ಕುಶಾಲನಗರ, ಸೆ.28 : ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಸೆ.27 ರಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಗಮನ ಸೆಳೆದರು. ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ ಡಯಟ್ ನ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದರು. ಕಲೆ ಮತ್ತು ವಿಜ್ಞಾನದ…
ಲೇಖಕ: admin
ಮಡಿಕೇರಿ ಸೆ.28 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ, ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಚಾರ್ಯರಾದ ಮೇಜರ್ ಬಿ.ರಾಘವ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಇತರರು ಪಾಲ್ಗೊಳ್ಳಲಿದ್ದಾರೆ. 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು, ಸಾಹಿತಿಗಳಾದ ಡಾ.ನಾ.ಡಿಸೋಜ ಅವರ ಸಾಹಿತ್ಯ ಕುರಿತು ಫೀ.ಮಾ.ಕೆ.ಎಂ.ಕಾರ್ಯಪ್ಪ…
ಮಡಿಕೇರಿ ಸೆ.28 : ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಸೆಪ್ಟೆಂಬರ್, 30 ರಂದು ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಸೆ.30 ರಂದು ಮಧ್ಯಾಹ್ನ 3.30 ಗಂಟೆಯಿಂದ 4.30 ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗೋಣಿಕೊಪ್ಪಲು ಮತ್ತು ವಿರಾಜಪೇಟೆ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.27 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಆರಂಭಿಸಿರುವ ಪಾದಯಾತ್ರೆಯ 2ನೇ ಹಂತ “ಕುರುಳಿ ಅಂಬಲ” ಮಂದ್ ನಿಂದ ಇಂದು ಆರಂಭಗೊಂಡಿತು. ಮಡಿಕೇರಿ ತಾಲ್ಲೂಕು “ಕುರುಳಿ ಅಂಬಲ” ಮಂದ್, ನೆಲ್ಲಿಯಪುದಿಕೇರಿ ನಾಡ್ ಕಟ್ಟೆಮಾಡ್ ಮತ್ತು ಅರೆಕಾಡ್ ಮಂದ್ ನಲ್ಲಿ ಪಾದಯಾತ್ರೆ ಹಾಗೂ ಕೊಡವ ಜಾಗೃತಿ ಸಭೆ ನಡೆಯಿತು. ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆ ಈಡೇರುವವರೆಗೆ ಸಿಎನ್ಸಿ ಯ ಹೋರಾಟ ಮುಂದುವರೆಯಲಿದೆ, ಸರ್ವ ಕೊಡವರು ಹೋರಾಟದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ದೇಶದ ಸಂವಿಧಾನದಡಿ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರು ತಮ್ಮ ಹಕ್ಕುಗಳನ್ನು ಪಡೆಯಲು ಸ್ವತಂತ್ರರು, ಆದರೆ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದರು. ಭೌಗೋಳಿಕ-ರಾಜಕೀಯ ಸ್ವಾಯತ್ತತೆಯು ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್ನಲ್ಲಿ ಪ್ರತಿಪಾದಿಸಲ್ಪಟ್ಟ ನಿರ್ದಿಷ್ಟ ಪ್ರದೇಶದ ಪ್ರಾಚೀನ ಸೂಕ್ಷ್ಮ ರೇಸ್ ಅನ್ನು ರಕ್ಷಿಸಲು, ಉತ್ತೇಜಿಸಲು ಮತ್ತು ಪುನರುಜ್ಜೀವನಗೊಳಿಸಲು…
ಮಡಿಕೇರಿ ಸೆ.27 : ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ. ಸಮುದಾಯ ಆರೋಗ್ಯ ಕೇಂದ್ರ ಕುಟ್ಟ, ಗ್ರಾಮ ಪಂಚಾಯ್ತಿ ಸಂಯುಕ್ತ ಆಶ್ರಯದಲ್ಲಿ ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು , ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಈ ಶಿಬಿರದಲ್ಲಿ ಸುಮಾರು 280 ಕ್ಕಿಂತ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು. ಈ ಕಾರ್ಯಕ್ರಮವನ್ನು ಕುಟ್ಟ ಗ್ರಾ.ಪಂ. ಅಧ್ಯಕ್ಷರಾದ ಹೇಮಾ ಅವರು ಉದ್ಘಾಟಿಸಿದರು. ಕುಟ್ಟ ಗ್ರಾ.ಪಂ.ಉಪಾಧ್ಯಕ್ಷರಾದ ಕೀರ್ತಿ ಮಾತನಾಡಿ ಜಿಲ್ಲೆಯ ಗಡಿಭಾಗದಲ್ಲಿ ಸುಸಜ್ಜಿತವಾದ ಆಸ್ಪತ್ರೆ ಕಟ್ಟಡವಿದ್ದರೂ ತೀವ್ರ ವ್ಯೆದ್ಯರ ಕೊರತೆಯಿದ್ದು ತಜ್ಞ ವ್ಯೆದ್ಯರಿಂದ ಈ ರೀತಿಯ ಹೆಚ್ಚಿನ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಬುಡಕಟ್ಟು…
ಮಡಿಕೇರಿ ಸೆ.27 : ಮೀನುಗಾರಿಕೆ ಇಲಾಖೆ ವತಿಯಿಂದ ನಗರದ ಎಫ್ಎಮ್ಸಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಕ್ಷೇತ್ರಕಾರ್ಯ ಭೇಟಿ ಕಾರ್ಯಕ್ರಮ ನಡೆಯಿತು. ಗುಹ್ಯದಲ್ಲಿರುವ ಅಕ್ವಾ ವೆಂಚರ್ ಮತ್ಸ್ಯ ಸೇವಾ ಕೇಂದ್ರದಲ್ಲಿ ಒಂದು ದಿನದ ತರಬೇತಿ ನಡೆಯಿತು. ಫಾರಂನ ಮಾಲೀಕ ಶ್ಯಾಮ್ ಅಯ್ಯಪ್ಪ ಅವರು ತಾವು ಕೈಗೊಂಡಿರುವ ಅಕ್ವಾಫೋನಿಕ್ ಮಾದರಿಯಲ್ಲಿ ಮೇಲೆ ಟೊಮೆಟೊ, ಸೌತೆಕಾಯಿ, ಕುಂಬಳಕಾಯಿ, ಮೂಲಂಗಿ ಮುಂತಾದ ತರಕಾರಿ, ಪಾಲಕ್, ಲೆಟ್ಯುಸ್, ಜುಕಣಿ ಮುಂತಾದ ಹಸಿರು ಸೊಪ್ಪು ಮತ್ತು ಸ್ಟ್ರಾಬೆರಿ ಹಣ್ಣಿನ ಬೆಳೆಗಳು, ಹಾಗೆಯೇ ಮೀನು ಮರಿ ಪಾಲನೆ ನೀರನ್ನು ಶುದ್ಧೀಕರಿಸುವ ವಿಧಾನದ ಮೂಲಕ ಕೈಗೊಳ್ಳುವುದನ್ನು ವಿವರಿಸಿದರು. ಸ್ಥಳೀಯ ಮಟ್ಟದಲ್ಲಿ ಮಾರ್ಕೆಟಿಂಗ್ ಕಂಡುಕೊಳ್ಳುವ ವಿಧಾನ ಗಿಡಗಳನ್ನು ಬೆಳೆಸುವಾಗ ಕೊಕೊಪಿಟ್, ಕ್ಲೇ ಬಾಲ್ಸ್ ಮುಂತಾದ ವಸ್ತುಗಳ ಬಳಕೆಯ ಪ್ರಮಾಣವನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು. ಪಾಲನೆಯಲ್ಲಿರುವ ಸ್ಪಾನ್, ಫ್ರೈ ಮೀನುಗಳ ಪೋಷಣೆಯ ವಿಧಾನದ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಬಯೋಫ್ಲಾಕ್ ಟೆಕ್ನಾಲಜಿ ಬಳಸಿ ತಿಲಾಪಿಯ ಮೀನು ಮತ್ತು ಅಲಂಕಾರಿಕ ಮೀನುಗಳಾದ ಕೋಯಿ, ಗೋಲ್ಡ್ ಫಿಶ್…
ಕುಶಾಲನಗರ ಸೆ.27 : ಕುಶಾಲನಗರದ “ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ” ನೃತ್ಯ ತರಬೇತಿ ಕೇಂದ್ರದ ಸಂಯೋಜಕ ಅಕ್ತರ್ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ದೆಹಲಿಯ ವೋಲ್ಡ್ ವೈಡ್ ಇವೆಂಟ್ ವತಿಯಿಂದ ದೆಹಲಿಯಲ್ಲಿ ನಡೆದ “ಇಂಟರ್ ನ್ಯಾಶನಲ್ ಬುಕ್ ಆಫ್ ರೆಕಾರ್ಡ್” ಕಾರ್ಯಕ್ರಮದಲ್ಲಿ ಕುಶಾಲನಗರದ ನೃತ್ಯ ಸಂಯೋಜಕ ಅಕ್ತರ್ ಗೆ ಪ್ರಶಸ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಅಧಿಕ ನೃತ್ಯ ಪಟುಗಳು ಭಾಗವಹಿಸಿದ್ದು, ಅತ್ಯತ್ತಮ ಸಾಧನೆಗೈದ ನೃತ್ಯ ಪಟುಗಳು ಪ್ರಶಸ್ತಿ ಸ್ವೀಕರಿಸಿದ್ದಾರೆ. ನೃತ್ಯ ಸಂಯೋಜಕ ಅಕ್ತರ್ ಕಳೆದ ಮೂರು ವರ್ಷಗಳಿಂದ 1000 ಕ್ಕೂ ಅಧಿಕ ಮಕ್ಕಳಿಗೆ ನೃತ್ಯ ತರಬೇತಿಯನ್ನು ನೀಡಿದ್ದು, ಹಲವು ಮಕ್ಕಳು ಜಿಲ್ಲೆ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಗುರುತಿಸಿಕೊಂಡಿದ್ದಾರೆ. ಇವರ ಈ ಸಾಧನೆಗೆ ಅಕ್ತರ್ ಅವರ ಕುಟುಂಬಸ್ಥರು, ಸ್ವೇಹಿತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಸೆ.27 : ವಿರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ತಿರುಗೇಟು ನೀಡಿರುವ ಕಾರಣಕ್ಕೆ ರಾಜಕೀಯ ಜಿದ್ದು ಸಾಧಿಸುತ್ತಿರುವ ವಲಸೆ ರಾಜಕಾರಿಣಿ, ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಅವರು ಹತಾಶರಾಗಿ ಸಂಸದರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಕ್ಷೇತ್ರದ ಪ್ರಜ್ಞಾವಂತ ಮತದಾರರು ಎರಡು ಬಾರಿ ಪ್ರಚಂಡ ಬಹುಮತದೊಂದಿಗೆ ಪ್ರತಾಪ್ ಸಿಂಹ ಅವರನ್ನು ಸಂಸದರನ್ನಾಗಿ ಚುನಾಯಿಸಿ ಕಳುಹಿಸಿರುವುದೇ ಸಂಸದರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ತಮ್ಮ ಕ್ಷೇತ್ರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿರುವ ಸಂಸದರು, ಕ್ಷೇತ್ರದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಸಂಕೇತ್ ಪೂವಯ್ಯ ಅವರು ಪರಿಶೀಲಿಸಿ ಎಷ್ಟು ಕೋಟಿ ಅನುದಾನ ತಂದಿದ್ದಾರೆ ಎಂಬ ಬಗ್ಗೆ ವಾಸ್ತವ ಅರಿತು ನಂತರ ಆರೋಪ ಮಾಡಲಿ. ಕಾಂಗ್ರೆಸಿಗರು ತಮ್ಮ ರಾಜಕೀಯ ಕಾರಣಕ್ಕಾಗಿ ಸಂಸದರ ಮೇಲೆ…
ಸಿದ್ದಾಪುರ ಸೆ.27 : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರದೊಂದಿಗೆ ಪ್ರತಿಷ್ಠಾಪನೆ ಗೊಂಡಿರುವ ಶ್ರೀ ಗೌರಿ ಗಣೇಶ ಮೂರ್ತಿ ವಿಶೇಷ ಆಕರ್ಷಣೆಯಾಗಿದೆ. ಅಂಬೇಡ್ಕರ್ ನಗರದ ಶ್ರೀ ಸಿದ್ಧಿವಿನಾಯಕ ಮಿತ್ರಮಂಡಳಿಯ 14ನೇ ವರ್ಷದ ಗೌರಿ ಗಣೇಶ ಮೂರ್ತಿ ಯ ಪಕ್ಕದಲ್ಲೆ ಅಂಬೇಡ್ಕರ್ ಭಾವ ಚಿತ್ರವನ್ನಿಟ್ಟು ಗಣಪನೊಂದಿ ಸಂವಿಧಾನ ಶಿಲ್ಪಿಗು ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಕಳೆದ ಬಾರಿ ಅಂಬೇಡ್ಕರ್ ಭಾವ ಚಿತ್ರದ ಬೆಂಗಾವಲು ವಾಹನ ಹಾಗೂ ಜೈ ..ಭೀಮ್ , ಜೈ..ಜೈ ಭೀಮ್ ಘೋಷಣೆಯೊಂದಿಗೆ ಶೋಭಾಯಾತ್ರೆ ನಡೆಸಿ ರಾಜ್ಯದ ಗಮನ ಸೆಳೆಯುವಲ್ಲಿ ಇಲ್ಲಿನ ಯುವಕರು ಯಶಸ್ವಿಯಾಗಿದ್ದು, ಈ ಬಾರಿ ಅಂಬೇಡ್ಕರ್ ಗೆ ನಿತ್ಯ ಪೂಜೆ ಯೊಂದಿಗೆ ವಿಭಿನ್ನ ರೀತಿಯಲ್ಲಿ ಶೋಭಾಯಾತ್ರೆಗೆ ತಯಾರಿ ನಡೆಸಲಾಗುತಿದೆ ಎಂದು ಸಂಘದ ಪ್ರಮುಖ ಹೆಚ್.ಆರ್ ರವಿ ಮಾಹಿತಿ ನೀಡಿದರು. ಇಲ್ಲಿನ ಗೌರಿ ಗಣೇಶ ಹಬ್ಬಕ್ಕೆ ಸರ್ವ ಧರ್ಮಿಯರು ಪಾಲ್ಗೊಂಡು ಸೌಹಾರ್ದತೆಯಲ್ಲಿ ನಡೆಯುತ್ತಿದ್ದು, ಪ್ರತಿಯೊಬ್ಬರು ಸಹಕರಿಸುವಂತೆ ವಿನಂತಿಸಿದರು.
ಮಡಿಕೇರಿ ಸೆ.27 : ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ನಿರ್ಮಿಸಿದ್ದ ಧ್ವಜಸ್ತಂಭವನ್ನು ನಗರಸಭೆ ತೆರವುಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಕೊಡಗು ಜಿಲ್ಲಾ ಬಸ್ ಕಾರ್ಮಿಕ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಬಿ.ಭರತ್ ಕುಮಾರ್, ರಾಷ್ಟ್ರೀಯ ಹಬ್ಬದ ಸಂದರ್ಭ ಬಾವುಟ ಹಾರಿಸುವ ಸಲುವಾಗಿ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಸಂಘದ ವತಿಯಿಂದ ಧ್ವಜಸ್ತಂಭವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಸ್ಥಾಯಿ ಸಮಿತಿ ಸಭೆಯ ನಿರ್ಧಾರದಂತೆ ನಗರಸಭೆ ವತಿಯಿಂದ ಏಕಾಏಕಿ ಧ್ವಜಸ್ತಂಭವನ್ನು ತೆರವುಗೊಳಿಸಲು ಮುಂದಾಗಿರುವುದು ಬಸ್ ಕಾರ್ಮಿಕರಿಗೆ ನೋವು ಉಂಟುಮಾಡಿದೆ ಎಂದರು. ಧ್ವಜಸ್ತಂಭವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ಮಾಣ ಮಾಡಲಾಗಿದ್ದು, ಯಾವುದೋ ಹುನ್ನಾರದಿಂದ ತೆರವುಗೊಳಿಸಲು ನಗರಸಭೆ ಮುಂದಾಗಿದೆ ಎಂದು ಆರೋಪಿಸಿದ ಅವರು, ಮುಂದೇ ಈ ರೀತಿಯ ಘಟನೆ ಮರುಕಳಿಸಿದ್ದಲ್ಲಿ ನಗರಸಭೆಗೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರು. ಹಳೇಯ ಖಾಸಗಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕರು ಹಾಗೂ ಬಸ್ ಕಾರ್ಮಿಕರ ಉಪಯೋಗಕ್ಕಾಗಿ ಮುಳಿಯ ಜುವೆಲ್ಸ್ ನಿಂದ ಬಸ್ ನಿಲ್ದಾಣ ಹಾಗೂ…






