ಲೇಖಕ: admin

ವಿರಾಜಪೇಟೆ ಸೆ.29 : ವಿರಾಜಪೇಟೆ ಐತಿಹಾಸಿಕ ಶ್ರೀ ಗೌರಿ ಗಣೇಶ ವಿಸರ್ಜನೋತ್ಸವು ವಿದ್ಯುತ್ ಅಲಂಕೃತ ಮಂಟಪದ ಶೋಭಾಯಾತ್ರೆಯೊಂದಿಗೆ ಸಂಭ್ರಮದಿಂದ ನಡೆಯಿತು. 22 ಮಂಟಪಗಳು ಗೌರಿ ಗಣೇಶ ಮೂರ್ತಿಗಳನ್ನು ಹೊತ್ತ ಶೋಭಾಯಾತ್ರೆ ನಗರದ ಮುಖ್ಯ ಬೀದಿಯಲ್ಲಿ ಮಳೆಯ ನಡುವೆಯೂ ಮೆರವಣಿಗೆ ನಡೆಸಿ ಪವಿತ್ರ ಗೌರಿ ಕೆರೆಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ವಿಸರ್ಜಿಸಲಾಯಿತು. ಸೆ.19ರಂದು ನಗರದ 22 ಸಮಿತಿಗಳ ಮೂಲಕ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶನಿಗೆ 10 ದಿನಗಳ ಕಾಲ ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆ ಸಲ್ಲಿಸಿ ವಿದ್ಯುತ್ ದೀಪಾಲಂಕೃತ ಹೂವಿನ ಭವ್ಯ ಮಂಟಪದಲ್ಲಿ ವಿಶೇಷ ವಾಧ್ಯಗೋಷ್ಠಿಯೋಂದಿಗೆ ಮಂಟಪಗಳು ಮೆರವಣಿಗೆಯಲ್ಲಿ ಸಾಗಿ ಬಂದವು. ನಗರದ ಶ್ರೀ ಗಣಪತಿ ದೇವಸ್ಥಾನ ಗಡಿಯಾರ ಕಂಬದ ಬಳಿ, ಜೈನರ ಬೀದಿ ಶ್ರೀ ಬಸವೇಶ್ವರ ದೇವಸ್ಥಾನ, ವಿಘ್ನೇಶ್ವರ ಸೇವಾ ಸಮಿತಿ ಅರಸುನಗರ, ವಿನಾಯಕ ಯುವಕ ಭಕ್ತ ಮಂಡಳಿ ಅಂಗಾಳ ಪರಮೇಶ್ವರಿ ದೇವಸ್ಥಾನ, ವಿಜಯ ವಿನಾಯಕ ಉತ್ಸವ ಸಮಿತಿ ದಕ್ಕನಿಮೊಹಲ್ಲಾ, ಕಾವೇರಿ ಗಣೇಶ ಉತ್ಸವ ಸಮಿತಿ ಮೂರ್ನಾಡು ರಸ್ತೆ, ನೇತಾಜಿ ಉತ್ಸವ ಸಮಿತಿ…

Read More

ವಿರಾಜಪೇಟೆ ಸೆ.29 : ನವದೆಹಲಿಯಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರ ಮಟ್ಟದ ಎನ್.ಸಿ.ಸಿ ಶಿಬಿರದ ಆಲ್ ಇಂಡಿಯಾ ತಲ್ ಸೈನಿಕ ಕ್ಯಾಂಪ್ ನಲ್ಲಿ ಹೆಲ್ತ್ ಅಂಡ್ ಹೈಜೀನ್ ವಿಭಾಗದಲ್ಲಿ ವಿರಾಜಪೇಟೆಯ ಎಂ.ಡಿ.ಆಯುಷ್ ಚಿನ್ನದ ಪದಕ ಪಡೆದಿದ್ದಾರೆ. ಇವರು ಕರ್ನಾಟಕ ಮತ್ತು ಗೋವಾ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ಆಯುಷ್ ದಿ ನೇಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್, ಮೈಸೂರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, 1 ಕಾರ್ ಆರ್ಮಿ ಆರ್ಟಿ ಬ್ಯಾಟರಿಯಲ್ಲಿ ಸರ್ಜಿಯಾಂಟ್ ಆಗಿದ್ದಾರೆ. ಇವರು ವಿರಾಜಪೇಟೆಯ ಡಾ. ಸುಪ್ರೀತ ಹಾಗೂ ಡಾ.ದೀಪಕ್ ದಂಪತಿಯ ಪುತ್ರ.

Read More

ಮಡಿಕೇರಿ ಸೆ.29 : ಕೊಡಗಿನ ಸಾಹಿತಿ, ನಿರ್ಮಾಪಕಿ, ಸಹ ನಿರ್ದೇಶಕಿ, ಹಾಗೂ ನಟಿ ಈರಮಂಡ ಹರಿಣಿ ವಿಜಯ್ ಅವರಿಗೆ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ. ಈರಮಂಡ ಹರಿಣಿ ವಿಜಯ್ ಅವರ ಸಿನಿಮಾ, ಸಾಹಿತ್ಯ, ಕಲಾ ಸೇವೆ ಯನ್ನು ಪರಿಗಣಿಸಿ ಮೈಸೂರಿನ ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಶಸ್ತಿ ನೀಡಲಾಯಿತು. ಮೈಸೂರು ಪುರಭವನದಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೇಲುಕೋಟೆಯ ವಂಗೀಪುರ ನಂಬಿಮಠದ ಶ್ರೀ ಇಲೈ ಆಳ್ವಾರ್ ಸ್ವಾಮೀಜಿ, ಬೆಂಗಳೂರು ಮಹಾಲಕ್ಷ್ಮಿಪುರಂ ನ ಡಾ.ಶ್ರೀ ರಾಜಶೇಖರ್ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಾಧ್ಯಕ್ಷ ಡಾ. ಕಸ್ತೂರಿ ಚಂದ್ರು, ಉದ್ಯಮಿ ಹಾಗೂ ಸಮಾಜ ಸೇವಕ ಡಾ.ಸೀತಾರಾಮೇಗೌಡ, ವಿಪ್ರ ಮುಖಂಡರು ಹಾಗೂ ಸಮಾಜ ಸೇವಕ ಡಾ.ರಘು ರಾಮ್ ವಾಜಪೇಯಿ ಅವರು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ಈ ಸಂದರ್ಭ ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮಾಜಿ ಶಾಸಕ ಮಾರುತಿ ರಾವ್ ಪವಾರ್, ಕರ್ನಾಟಕ ಸಾಂಸ್ಕೃತಿಕ…

Read More

ಮಡಿಕೇರಿ ಸೆ.29 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ನೂತನ ಯೋಜನಾ ಕಛೇರಿಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್.ಮಂಜುನಾಥ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 2018-19 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೊಂದ ಸಾವಿರಾರು ಕುಟುಂಬಗಳ ನೆರವಿಗೆ ಬಂದು ಪರಿಹಾರ ಧನ ಒದಗಿಸಿದೆ. ಬ್ಯಾಂಕಿನಿಂದ ಪಡೆದ ಸಾಲ ಮರುಪಾವತಿಗೆ ತೊಂದರೆಯಾದ ಕುಟುಂಬಗಳಿಗೆ ನೆರವು ನೀಡಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರು ಬ್ಯಾಂಕಿನ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಮಾಡಿಕೊಂಡು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು. ಯೋಜನೆಯಲ್ಲಿ ಪಾಲುದಾರ ಕುಟುಂಬಗಳಿಗೆ ಪ್ರಗತಿ ರಕ್ಷಾ ಕವಚ ವಿಮೆ, ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ, ಮೈಕ್ರೋ ಬಚತ್ ವಿಮೆ, ಭೀಮಾ ಜ್ಯೋತಿ ವಿಮೆ ಮುಂತಾದ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಅನುದಾನ ವಿತರಿಸಲಾಯಿತು. ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕ ಮಿಥುನ್…

Read More

ಬೆಂಗಳೂರು ಸೆ.29 : ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು (Cricket News) ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು. ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು. ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ…

Read More

ಮಡಿಕೇರಿ ಸೆ.29 : ನಲ್ವತ್ತೋಕ್ಲು ಚೋಕಂಡಳ್ಳಿ ಕಂದೂರಿ ಹಜ್ರತ್ ಮುಹಮ್ಮದ್ ಪೈಗಂಬರ ಮುಹಜ್ಜಿ ಸತ್ತಿನೊಂದಿಗೆ ಪ್ರಸಿದ್ಧಿ ಹೊಂದಿರುವ ಈದ್ ಮಿಲಾದ್ ಕಂದೂರಿ ಈ ಬಾರಿ ಅ.7 ಮತ್ತು 8 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಈದ್ ಮಿಲಾದ್ ಸಂರಕ್ಷಣ ಸಮಿತಿ ಕಾರ್ಯದರ್ಶಿ ಪಿ.ಎ.ಸಿರಾಜುದ್ದೀನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.7 ರಂದು ಅಸರ್ ನಮಾಜಿನ ಬಳಿಕ ಈದ್ ಮಿಲಾದ್ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಎಂ.ರಫಿ ಧ್ವಜಾರೋಹಣದ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಸಂಜೆ 7 ಗಂಟೆಗೆ ಇಶಾಹತುಸುನ್ನ ಸ್ಟೂಡೆಂಟ್ ಅಸೋಸಿಯೇಷನ್ ವತಿಯಿಂದ ಬುರ್ದ ಆಲಾಪನೆ ನಡೆಯಲಿದ್ದು, ರಾತ್ರಿ 8 ಗಂಟೆಗೆ ನಡೆಯಲಿರುವ ಮತ ಪ್ರವಚನ ಕಾರ್ಯಕ್ರಮವನ್ನು ಜನಾಬ್ ಸೈಯದ್ ಮಹದಿ ತಂಗಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಪ್ರಭಾಷಣಕಾರರಾಗಿ ಜನಾಬ್ ಮುಳ್ಳೂರ್‍ಕರ ಮುಹಮ್ಮದಲಿ ಸಖಾಫಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.8 ರಂದು ಬೆಳಿಗ್ಗೆ 5 ಗಂಟೆಗೆ ಮೌಲಿದ್ ಪಾರಾಯಣ ನಡೆಯಲಿದ್ದು, ರಿಫಾಯಿ ರಾತೀಬ್ ಸಂಘದವರಿಂದ ಮನೆಗಳಿಗೆ ಸಂದರ್ಶನ, 10…

Read More

ಮಡಿಕೇರಿ ಸೆ.29 : ಮಡಿಕೇರಿ ಕೊಡವ ಸಮಾಜದ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಸಮಾಜದ ನಿಯೋಗ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರನ್ನು ಭೇಟಿಯಾಗಿ ಸಹಕಾರ ಕೋರಿತು. ಸಂಸದರ ಮೈಸೂರಿನ ಕಚೇರಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರ ನೇತೃತ್ವದಲ್ಲಿ ನಿರ್ದೇಶಕರಾದ ಕೇಕಡ ವಿಜು ದೇವಯ್ಯ, ನಂದಿನೆರವಂಡ ರವಿ ಬಸಪ್ಪ, ಮಂಡಿರ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ ಹಾಗೂ ಚೊಟ್ಟೆಯಂಡ ಸಂಜು ಕಾವೇರಪ್ಪ ಅವರುಗಳು ಭೇಟಿಯಾಗಿ ಚರ್ಚಿಸಿದರು. ಕೊಡವ ಸಮಾಜ ಕಟ್ಟಡದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕೊಡುವಂತೆ ಮನವಿ ಮಾಡಿದರು.

Read More

ಮಡಿಕೇರಿ ಸೆ.29 : ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ಸಣ್ಣ ಪುಲಿಕೋಟು ಗ್ರಾಮದ ಯೋಧ ಉದಿಯನ ಜಿತನ್ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಯೋಧನ ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಕುಟುಂಬದ ಸದಸ್ಯರೊಂದಿಗೆ ಶಾಸಕರು ಚರ್ಚಿಸಿದರು. ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಗ್ರಾ.ಪಂ ಸದಸ್ಯ ಕೆದಂಬಾಡಿ ವಿಶು ಪ್ರವೀಣ್ ಕುಮಾರ್, ಡಿಸಿಸಿ ಸದಸ್ಯರು ಹಾಗೂ ವಕೀಲರಾದ ಸುನಿಲ್ ಪತ್ರವೋ, ಕಾಂಗ್ರೆಸ್ ಪ್ರಮುಖ ಕೋಳಿಬೈಲು ವೆಂಕಟೇಶ್, ಅಯ್ಯಂಗೇರಿ ಪಂಚಾಯಿತಿ ಸದಸ್ಯೆ ಕಾವೇರಮ್ಮ, ಸ್ಥಳೀಯರಾದ ಪಟ್ಟಮಾಡ ಸಂಜು, ಬಾರಿಕೆ ಶರತ್, ಗಿರೀಶ್, ನಂಗಾರು ಅಶೋಕ್, ಬಾರಿಕೆ ನಿತಿನ್, ಮಿಥುನ್, ಬಾರಿಕೆ ಲೋಕೇಶ್, ದೇವಂಗೋಡಿ ಸುಬ್ರಾಯ ಮತ್ತಿತರ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಸೆ.29 : ಸ್ವಾಮಿ ವಿವೇಕಾನಂದರ ದಿವ್ಯ ಲೀಲಾ ಕ್ಷೇತ್ರ ಡಿವೈನ್ ಪಾರ್ಕ್‍ನ ಅಂಗ ಸಂಸ್ಥೆಯಾದ ಮಡಿಕೇರಿ ವಿವೇಕ ಜಾಗೃತ ಬಳಗದ ವತಿಯಿಂದ ಆತ್ಮೋನ್ನತಿ ಶಿಬಿರ ಕಾರ್ಯಕ್ರಮ ನಡೆಯಿತು. ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಿವೈನ್ ಪಾರ್ಕ್‍ನ ಅಧಿಕಾರಿ ಪದ್ಮಲತಾ ರಾವ್, ಮಡಿಕೇರಿ ವಿವೇಕ ಜಾಗೃತ ಬಳಗದ ಅಧ್ಯಕ್ಷೆ ಟಿ.ಎ.ಪದ್ಮವೇಣಿ ಹಾಗೂ ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷೆ ದಿವ್ಯ ತೇಜ್ ಕುಮಾರ್ ಪಾಲ್ಗೊಂಡು ಮಾತನಾಡಿದರು. ಬಂಧನ, ಮನನ, ಸ್ಮರಣ, ಗಮನದ ಆಧ್ಯಾತ್ಮಿಕ ಚಿಂತನೆಯನ್ನು ನೀಡಿದರು. ಮಾನವ ಜನ್ಮವನ್ನು ಆತ್ಮಶಕ್ತಿ ಜಾಗೃತಿಗಾಗಿ ತ್ಯಾಗ, ಸೇವೆ, ಸಾಧನೆಗಳೊಂದಿಗೆ, ಪಶುತ್ವದಿಂದ ಮಾನವತ್ವ, ಮಾನವತ್ವದಿಂದ ದೈವತ್ವಕ್ಕೆ ಏರಲು ಆತ್ಮ ಸಾಕ್ಷಾತ್ಕಾರ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದರು. ಅಭಿಪ್ರಾಯ ಹಂಚಿಕೊಂಡ ಶಿಬಿರಾರ್ಥಿಗಳಾದ ಸೋಮಯ್ಯ ಮುಕ್ಕಾಟಿ, ಸೀತಮ್ಮ ಹಾಗೂ ವಿಶಾಲಾಕ್ಷಿ ಡಿವೈನ್ ಪಾರ್ಕ್ ನ ಮಹತ್ವ ಹಾಗೂ ತಾವು ಪಡೆದ ಕೃಪೆಯ ಬಗ್ಗೆ ತಿಳಿಸಿದರು. ಜಾಗೃತ ಬಳಗದ ಖಜಾಂಚಿ ಲೀಲಾ ಶೆಡ್ತಿ ಸ್ವಾಗತಿಸಿ, ಯಶಿಕಾ…

Read More

ಕುಶಾಲನಗರ, ಸೆ.‌‌ 29: ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ  ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ‌ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ಮೈಸೂರಿನಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ನಾಟಕ ಸ್ಪರ್ಧೆಗೆ ವಿಭಾಗಮಟ್ಟದ ನಾಟಕ ಸ್ಪರ್ಧೆಯಲ್ಲಿ ” ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅಂತರ್ಜಾಲ ಮತ್ತು ಕೃತಕ ಬುದ್ದಿಮತ್ತೆ” ಕುರಿತು ಉತ್ತಮ ನಾಟಕ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದ ಮೈಸೂರಿನ ನಂಜುಮಳಿಗೆಯ ಗೋಪಾಲಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ತಂಡವು ರಾಜ್ಯಮಟ್ಟದ ನಾಟಕ ಸ್ಪರ್ಧೆಗೆ ಆಯ್ಕೆಗೊಂಡಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಡಾ.ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ತಂಡವು ದ್ವಿತೀಯ ಬಹುಮಾನ ಹಾಗೂ ಮಡಿಕೇರಿ ನಗರದ ಸಂತ ಮೈಕಲರ ಪ್ರೌಢಶಾಲೆಯ ತಂಡವು ತೃತೀಯ ಬಹುಮಾನ ಗಳಿಸಿತು.…

Read More