ನಾಪೋಕ್ಲು ಡಿ.26 NEWS DESK : ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ಫ್ಯಾಕ್ಸ್ (FACEX) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡುವುದರ ಮೂಲಕ ಕೀರ್ತಿ ತಂದಿದ್ದಾರೆ. ಕಕ್ಕಬೆ ಗ್ರಾಮ ಪಂಚಾಯತಿಯ ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ಮೂವರು ವಿದ್ಯಾರ್ಥಿಗಳು ಕೋಝಿಕೋಡ್ನ ಟ್ರೇಡ್ ಸೆಂಟರ್ನಲ್ಲಿ ನಡೆದ ಪ್ರತಿಷ್ಠಿತ ಫ್ಯಾಕ್ಸ್ (FACEX) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ ಸುಮಾರು 2,000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಠಿಣವಾದ ಆರಂಭಿಕ ಸುತ್ತುಗಳ ನಂತರ ಕೇವಲ 70 ವಿದ್ಯಾರ್ಥಿಗಳು ಮಾತ್ರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಇವರಲ್ಲಿ ಆಕ್ಸ್ಫರ್ಡ್ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರಾದ ಹನ್ನತ್ ಅಬ್ದುಲ್ ಅಜೀಜ್, ಆಯಿಷಾ ಕೆ.ಮೊಹಮ್ಮದ್ ಮತ್ತು ಸಫಾ ಕೆ.ಮಜಿದ್ ಫೈನಲಿಸ್ಟ್ಗಳಾಗಿ ಹೊರಹೊಮ್ಮಿರುವುದು ವಿಶೇಷ. ಅಂತಿಮ ಹಂತದ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳ ಪ್ರತಿಭೆಗಳು ಭಾಗವಹಿಸಿದ್ದವು. ಇದರಲ್ಲಿ…
ಲೇಖಕ: admin
ಮಡಿಕೇರಿ NEWS DESK ಡಿ.25 : ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣದೊಂದಿಗೆ ಸೃಜನಾತ್ಮಕ ಬೆಳವಣಿಗೆ ಅಗತ್ಯವಾಗಿದೆ. ಇದಕ್ಕಾಗಿ ಕ್ರೀಡೆ ಮತ್ತು ವಿವಿಧ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದು ಬಹುಮುಖ್ಯವಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕಾ ಇಲಾಖಾ ಸಹಾಯಕ ನಿರ್ದೇಶಕರಾದ ಮಿಲನ ಭರತ್ ತಿಳಿಸಿದ್ದಾರೆ. ಶತಮಾನೋತ್ಸವ ಸಂಭ್ರಮದಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ‘ಶತ ಸಂಭ್ರಮ’ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೃಜನಾತ್ಮಕವಾದ ಕ್ರೀಡೆ ಮತ್ತು ಸಾಂಸ್ಕೃತಿಕ ಕಲಾ ಪ್ರಕಾರಗಳು ಪ್ರತಿಯೊಬ್ಬರನ್ನು ಸಮಾಜಕ್ಕೆ ತೆರೆದುಕೊಳ್ಳುವುದಕ್ಕೆ ಅನುವು ಮಾಡಿಕೊಡುತ್ತದೆ. ಈ ಹಿಂದೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪಠ್ಯೇತರವೆಂದು ಕರೆಯಲಾಗುತ್ತಿತ್ತು. ಆದರೆ ಪ್ರಸ್ತುತ ಇವುಗಳು ಶಿಕ್ಷಣಕ್ಕೆ ಪೂರಕವಾದ ಮತ್ತು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ಕ್ರೀಡೆ ಮತ್ತು ಸಾಂಸ್ಕೃತಿಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೆ ಕೇವಲ ಶಿಕ್ಷಣಕ್ಕೆ ಮಾತ್ರ ಒತ್ತು ನೀಡುವ ಶೇ.80 ರಷ್ಟು ಮಕ್ಕಳು ಉದ್ಯೋಗದ ಅರ್ಹತೆಯನ್ನು…
ಮಡಿಕೇರಿ NEWS DESK ಡಿ.25 : ಮಡಿಕೇರಿಯ ಕೊಡಗು ಗೌಡ ಸಮಾಜದ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಂಬೆಕೋಡಿ ಆನಂದ, ಸೂರ್ತಲೆ ಸೋಮಣ್ಣ, ಹುದೇರಿ ರಾಜೇಂದ್ರ, ಕೊಲ್ಯದ ಗಿರೀಶ್, ಮಂದ್ರಿರ ತೇಜಸ್, ಪುಳಕಂಡ ಸಂದೀಪ್, ಕೊಂಬನ ಪ್ರವೀಣ್, ಪೊನ್ನಚ್ಚನ ಮಧು, ತೋಟಂಬೈಲು ಅನಂತ ಕುಮಾರ್, ಪೈಕೇರ ಮನೋಹರ ಮಾದಪ್ಪ, ಕಾಳೇರಮ್ಮನ ನಂದಕುಮಾರ್, ಆಮೆ ಸೀತಾರಾಮ್, ಪೇರಿಯನ ಘನ ಶ್ಯಾಮ್, ಮಹಿಳಾ ತಂಡದಿಂದ ಚೊಕ್ಕಾಡಿ ಪ್ರೇಮ ರಾಘವಯ್ಯ ಹಾಗೂ ಮೂಲೆಮಜಲು ಅಮಿತಾ ಆಯ್ಕೆಯಾದರು. ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಣತ್ತಲೆ ಪಳಂಗಪ್ಪ ಕಾರ್ಯನಿರ್ವಹಿಸಿದರೆ ಕೊಡಗು ಗೌಡ ಸಮಾಜಗಳ ಒಕ್ಕೂಟ ಸಹಕಾರ ನೀಡಿತು. ನಿಕಟಪೂರ್ವ ಅಧ್ಯಕ್ಷ ಪೇರಿಯನ ಜಯಾನಂದ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ನಮ್ಮ…
ಮಡಿಕೇರಿ NEWS DESK ಡಿ.25 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ ಮತ್ತು ಕಾಳು ಮೆಣಸು ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸೂಚನೆ ನೀಡಿದ್ದಾರೆ. ಕೊಯ್ಲು ಮಾಡಿರುವ ಕಾಫಿ ಮತ್ತು ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಹಾಗೂ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ವ್ಯಾಪಾರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿ (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ. ವಹಿವಾಟಿನ ವಿವರ ತೂಕ ಮತ್ತು ಮೊತ್ತ) ಯನ್ನು ಸಂಗ್ರಹಿಸಿ…
ಮಡಿಕೇರಿ ಡಿ.25 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಗೌಡ ವಿಕಾಸ ವೇದಿಕೆ (ಸಾಮಾಜಿಕ ಮಾಧ್ಯಮ ವಿಭಾಗ) ಸಹಕಾರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಅರೆಭಾಷೆ ‘ರಸಪ್ರಶ್ನೆ ಸ್ಪರ್ಧಾ’ ಕಾರ್ಯಕ್ರಮ ನಡೆಯಿತು. ಅರೆಭಾಷೆಯಲ್ಲಿ ಹಲವು ಪ್ರಶ್ನೆ ಕೇಳುವ ಮೂಲಕ ಅರೆಭಾಷೆ ಮತ್ತು ಕನ್ನಡದ ಶಬ್ದಕೋಶದ ಪದಗಳನ್ನು ಉತ್ತರಿಸುವ ಮೂಲಕ ಮೂವರು ವಿದ್ಯಾರ್ಥಿಗಳು ನಗದು ಬಹುಮಾನ ಪಡೆದರು. ಅರೆಭಾಷೆ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ದೂರದ ಬೆಂಗಳೂರು, ಕರಿಕೆ, ಸುಳ್ಯ, ಪೆರಾಜೆ, ಸಂಪಾಜೆ, ಕೊಯನಾಡು, ಭಾಗಮಂಡಲ. ಚೇರಂಬಾಣೆ, ಮೂರ್ನಾಡು, ಮದೆನಾಡು, ಮೇಕೇರಿ, ಮಡಿಕೇರಿಯ ವಿವಿಧ ಶಾಲೆಗಳಿಂದ 35 ವಿದ್ಯಾರ್ಥಿಗಳು ಭಾಗವಹಿಸಿ ಅರೆಭಾಷೆ ರಸಪ್ರಶ್ನೆ ಪರೀಕ್ಷೆ ಬರೆದರು. ಇವರಲ್ಲಿ 8 ವಿದ್ಯಾರ್ಥಿಗಳು 40 ಅಂಕಕ್ಕೆ 38 ಅಂಕವನ್ನು ಇಬ್ಬರು, 37 ಅಂಕವನ್ನು ಮೂವರು ಮತ್ತು 35 ಅಂಕವನ್ನು ಇಬ್ಬರು ಪಡೆದು ರಸಪ್ರಶ್ನೆ ಸುತ್ತಿಗೆ ಆಯ್ಕೆಯಾಗಿದ್ದರು. ಇವರಿಗೆ ‘ಥಟ್’ ಅಂತ ಹೇಳಿ ಕಾರ್ಯಕ್ರಮದ ರೀತಿ ಅರೆಭಾಷೆಯಲ್ಲಿ…
ಚಿತ್ರದುರ್ಗ ಡಿ.25 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. :: ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು :: ಅಪಘಾತದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಂಪೂರ್ಣ ವರದಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡಲಾಗುವುದು. :: ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ :: ಗಾಯಾಳುಗಳ ಸ್ಥಿತಿಯನ್ನು ಗಮನಿಸಿ ರಾಜ್ಯ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಡಿಕೇರಿ ಡಿ.25 NEWS DESK : ಮಡಿಕೇರಿಯ ಶ್ರೀ ಅಯ್ಯಪ್ಪ ಭಕ್ತ ವೃಂದದ ವತಿಯಿಂದ ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅಪ್ಪ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ವಿಜಯ್ ಗುರುಸ್ವಾಮಿ ನೇತೃತ್ವದಲ್ಲಿ ಬಾಳೆ ದಿಂಡಿನ ಅಲಂಕೃತ ಮಂಟಪ ನಿರ್ಮಿಸಿ ಶಬರಿ ಗಿರಿವಾಸ ಶ್ರೀ ಅಯ್ಯಪ್ಪನ ಮೂರ್ತಿ ಪ್ರತಿಷ್ಠಾಪಿಸಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಇದೇ ವೇಳೆ ಕನ್ನಿ ಪೂಜೆಯನ್ನು ನಡೆಸಲಾಯಿತು. ಬಳಿಕ ನೂರಾರು ಮಂದಿ ವೃತಾಧಾರಿಗಳು ಶರಣು ಕರೆದು ಅಯ್ಯಪ್ಪ ಸ್ವಾಮಿಯ ನಾಮ ಸ್ಮರಣೆಯೊಂದಿಗೆ ಕುದಿಯುವ ತುಪ್ಪದಲ್ಲಿ ಬೇಯುತ್ತಿದ್ದ ಕಜಾಯವನ್ನು ಕೈಯಿಂದ ಹೊರ ತೆಗೆದು ಶ್ರೀ ಅಯ್ಯಪ್ಪನಿಗೆ ಸಮರ್ಪಿಸಿದರು. ನಗರದ ವಿವಿಧ ಕಡೆಗಳಿಂದ ಆಗಮಿಸಿದ್ದ ಅಯ್ಯಪ್ಪ ವೃತಾಧಾರಿಗಳು ಶಬರಿ ಮಲೆ ಅಯ್ಯಪ್ಪನನ್ನು ಭಜಿಸುವ ಮೂಲಕ ಭಕ್ತಿ ಮೆರೆದರು. ಪುಟ್ಟ ಮಕ್ಕಳು ಕೂಡ ಅಯ್ಯಪ್ಪ ವೃತಾಧಾರಿಗಳಾಗಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬೆಳಗಿದ ಬಳಿಕ ನೆರೆದಿದ್ದ ಭಕ್ತರಿಗೆ ಮತ್ತು ಅಯ್ಯಪ್ಪ ವೃತಾಧಾರಿಗಳಿಗೆ ಅನ್ನ ಪ್ರಸಾದ ವಿತರಿಸಲಾಯಿತು.
ನಾಪೋಕ್ಲು ಡಿ.25 NEWS DESK : ಮೇರಿ ಮಾತೆಯ ದೇವಾಲಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸುಂದರವಾಗಿ ನಿರ್ಮಿಸಿದ್ದ ಗೋದಲಿಯಲ್ಲಿ ಬಾಲ ಏಸುವಿನ ಪ್ರತಿಕೃತಿಯನ್ನು ಧರ್ಮ ಗುರುಗಳಾದ ರೆ. ಫಾ ಜ್ಞಾನ ಪ್ರಕಾಶ್ ಪ್ರತಿಷ್ಠಾಪಿಸಿ ಬಲಿಪೂಜೆ, ಪ್ರಾರ್ಥನೆ ನೆರವೇರಿಸಿದರು. ನಂತರ ಏಸುವಿನ ಸಂದೇಶವನ್ನು ಸಾರಿ ಹಬ್ಬದ ಶುಭಾಶಯ ಕೋರಿದರು. ದೇವಾಲಯವನ್ನು ಹಬ್ಬದ ಪ್ರಯುಕ್ತ ವಿದ್ಯುತ್ ಅಲಂಕಾರಿಸಲಾಗಿತ್ತು. ಭವ್ಯವಾದ ಅಲಂಕಾರದ ಆಕರ್ಷಕ ಗೋದಲಿ ನಿರ್ಮಿಸಲಾಗಿತ್ತು. ಏಸುವಿನ ಗೋದಲಿ ನಿರ್ಮಿಸುವ ಸ್ಪರ್ಧೆ ಆಯೋಜಿಲಾಗಿದ್ದು, ಪ್ರಥಮ ಬಹುಮಾನವನ್ನು ಬಾಬಿ ವೇಗಸ್, ದ್ವಿತೀಯ ಬಹುಮಾನ ಕೆ.ಜೆ.ರಾಯ್ ಹಾಗೂ ತೃತೀಯ ಬಹುಮಾನ ಜಾಲಿ ಅಬ್ರಹಾಂ ಪಡೆದುಕೊಂಡರು. ವಿಜೇತರಿಗೆ ಧರ್ಮಗಳು ಬಹುಮಾನ ವಿತರಿಸಿದರು. ರೋಲಿಂಗ್ ಟ್ರೋಫಿಯನ್ನು ಕೆ.ಜೆ.ಜಾಯ್ ಪ್ರಾಯೋಜಕರಾಗಿದ್ದರು. ಸಾಂತಕ್ಲಾಸ್ ವೇಸದಾರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಡುಗೊರೆ ಕೊಟ್ಟು ಸಂಭ್ರಮಿಸಿದರು. ಈ ಸಂದರ್ಭ ಕ್ರೈಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಾಲನಾ ಸಮಿತಿ ಸದಸ್ಯರು, ಯುವಕ ಸಂಘದ ಸದ್ಯಸರು ಇದ್ದರು. ವರದಿ : ದುಗ್ಗಳ ಸದಾನಂದ.
ಪುತ್ತೂರು ಡಿ.25 NEWS DESK : ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ಗ್ಲೋ ಫೆಸ್ಟ್ ಎಂಬ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ಡಿ.15 ರಿಂದ ನಡೆಯುತ್ತಿದ್ದು, ಜ.15ರ ವರೆಗೆ ಇರಲಿದೆ. ಅದರಂತೆ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ 7 ಸಾವಿರ ರೂ.ವರೆಗಿನ ವಿಶೇಷ ರಿಯಾಯಿತಿಯೊಂದಿಗೆ ವಜ್ರಾಭರಣಗಳನ್ನು ಖರೀದಿಸಬಹುದಾಗಿದೆ. ಈ ಎಲ್ಲಾ ಆಫರ್ಗಳು ಪುತ್ತೂರು ಮಾತ್ರವಲ್ಲದೆ, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರದಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಳಿಗೆಗಳಲ್ಲಿಯೂ ಲಭ್ಯವಿದೆ.
ಮಡಿಕೇರಿ ಡಿ.25 NEWS DESK : ಕೊಡಗು ವಿಶ್ವವಿದ್ಯಾಲಯ ಜ್ಞಾನ ಕಾವೇರಿಯ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ನಗ್ಮಾಭಾನು ಹೆಚ್.ಎ. ಅವರಿಗೆ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ ಲಭಿಸಿದೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವಾನ್ಸ್ಡ್ ಸೈನ್ಸಸ್ನಲ್ಲಿ ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಸಾವಯವ ರಸಾಯನಶಾಸ್ತ್ರ ವಿಭಾಗದಲ್ಲಿ ತಮ್ಮ ಪ್ರಬಂಧದ ಅತ್ಯುತ್ತಮ ಮೌಖಿಕ ಪ್ರಸ್ತುತಿಗಾಗಿ ಡಾ.ನಗ್ಮಾಭಾನು ಹೆಚ್.ಎ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ನಗ್ಮಾಭಾನು ಹೆಚ್.ಎ.ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿಯಲ್ಲಿನ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಬಾಲಕೃಷ್ಣ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ “ಸಿಂಥೆಸಿಸ್ ಆಫ್ ಸಮ್ ನೋವೆಲ್ ಹೆಟಾರಿಸೈಕ್ಲಿಕ್ ಕಾಂಪೌಂಡ್ಸ್ ವಯಾ ಡಯಪೊಲರ್ ಸೈಕ್ಲೋಡಿಷನ್ ರಿಯಾಕ್ಷನ್ಸ್” ಎಂಬ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು ಪ್ರಸ್ತುತ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಮುಖ್ಯ ಆವರಣದಲ್ಲಿರುವ ರಸಾಯನಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ. ನಗ್ಮಾಭಾನು ಹೆಚ್. ಎ.…






