ಲೇಖಕ: admin

ಮಡಿಕೇರಿ ಸೆ.27 : ಸಿವಿಲ್ ಡೆಫೆನ್ಸ್‍ನಲ್ಲಿ ಡಿವಿಶನ್ ವಾರ್ಡನ್ ಆಗಿ ಸೇವೆಯಲ್ಲಿರುವ ಜಿಲ್ಲೆಯ ಡಾ.ಕುಟ್ಟಂಡ ಸುನಿತಾ ಸಜನ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. 2022ನೇ ಸಾಲಿನಲ್ಲಿನ ಉತ್ತಮ ಸೇವೆಗಾಗಿ ಪದಕ ಲಭಿಸಿದ್ದು, ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಗೃಹ ಸಚಿವ ಪರಮೇಶ್ವರ್ ಪದಕ ಪ್ರದಾನ ಮಾಡಿದರು. ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಜಿಲ್ಲೆಯ ಅಮ್ಮತ್ತಿ ಕಾರ್ಮಾಡುವಿನ ಕುಟ್ಟಂಡ ಸಜನ್ (ತಮನೆ ಐತಿಚಂಡ, ಕರಡ) ಅವರ ಪತ್ನಿ.

Read More

ಮಡಿಕೇರಿ ಸೆ.27 : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ವತಿಯಿಂದ 19 ವರ್ಷದೊಳಗಿನವರ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯಾವಳಿಯ ಕರ್ನಾಟಕ ರಾಜ್ಯ ತಂಡಕ್ಕೆ ಜಿಲ್ಲೆಯ ಬಾಲಕಿ ಶ್ರೀನಿತಿ ಪಿ.ರೈ ಆಯ್ಕೆಯಾಗಿದ್ದಾಳೆ. ಬೆಂಗಳೂರಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎಡಗೈ ಸ್ಪಿನ್ನರ್ ಆಗಿರುವ ಶ್ರೀನಿತಿ ಆಯ್ಕೆಯಾಗಿದ್ದಾಳೆ. ಮುಂಬರುವ ಅಕ್ಟೋಬರ್ 8 ರಿಂದ 16ರ ವರೆಗೆ ಗುಹವಾಟಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ನಿಕಿ ಪ್ರಸಾದ್ ನಾಯಕಿಯಾಗಿರುವ ಕರ್ನಾಟಕ ತಂಡದಲ್ಲಿ ಶ್ರೀನಿತಿ ಸ್ಥಾನ ಪಡೆದಿದ್ದಾಳೆ. ಬೆಂಗಳೂರಿನ ಅಕ್ಷಯನಗರದಲ್ಲಿರುವ ಸೆಂಟ್ ಆ್ಯನ್ಸ್ ಐಸಿಎಸ್‍ಸಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಶ್ರೀನಿತಿ ಜಿಲ್ಲೆಯ ಮಡಿಕೇರಿ ತಾಲೂಕಿನ ಮಕ್ಕಂದೂರುವಿನ ಹೆಮ್ಮೆತ್ತಾಳು ಗ್ರಾಮ ನಿವಾಸಿ ಬಿ.ಜಿ.ಪ್ರಕಾಶ್ ರೈ ಹಾಗೂ ವಿನುತಾ ರೈ ದಂಪತಿ ಪುತ್ರಿ.

Read More

ಮಡಿಕೇರಿ ಸೆ.27 : ಅಪಘಾತದಿಂದ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯವನ್ನು ಮಡಿಕೇರಿ ಕೊಡವ ಸಮಾಜದ ಪದಾಧಿಕಾರಿಗಳು ಪರಿಶೀಲಿಸಿದರು. ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ನಿರ್ದೇಶಕರಾದ ಕೇಕಡ ವಿಜುದೇವಯ್ಯ, ನಂದಿನೆರವಂಡ ರವಿಬಸಪ್ಪ, ಮಂಡಿರ ಸದಾ ಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ ಹಾಗೂ ಚೊಟ್ಟೆಯಂಡ ಸಂಜು ಕಾವೇರಪ್ಪ ಮೈಸೂರಿಗೆ ತೆರಳಿ ಪ್ರತಿಮೆ ಪರಿಶೀಲಿಸಿದರು. ಪ್ರತಿಮೆಯ ದುರಸ್ತಿ ಕಾರ್ಯ ಅಂತಿಮ ಹಂತದಲ್ಲಿದ್ದು, ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸುವ ಸಂದರ್ಭ ಗೌರವಯುತವಾಗಿ ಮೆರವಣಿಗೆ ನಡೆಸುವ ಕುರಿತು ಮಡಿಕೇರಿ ಕೊಡವ ಸಮಾಜ, ಜಿಲ್ಲಾಡಳಿತ, ನಗರಸಭೆ, ಶಾಸಕರು ಹಾಗೂ ವಿವಿಧ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು ಎಂದು ಮುತ್ತಪ್ಪ ಹೇಳಿದರು.

Read More

ಚಾಮರಾಜನಗರ ಸೆ.27 :   ಕೋಣನಕೆರೆಯ ಸರ್ಕಾರಿ ಗಿರಿಜನ ಆಶ್ರಮ ಶಾಲೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಭೇಟಿ ನೀಡಿ ನೀಡಿದರು.  ಮಲೈ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗದಲ್ಲಿ ಮಾರ್ಗ ಮಧ್ಯೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ  ಸಂವಾದ ನಡೆಸಿ, ಊಟದ ಗುಣಮಟ್ಟ, ಗ್ರಂಥಾಲಯ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು.   

Read More

ಮಡಿಕೇರಿ ಸೆ.27 : ಕಾವೇರಿಯ ಉಗಮ ಸ್ಥಾನ ಕೊಡಗು ಜಿಲ್ಲೆಗೆ ವಾಣಿಜ್ಯ ಭೂಪರಿವರ್ತನೆ ಮತ್ತು ನಗರೀಕರಣ ಮಾರಕವಾಗಿದ್ದು, ನಿಯಮ ಬಾಹಿರ ಭೂಪರಿವರ್ತನೆಗಳ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಆದ್ದರಿಂದ ಕೊಡಗಿನಲ್ಲಿ ರಿಯಲ್ ಎಸ್ಟೇಟ್ ಗೆ ಹೂಡಿಕೆ ಮಾಡಿ ಕೈ ಸುಟ್ಟುಕೊಳ್ಳಬೇಡಿ ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಪ್ರಮುಖ ಹಾಗೂ ಕೊಡಗು ವನ್ಯಜೀವಿ ಸಂಘದ ಮಾಜಿ ಅಧ್ಯಕ್ಷ ಕರ್ನಲ್ ಸಿ.ಪಿ.ಮುತ್ತಣ್ಣ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಕಲಹದಲ್ಲಿ ತೊಡಗಿವೆ. ಆದರೆ ಕಾವೇರಿ ನದಿ ಹುಟ್ಟುವ ಕೊಡಗಿನ ಸ್ಥಿತಿಗತಿಯ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಹಾಲಿಗಾಗಿ ಕಿತ್ತಾಟ ನಡೆಯುತ್ತಿದೆ, ಆದರೆ ಹಾಲು ಕೊಡುವ ಹಸುವಿಗೆ ಏನಾಗಿದೆ ಎಂದು ಯಾರೂ ಚಿಂತಿಸುತ್ತಿಲ್ಲ. ವಾಣಿಜ್ಯ ಭೂಪರಿವರ್ತನೆ ಮತ್ತು ನಗರೀಕರಣದಿಂದ ಕಾವೇರಿ ಜಲಮೂಲಕ್ಕೆ ಅಪಾಯ ಎದುರಾಗಿದೆ. ತೋಟ, ಗದ್ದೆಗಳು ನಿಯಮ ಬಾಹಿರವಾಗಿ ಭೂಪರಿವರ್ತನೆಯಾಗುತ್ತಿವೆ. ಹೊರಗಿನವರು ಬಂದು ರೆಸಾರ್ಟ್, ಲೇಔಟ್ ಗಳನ್ನು ಮಾಡಿ ನಗರೀಕರಣಗೊಳಿಸುತ್ತಿದ್ದಾರೆ.…

Read More

ನಾಪೋಕ್ಲು ಸೆ.27 :  ನಾಪೋಕ್ಲು ನಾಡು ಕೊಡವ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ 733 ಸದಸ್ಯರಿದ್ದು, ಪ್ರಸಕ್ತ ವರ್ಷ ಸಂಘವು ರೂ.3,95,131 ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಪ್ಪಾರಂಡ ಸುಧೀರ್ ಅಯ್ಯಪ್ಪ ಹೇಳಿದರು. ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚ ಕವಿ ಸಭಾಂಗಣದಲ್ಲಿ 2022-23ನೇ ಸಾಲಿನ ಸಹಕಾರಿಯ 5ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ, ಸಂಘವು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಸಂಘದ ಏಳಿಗೆಗಾಗಿ ಸದಸ್ಯರು ಸಹಕರಿಸಬೇಕೆಂದರು. ಸಭೆಯಲ್ಲಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಮಂಡೀರ.ಎ. ರಾಜಪ್ಪ ಚoಗಪ್ಪ, ನಿರ್ದೇಶಕರಾದ ಮಾಳೆಯಂಡ ಎ.ಅಯ್ಯಪ್ಪ, ಬೊಳ್ಯಯಂಡ.ಪಿ.ಹರೀಶ್ ಕಾರ್ಯಪ್ಪ, ಮುಕ್ಕಾಟೀರ.ಎಮ್.ವಿನಯ, ಕನ್ನಂಬೀರ.ಸಿ.ತಿಮ್ಮಯ್ಯ, ಕುಂಡ್ಯೋಳ0ಡ.ಸಿ.ಪೂವಯ್ಯ, ಕಾಟುಮಣಿಯಂಡ ಎಮ್.ಉಮೇಶ್, ಚೋಕಿರ.ಎಸ್.ಚಿಣ್ಣಪ್ಪ, ಚೇನಂಡ.ಈ.ಗಿರೀಶ್ ಪೂಣಚ್ಚ , ಮೂವೇರ.ರೇಖಾ ಪ್ರಕಾಶ್, ಬಿದ್ದಂಡ ಉಷಾ ಪೂವಯ್ಯ, ಕೋಟೇರ ನೈಲಾ ಚಂಗಪ್ಪ, ಕುಲ್ಲೇಟ್ಟಿರ.ಜಿ.ಅಜಿತ್ ನಾಣಯ್ಯ, ಬಿದ್ದಾಟಂಡ.ಎ.ರಮೇಶ್ ಚಂಗಪ್ಪ ಹಾಗೂ ಮುಖ್ಯಕಾರ್ಯನಿರ್ವಹಕರಾದ ಎಸ್.ಪಿ.ದೇವಯ್ಯ, ಸಿಬ್ಬಂದಿ ಕೆ.ಜಿ.ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ…

Read More

ನಾಪೋಕ್ಲು ಸೆ.27 : ನಾಪೋಕ್ಲುವಿನ ಕೆಪಿಎಸ್ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಫಾಜಿಲಾ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿ.ಎ. ಆಯುಷತ್ ತರ್ಫಿಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಹಾಕಿ ಹಾಗೂ ಬಾಲಕಿಯರ ಹಾಕಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಪಿ.ಕುಟ್ಟಪ್ಪ, ನಿರ್ದೇಶಕ ಅಂಜಪರವಂಡ ಕುಶಾಲಪ್ಪ, ಮುಖ್ಯ ಶಿಕ್ಷಕ ಡಿ.ಅನಿಲ್ ರಾಜ್, ದೈಹಿಕ ತರಬೇತಿ ಶಿಕ್ಷಕ ಕೆ.ಡಿ.ಬೋಪಣ್ಣ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಸೆ.27 :  ಕಾಡಾನೆ ದಾಳಿಯಿಂದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಕಡಂಗ ಮರೂರು ಭದ್ರಕಾಳಿ ದೇವಾಲಯದ ಬಳಿ ನಡೆದಿದೆ. ಅಮ್ಮಂಡ ಸುಬ್ರಮಣಿ (75) ಎಂಬುವವರೆ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ  ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ವಿರಾಜಪೇಟೆ ಹೊರವಲಯದ ಕಡಂಗ ಮರೂರು ಪ್ರತ್ಯಕ್ಷವಾಗಿರುವ ಕಾಡಾನೆಗಳನ್ನು ಕಾಡಿಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಸೆ.27 : ಮದೆನಾಡು ಬಳಿಯ ಅಶ್ರಫ್ ಎಂಬವರ ಮನೆಯ ಒಳಗೆ  ಸೇರಿಕೊಂಡಿದ್ದ  ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.

Read More

ಚಾಮರಾಜನಗರ ಸೆ.27: ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾದ ಕೆ.ವೆಂಕಟೇಶ್, ಎಚ್.ಸಿ.ಮಹಾದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಾದಪ್ಪನ ಬೆಟ್ಟದಲ್ಲಿ ಬೆಳ್ಳಿ ದಂಡ ಹಿಡಿದು ಬೆಳ್ಳಿ ರಥ ಸೇವೆ ನಡೆಸಿದರು.

Read More