ಮಡಿಕೇರಿ ಸೆ.30 : ಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆ ಕಾವೇರಿ ಉಗಮಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ವೇಳೆ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥಿಸಿದ್ದಾರೆ. ಮಳೆ ಬರಲಿ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಲೇಖಕ: admin
ಬೆಂಗಳೂರು ಸೆ.30 : ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸುದ್ದಿ ಸಂಸ್ಥೆಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎನ್ ಶಾಂತಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಜಾವಾಣಿ ಸಂಸ್ಥೆಯ ನಿರ್ದೇಶಕರು ಮತ್ತು ಸಂಪಾದಕರೂ ಆಗಿರುವ ಶಾಂತಕುಮಾರ್ ಅವರು ತಮ್ಮ ಸುದೀರ್ಘ ಅನುಭವ ಮತ್ತು ಕಾರ್ಯದಕ್ಷತೆಯಿಂದ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ ಎಂದು ಶುಭ ಹಾರೈಸಿದ್ದಾರೆ.
ಕೊಯನಾಡು ಸೆ.30 : ಕೊಯನಾಡು ಸುನ್ನಿ ಮುಸ್ಲಿಂ ಜುಮಾ ಮಸೀದಿ, ನುಸ್ರತುಲ್ ಇಸ್ಲಾಂ ಅಸೋಸಿಯೇಶನ್, ಗಲ್ಫ್ ಸಮಿತಿ ಸಂಯುಕ್ತ ಆಶ್ರಯದಲ್ಲಿ ಈದ್ ಮಿಲಾದ್ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಸುಬುಲು ಸ್ಸಲಾಂ ಮದ್ರಸ ಸಭಾಂಗಣದಲ್ಲಿ ಜಮಾಅತ್ ಅಧ್ಯಕ್ಷ ಎಸ್.ಎ.ಅಬ್ದುಲ್ ರಜಾಕ್ ದ್ವಜರೋಹಣ ಮೂಲಕ ಮಿಲಾದ್ ಸಮಾವೇಶಕ್ಕೆ ಚಾಲನೆ ನೀಡಿದರು,. ನಂತರ ಸ್ವಲಾತ್ ಜಾಥಾ ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಜಿಲ್ಲಾ ವಕ್ಫ್ ಸದಸ್ಯರಾದ ಹಾಜಿ ಎಸ್ ಮೊಯ್ದೀನ್ ಕುಂಞ ಉದ್ಘಾಟಿಸಿದರು. ಕೊಯನಾಡಿನಿಂದ ಚೆಡಾವು ವರೆಗೆ ಸಾಗಿ ಬಂದ ಜಾಥಾದಲ್ಲಿ ಮದ್ರಸ ವಿದ್ಯಾರ್ಥಿಗಳ ಆಕರ್ಷಣಿಯ ಧಫ್ ಪ್ರದರ್ಶನ, ಊರಿನ ಯುವಕರ ವಿವಿಧ ಶೈಲಿಯ ಘೋಷವಾಕ್ಯ, ಪ್ರವಾದಿ ಸಂದೇಶವನ್ನು ಜಾಥದ ಮೂಲಕ ಸಾರಿದರು. ನಂತರ ಮಸೀದಿಯಲ್ಲಿ ಬೃಹತ್ ಮೌಲೀದ್ ಪಾರಾಯಣ ನಡೆಯಿತು. ಮಗ್ರಿಬ್ ನಮಾಜಿನ ಬಳಿಕ ಮದ್ರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷ ಎಸ್.ಎ.ಅಬ್ದುಲ್ ರಜಾಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಸೀದಿ ಖತೀಬರಾದ ಅಬ್ದುಲ್ ಹಮೀದ್ ಅಮ್ಜದಿ…
ಸಿದ್ದಾಪುರ ಸೆ.30 : ದಿಟ್ಟಳ್ಳಿ ಗಿರಿಜನ ಆಶ್ರಮ ಶಾಲೆಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯ ಅಧಿಕಾರಿ ಎಸ್. ಹೊನ್ನೇಗೌಡ ಹಾಗೂ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಶ್ರಮ ಶಾಲೆಯ ಮಕ್ಕಳಿಗೆ ಈ ಮಾಹೆಯಲ್ಲಿ ಪೂರೈಕೆ ಮಾಡಲಾದ ಗೋಧಿ, ಅಕ್ಕಿ, ಮೈದ, ಅವಲಕ್ಕಿಯಲ್ಲಿ ಹುಳಗಳು ಪತ್ತೆಯಾಗಿದ್ದು. ಶಾಲೆಗೆ ಭೇಟಿ ನೀಡಿದ ಅಧಿಕಾರಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ನಂತರ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅಧಿಕಾರಿ, ತಾವು ಅಧಿಕಾರ ಸ್ವೀಕಾರ ಮಾಡಿ 15 ದಿನಗಳಾಗಿದ್ದು, ಇಲ್ಲಿಗೆ ಪೂರೈಕೆ ಮಾಡಲಾದ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದು ಇದನ್ನು. ಮಕಳಿಗೆ ಪೂರೈಕೆ ಮಾಡದಂತೆ ಸೂಚಿಸಲಾಗಿದೆ ಎಂದರು. ಪೂರೈಕೆ ಮಾಡಲಾದ ಆಹಾರ ಪದಾರ್ಥಗಳನ್ನು ವಾಪಾಸು ಕಳುಹಿಸಿ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದ ಅವರು ತಮ್ಮ ವ್ಯಾಪ್ತಿಯ ಎಲ್ಲಾ ಆಶ್ರಮ ಶಾಲೆಗಳು ಹಾಗೂ ಹಾಸ್ಟೇಲ್ಗಳಿಗೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದರು. ಈ…
ಮಡಿಕೇರಿ ಸೆ.29 : ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕಾವೇರಿಯ ಉಗಮ ಸ್ಥಾನ ಕೊಡಗಿನಲ್ಲಿ ಯಾವುದೇ ಸ್ಪಂದನೆ ದೊರೆಯಲಿಲ್ಲ. ಕೆಲವು ಕಡೆ ಪ್ರತಿಭಟನೆ ನಡೆದದ್ದು ಬಿಟ್ಟರೆ ಜನಜೀವನ ಎಂದಿನಂತೆ ಇತ್ತು. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಕೊಡಗಿನಲ್ಲಿ ಪರಿಣಾಮ ಬೀರಲಿಲ್ಲ. ಜಿಲ್ಲೆಯ ಕುಶಾಲನಗರ ಮತ್ತು ಗೋಣಿಕೊಪ್ಪದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು. ಜಿಲ್ಲಾ ಕೇಂದ್ರ ಮಡಿಕೇರಿ ನಗರದಲ್ಲಿ ವಾರದ ಶುಕ್ರವಾರದ ಸಂತೆ ಬಂದ್ ಬಿಸಿ ಇಲ್ಲದೆ ಸುಗಮವಾಗಿ ನಡೆಯಿತು. ಪಿರಿಯಾಪಟ್ಟಣ, ಹುಣಸೂರು ಮುಂತಾದ ಕಡೆಯಿಂದ ಬರುವ ವ್ಯಾಪಾರಿಗಳು ಗುರುವಾರ ಸಂಜೆಯೇ ಬಂದಿದ್ದರಿಂದ ಸಂತೆ ವ್ಯಾಪಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಅಂಗಡಿಗಳಲ್ಲೂ ವಾರದ ವ್ಯಾಪಾರ ಭರ್ಜರಿಯಾಗಿಯೇ ನಡೆಯಿತು. ಶಾಲಾ ಕಾಲೇಜುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಸಹಿತ ವಾಹನ ಸಂಚಾರವೂ ಎಂದಿನಂತೆ ಇತ್ತು. ಮೈಸೂರು ಮತ್ತು…
ಮಡಿಕೇರಿ ಸೆ.29 : ಕೊಡಗು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಯೋಜನೆ ನೆನೆಗುದಿಗೆ ಬಿದ್ದಿದ್ದು, ಈ ಕುರಿತು ವಸ್ತುಸ್ಥಿತಿಯನ್ನು ಬಹಿರಂಗ ಪಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರೈಲು ಮಾರ್ಗದ ಯೋಜನೆಯ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರದ ಬಳಿ ಪತ್ರದ ಮೂಲಕ ಹಲವು ಬಾರಿ ಮಾಹಿತಿ ಬಯಸಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಉತ್ತರ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೊಡಗು ರೈಲು ಮಾರ್ಗದ ಕುರಿತು ರೈಲ್ವೆ ಸಚಿವರಿಂದ ವಿವರ ಪಡೆಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ ಹಾಗೂ ಸಂಜಯ್ ಸಿಂಗ್ ಅವರ ಬಳಿ ಮನವಿ ಮಾಡಿ ಪತ್ರ ಬರೆದಿರುವುದಾಗಿ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಗೋಣಿಕೊಪ್ಪಲು ಸೆ.29 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವೇ ಬರದಿಂದ ತತ್ತರಿಸಿದೆ, ಇಂತಹ ಸಂದರ್ಭದಲ್ಲಿ ಕಾವೇರಿ ನದಿಯ ನೀರು ತಮಿಳುನಾಡಿಗೆ ಬಿಡಲು ಅದೇಶ ಮಾಡಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಲೋಪ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಾನವ ಸರಪಳಿ ನಿರ್ಮಿಸಿ ಗೋಣಿಕೊಪ್ಪಲಿನಲ್ಲಿ ಪ್ರತಿಭಟನೆ ನಡೆಸಿತು. ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ರೈತ ಸಂಘ ತನ್ನ ಬೆಂಬಲ ಸೂಚಿಸಿತು. ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜೈ ಬೋಪಯ್ಯ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಹುಟ್ಟಿದ ಕಾವೇರಿ ನದಿಯು ರಾಜ್ಯದ ಜನತೆಗೆ ನೀರು ಉಣಿಸುತ್ತಿದೆ. ಪರಿಸರ ಅಸಮತೋಲನದಿಂದ ನಿರ್ದಿಷ್ಟ ಪ್ರಮಾಣದಲ್ಲಿ ಮಳೆಯಾಗದೆ ಬರದ ಛಾಯೆ ಕಾಣಿಸಿಕೊಂಡಿದೆ. ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದರು, ತಮಿಳು ನಾಡಿಗೆ ನೀರು ಹರಿಯಬಿಟ್ಟಿದ್ದಾರೆ. ಕಾವೇರಿ ಪ್ರಾಧಿಕಾರದ ಅಧಿಕಾರಿಗಳು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡಿ ಅವಲೋಕನ ಮಾಡಬೇಕಿತ್ತು.…
ಮಡಿಕೇರಿ ಸೆ.29 : ರಾಷ್ಟ್ರೀಯ ಹಸಿರು ಪಡೆ, ಇಕೋ ಕ್ಲಬ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಹಯೋಗದಲ್ಲಿ ಕೊಡಗು ಅರಣ್ಯ ವೃತ್ತದ ವತಿಯಿಂದ 69 ನೇ ವನ್ಯಜೀವಿ ಸಪ್ತಾಹದ ಪ್ರಯುಕ್ತ ಅಕ್ಟೋಬರ್, 02 ರಂದು ಬೆಳಗ್ಗೆ 7 ಗಂಟೆಗೆ ನಗರದ ಅರಣ್ಯ ಭವನದಿಂದ ವೃಕ್ಷೋದ್ಯಾನದವರೆಗೆ ನಡಿಗೆ ಜಾಥ ಮತ್ತು ಸೈಕಲ್ ಜಾಥ ನಡೆಯಲಿದೆ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಸೆ.29 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ವರ್ಷಾಚರಣೆ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಅ.2 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ,…
ಮಡಿಕೇರಿ ಸೆ.29 : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ “ಆದಮ್ ಕಪ್” ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು, ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದರು. ಟೇಬಲ್ ಟೆನ್ನಿಸ್ ಅಸೋಸಿಯೇಷನ್ನ ಗೌರವಾಧ್ಯಕ್ಷ ಮೊಹಮ್ಮದ್ ಆಸೀಫ್ ಪ್ರಾಸ್ತವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಯ ಬಗ್ಗೆಯೂ ಹೆಚ್ಚು ಆಸಕ್ತಿ ತೋರಬೇಕು ಎಂದರು. ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಜನನಿ ಹೆಲ್ತ್ ಕೇರ್ ಸೆಂಟರ್ನ ಡಾ.ಎನ್.ಎಸ್.ನವೀನ್ ಹಾಗೂ ಡಾ.ಬಿ.ಕೆ.ರಾಜೇಶ್ವರಿ ಕ್ರೀಡೆಯ ಮಹತ್ವದ ಕುರಿತು ಮಾತನಾಡಿದರು. ಪ್ರಮುಖರಾದ ಸುಧಾ ಶಂಕರಪ್ರಸಾದ್ ಪ್ರಾರ್ಥಿಸಿ, ಆರ್ಥಿಕ ಸಲಹೆಗಾರರಾದ ಗೀತಾ ಗಿರೀಶ್ ನಿರೂಪಿಸಿ, ವಂದಿಸಿದರು.






