ವಿರಾಜಪೇಟೆ ನ.27 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಭೋದಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನವು ಶ್ರೇಷ್ಠ ಕಾನೂನು ಆಗಿದ್ದು ಅದು ರಾಷ್ಟ್ರದ ಐಕ್ಯತೆಯ ಪ್ರತೀಕವಾಗಿದೆ. ಪ್ರಜೆಗಳಿಗೆ ಹಕ್ಕನ್ನು ನೀಡಿ ಕರ್ತವ್ಯವನ್ನು ಪಾಲಿಸಲು ನಿರ್ದೇಶನವನ್ನು ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಮೂಲಧಾರವಾಗಿದೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಮಾತನಾಡಿದರು. ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಲೇಖಕ: admin
ವಿರಾಜಪೇಟೆ ನ.27 NEWS DESK : ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿ ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಎನ್.ಸಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೆಚ್ ಐ ವಿ/ಏಡ್ಸ್ ಅರಿವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಹೆಚ್ ಐ ವಿ /ಏಡ್ಸ್ ನ ಬಗ್ಗೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು. 2030 ರ ವೇಳೆಗೆ ಹೆಚ್ ಐ ವಿ ಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿ ಹೊಂದಲಾಗಿದ್ದು, ರೆಡ್ ರಿಬ್ಬನ್ ಕ್ಲಬ್ ಗಳ ಪಾತ್ರವು ಅದರಲ್ಲಿ ಬಹಳಷ್ಟಿದೆ. ಏಡ್ಸ್ ಮಾರಕ ಕಾಯಿಲೆ ಎಂಬುವುದಕ್ಕಿಂತ ಅದರ ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ರವರು…
ಮಡಿಕೇರಿ ನ.27 NEWS DESK : ಸಂವಿಧಾನ ಜೀವನದ ಅಂಗವಾಗಿದ್ದು, ನಮ್ಮೆಲ್ಲ ಕರ್ತವ್ಯ , ಕೆಲಸಗಳು ಸರಾಗವಾಗಿ ನಡೆಯಲು ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಎಸ್.ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ತಾಲ್ಲೂಕು ಕಾನೂನು ಸೇವೆಗಳ ಸಮಿತಿ ವಿರಾಜಪೇಟೆ, ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ನಾವೆಲ್ಲ ಇಂದು ಇಷ್ಟು ಶಿಸ್ತಿನಿಂದ ಹಾಗೂ ಸ್ವತಂತ್ರದಿಂದ ಬದುಕಲು ಸಂವಿಧಾನವೇ ಮೂಲ ಕಾರಣ. ವಿವಿಧ ದೇಶಗಳಿಗೆ ನಮ್ಮ ದೇಶವನ್ನು ಹೋಲಿಕೆ ಮಾಡಿದರೆ ಸಂವಿಧಾನದ ಮಹತ್ವ ಏನೆಂದು ತಿಳಿಯುತ್ತದೆ. ನಮ್ಮ ಸಂವಿಧಾನ ಅದ್ಭುತವಾದ ಜೀವಂತ ಸಂವಿಧಾನವಾಗಿದ್ದು, ಇದನ್ನು ರಚಿಸಲು ಪಟ್ಟಂತಹ ಶ್ರಮವನ್ನು ಅರಿಯುವುದರೊಂದಿಗೆ, ರಚಿಸಿದಂತಹ ಅಂಬೇಡ್ಕರ್ ಹಾಗೂ ರಚನಾ ಸಮಿತಿಯಲ್ಲಿದ್ದ ಪ್ರತಿಯೊಬ್ಬರನ್ನು ಸ್ಮರಿಸಬೇಕು. ಸಂವಿಧಾನವು ಎಲ್ಲಾ ಕಾನೂನಿನ ತಾಯಿ ಎಂಬುದನ್ನು ಅರಿತು ಪ್ರತಿಯೊಬ್ಬರ ಹಕ್ಕು ಕರ್ತವ್ಯಗಳನ್ನು…
ವಿರಾಜಪೇಟೆ ನ.27 NEWS DESK : ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ.ಘಟಕ, ಎನ್.ಎಸ್.ಎಸ್ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನ ಆಚರಿಸಲಾಯಿತು. ಭಾರತದ ಸಂವಿಧಾನ ಪ್ರಸ್ತಾವನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಅರ್ಜುನ್ ಮೌರ್ಯ ಅವರು ಸಂವಿಧಾನ ಪ್ರಸ್ತಾವನೆ ಮತ್ತು ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ವಯವಾಗುವಂತಹ ಸಂವಿಧಾನವನ್ನು ದೇಶಕ್ಕೆ ಕೊಟ್ಟ ಕೀರ್ತಿ ನಮ್ಮದು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾಮಾಜಿಕ ನ್ಯಾಯವನ್ನೊಳಗೊಂಡ ನಮ್ಮ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಮತ್ತು ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ಕಾನೂನಿಗೆ ಸಂಬಂಧಿಸಿದ ಯಾವುದೇ ವಿಚಾರಗಳಿಗೂ ಭಾರತೀಯ ಸಂವಿಧಾನದ ಒಳಗಡೆ ಪರಿಹಾರ ಇದ್ದೇ ಇದೆ. ಇಂತಹ ಸಂವಿಧಾನವನ್ನು ರಚನೆ ಮಾಡಿ ನೀಡಿದ ಮಹನೀಯರನ್ನು ನಾವೆಲ್ಲರೂ ಸ್ಮರಿಸಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂವಿಧಾನವನ್ನು ಕುರಿತ ಸಂಪೂರ್ಣ ಜ್ಞಾನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಕೊಡಗು ವಿಶ್ವವಿದ್ಯಾನಿಲಯದ ರಾ.ಸೇ.ಯೋ.ಯ ನೋಡಲ್ ಅಧಿಕಾರಿ ಪ್ರೊ. ದಯಾನಂದ…
ನಾಪೋಕ್ಲು ನ.27 NEWS DESK : ನಾಪೋಕ್ಲುವಿನ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ನಡೆಯಿತು. ಬಲ್ಲಮಾವಟಿ ಗ್ರಾಮದ ಭಗವತಿ ದೇವಾಲಯದಲ್ಲಿ ವಿಶೇಷ ನಾಗನ ಪೂಜೆಯನ್ನು ನೆರವೇರಿಸಲಾಯಿತು. ಬಲ್ಲಮಾವಟಿ, ನೆಲಜಿ, ಪುಲಿಕೋಟು ಗ್ರಾಮದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮಹಾಪೂಜೆ ನೆರವೇರಿಸಲಾಯಿತು. ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು ವರದಿ : ದುಗ್ಗಳ ಸದಾನಂದ.
ನಾಪೋಕ್ಲು ನ.27 NEWS DESK : ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಷಷ್ಠಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ನಾಗನ ಬನಕ್ಕೆ ರುದ್ರಾಭಿಷೇಕ, ಹಾಲು ಎಳೆ ನೀರು ಸೇರಿದಂತೆ ವಿವಿಧ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಬಳಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕ ಅರುಣ್ ಕುಮಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ದೇವಾಲಯದ ಪಾರುಪತ್ಯಗಾರ ಟಿ.ಕೆ.ಮನು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ನ.27 NEWS DESK : ಹಳೆತಾಲ್ಲೂಕಿನ ಶಿವಚಾಳಿಯಂಡ ಕುಟುಂಬದ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ದೇವರಿಗೆ ಹಾಲು, ಎಲೆನೀರು ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. ಅರ್ಚಕ ಜಗದೀಶ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಈ ಸಂದರ್ಭ ಹಿರಿಯರಾದ ವಚಾಳಿಯಂಡ ಸಹದೇವ, ಮಾದಪ್ಪ, ಅಂಬಿ ಕಾರ್ಯಪ್ಪ, ಕಿಶೋರ್ ಬೋಪಣ್ಣ, ಲವ, ಸುಭಾಷ್ ಇನ್ನಿತರ ಉಪಸ್ಥಿತರಿದ್ದು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ನ.27 NEWS DESK : ನಗರದ ತೆಲುಗರ ಬೀದಿಯಲ್ಲಿರುವ ಶ್ರೀ ಅಂಗಾಳ ಪರಮೇಶ್ವರಿ ದೇವಾಲಯದಲ್ಲಿ ಸುಬ್ರಹಣ್ಯ ಷಷ್ಠಿ ಪ್ರಯುಕ್ತ ನಾಗದೇವರ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ದೇವರಿಗೆ ಹಾಲಿನ ಅಭಿಷೇಕ, ವಿಶೇಷ ಪೂಜೆಗಳು ನಡೆಯಿತು. ತಂಬಿಲ ಸೇವೆ, ಕ್ಷೀರಾಭಿಷೇಕ, ಕುಂಕುಮಾರ್ಚನೆ ಮತ್ತು ಪುಷ್ಪಾರ್ಚನೆಯೊಂದಿಗೆ ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ಪೂಜೆಯ ಅಂಗವಾಗಿ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ನಾಗನ ರೂಪ ಹೋಲುವಂತೆ ದೇವರ ಮೂರ್ತಿಗೆ ಅಲಂಕಾರ ಮಾಡಲಾಗಿತ್ತು. ನಗರದ ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಮಡಿಕೇರಿ ನ.27 NEWS DESK : ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ ಇವೇ ನಮ್ಮ ಸಂವಿಧಾನದ ತತ್ವಗಳು. ಇವೇ ಸಂವಿಧಾನದ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲಿರುವ ಲಿಖಿತ ಸಂವಿಧಾನದಲ್ಲಿ, ರೀಬಿಲ್ ಮಾಡುವ ಅವಕಾಶವಿಲ್ಲ. ಆದರೆ ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ, ಕಾನೂನನ್ನು ಹಿಂದಕ್ಕೆ ಪಡೆಯುವ ಅವಕಾಶ ಕಲ್ಪಿಸಿದ್ದಾರೆ. ಆರ್ಟಿಕಲ್ 14, ಸಮಾನತೆ, ಸಮಾಜದಲ್ಲಿ ಎಲ್ಲಾ ಜಾತಿ, ಧರ್ಮ, ಲಿಂಗ, ಪಂಗಡ ಸಮಾನವಾಗಿ ಜೀವನ ನಡೆಸಬೇಕು ಎಂದು ತಿಳಿಸುತ್ತದೆ. ಸಂವಿಧಾನ ಅರ್ಥ ಮಾಡಿಕೊಂಡರೆ, ಈ ಸಂವಿಧಾನ ನಮ್ಮನ್ನು, ನಮ್ಮ ಪಕ್ಷವನ್ನು ರಕ್ಷಣೆ ಮಾಡುತ್ತದೆ. ಸಂವಿಧಾನದ ಮೇಲೆ ಜನರ ವಿಶ್ವಾಸ ಕಳೆದು…
ಮಡಿಕೇರಿ ನ.27 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಪೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಪೊನ್ನಂಪೇಟೆ ಕೂರ್ಗ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance (RAMP) ರಡಿ Incubation ಯೋಜನೆ ಕುರಿತು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್ಒ ಎಂಎಸ್ಎಂಇ ನಿವೃತ್ತ ಉಪ ನಿರ್ದೇಶಕರಾದ ಗೋಪಿನಾಥ್ ರಾವ್ ಆರ್. ಅವರು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು.






