತಾ, ಸಾಯಿ ಹಾಸ್ಟೆಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಅ.2 : ನಮ್ಮಸುತ್ತ ಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರೀಕನ ಕರ್ತವ್ಯ ಎಂದು ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ತಿಳಿಸಿದರು. ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ನಗರದ ಅಬ್ಬಿ ಫಾಲ್ಸ್ ಸಮೀಪ ನಡೆದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಬದುಕಿನಲ್ಲಿ ಸ್ವಚ್ಛತೆ ಬಹು ಮುಖ್ಯವಾಗಿದೆ. ನಮ್ಮ ಮನೆ ಮಾತ್ರವಲ್ಲದೇ ಸುತ್ತ-ಮುತ್ತಲಿನ ಪರಿಸರದಲ್ಲಿಯೂ ನಾವು ಸ್ವಚ್ಛತೆಯನ್ನು ಕಾಪಾಡಬೇಕು. ಇದರಿಂದ ಉತ್ತಮ ಆರೋಗ್ಯದ ಜೊತೆಗೆ ನಮ್ಮ ಪರಿಸರವೂ ಸಹ ಸುಂದರವಾಗಿರುತ್ತದೆ ಎಂದರು. ಪ್ರಧಾನಮಂತ್ರಿ ಅವರ ಆಶಯದಂತೆ ದೇಶಾದ್ಯಂತ ಒಂದು ಗಂಟೆಗಳ ಕಾಲ ಶ್ರಮದಾನ ಮಾಡಲಾಗಿದೆ. ಇದರ ಅಂಗವಾಗಿ ಅಬ್ಬಿ ಜಲಪಾತದ ಬಳಿ ಜಿಲ್ಲಾ ಮಟ್ಟದಲ್ಲಿ “ಬೃಹತ್ ಸ್ವಚ್ಛತಾ ಆಂದೋಲನ” ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಜಿಲ್ಲೆಯ 103 ಗ್ರಾಮಪಂಚಾಯಿತಿಗಳಲ್ಲಿಯೂ ಏಕ ಕಾಲದಲ್ಲಿ ಶ್ರಮದಾನ ಕಾರ್ಯಕ್ರಮ ಜರುಗಿದೆ ಎಂದು ತಿಳಿಸಿದರು. ಇದೇ…
ಮಡಿಕೇರಿ ಅ.2 : ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅ.15 ರಿಂದ 24ರ ವರೆಗೆ ನಗರದ ದಸರಾ ಮೈದಾನದ ಜನೋತ್ಸವ ವೇದಿಕೆಯಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು ಹಾಗೂ ಕಲಾತಂಡಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಲಾವಿದರು ಕಲಾತಂಡಗಳು ಅರ್ಜಿಯನ್ನು ಅ.4 ರ ಒಳಗೆ ಕಾವೇರಿ ದಸರಾ ಉತ್ಸವ-23 ಗ್ರಾಮ ಪಂಚಾಯಿತಿ ಗೋಣಿಕೊಪ್ಪಲು ಕೊಡಗು ಅಥವಾ gnkpldasara23@gmail.com ಸಲ್ಲಿಸುವಂತೆ ದಸರಾ ಸಮಿತಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :- ರಮೇಶ್. ಎನ್ – 7760803783, ದಿಲ್ಲನ್ ಚಂಗಪ್ಪ- 9611640552
ಮಡಿಕೇರಿ ಅ.2 : ರೋಟರಿ ಮಡಿಕೇರಿ ವತಿಯಿಂದ ಮೂವರು ಶಿಕ್ಷಕರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂತ ಜೋಸೆಫರ ಶಾಲಾ ಶಿಕ್ಷಕಿ ಗರ್ಟೂಡ್ ಟಿ.ಜಿ, ಕೊಡಗು ವಿದ್ಯಾಲಯದ ಪೊನ್ನಮ್ಮ ಪಿ.ಎಸ್ ಹಾಗೂ ಚೆಂಬು ಸರಕಾರಿ ಶಾಲೆಯ ಕಾಮಾಕ್ಷಿ ಪಿ.ಎಸ್ ಅವರು ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದರು. ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರದ ಕುರಿತು ಪ್ರಶಸ್ತಿ ವಿಜೇತರು ಅಭಿಪ್ರಾಯ ಹಂಚಿಕೊಡರು. ರೋಟರಿ ಅಧ್ಯಕ್ಷೆ ಗೀತಾ ಗಿರೀಶ್, ಕಾರ್ಯದರ್ಶಿ ಶರತ್ ಎಂ.ಕೆ, ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ ಪ್ರಮೋದ್ ರೈ, ಕಾರ್ಯದರ್ಶಿ ರತ್ನಾಕರ ರೈ, ಮಡಿಕೇರಿ ರೋಟರಿ ವುಡ್ಸ್ ನ ಕಾರ್ಯದರ್ಶಿ ಹರೀಶ್ ಕಿಗ್ಗಾಲ್, ಸಾಹಿತ್ಯ ಪರಿಷತ್ತಿನ ರಂಜಿತ್, ಇನ್ನರ್ ವೀಲ್ ಸದಸ್ಯೆಯರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಅ.1 : ಸಂಪೂರ್ಣ ಪಾನ ನಿಷೇಧ ಮಹಾತ್ಮ ಗಾಂಧಿಯವರ ಅತಿ ದೊಡ್ಡ ಕನಸಾಗಿತ್ತು. ಅವರ ತತ್ವ ಪಾಲಿಸುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಕರ್ನಾಟಕ ಸರ್ಕಾರ ಈಗಾಗಲೇ ಇರುವ ಮದ್ಯದಂಗಡಿಗಳು ಸಾಲದು ಎಂದು ಗ್ರಾಮ ಪoಚಾಯತ್ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿದೆ. ಇಂತಹ ಮದ್ಯಪಾನ ಪ್ರೋತ್ಸಾಹಿಸುವ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ, ಅಂದು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಯಾವ ನೈತಿಕತೆಯೂ ಇಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹ್ಮದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನ್ನ ಆದಾಯ ಹೆಚ್ಚಿಸಿಕೊಳ್ಳುವ ಏಕೈಕ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಮುಂದಾಗಿದೆ. ಮದ್ಯಪಾನದಿಂದ ಸಮಾಜದಲ್ಲಿ ಎಷ್ಟೆಲ್ಲ ಸಾಮಾಜಿಕ ಸಮಸ್ಯೆಗಳು, ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಅದ್ಯಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೆ ಮದ್ಯದಂಗಡಿಗಳ ಸಂಖ್ಯೆಯನ್ನು ದೊಡ್ಡ ಮಟ್ಟದಲ್ಲಿ ಏರಿಸಲು ಹೊರಟಿರುವ ಯೋಜನೆಯನ್ನು ಎಸ್.ಡಿ.ಪಿ.ಐ ಕಟುವಾಗಿ…
ಮಡಿಕೇರಿ ಅ.1 ಮಡಿಕೇರಿಯ ರೋಟರಿ ವುಡ್ಸ್ ವತಿಯಿಂದ ನೀಡಲಾಗುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ಭಾಗಮಂಡಲದ ಶ್ರೀಕಾವೇರಿ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ಅವರು ಭಾಜನರಾಗಿದ್ದಾರೆ. ಕಳೆದ 30ವರ್ಷಗಳಿಂದ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ 2021ರಿಂದ ಪ್ರಾಂಶುಪಾಲರಾಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತಿರುವ ದಿವಾಕರ ಅವರು ಅರ್ಥಶಾಸ್ತç ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿ ಎನ್ಸಿಇಆರ್ಟಿ ಪಠ್ಯ ಪುಸ್ತಕದ ಅನುವಾದ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣದಲ್ಲಿ ಇವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ನೇಷನ್ ಬಿಲ್ಡರ್ ಪ್ರಶಸ್ತಿಯನ್ನು ನೀಡಲಾಗಿದೆ. ಮಡಿಕೇರಿಯ ಹೊಸ ಬಡಾವಣೆಯಲ್ಲಿ ನೆಲೆಸಿರುವ ದಿವಾಕರ ಅವರು ಪೆರಾಜೆ ಗ್ರಾಮದ ಕುಂದಲ್ಪಾಡಿ ದಿವಂಗತ ಜತ್ತಪ್ಪ ಹಾಗೂ ಬೊಮ್ಮಕ್ಕ ದಂಪತಿ ಪುತ್ರರಾಗಿದ್ದಾರೆ.
ಮಡಿಕೇರಿ ಅ.1 : ಮೊಗೇರ ಗ್ರಾಮ ವಿಕಾಸ ಯೋಜನೆಯ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ಲಾಟರಿ ಲಕ್ಕಿಡಿಪ್ ನಲ್ಲಿ ವಿಜೇತರಾದವರಿಗೆ ನಗದು ಬಹುಮಾನ ವಿತರಿಸಲಾಯಿತು. ಸುಳ್ಯದ ಕರುಣಾಕರ ಪ್ರಥಮ ಬಹುಮಾನ (ಸಂಖ್ಯೆ 2378) ರೂ.10 ಸಾವಿರ, ಪತ್ರಕರ್ತ ಸೋಮವಾರಪೇಟೆಯ ಭಾಸ್ಕರ ದ್ವಿತೀಯ ಬಹುಮಾನ (ಸಂಖ್ಯೆ 2712) ರೂ.7 ಸಾವಿರ ಹಾಗೂ ಬೆಟ್ಟಗೇರಿಯ ತೀರ್ಥಪ್ರಸಾದ್ ತೃತೀಯ ಬಹುಮಾನ (ಸಂಖ್ಯೆ 1904) ರೂ.3 ಸಾವಿರ ಪಡೆದುಕೊಂಡರು. ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷ ಗೌತಮ್ ಶಿವಪ್ಪ, ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ ಮತ್ತಿತರ ಪ್ರಮುಖರು ಬಹುಮಾನ ವಿತರಿಸಿದರು.
ಮಡಿಕೇರಿ ಅ.1 : ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಕುರಿಯ ಮೇಲೆ ಮಧ್ಯರಾತ್ರಿಯ ವೇಳೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಗರಗಂದೂರು ಗ್ರಾಮದಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ಪಿಯು ವಸತಿ ಕಾಲೇಜಿನ ಬಳಿ ಇರುವ ಉಮ್ಮರ್ ಖಾನ್ ಎಂಬುವವರಿಗೆ ಸೇರಿದ ಕುರಿಯನ್ನು ಚಿರತೆ ಕೊಂದು ಹಾಕಿದೆ. ಚಿರತೆಯ ದಾಳಿಗೆ ಬೆದರಿದ ದನ ಕರುಗಳು ಚೀರಿಕೊಳ್ಳಲು ಆರಂಭಿಸಿದಾಗ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿ ಜಗದೀಶ್, ಪಶು ವೈದ್ಯಾಧಿಕಾರಿ ಬಾದಾಮಿ, ಹರದೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ಉಪಾಧ್ಯಕ್ಷ ಸಲೀಂ, ಸದಸ್ಯ ರಮೇಶ, ಕಾಂಗ್ರೆಸ್ ಓಬಿಸಿ ಅಧ್ಯಕ್ಷ ಸುಂದರ ಭೇಟಿ ನೀಡಿ ಪರಿಶೀಲಿಸಿದರು. ಈ ಭಾಗದ ವಿದ್ಯಾರ್ಥಿಗಳು ಹಾಗೂ ನಿವಾಸಿಗಳಲ್ಲಿ ಅತಂಕ ಸೃಷ್ಟಿಯಾಗಿದ್ದು, ಚಿರತೆಯನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದಾರೆ.
ಮಡಿಕೇರಿ ಅ.1 : ಮನುಕುಲಕ್ಕೆ ನೈತಿಕತೆಯ ಪಾಠಮಾಡಿ ಸತ್ಯ-ಶುದ್ಧ ಸನ್ನಡತೆಯ ಸಾತ್ವಿಕ ಬದುಕಿನ ಸಂಸ್ಕಾರ ಅರುಹಿದ ಚೈತನ್ಯ ಶಕ್ತಿಯೇ ಶ್ರೀವೀರಭದ್ರ ದೇವರು. ಬದುಕಿನ ಶ್ರೇಷ್ಠ ನಡೆ-ನುಡಿಗೆ ಅಗತ್ಯವಾದ ಧರ್ಮ ಮಾರ್ಗದಲ್ಲಿ ಕೈಹಿಡಿದು ಮುನ್ನಡೆಸಲು ಬೆಳಕನಿತ್ತ ಮಹಾನುಭಾವ ವೀರಭದ್ರ ಎಂದು ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮತ್ತು ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಸಂಯುಕ್ತಾಶ್ರಯದಲ್ಲಿ ನೀರುಗುಂದ ಶ್ರೀ ವೀರಭದ್ರೇಶ್ವರ ದೇವಾಲಯ ಸಮಿತಿ, ಕೊಡ್ಲಿಪೇಟೆ, ಕಿರಿಕೊಡ್ಲಿ, ಕೋಟೆಯೂರು, ಗೌಡಳ್ಳಿ, ನೇಗಳ್ಳೆ ಶ್ರೀ ವೀರಭದ್ರ ದೇವಾಲಯ ಸಮಿತಿ ಇವರುಗಳ ಸಹಯೋಗದೊಂದಿಗೆ ನಡೆದ ಶ್ರೀವೀರಭದ್ರೇಶ್ವರ ಸ್ವಾಮಿ ಜನ್ಮ ವರ್ದಂತಿಯ 5ನೇ ವರ್ಷದ ಮಹೋತ್ಸವ, ಬಿಲ್ವಪತ್ರೆ ಮತ್ತು ರುದ್ರಾಕ್ಷಿ ಗಿಡ ನೆಡುವ ಕಾರ್ಯಕ್ರಮಕ್ಕೆ ನೀರಗುಂದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಚಾಲನೆ ನೀಡಿ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾನವನ ಇಹದ ಬದುಕಿನ ಸ್ತರಗಳಲ್ಲಿ ಇರಬಹುದಾದ ಜನವಿರೋಧಿ ಕೃತ್ಯಗಳ ನಿವಾರಣೆಗೆ ಶ್ರೀವೀರಭದ್ರ ದೇವರ ಮಹಾಶಕ್ತಿ ಸಂಚಯವು ನಿರಂತರ ಪ್ರಭಾವ ಬೀರುತ್ತದೆ…
ಮಡಿಕೇರಿ, ಅ.1 : ವೀರಲೋಕ ಪ್ರಕಾಶನದ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಜಾನಪದ ಪರಿಷತ್, ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮಡಿಕೇರಿಯಲ್ಲಿ ಅಕ್ಟೋಬರ್ 7 ಮತ್ತು 8 ರಂದು ಕಥಾ ಕಮ್ಮಟ ನಡೆಯಲಿದೆ ಎಂದು ಜಿಲ್ಲಾ ಸಂಚಾಲಕ ಬಿ.ಜಿ. ಅನಂತ ಶಯನ ಹೇಳಿದ್ದಾರೆ. ಕಥಾ ಕಮ್ಮಟವು ಅ. 7 ರಂದು ಜೂನಿಯರ್ ಕಾಲೇಜು ಸಭಾಂಗಣದಲ್ಲಿ, ವೀರಲೋಕ ಪ್ರಕಾಶನದ ಮಾಲೀಕ ವೀರಕಪುತ್ರ ಎಂ. ಶ್ರೀನಿವಾಸ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ, ಉಪನ್ಯಾಸಕ ಮೋಹನ್ ಬಾಳೇಗಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಶಿಬಿರ ನಿರ್ದೇಶಕ, ಉಪನ್ಯಾಸಕ, ಬರಹಗಾರ ಪ್ರಭಾಕರ ಶಿಶಿಲ, ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಚಿನ್ನಸ್ವಾಮಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ ಭಾಗವಹಿಸುತ್ತಾರೆ.ವೀರಲೋಕ ಪ್ರಕಾಶನವು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಕಥಾ ಕಮ್ಮಟ ನಡೆಸುತ್ತಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಕಮ್ಮಟದಲ್ಲಿ ಶಿಬಿರಾರ್ಥಿಗಳಾಗಿ ಉದಯೋನ್ಮುಖ ಬರಹಗಾರರೊಂದಿಗೆ, ಯುವ ಪೀಳಿಗೆಯಲ್ಲೂ ಬರಹ ಜಾಗೃತಿ ಮೂಡಿಸುವುದು ವೀರಲೋಕದ ಉದ್ದೇಶವಾಗಿದೆ. ಶಿಬಿರದ ತರಬೇತುದಾರರಾಗಿ ಡಾ.…






