ಲೇಖಕ: admin

ಮಡಿಕೇರಿ ಸೆ.30 : ಕೊಡಗಿನ ಕೊಡವರಿಗೆ ಈ ಹಿಂದಿನಿಂದಲು ಲಭ್ಯವಿದ್ದ ‘ಕೋವಿ ಹಕ್ಕಿನ ವಿನಾಯಿತಿ’ಗೆ 2019ರಲ್ಲಿ ಅಕ್ಟೋಬರ್ 29 ರಂದು ಕೇಂದ್ರದ ಗೃಹ ಸಚಿವಾಲಯ ಷರತ್ತುಗಳನ್ನು ಅಳವಡಿಸುವ ಹಂತದಲ್ಲಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರು ಎಲ್ಲಿದ್ದರು ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಕೊಡವರಿಗೆ ಬ್ರಿಟಿಷರ ಅವಧಿಯಿಂದಲೆ ಲಭ್ಯವಿದ್ದ ಕೋವಿ ವಿನಾಯಿಸಿ ಹಕ್ಕನ್ನು 1965 ರಿಂದ ಸ್ಥಿರೀಕರಿಸಿ ಮುಂದುವರೆಸಲಾಗಿದೆ. ಈ ಹಕ್ಕಿನ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವ್ಯಕ್ತಿಯೊಬ್ಬರು ಪ್ರಶ್ನಿಸಿದ ಹಿನ್ನೆಲೆ, ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಸ್ಪಷ್ಟನೆ ನೀಡಲು ಸೂಚನೆಗಳನ್ನು ನೀಡಿತ್ತು. ಈ ಹಿನ್ನೆಲೆ ಕೇಂದ್ರದ ಗೃಹ ಸಚಿವಾಲಯ ಕೊಡಗಿನಲ್ಲಿ ವಿಶೇಷ ಕೋವಿ ವಿನಾಯಿತಿ ಹಕ್ಕನ್ನು ಮುಂದುವರಿಸುವ ಹಂತದಲ್ಲಿ, ಈ ಹಕ್ಕನ್ನು ‘2029 ರ ಅಕ್ಟೋಬರ್ 29’ರವರೆಗೆ ಎಂದು ಷರತ್ತನ್ನು ಹಾಕಿ ಮುಂದುವರಿಸಿದೆ. ಈ ಹಂತದಲ್ಲಿ ಕೊಡಗಿನ ಜನರು ಮತ್ತು ಕೋವಿ ನಡುವಿನ ಸಾಂಸ್ಕೃತಿಕ ಸಂಬಂಧ, ಮಹತ್ವಗಳನ್ನು ಸಂಸತ್‍ನಲ್ಲಿ…

Read More

ಮಡಿಕೇರಿ ಸೆ.30 : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ್ದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೋಳಿಸಬೇಕೆಂದು ಒತ್ತಾಯಿಸಿ ಅ.7 ರಂದು ರಾಜ್ಯವ್ಯಾಪಿ ಜನಾಗ್ರಹ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಾಡಳಿತದಿಂದ ಬೇಸತ್ತಿದ್ದ ರಾಜ್ಯ ಜನರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದು, ತಮ್ಮ ಐದು ಗ್ಯಾರಂಟಿಗಳನ್ನು ನೀಡುವಲ್ಲಿ ಸಫಲರಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಸಂಘಟಿತ ಕಾರ್ಮಿಕರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15,000 ರೂ.ಗಳು, ಸಹಾಯಕಿಯರಿಗೆ 10,000 ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 8 ಸಾವಿರ ರೂ.ಗಳು, ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ 6,000ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಚುನಾವಣಾ ಸಂದರ್ಭದಲ್ಲಿ ಭರವಸೆ…

Read More

ಮಡಿಕೇರಿ ಸೆ.30 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 2ನೇ ಹಂತದ ಪಾದಯಾತ್ರೆ ವಿರಾಜಪೇಟೆ ತಾಲ್ಲೂಕಿನ “ಚೆಂಬೆಬೆಳಿಯೂರಿನ” ಎಡೆನಾಲ್‍ನಾಡ್ ಮಂದ್‍ನಲ್ಲಿ ಮುಕ್ತಾಯಗೊಂಡಿತು. ಮೂರನೇ ಹಂತದ ಪಾದಯಾತ್ರೆ ಅ.7 ರಂದು ಬೆಳಗ್ಗೆ 10 ಗಂಟೆಗೆ ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ)ನಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. “ಚೆಂಬೆಬೆಳಿಯೂರಿನ” ಎಡೆನಾಲ್‍ನಾಡ್ ಮಂದ್ ನಲ್ಲಿ ಕೊಡವ ಜಾಗೃತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸಿಎನ್‍ಸಿ ಸಂಘಟನೆ ಅತ್ಯಂತ ತಾಳ್ಮೆಯಿಂದ ಸುದೀರ್ಘ ಹೋರಾಟ ನಡೆಸುವ ಮೂಲಕ ಕೊಡವರಿಗೆ ಸಾಂವಿಧಾನಿಕವಾಗಿ ದೊರಕಬೇಕಾದ ಹಕ್ಕುಗಳ ಪರ ಪ್ರತಿಪಾದಿಸುತ್ತಾ ಬಂದಿದೆ ಎಂದರು. ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ನ್ಯಾಯಯುತವಾಗಿ ಸಾಂವಿಧಾನಿಕ ಭದ್ರತೆ ಸಿಗುವ ಅಗತ್ಯವಿದೆ. ನಮ್ಮನ್ನು ಆಳುತ್ತಿರುವವರು ಈ ಸಣ್ಣ ಜನಾಂಗಕ್ಕೆ ರಕ್ಷಣೆ ನೀಡದಿದ್ದಲ್ಲಿ ಒಂದು ವಿಶಿಷ್ಟ ಸಂತತಿಯೇ ಅಳಿದು ಹೋಗುವ ಆತಂಕವಿದೆ. ಸಿಎನ್‍ಸಿ…

Read More

ನಾಪೋಕ್ಲು ಸೆ.30 : ವಿದ್ಯಾರ್ಥಿಗಳು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ದೇಶದ ಆಸ್ತಿಯಾಗಲು ಸಾಧ್ಯ ಎಂದು ಅರವೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅರಮೇರಿಯ ಎಸ್ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಅಂತರ ಕಾಲೇಜು ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎಸ್ಎಂಎಸ್ ಕಾಲೇಜಿನ ಪ್ರಾಂಶುಪಾಲ ಬಲ್ಲಚಂಡ ಕುಸುಮ್ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ನಿರ್ದೇಶಕ ಸಚಿನ್, ಪ್ರಾಂಶುಪಾಲ ವಾಟೀರಿರ ಸಪ್ನ ಸುಬ್ಬಯ್ಯ, ಉಪನ್ಯಾಸಕ , ಸಿಬ್ಬಂದಿ ವೃಂದದವರು ಪಾಲ್ಗೊಂಡಿದ್ದರು. ಸರ್ವೋದೈವತಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಪ್ರಥಮ ಬಹುಮಾನವನ್ನು ಪಡೆದುಕೊಂಡಿತು. ಬಾಲಕರ ದ್ವಿತೀಯ ಸ್ಥಾನವನ್ನು ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಹಾಗೂ ಬಾಲಕಿಯರ ದ್ವಿತೀಯ ಸ್ಥಾನವನ್ನು ಪೊನ್ನಂಪೇಟೆಯ ಅಂತೋನಿ ಕಾಲೇಜು ತಂಡ ಪಡೆದುಕೊಂಡರು. ಅಂತರ ಕಾಲೇಜು ಥ್ರೋಬಾಲ್ ಪಂದ್ಯಾವಳಿಯಲ್ಲಿ 500ಕ್ಕೂ ಹೆಚ್ಚು ಆಟಗಾರರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ಚೆಟ್ಟಳ್ಳಿ ಸೆ.30 : ಥೈಲ್ಯಾಂಡ್ ರ‍್ಯಾಲಿ ಚಾಂಪಿಯನ್ ಶಿಪ್‌ನಲ್ಲಿ ಮಂಗಳೂರಿನ ಜೇಸನ್ ಸಲ್ಡಾನ(ಚಾಲಕ), ಅಮ್ಮತ್ತಿಯ ಉದ್ದಪಂಡ ತಿಮ್ಮಣ್ಣ(ಸಹಚಾಲಕ) ನಿಗಧಿತ ಗುರಿಮುಟ್ಟುವ ಮೂಲಕ ಮೊದಲ ಬಾರಿಗೆ ಭಾರತೀಯರು ಥೈಲ್ಯಾಂಡ್ ರ‍್ಯಾಲಿ ಓವರಾಲ್ ಚಾಂಪಿಯನ್ ಶಿಪ್-2023 ಆಗಿ ಹೊರಹೊಮ್ಮಿದ್ದಾರೆ. ನಾಲ್ಕನೇ ಸುತ್ತಿನ ರ‍್ಯಾಲಿಯಲ್ಲಿ ಥೈಲಾಂಡ್, ಜಪಾನ್, ಮಲೇಶಿಯಾ ಹಾಗೂ ಭಾರತ ಸೇರಿದಂತೆ ಒಟ್ಟು 56 ಅಂತರಾಷ್ಟ್ರೀಯ ರ‍್ಯಾಲಿಪಟುಗಳು ಭಾಗವಹಿಸಿದ್ದು, ಜೇಸನ್ ಸಲ್ಡಾನ ಹಾಗೂ ಉದ್ದಪಂಡ ತಿಮ್ಮಣ್ಣ 2.1 ವಿಭಾಗದ  ನಾಲ್ಕನೇ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದರು. ಮೊದಲನೇಯ ಹಂತದಿಂದಲೂ ಉತ್ತಮ ಅಂಕ ಪಡೆಯವ ಮೂಲಕ ಕೊನೆಯ ಹಂತಕ್ಕೆ ತಲುಪಿ ದಾಖಲೆಯ ಹಂತದಲ್ಲಿ 2.1 ವಿಭಾಗ  ಹಾಗೂ ಓವರಾಲ್ ಚಾಂಪಿಯನ್‌ಶಿಪ್ ಪಡೆಯಲು ಸಫಲರಾದರು. ಮುಂದೆ ಹೈದರಬಾದ್‌ನಲ್ಲಿ ನಡೆಯುವ ಐಎನ್‌ಆರ್‌ಸಿ ರ‍್ಯಾಲಿಯ 4ನೇ ಸುತ್ತಿಗೆ ಜೇಸನ್ ಸಲ್ಡಾನ ಹಾಗೂ ಉದ್ದಪಂಡ ತಿಮ್ಮಣ್ಣ ಜೋಡಿ ಸ್ಪರ್ಧಿಸಲಿದ್ದಾರೆ. ವರದಿ : ಕಾಳಯ್ಯ  

Read More

ನಾಪೋಕ್ಲು ಸೆ.30 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಹುಣಸೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಬಾಲಕಿಯರು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚದುರಂಗ ಸ್ಪರ್ಧೆಯಲ್ಲಿ ವಿಜೇತರಾದ ಮೊಹಮ್ಮದ್ ಅಜ್ಮಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರೌಢಶಾಲಾ ವಿಭಾಗದಲ್ಲಿ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಪ್ರಥಮ ಸ್ಥಾನ, ಬಾಲಕರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತಾಲೂಕು ಹಂತದಲ್ಲಿ ವಿಜೇತರಾದ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬಾಲಕರು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.…

Read More

ನಾಪೋಕ್ಲು ಸೆ.30 : ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಅ.1 ರಂದು ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರಿಗಾಗಿ ಜಿಲ್ಲಾಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಅಂಬಲ ಮಹಿಳಾ ಸಮಾಜದ ಅಧ್ಯಕ್ಷ ಅಪ್ಪುಮಣಿಯ0ಡ ಡೇಸಿ ಸೋಮಣ್ಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಸ್ಪರ್ಧೆ ನಡೆಯಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಉದ್ಘಾಟಿಸಲಿದ್ದು, ಕಾಫಿ ಬೆಳೆಗಾರರಾದ ಮಂಡಿರ ಜಯ ದೇವಯ್ಯ ಕೋವಿ ಪೂಜೆ ನೆರವೇರಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮುಳಿಯ ಜ್ಯುವೆಲ್ಲರಿ ಚೇರ್ ಮ್ಯಾನ್ ಮುಳಿಯ ಕೇಶವ ಪ್ರಸಾದ್, ಕಾಫಿ ಬೆಳೆಗಾರರಾದ ಎಳ್ತಂಡ ಬೋಪಣ್ಣ, ದಿ ತಾಮರ ರೆಸಾರ್ಟಿನ ಮ್ಯಾನೇಜರ್ ಕಲಿಯಾಟಂಡ ಗಿರೀಶ್ ಸುಬ್ಬಯ್ಯ, ಕಾಫಿ ಬೆಳೆಗಾರ ಕೋಟೆರ ಸುರೇಶ್ , ತಾಜ್ ಪ್ರಾಜೆಕ್ಟ್ ನಿವೃತ್ತ ಇಂಜಿನಿಯರ್ ಕೈಬುಲಿರ ಬೆಲ್ಲು ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು. ಸಂಜೆ 4.30…

Read More

ಮಡಿಕೇರಿ ಸೆ.30 : ಕರ್ನಾಟಕ ರಾಜ್ಯ ಎಸ್‌ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತೋತ್ಸವ ನಡೆಯಿತು. ಕುಶಾಲನಗರದ ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು. ಚಾಮರಾಜನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಶ್ರೀಬಂತೇಜಿ ಬೋಧಿದತ್ತತೇರಾ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್ ಅವರು ಪ್ರಧಾನ ಭಾಷಣ ಮಾಡಿದರು. ಸಮಿತಿಯ ಅಧ್ಯಕ್ಷ ಎಂ.ಎಸ್.ಮಹೇoದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಎಂ.ಎಲ್.ಶoಭು, ಕುಶಾಲನಗರ ತಾಲೂಕು ಅಧ್ಯಕ್ಷ ಅಧ್ಯಕ್ಷ ಆರ್.ವಿಜಯಾನಂದ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಬೆಂಗಳೂರು ಸೆ.30 : ಟೆನ್ನಿಸ್ ಏಷ್ಯನ್ ಗೇಮ್ಸ್ ಮಿಶ್ರ ಡಬಲ್ಸ್‌ನಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಹಾಗೂ ರುತುಜಾ ಭೋಸಲೆ ಚಿನ್ನದ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್‌ ನಲ್ಲಿ ಭಾರತೀಯ ಜೋಡಿ ಚೈನೀಸ್ ತೈಪೆ ಜೋಡಿ ವಿರುದ್ಧ 2-6 6-3 (10)-(4) ಅಂತರದಲ್ಲಿ ರೋಚಕವಾಗಿ ಗೆಲುವು ಸಾಧಿಸಿತು.

Read More

ಮಡಿಕೇರಿ ಸೆ.30 : ಕೊಡಗು ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ವತಿಯಿಂದ ಕುಶಾಲನಗರದಲ್ಲಿ ಜಿಲ್ಲಾ ಸಮಾವೇಶ ನಡೆಯಿತು. ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ಕೊಡುಗೆ ಮತ್ತು ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲಾಯಿತು. ಒಕ್ಕೂಟದ ಅಧ್ಯಕ್ಷ ಕೋಳೇರ ಝರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಸಂಸದ ಪ್ರತಾಪ್‌ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಬೋಜೆಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕರಾದ ಎ.ಸೌಮ್ಯ ಪೊನ್ನಪ್ಪ, ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೊಟ್ರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಎಂ.ಟಿ.ದಾಮೋದರ್, ಕಾನೂನು ಸಲಹೆಗಾರ ಎಂ.ಎಸ್.ಪೂವಯ್ಯ, ಸದಸ್ಯರಾದ ಮಣಿ ಮಹಮ್ಮದ್, ಪಿ.ಎಂ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

Read More