ಮಡಿಕೇರಿ, ಅ.26 : ಹಾಕಿ ಇಂಡಿಯಾ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ದಕ್ಷಿಣ ವಲಯ ಸಬ್ ಜೂನಿಯರ್-2023 ಬಾಲಕ ಹಾಗೂ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಬಹುತೇಕ ಕೊಡಗು ಜಿಲ್ಲೆಯ ಆಟಗಾರರನ್ನೊಳಗೊಂಡ ಹಾಕಿ ಕರ್ನಾಟಕ ಬಾಲಕರ ತಂಡ ಚಾಂಪಿಯನ್ ಪಟ್ಟ ಗಳಿಸುವದರೊಂದಿಗೆ ಚಿನ್ನದ ಬಹುಮಾನಕ್ಕೆ ಮುತ್ತಿಕ್ಕಿದೆ. ತಮಿಳುನಾಡಿನ ಚೆನ್ನೈನ ಎಗ್ಮೋರ್ ನ ರಾಧಾಕೃಷ್ಣ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯಾವಳಿಯಲ್ಲಿ ತಮಿಳುನಾಡು ಹಾಕಿ ತಂಡವನ್ನು 3-2 ಗೋಲುಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಗಳಿಸಿತು. ತಂಡದ ಪರವಾಗಿ ನಿಶಾಂತ್ ಎಂ., ಜಶನ್ ದೇವಯ್ಯ ಹಾಗೂ ರೋಹಿತ್ ಗೋಲು ದಾಖಲಿಸಿ ತಂಡಕ್ಕೆ ಜಯ ತಂದು ಕೊಟ್ಟರು. ಸುಪ್ರಿತ್ ಜೆ. ಪಂದ್ಯ ಪುರುಷ ಪ್ರಶಸ್ತಿಗೆ ಭಾಜನರಾದರು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯಾವಳಿಯಲ್ಲಿ ತೆಲಂಗಾಣ ಹಾಕಿ ವಿರುದ್ಧ 9-0 ಗೋಲುಗಳ ಅಂತರದಿಂದ ಜಯಗಳಿಸಿ ಫೈನಲ್ ಪ್ರವೇಶಿಸಿತ್ತು. ಕರ್ನಾಟಕ ತಂಡದ ಪರ ಮೇವಡ ಜಶನ್ ತಮ್ಮಯ್ಯ ಹಾಗೂ ಸುಪ್ರಿತ್ ಜೆ. ತಲಾ ಮೂರು ಗೋಲು ಬಾರಿಸಿದರೆ, ಹೆಚ್.ಹೆಚ್.ದೀಕ್ಷಿತ್ -2, ನಮನ್…
ಲೇಖಕ: admin
ಕಡಂಗ ಅ.26 : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ವೈಎಸ್) 30ನೇ ವರ್ಷಾಚರಣೆಯ ಪ್ರಯುಕ್ತ ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಧ್ಯೇಯ ವಾಕ್ಯದಡಿಯಲ್ಲಿ 2024 ರ ಜ. 24ರಂದು ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನದ ಪ್ರಚಾರಾರ್ಥ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು ಕಡಂಗದ ಬದ್ರಿಯ ಮದ್ರಸದಲ್ಲಿ ನಡೆಯಿತು. 30ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ ಸಹಿತ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಕಾರ್ಯಕರ್ತರನ್ನು ಸೃಷ್ಟಿಸುವಂತೆಯೂ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆಯೂ ಎಸ್ವೈಎಸ್ ರಾಜ್ಯಾಧ್ಯಕ್ಷರಾದ ಹಫೀಳ್ ಸಅದಿ ಕರೆ ನೀಡಿದರು. ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಾತನಾಡಿ ಕಾರ್ಯಚಟುವಟಿಕೆಗಳ ರೂಪುರೇಷೆಗಳನ್ನು ವಿವರಿಸಿದರು. ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ, ದಅವಾ ವಿಭಾಗ ಕಾರ್ಯದರ್ಶಿ ಸಯ್ಯಿದ್ ಶಾಫಿ ನಈಮಿ ತಂಙ್ಙಳ್, ಸಾಂತ್ವನ…
ನಾಪೋಕ್ಲು ಅ.26 : ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಗ್ರಾಮದಲ್ಲಿ ಪ್ರೀತಿ ವಿಶ್ವಾಸ ಸಹೋದರತೆ ಬೆಳೆಯಲು ಸಹಕಾರಿಯಾಗಬಲ್ಲದು ಎಂದು ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಕೆ .ಬಸಪ್ಪ ಹೇಳಿದರು. ಮರಂದೋಡ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮರಂದೋಡ ಗ್ರಾಮಸ್ಥರ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮರಂದೋಡ ಗ್ರಾಮದಲ್ಲಿ 40 ವರ್ಷಗಳಿಂದ ಕ್ರೀಡಾಕೂಟಗಳನ್ನು ನಡೆದುಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯ ಎಂದ ಅವರು, ಇನ್ನು ಮುಂದೆಯೂ ಇದು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮಾಜಿ ಸೈನಿಕರು ಹಾಗೂ ಎಸ್ ಬಿ ಐ ಉದ್ಯೋಗಿ ಮುಕ್ಕಾಟಿ ದೇವಯ್ಯ ಗಿರೀಶ್ ಮಾತನಾಡಿ, ಇಂತಹ ಗ್ರಾಮೀಣ ಮಟ್ಟದ ಕ್ರೀಡಾಕೂಟದಿಂದ ಉತ್ತಮ ಕ್ರೀಡಾಪಟುಗಳನ್ನು ಹೊರ ತರಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮಸ್ಥರ ಸಹಕಾರ ಮತ್ತು ಪ್ರೋತ್ಸಾಹ ಮುಖ್ಯವಾಗಿದೆ ಎಂದರು. ನಿವೃತ್ತ ಸಿ.ಆರ್.ಪಿ.ಎಫ್ ಪುಷ್ಪಾವತಿ ಮಾತನಾಡಿ, ಹಿಂದೆ ಇಂತಹ ಕ್ರೀಡಾಕೂಟಗಳು ನಡೆಯುತ್ತಿರಲಿಲ್ಲ. ಈಗ ಗ್ರಾಮೀಣ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಂಘ…
ನಾಪೋಕ್ಲು ಅ.26 : ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಮಾನ್ಯತೆ ಪಡೆದ ಕೊಡವ ಕುಟುಂಬಗಳ ನಡುವೆ 2024ರ ಏ.15 ರಂದು ನಡೆಯಲಿರುವ ಹಗ್ಗ ಜಗ್ಗಾಟ ಸ್ಪರ್ಧೆ ಬೊಟ್ಟೋಳಂಡ ಕಪ್ ಪಂದ್ಯಾವಳಿಯ ಲೋಗೋ ಬಿಡುಗಡೆ ಕಾರ್ಯಕ್ರಮ ಅ.29 ರಂದು ಕಡಗದಾಳುವಿನಲ್ಲಿ ನಡೆಯಲಿದೆ ಎಂದು ಬೊಟ್ಟೋಳಂಡ ಕಪ್ ಸಂಚಾಲಕ ಬೊಟ್ಟೋಳಂಡ ಮಿಟ್ಟು ಪೂಣಚ್ಚ ಹೇಳಿದರು. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಡಗದಾಳುವಿನ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟೋಳಂಡ ಪೂಣಚ್ಚ (ಅಚ್ಚಿ) ವಹಿಸಲಿದ್ದು, ವೇದಿಕೆಯಲ್ಲಿ ಕಾಫಿ ಬೆಳೆಗಾರ ವಾಸು ಮುತ್ತಪ್ಪ, ನಿವೃತ್ತ ಸರ್ಕಲ್ ಇನ್ಸ್ ಪೆಕ್ಟರ್ ಬೊಟ್ಟೋಳಂಡ ಲಿಂಗಪ್ಪ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ಕರ್ನಾಟಕ ಸರ್ಕಾರದ ಚೀಫ್ ಎಲೆಕ್ಟ್ರಿಕ್ ಇನ್ಸ್ ಪೆಕ್ಟರ್ ತೀತೀರ ಅಪ್ಪಚ್ಚು, ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಅಧ್ಯಕ್ಷ ಪೊನ್ನೊಲತಂಡ ಕಿರಣ್ ಪೊನ್ನಪ್ಪ ಪಾಲ್ಗೊಳ್ಳಲಿರುವರು. ಕೊಡವ ಕುಟುಂಬಗಳ ನಡುವಿನ ಹಗ್ಗ ಜಗ್ಗಟ್ಟ ಸ್ಪರ್ಧೆಯನ್ನು ಪ್ರಥಮವಾಗಿ 2022 ರಲ್ಲಿ ಪೊನ್ನೊಲತಂಡ…
ನಾಪೋಕ್ಲು ಅ.26 : ಪಾಲೆಮಾಡು ಅಂಬೇಡ್ಕರ್ ಯುವಕ ಸಂಘ ಹಾಗೂ ಕಿಂಗ್ಸ್ ಇಲೆವೆನ್ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ವರ್ಷದ ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ರದರ್ಸ್ ಕೂಟಮ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಬಾಲ್ ಬ್ಲಾಸ್ಟರ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ಬಲಮುರಿ ಗ್ರಾಮದ ಬೊಳ್ಳಚೆಟ್ಟೀರ ಕುಟುಂಬದ ಆಟದ ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿಆರು ತಂಡಗಳು ಪಾಲ್ಗೊಂಡಿದ್ದವು. ಫೈನಲ್ ಪಂದ್ಯದಲ್ಲಿ ಬಾಲ್ ಬ್ಲಾಸ್ಟರ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಗದಿತ 5 ಓವರ್ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 25 ರನ್ ಕಲೆ ಹಾಕಿತು. ಬ್ರದರ್ಸ್ ಕೂಟಮ್ ತಂಡ 3.3 ಓವರ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಬಾಲ್ ಬ್ಲಾಸ್ಟರ್ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿತು. ಟೂರ್ನಿಯ ಉದ್ಘಾಟನೆಯನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…
ನಾಪೋಕ್ಲು ಅ.26 : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ತುಲ್ಯಾರು ಹತ್ತರ ಆರಾಧನೋತ್ಸವ (ಪತ್ತಲೋದಿ ಉತ್ಸವ) ಅ.27 ರಂದು ನಡೆಯಲಿದೆ ಎಂದು ಪರದಂಡ ಸುಬ್ರಮಣಿ ಕಾವೇರಪ್ಪ ತಿಳಿಸಿದ್ದಾರೆ. ತುಲಾಭಾರ ಸೇವೆಗಳು ಮತ್ತು ಪೂಜಾ ಸೇವೆಗಳು ಎಂದಿನಂತೆ ನಡೆಯಲಿದ್ದು, ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪಾಲ್ಗೊಳ್ಳಬೇಕೆಂದು ದೇವತಕ್ಕರಾದ ಪರದಂಡ ಕುಟುಂಬಸ್ಥರ ಪರವಾಗಿ ಪರದಂಡ ಸುಬ್ರಮಣಿ ಕಾವೇರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.26 : ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಹಾರಂಗಿಯ ಮಹಶೀರ್ ಮೀನುಮರಿಗಳ ಉತ್ಪಾದನಾ ಹಾಗೂ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭ ಶಾಸಕ ಡಾ.ಮಂಥರ್ ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು.
ಕುಶಾಲನಗರ ಅ.26 : ಮಹಾತ್ಮ ಗಾಂಧಿ ಪದವಿ ಕಾಲೇಜಿನ ವಾರ್ಷಿಕ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆದ ಅಂತರ್ರಾಷ್ಟ್ರೀಯ ಕರಾಟೆ ಪಟು ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟುವುದು ಮುಖ್ಯವಲ್ಲ. ಗುಣ ಮಟ್ಟದ ಶಿಕ್ಷಣ ನೀಡುವುದು ಅತೀ ಮುಖ್ಯ. ಗುಣಮಟ್ಟದ ಶಿಕ್ಷಣ ಇಂದು ವಿದ್ಯಾರ್ಥಿಗಳಿಗೆ ಅಗತ್ಯವಿದೆ. ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಪದ್ಧತಿಗೆ ಹೆಚ್ಚು ಒಲವು ತೋರುವ ಮೂಲಕ ಪದವಿ ನಂತರ ಮುಂದೇನು ಎಂಬ ಪ್ರಶ್ನೆ ಬಂದಾಗ ಸೇನೆ, ಕ್ರೀಡೆ, ಶಿಕ್ಷಣ ಹೀಗೆ ಹಲವು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಮುನ್ನುಗ್ಗಲು ಕರೆ ಕೊಟ್ಟರು. ಕ್ರೀಡೆ ಎಂಬುದು ಆತ್ಮಸ್ಥೈರ್ಯ ಹಾಗೂ ಶಿಸ್ತು ರೂಢಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದ ಅವರು, ಯುವ ಶಕ್ತಿ ಹಾಗೂ ಯುವ ಸಂಪನ್ಮೂಲ ವನ್ನು ಹೊಂದಿರುವ ಭಾರತ ಜಗತ್ತಿನಲ್ಲೇ ಮೊದಲಿನದು ಎಂದರು. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಸಮಗ್ರ ಅಭ್ಯುದಯಕ್ಕೆ ಮುನ್ನುಡಿಯಾಗಿದ್ದು, ಕ್ರೀಡೆಯಲ್ಲಿ ಸಾಧನೆ ತೋರುವ ಕ್ರೀಡಾ ಪಟುಗಳಿಗೆ…
ನಾಪೋಕ್ಲು ಅ.26 : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಾರ್ವಜನಿಕ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಂಡು ಉನ್ನತಿಯನ್ನು ಹೊಂದಿರಿ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬೀರ ಸುಧಿ ತಿಮ್ಮಯ್ಯ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಎಲ್ಲಾ ಕಾರ್ಯಕ್ರಮಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಮಾತನಾಡಿ, ಏಳು ದಿನಗಳ ಶಿಬಿರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ನಾಯಕತ್ವ ಕೂಡ ಬೆಳೆಸಲು ಸಹಕಾರಿಯಾಗಿದೆ ಎಂದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ…
ನಾಪೋಕ್ಲು ಅ.26 : ಶೌರ್ಯ ತಂಡದ ಸದಸ್ಯರು ಶ್ರಮದಾನದ ಮೂಲಕ ಕೊಳಕೇರಿ ಅಂಗನವಾಡಿ ಕೇಂದ್ರದ ಸುತ್ತ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ಅಂಗನವಾಡಿ ಸುತ್ತು ಮುತ್ತು ಗಿಡ ಗಂಟಿಗಳು ಕಡಿದು, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಚಗೊಳಿಸಿದರು. ಇವರ ಕಾರ್ಯಕ್ಕೆ ಅಂಗನವಾಡಿ ಶಿಕ್ಷಕಿ ಶಾಂತಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು. ಶ್ರಮದಾನದಲ್ಲಿ ಶೌರ್ಯ ತಂಡದ ಸದಸ್ಯ ಗೀತಾ, ಆಶಾ, ದಿಲೀಶ್, ಚೇತನ್, ಶಂಕರ್, ಶರವಣ, ದಮಯಂತಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ






