ಲೇಖಕ: admin

ಕುಶಾಲನಗರ ಫೆ.25 NEWS DESK : ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಅನಗತ್ಯ ವಿದ್ಯುತ್ ಕಡಿತ ಗೊಳಿಸಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಕೊಡಗು ಜಿಲ್ಲಾ ಸಂಚಾಲಕರಾದ ಎಂ.ಕೆ.ಆಶಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯುತ್ ಕಡಿತದಿಂದ ಕಂಗೆಟ್ಟ ಸಾರ್ವಜನಿಕರು ಕಾರಣ ಕೇಳಲು ಸೆಸ್ಕ್ ಕಚೇರಿಗೆ ಅಥವಾ ಅಧಿಕಾರಿಗಳಿಗೆ ಕರೆ ಮಾಡಿದರೆ ಸರಿಯಾಗಿ ಪ್ರತಿಕ್ರಿಯಿದಿರುವುದು ಖಂಡನೀಯ ಎಂದರು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳು ಹೊಸ್ತಿಲಲ್ಲಿವೆ. ಇಂತಹ ಸೂಕ್ಷ್ಮ ಸಮಯದಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆಯಲ್ಲಿ ದಿಢೀರ್ ವಿದ್ಯುತ್ ಕಡಿತ ಮಾಡುತ್ತಿರುವುದು ವಿದ್ಯಾರ್ಥಿಗಳ ಏಕಾಗ್ರತೆಯನ್ನು ಹಾಳುಗೆಡವುತ್ತಿದೆ. ಅಧಿಕಾರಿಗಳ ಈ ಅವೈಜ್ಞಾನಿಕ ನಡೆಯಿಂದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಡುತ್ತಿದೆ. ಪ್ರಸ್ತುತ ಪವಿತ್ರ ರಂಜಾನ್ ಮಾಸ ನಡೆಯುತ್ತಿದ್ದು, ಮುಸ್ಲಿಂ ಬಾಂಧವರ ಉಪವಾಸದ ಸಮಯ ಹಾಗೂ ಸಂಜೆ ಇಫ್ತಾರ್ ಪ್ರಾರ್ಥನಾ ವೇಳೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಜನರ ಧಾರ್ಮಿಕ ಆಚರಣೆಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ ಎಂದು ದೂರಿದರು. ನಿರಂತರ…

Read More

ಸಿದ್ದಾಪುರ ಫೆ.25 NEWS DESK : ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ವತಿಯಿಂದ ವನಿತಾ ಸಮಾವೇಶ ನಡೆಯಿತು. ಸಿದ್ದಾಪುರದ  ಎಸ್‌ಎನ್‌ಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ಮಾತನಾಡಿ, ಭಾರತೀಯ ಪಾರಂಪರಿಕ ಸಂಸ್ಕೃತಿ ಮತ್ತು ಸಮಾಜವನ್ನು ರಕ್ಷಿಸುವ ಮೂಲ ತತ್ವಗಳನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಇಂತಹ ಸಮಾವೇಶಗಳು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರ ಸಾಧನೆಗಳನ್ನು ಗುರುತಿಸಲು ಮಹತ್ವದ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂಘಟನೆ ಮೂಲಕ ಶಕ್ತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರು. ಪ್ರಸ್ತಾವಿಕವಾಗಿ ಮಾತನಾಡಿದ ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್, ವನಿತಾರನ್ನು ಒಗ್ಗೂಡಿಸಿ ಅವರಿಗೆ ಬಲ ತುಂಬುವ ಉದ್ದೇಶದಿಂದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಸಂಘಟನೆಯಲ್ಲಿ ಒಟ್ಟು 18 ಸಾವಿರ ಸದಸ್ಯರಿದ್ದು, ಅದರಲ್ಲಿ 9 ಸಾವಿರ ಮಹಿಳೆಯರು ಸೇರಿದ್ದಾರೆ ಎಂದರು. ಸಂಘಟನೆಯು ಪ್ರತಿವರ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸದಸ್ಯತ್ವ ಪಡೆದ ಕೊಡಗಿನ…

Read More

ಮಡಿಕೇರಿ ಫೆ.25 NEWS DESK : ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಮಾ.2 ರಂದು ಕುಂಬ್ಯಾರು ಕಲ್ಲಡ್ಚ (ವಾರ್ಷಿಕ) ಹಬ್ಬ ನಡೆಯಲಿದೆ. ಹಬ್ಬದ ಪ್ರಯುಕ್ತ ಮಾರ್ಚ್, 02 ರಂದು ಬೆಳಗ್ಗೆ 5.30 ಗಂಟೆಗೆ ಅಭಿಷೇಕ ಪೂಜೆ, 6 ಗಂಟೆಗೆ ಪ್ರಾತಃಕಾಲದ ಪೂಜೆ, 10 ಗಂಟೆಗೆ ಎತ್ತು ಪೋರಾಟ, 10.30 ಗಂಟೆಗೆ ತುಲಾಭಾರ ಸೇವೆ, 11 ಗಂಟೆಗೆ ಭಕ್ತಾದಿಗಳ ಸೇವಾ ಪೂಜೆಗಳು ಜರುಗಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ, 1 ಗಂಟೆಗೆ ಅನ್ನ ಸಂತರ್ಪಣೆ ನೆರವೇರಲಿದ್ದು, 2 ಗಂಟೆಗೆ ದೇವರು ಹೊರಗೆ ಬಂದು ಮಲ್ಮಕ್ಕೆ ತೆರಳವುದು, ಸಂಜೆ 4 ಗಂಟೆಗೆ ಕಾಫಿ ಫಲಹಾರ, 6 ಗಂಟೆಗೆ ದೇವರು ಮಲ್ಮದಿಂದ ಬಂದು ದೇವರ ಬಲಿ ನೃತ್ಯ, ರಾತ್ರಿ 8 ಗಂಟೆಗೆ ಭೋಜನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ವ್ಯವಸ್ಥಾಪನಾ ಸಮಿತಿ ಕೋರಿದೆ.

Read More

ಮಡಿಕೇರಿ ಫೆ.25 NEWS DESK : ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಿದೆ. ಸಿದ್ದಾಪುರದ ಎಸ್.ಎನ್.ಡಿ.ಪಿ (ಶ್ರೀ ನಾರಾಯಣ ಗುರು ಪರಿಪಾಲನ ಯೋಗ) ಸಭಾಂಗಣದಲ್ಲಿ ನಡೆದ ಎಸ್.ಎನ್.ಡಿ.ಪಿ  ವನಿತಾ ಮಹಿಳಾ ಸಮಾವೇಶದಲ್ಲಿ  ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೊಕಂಡಳ್ಳಿ ಅವರ ನೇತೃತ್ವದಲ್ಲಿ  ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಯ ಕೆಲವು ಕಾಮಗಾರಿಗಳಿಗೆ ಸಂಸದರ ವಿಶೇಷ ನಿಧಿಯಿಂದ ಅನುದಾನವನ್ನು ನೀಡಲು ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭ  ಕೊಡಗು ಜಿಲ್ಲಾ ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷರಾದ ಜಯಮ್ಮ ಅಮ್ಮತಿ, ಮಡಿಕೇರಿ ತಾಲೂಕು ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಿಯಾಬುದ್ದೀನ್ ವಿ.ಪಿ.ಎಸ್. ನೆಲ್ಯ ಹುದಿಕೇರಿ, ವಿರಾಜಪೇಟೆ ತಾಲೂಕು ಯುವ ಜನತಾದಳದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ, ಹಾಜರಿದ್ದರು.

Read More

ಮಡಿಕೇರಿ ಫೆ.25  NEWS DESK : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ಮಕ್ಕಳ ಸಂತೆಯು ಗಮನ ಸೆಳೆಯಿತು. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ, ಸರ್ಕಾರಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಮಕ್ಕಳ ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು, ಪಾನಿಪೂರಿ, ಮಸಾಲೆ ಪುರಿ, ಚುರುಮುರಿ ಹೀಗೆ ಜೊತೆಗೆ ಚಿಕನ್ ಬಿರಿಯಾನಿ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಮಕ್ಕಳು ಸಂತೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಗಣಿಕೆ ಸೊಪ್ಪು, ನೊಗ್ಗೆ, ಕೊತ್ತಂಬರಿ, ಕರಿಬೇವು, ಬಸಳೆ, ಪಾಲಕ್ ಸೊಪ್ಪು, ಟೊಮೆಟೋ, ಕೆಸ, ಹಲಸು, ಬಾಳೆಕಾಯಿ, ಬಾಳೆಹಣ್ಣು, ಸಪೋಟ, ಕಿತ್ತಳೆ, ಚಕೋತ, ಮೂಲಂಗಿ, ನಿಂಬೆಹಣ್ಣು, ಸಿಹಿಗೆಣಸು, ಕಲ್ಲಂಗಡಿ, ಬದನೆ, ಪರಂಗಿ ಹಣ್ಣು, ಆಲೂಗಡ್ಡೆ, ಈರುಳ್ಳಿ, ಸೌತೆಕಾಯಿ, ಜತೆಗೆ ಮಹಿಳೆಯರ ಸೀರೆ ಒಳಗೊಂಡಂತೆ ಪ್ಯಾನ್ಸಿ ವಸ್ತುಗಳು ಹಲವು ವಿಭಾಗದಲ್ಲಿ ಮಕ್ಕಳ ಸಂತೆ ಏರ್ಪಡಿಸಿದ್ದು, ವಿಶೇಷ ಆಕರ್ಷಣೀಯವಾಗಿತ್ತು. ವಿದ್ಯಾರ್ಥಿಗಳ ವ್ಯಾಪಾರಕ್ಕೆ ಪೋಷಕರು ಸಹ ಸಾಥ್ ನೀಡಿದ್ದು…

Read More

ಮಡಿಕೇರಿ ಫೆ.25 NEWS DESK : ತ್ರಿವೇಣಿ ಪೊಮ್ಮಕ್ಕಡ ಕೂಟದ ಪ್ರಮುಖರು ನಗರದ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು.  ಕೂಟದ ಅಧ್ಯಕ್ಷರಾದ ಕಿಕ್ಕೇರಿಯಂಡ ಲೀಲಾ ಅಯ್ಯಪ್ಪ, ಉಪಾಧ್ಯಕ್ಷರಾದ ಬೊಪ್ಪoಡ ಸರಳ ಕರುಂಬಯ್ಯ, ಕಾರ್ಯದರ್ಶಿ ಮಲ್ಚೀರ ಯಶೋಧ ದೇವಯ್ಯ ಸದಸ್ಯರುಗಳಾದ ಕೂಪದಿರ ಜೂನಾ ವಿಜಯ್, ಉಡುವೇರ ರೇಖಾ ರಘು, ಅಮ್ಮoಡಿರ ರಾಣಿ ಮುತ್ತಮ್ಮ, ಮುಕ್ಕಾಟಿರ ಸವಿತಾ, ಕರವ0ಡ ಸೀಮಾ, ಚಿಂಡಮಾಡ ಸರಿತಾ ಮೊಣ್ಣಪ್ಪ, ಕೊಡಂದೇರ ಸ್ವಾತಿ ಲವ ಅವರು ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ನಂತರ ವಿವಿಧ ಅಗತ್ಯತೆಯ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು. ವೃದ್ಧರಿಗೆ ರಾತ್ರಿಯ ಭೋಜನದ ವ್ಯವಸ್ಥೆ ಮಾಡಿದರು.

Read More

ಮಡಿಕೇರಿ ಫೆ.25 NEWS DESK : ನಗರದ ಅಭಿವೃದ್ಧಿಯ ನಿರ್ಲಕ್ಷ್ಯ ಮತ್ತು ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿತು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರ ನೇತೃತ್ವದಲ್ಲಿ ಬುಧವಾರ ನಗರಸಭಾ ಕಛೇರಿಯ ಎದುರು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು “ಗುಂಡಿ ಮುಚ್ಚಿ ರಸ್ತೆಗೆ ಮುಕ್ತಿ ಕೊಡಿ” ಎಂದು ಆಗ್ರಹಿಸಿದರು. ನಗರಸಭೆಯ ಆಡಳಿತ ವೈಖರಿಯನ್ನು ತೀವ್ರವಾಗಿ ಖಂಡಿಸಿದ ಎಸ್‍ಡಿಪಿಐ ಸದಸ್ಯರು, ‘ನಗರಸಭೆ ಕೊಠಡಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ” ಎಂದು ಬರೆದಿರುವ ನಾಮ ಫಲಕವನ್ನು ನಗರಸಭೆಯ ಅಧ್ಯಕ್ಷರು ಹಾಗೂ ಅಧಿಕಾರಿಗಳ ಕಚೇರಿಗೆ ಅಂಟಿಸುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ಈ ಪ್ರಯತ್ನವನ್ನು ತಡೆದರು. ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮಾತನಾಡಿ, ಪ್ರತಿನಿತ್ಯ ಪ್ರವಾಸಿ ಕೇಂದ್ರವಾದ ಮಡಿಕೇರಿಗೆ ಆಗಮಿಸುವ ಸಹಸ್ರಾರು ಪ್ರವಾಸಿಗರನ್ನು ಗುಂಡಿಬಿದ್ದು ಹದಗೆಟ್ಟ ರಸ್ತೆಗಳು, ಅಶುಚಿತ್ವ ಸ್ವಾಗತಿಸುತ್ತಿದೆ. ನಗರದ ಯಾವುದೇ ರಸ್ತೆಗಳು ಯೋಗ್ಯವಾಗಿಲ್ಲ. ಜನರ ಸಂಕಷ್ಟಗಳಿಗೆ ನಗರಸಭೆಯಿಂದ ಯಾವುದೇ ಸ್ಪಂದನ ದೊರಯುತ್ತಿಲ್ಲವೆಂದು ಟೀಕಿಸಿದರು. ಕೇಬಲ್…

Read More

ಮಡಿಕೇರಿ ಫೆ.25 : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ ತಡೆಗೋಡೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ರಕ್ಷಣಾ ತಡೆಗೋಡೆ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದರು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದ ರಾಷ್ಟçದಲ್ಲಿ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ಸಂಸದರು ಹೇಳಿದರು.  ರಾಷ್ಟçದ ರಾಜದಾನಿ ನವದೆಹಲಿ, ಮುಂಬೈ, ಬೆಂಗಳೂರು, ಚೆನೈ, ಕೊಲ್ಕತ್ತಾ ಮತ್ತಿತ್ತರ ಕಡೆಗಳಲ್ಲಿ ಸಂಪರ್ಕ ರಸ್ತೆಯನ್ನಾಗಿ ಸರ್ಕಾರ ಕೈಗೊಂಡಿದೆ. ಹಾಗೆಯೇ…

Read More