ಮಡಿಕೇರಿ ಅ.1 : ವಿದ್ಯುತ್ ಮಾರ್ಗದ ತಂತಿ ತುಂಡಾಗಿ ಬಿದ್ದ ಪರಿಣಾಮ ಒಂದು ಕರು ಸಹಿತ ಐದು ಹಸುಗಳು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಲೆಮಾಡ ನಾಣಯ್ಯ ಅವರಿಗೆ ಸೇರಿದ ಹಸುಗಳನ್ನು ಭಾನುವಾರ ಮಧ್ಯಾಹ್ನ ಮೇಯಲು ಬಿಡಲಾಗಿತ್ತು. ಗದ್ದೆಯಲ್ಲಿ ವಿದ್ಯುತ್ ಮಾರ್ಗದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಮತ್ತು ತೇವಾಂಶ ಇದ್ದ ಪರಿಣಾಮ ವಿದ್ಯುತ್ ಹರಿದು ಸ್ಥಳದಲ್ಲಿಯೇ ಐದು ಜಾನುವಾರುಗಳು ಮೃತಪಟ್ಟಿವೆ. ಚೆಸ್ಕಾಂ ನಿರ್ಲಕ್ಷö್ಯವೇ ಈ ಘಟನೆಗೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಸುಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ ಅ.1 : ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಎನ್ ಸಿ ಸಿ ಘಟಕ ಮತ್ತು 19 ಕರ್ನಾಟಕ ಬಟಾಲಿಯನ್ ಎನ್ ಸಿ ಸಿ ಮಡಿಕೇರಿ ಇವರ ಸಹಯೋಗದಲ್ಲಿ ” ಏಕ್ ತರೇಕ್ ಏಕ್ ಝಂಡಾ” ಅಭಿಯಾನದ ಅನ್ವಯ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಚತಾ ಕಾರ್ಯವನ್ನು ಮಡಿಕೇರಿ ನಗರದ ವಿವಿಧ ಸ್ಥಳಗಳಲ್ಲಿ ಕೈಗೊಳ್ಳಲಾಯಿತು. ಕಸ ಮುಕ್ತ ಭಾರತವನ್ನಾಗಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಕೈಗೊಳ್ಳಲಾಗುತ್ತಿರುವ ” ಸ್ವಚ್ಚತಾಯೇ ಸೇವಾ ಅಭಿಯಾನದ ಭಾಗವಾಗಿಯೂ ಈ ಚಟುವಟಿಕೆಯನ್ನು ರೂಪಿಸಲಾಯಿತು. ಅಭಿಯಾನದಲ್ಲಿ ನಗರದ ಕೆಎಸ್ ಆರ್ ಟಿ ಸಿ ಬಸ್ಸು ನಿಲ್ಧಾಣದ ಆವರಣ ಹಾಗೂ ಅಸುಪಾಸಿನ ಪ್ರದೇಶವನ್ನು ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ಸ್ವಚ್ಚಗೊಳಿಸಿದರು. ಅಭಿಯಾನದಲ್ಲಿ 19 ಕರ್ನಾಟಕ ಬಟಾಲಿಯನ್ ಕಮಾಂಡಿಗ್ ಅಧಿಕಾರಿ ಕರ್ನಲ್ ಜೆಪ್ರೀನ್ ಗಿಲ್ಬರ್ಟ್ ಆರ್ನಾ ಅವರು ಅಧ್ಯಕ್ಷತೆ ವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಎಸ್ ಜಿ ಟಿ ಕೆಡೆಟ್ ಕೊಡಗು ವಿದ್ಯಾಲಯದ ವಿದ್ಯಾರ್ಥಿ ರಘುವಂಶಿ ಅವರು ನೈರ್ಮಲ್ಯದ ಕುರಿತು ಮಾತನಾಡಿದರು. ಸುಬೇದರ್…
ಮಡಿಕೇರಿ ಸೆ.30 : ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ವತಿಯಿಂದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರನ್ನು ಸನ್ಮಾನಿಸಲಾಯಿತು. ಪುಸ್ತಕಗಳ ವಿತರಣೆ : ಇದೇ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕಿನ ಪದಾಧಿಕಾರಿಗಳು ಹಾಗೂ ಮಹಿಳಾ ಬರಹಗಾರರ ಒಕ್ಕೂಟದ ಅಧ್ಯಕರು ಮತ್ತು ಪ್ರತಿನಿಧಿಗಳಿಗೆ ಇತ್ತೀಚಿಗೆ ಬಿಡುಗಡೆಗೊಂಡ ನನ್ನ ಅರಿವಿನ ಪ್ರವಾದಿ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷ ಟಿ.ಪಿ ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಹಾಗೂ ಕ.ಸಾ.ಪ ತಾಲ್ಲೂಕಿನ ನಿಕಟ ಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್, ಸ್ಥಾನೀಯ ಸಂಚಾಲಕಿ ವಹೀದ ಶೌಕತ್, ಮಫೀದ ಮರ್ಯಮ್ ತಾಹೀರ ಹಾಗೂ ಆಲೀಯಾ ಶೌಕತ್ ಹಾಜರಿದ್ದರು.
ಮಡಿಕೇರಿ ಸೆ.30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಲಾಗಿತ್ತು. ಆ ದಿಸೆಯಲ್ಲಿ ಆಯಾಯ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಮೌಲ್ಯಮಾಪಕರಿಂದ ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಆ ನಿಟ್ಟಿನಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಈ ಮೂರು ವಿಭಾಗದಲ್ಲಿ ಆಯ್ಕೆಯಾದವರ ಪಟ್ಟಿ ಇಂತಿದೆ. ಪ್ರೌಢಶಾಲಾ ವಿಭಾಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ 9ನೇ ತರಗತಿಯ ಅನಿರುದ್ಧ್ ಮನೋಜ್(ಪ್ರಥಮ), ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ 10ನೇ ತರಗತಿಯ ವಿನುತಾ ಎಸ್.ಪಿ.(ದ್ವಿತೀಯ), ಸೋಮವಾರಪೇಟೆಯ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ 9ನೇ ತರಗತಿಯ ವಿನುತಾ ಡಿ.ಎಂ(ತೃತೀಯ) ಸ್ಥಾನ ಪಡೆದಿದ್ದಾರೆ. ಪದವಿ ಪೂರ್ವ ವಿಭಾಗದಲ್ಲಿ ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ ಪಿಯುಸಿ(ಪಿಸಿಎಂಬಿ ವಿಭಾಗದ) ಹೃತ್ಪೂರ್ವಕ್ ಕೆ.ಎಸ್.(ಪ್ರಥಮ), ಮಡಿಕೇರಿಯ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ(ಪಿಸಿಎಂಬಿ ವಿಭಾಗದ) ಮೇನಿತ ನಾಗೇಶ್(ದ್ವಿತೀಯ),…
ಮಡಿಕೇರಿ ಸೆ.30 : ಮಕ್ಕಳ ಆರೈಕೆ ಮತ್ತು ರಕ್ಷಣೆಗೆ ಪ್ರತಿಯೊಬ್ಬರೂ ಹೆಚ್ಚಿನ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಬಾಲನ್ಯಾಯ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲನ್ಯಾಯ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಮಕ್ಕಳ ಪಾಲನೆ ಮತ್ತು ಪೋಷಣೆಗೆ ಪೋಷಕರು ವಿಶೇಷ ಗಮನಹರಿಸಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಬಾಲನ್ಯಾಯ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ಕಾಲ ಕಾಲಕ್ಕೆ ಸಭೆಗಳನ್ನು ನಡೆಸುವಂತಾಗಬೇಕು. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬರದಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಬಾಲಕರ ಹಾಗೂ ಬಾಲಕಿಯರ ಮಂದಿರದಲ್ಲಿ ಇರುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪ್ರವಾಸ ಕಾರ್ಯಕ್ರಮ ಏರ್ಪಡಿಸಿ ಅವರ ಕ್ರೀಯಾಶೀಲ ಚಟುವಟಿಕೆಗೆ ಪ್ರೋತ್ಸಾಹಿಸಬೇಕು ಎಂದು ಎಂ.ಜಿ.ಉಮಾ ಸಲಹೆ ನೀಡಿದರು. ಎಲ್ಲಾ ಇಲಾಖೆಗಳ ಜೊತೆ ಸಮನ್ವಯತೆ ಸಾಧಿಸಿ ಬಾಲ್ಯ ವಿವಾಹ ತಡೆಯುವುದು ಹಾಗೂ ಮಕ್ಕಳ ಪಾಲನೆ ಮತ್ತು…
ಮಡಿಕೇರಿ ಸೆ.30 : ಆಹಾರ ಪದಾರ್ಥಗಳನ್ನು ಎಂದಿಗೂ ವ್ಯರ್ಥ ಮಾಡದೇ ಅಗತ್ಯಕ್ಕೆ ತಕ್ಕಷ್ಟು ಸೇವಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕಿವಿಮಾತು ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾ.)ವತಿಯಿಂದ ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಆಹಾರ ನಷ್ಟ ಮತ್ತು ತ್ಯಾಜ್ಯ ಜಾಗೃತಿ ದಿನಾಚರಣೆ ಕಾರ್ಯಕ್ರಮದ ಸಿಗ್ನೇಚರ್ ಕ್ಯಾಂಪೇನ್ನಲ್ಲಿ ಸಹಿ ಮಾಡಿ ಮಾತನಾಡಿದರು. ಪ್ರತಿ ನಿತ್ಯ ಹೋಟೆಲ್ ಮತ್ತು ರೆಸಾರ್ಟ್ಗಳಲ್ಲಿ ಸಾಕಷ್ಟು ಆಹಾರ ಪದಾರ್ಥ ನಷ್ಟವಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಮಾತ್ರವಲ್ಲದೇ ಹೋಟೆಲ್ ಮತ್ತು ರೆಸಾರ್ಟ್ ಮಾಲೀಕರು ಸಹ ಗಮನಹರಿಸಬೇಕು. ದೇಶದಲ್ಲಿ ಅಪೌಷ್ಟಿಕತೆ ನಿರ್ಮೂಲನೆಗೆ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಹಾರವನ್ನು ನಷ್ಟಗೊಳಿಸಬಾರದು ಎಂದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿಯೂ ಸಹ ಅಂತರರಾಷ್ಟ್ರೀಯ ಆಹಾರ ನಷ್ಟ ಮತ್ತು ತ್ಯಾಜ್ಯ ಜಾಗೃತಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಎಂದಿಗೂ ಆಹಾರ ವ್ಯರ್ಥ…
ಗೋಣಿಕೊಪ್ಪಲು ಸೆ.30 : ಗೋಣಿಕೊಪ್ಪಲು ದಸರಾ ಸಮಿತಿಯಿಂದ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಸಾಂಪ್ರದಾಯಿಕ ವಾಗಿ ಆಹ್ವಾನಿಸಲಾಯಿತು. ದಸರಾ ಸಮಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ ನೇತೃತ್ವದಲ್ಲಿ ಖಜಾಂಚಿ ಧ್ಯಾನ್ ಸುಬ್ಬಯ್ಯ, ಉಪಾಧ್ಯಕ್ಷ ಶಿವಾಜಿ, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ, ಸನತ್ ದೇವಯ್ಯ ಸೇರಿದಂತೆ ಪದಾಧಿಕಾರಿಗಳು ವಿರಾಜಪೇಟೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಫಲತಾಂಬೂಲದೊಂದಿಗೆ ಸಾಂಪ್ರದಾಯಿಕವಾಗಿ ಆಹ್ವಾನಿಸಿದರು.
ವಿರಾಜಪೇಟೆ ಸೆ.30 : ಆಟೋ ಚಾಲಕರು ಶ್ರಮಿಕ ವರ್ಗದವರು, ಬಡ, ಶ್ರೀಮಂತ ಎಂಬ ಭೇದವಿಲ್ಲದೆ ಸಾರ್ವಜನಿಕರೊಂದಿಗೆ ಸ್ನೇಹ ಜೀವಿಯಾಗಿ ಸ್ಪಂದಿಸುವ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆಯ ಜೈ ಭಾರತ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ನಗರದ ಕಾರು ನಿಲ್ದಾನದ ದಿ.ಮಾಳೇಟಿರ ಬಿದ್ದಪ್ಪ (ಬಿದ್ದು) ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಆಟೋ ಚಾಲಕರು ಗ್ರಾಹಕರಿಂದ ಬರುವ ಬಾಡಿಗೆ ಹಣವನ್ನು ಕ್ರೋಡಿಕರಿಸಿ ಮಾಲೀಕ ಮತ್ತು ತನ್ನ ಸಂಸಾರವನ್ನು ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ. ಆರ್ಥಿಕವಾಗಿ ಸಭಲರಾಗಲು ಕಷ್ಟ ಸಾದ್ಯವಾದರು, ಜೀವನದಲ್ಲಿ ಮುಂದು ಬರಲು ಶ್ರಮಿಸುತ್ತಿದ್ದಾರೆ. ಹೀಗಿದ್ದರೂ ಸಂಘ ಸ್ಥಾಪಿಸಿ ಹಲವು ಜನಪರ ಕಾರ್ಯಕ್ರಮ, ಸದಸ್ಯರ ಮಕ್ಕಳಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಸಂಘದ ಬೇಡಿಕೆಯಂತೆ ಜಿಲ್ಲೆಯಾದ್ಯಂತ ಆಟೋ ಚಾಲನೆ ಮಾಡಲು ಪರವಾನಿಗೆ ನೀಡುವ ಬೇಡಿಕೆಯನ್ನು ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ…
ಮಡಿಕೇರಿ ಸೆ.30 : ಕೊಡಗು ಜಿಲ್ಲೆಯಲ್ಲಿ ಮಳೆಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಒಂದು ತಿಂಗಳಿನಿಂದ ಮಳೆಯ ಕೊರತೆಯನ್ನು ಎದುರಿಸಿದ್ದ ಕಾವೇರಿನಾಡು ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ನದಿಮೂಲದಲ್ಲಿ ನೀರಿನ ಹರಿವು ಕಡಿಮೆಯಾಗಿ ಕಾವೇರಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಕಾವೇರಿ ತವರು ಕೊಡಗಿನಲ್ಲಿ ಮಳೆಯಾಗುತ್ತಿದ್ದು, ಆಡಳಿತ ವ್ಯವಸ್ಥೆ ಮತ್ತು ರೈತಾಪಿ ವರ್ಗ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತ್ತಾಗಿದೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಇಂಚು ಮಳೆ ದಾಖಲಾಗಿದೆ. ಮಡಿಕೇರಿ ಭಾಗದಲ್ಲೂ ನಿರಂತರವಾಗಿ ಮಳೆಯಾಗುತ್ತಿದ್ದು, ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಅಕಾಲಿಕ ಮಳೆ ಕಾಫಿ ಬೆಳೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1964.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3159.45 ಮಿ.ಮೀ ಮಳೆಯಾಗಿತ್ತು.…
ಕುಶಾಲನಗರ ಸೆ.30 : ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಹೊಂದುವ ಮೂಲಕ ಭವಿಷ್ಯದಲ್ಲಿ ಉತ್ತಮ ನಾಗರೀಕರಾಗಬೇಕೆಂದು ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಕರೆ ನೀಡಿದರು. ಕುಶಾಲನಗರ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಗಾಲೋಟದಲ್ಲಿ ಓಡುತ್ತಿರುವ ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೂಡ ನಿರಂತರವಾಗಿ ಓಡಬೇಕು ಹಾಗೂ ಓದಬೇಕು ಎಂದು ಸಲಹೆ ನೀಡಿದರು. ಕಾಲೇಜು ಎಂಬ ಸುಂದರ ದಿನಗಳನ್ನು ಅನ್ಯಥಾ ವ್ಯರ್ಥ ಮಾಡದೇ ಆ ಜೀವನವನ್ನು ವಿಭಿನ್ನ ಸಾಧನೆಗಳಿಗೆ ತೊಡಗಿಸಿಕೊಳ್ಳಬೇಕು. ಹೆತ್ತವರ ಶ್ರಮವನ್ನು ಅರ್ಥೈಸಿ ಅದಕ್ಕನುಗುಣವಾಗಿ ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಿ ಎಂದು ಹೇಳಿದ ರಾಜೇಶ್ ಕೋಟ್ಯಾನ್, ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು, ಹದಿಹರೆಯದ ವಯಸ್ಸನ್ನು ನಿಯಂತ್ರಿಸುವ ಮೂಲಕ ಓಳಿತಿಗಾಗಿ ತೊಡಗಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಮಾತನಾಡಿ, ಕೊಡಗು ಜಿಲ್ಲೆಗೆ ಮಾದರಿಯಾದ…






