ಕುಶಾಲನಗರ ಅ.27: ಗ್ರಾ.ಪಂ ನೌಕರರ ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಒತ್ತಾಯಿಸಿ ನ.7ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾ.ಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾ ಪಂಚಾಯತ್ ಅನುಮೋದನೆಗಾಗಿ ಒತ್ತಾಯಿಸಿ ನ.3ರಂದು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರು ಗಂಟಿಗಳು, ಜವಾನ, ಸ್ವಚ್ಛತಾ ಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರನಾಗಿ ಘೋಷಿಸಬೇಕು. ದಿನನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ 31 ಸಾವಿರ ನಿಗದಿಗೊಳಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರೂ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆ ಅವಕಾಶ…
ಲೇಖಕ: admin
ವಿರಾಜಪೇಟೆ ಅ.27 : ಮೈಸೂರು ದಸರಾ ಮಹೋತ್ಸವದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನದಲ್ಲಿ ವಿರಾಜಪೇಟೆಯ ಬೇಟೋಳಿ ಗ್ರಾಮದ ಚಿತ್ರ ಕಲಾವಿದ ಸುನಾದ್ ಭಾರದ್ವಾಜ್ ರಚಿಸಿದ “ತಾಯಿಯ ಪಾದಗಳನ್ನು ಶೃಂಗರಿಸಿ” ಎಂಬ ಕಲಾಕೃತಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿ ಲಭಿಸಿದೆ. ರಾಜ್ಯಾದ್ಯಂತ ಒಟ್ಟು 150 ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ ಸುನಾದ್ ಭಾರದ್ವಾಜ್ ರ ಕಲಾಕೃತಿಯು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸುನಾದ್ ಈ ಹಿಂದೆಯೂ ದಸರಾ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಬೇಟೋಳಿ ಮಕ್ಕಿಯ ಬಿ.ಪಿ.ಪಾವನರಾಮ್, ಸುಧಾ ದಂಪತಿಗಳ ಪುತ್ರ.
ಮಡಿಕೇರಿ ಅ.27 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ 2022-23 ನೇ ಸಾಲಿನ 19 ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿಯನ್ನು ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಅವರಿಗೆ ಗಣ್ಯರು ಪ್ರದಾನ ಮಾಡಿದರು. ಅಲ್ಲದೆ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಮಾತನಾಡಿ ಕತೆಗಾರ್ತಿ ಕೊಡಗಿನ ಗೌರಮ್ಮ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವರ್ಣಿಸಿದರು. ಕೊಡಗಿನ ಗೌರಮ್ಮ ಸ್ವಾತಂತ್ರ್ಯ ಪೂರ್ವದಲ್ಲಿ ಸಣ್ಣ ಕತೆಗಳನ್ನು ಬರೆಯುವ ಮೂಲಕ ಮಹಿಳಾ ಸಬಲೀಕರಣ, ಸಮಾಜದಲ್ಲಿ ಸಮಾನತೆ ಹೀಗೆ ಹಲವು ವಿಚಾರಗಳ ಕುರಿತು ಕನ್ನಡ ಸಾಹಿತ್ಯದಲ್ಲಿ ಬೆಳಕು ಚೆಲ್ಲಿದ್ದಾರೆ ಎಂದು ಅವರು ನುಡಿದರು. ಬದುಕಿದ 27 ವರ್ಷದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಮಹಾತ್ಮ…
ಬೇಕಾಗುವ ಪದಾರ್ಥಗಳು : ಮಶ್ರೂಮ್ – 200 ಗ್ರಾಂ, ಕಬಾಬ್ ಪೌಡರ್ –ಒಂದು ಪ್ಯಾಕೆಟ್, ಶುಂಠಿ– ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಖಾರದಪುಡಿ –ಅರ್ಧ ಚಮಚ, ಚಿಕನ್ ಮಸಾಲ– ಅರ್ಧ ಚಮಚ, ಮೊಟ್ಟೆ –ಒಂದು, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ – ಸ್ವಲ್ಪ ಮಾಡುವ ವಿಧಾನ : ಮಶ್ರೂಮ್ ಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಇದಕ್ಕೆ ಕಬಾಬ್ ಪೌಡರ್, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಚಿಕನ್ ಮಸಾಲೆ ಪುಡಿ, ಮೊಟ್ಟೆ, ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮಸಾಲೆ ಹಿಡಿಯುವವರೆಗೆ ಕೈಯಾಡಿಸಿ. 10 ರಿಂದ 15 ನಿಮಿಷಗಳ ಕಾಲ ನೆನೆಯಲು ಬಿಡಿ. ನಂತರ ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ. ಅದಕ್ಕೆ ನೆನೆಸಿಟ್ಟಿದ್ದ ಮಶ್ರೂಮ್ ಹಾಕಿ. ಅದು ಕೆಂಪು ಬಣ್ಣಕ್ಕೆ ತಿರುಗುವವರೆಗೂ ಬೇಯಿಸಿ. ಇದೀಗ ಬಿಸಿ ಬಿಸಿಯಾದ ಮಶ್ರೂಮ್ ಕಬಾಬ್ ಸವಿಯಲು ಸಿದ್ಧ.
ಮಡಿಕೇರಿ ಅ.27 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಅ.30 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಅ.27 : ಅಕ್ಟೋಬರ್, 28 ರಂದು ಖಂಡಗ್ರಾಸ ಚಂದ್ರಗ್ರಹಣ ಇರುವುದರಿಂದ ದೇವಾಲಯದ ಪ್ರಧಾನ ಅರ್ಚಕರ ನಿರ್ದೇಶನದಂತೆ, ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಮಾಸಿಕವಾಗಿ ಹುಣ್ಣಿಮೆಯಂದು ನಡೆಸಲಾಗುತ್ತಿದ್ದ “ಸಾಮೂಹಿಕ ಸತ್ಯನಾರಾಯಣ” ಪೂಜಾ ಕಾರ್ಯ ಇರುವುದಿಲ್ಲ ಹಾಗೂ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಂಜೆ 6.30 ಕ್ಕೆ ಮಹಾಪೂಜೆ ನಡೆಯಲಿದ್ದು, ನಂತರ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ. (ಗ್ರಹಣ ಸ್ವರ್ಶ: ರಾತ್ರಿ 1.04, ಗ್ರಹಣ ಮೋಕ್ಷ: ರಾತ್ರಿ 2.24).
ಮಡಿಕೇರಿ ಅ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಅ.28 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶ್ರೀಧರ ಆರ್. ಹೆಗಡೆ, ಇತರರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ…
ಮಡಿಕೇರಿ ಅ.27 : ಡಿಸೆಂಬರ್ 2023ರ ಅಂತ್ಯಕ್ಕೆ ಬಂದೂಕು ಪರವಾನಗಿಯ ಅವಧಿ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಬಂದೂಕು ಪರವಾನಗಿದಾರರು ಕೇಂದ್ರ ಗೃಹ ಮಂತ್ರಾಲಯವು ರೂಪಿಸಿರುವ National Database of Arms Licence-Arms Licence Issuance System (NDAL-ALIS) ತಂತ್ರಾಂಶದ https://ndal-alis.gov.in/armslicence/ ಲಿಂಕ್ ಬಳಸಿ 2 ತಿಂಗಳ ಮುಂಚಿತವಾಗಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿsಸಿ ಅರ್ಜಿ ಪ್ರತಿ ಹಾಗೂ ಮೂಲ ಬಂದೂಕು ಪರವಾನಗಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದೆ. NDAL-ALIS ತಂತ್ರಾಂಶವನ್ನು ಬಳಸಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ kodagu.nic.in ನಲ್ಲಿ user manual ನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಅ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ಅ.31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಮೈಸೂರು ವಿಭಾಗದ ಕರ್ನಾಟಕ ಅರೆಭಾಷೆ ಸಂಸ್ಕೃತಿ…
ಮೂರ್ನಾಡು ಅ.27 : ಮೂರ್ನಾಡುವಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಬಯಲು ಅಲಂಕೃತ ವೇದಿಕೆಯಲ್ಲಿ 30ನೇ ವರ್ಷದ ಆಯುಧ ಪೂಜೆ ನೆರವೇರಿತು. ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿಸಿ, ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಲಾಯಿತು. ಈ ಸಂದರ್ಭ ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಚಂದ್ರಯಾನ-3, ಮದ್ಯಪಾನದಿಂದ ಆಗುವ ಅಪಘಾತಗಳ ಸ್ತಬ್ದ ಚಿತ್ರಣ, ಐತಿಹಾಸಿಕ ಹಿನ್ನಲೆಯುಳ್ಳ ಶ್ರೀರಾಮನಿಂದ ರಾವಣದ ಸಂಹಾರ, ದುರ್ಗೆಯಿಂದ ದುರ್ಗಾಸುರನ ವಧೆ, ಶುಂಭನ ವಧೆ, ಶಿವಾಂಶನಿಂದ ಕಾಲಾಂಶನ ವಧೆಯ ಚಿತ್ರಣಗಳು, ಭಾರತದ ಚಂದ್ರಯಾನ-3 ಯಶಸ್ವಿ ಉಡಾವಣೆ ಹಾಗೂ ಸುರಕ್ಷಿತ ಲ್ಯಾಂಡಿಂಗ್, ರೈತ ದೇಶದ ಬೆನ್ನುಲೆಬು, ಸರ್ಕಾರಿ ಶಾಲೆಗಳನ್ನು ಉಳಿಸಿ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು ಮತ್ತು ವಿಟ್ಲದ ಕಲಾ ರಸಿಕ ಆಟ್ರ್ಸ್ ಬೊಂಬೆ ಬಳಗದ ಗೊಂಬೆ ಕುಣಿತ ಮತ್ತು ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು.…






