ಲೇಖಕ: admin

ಮಡಿಕೇರಿ ಸೆ.26 : ಕರ್ನಾಟಕ ರಾಜ್ಯ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ.28 ರಂದು ಕುಶಾಲನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತೋತ್ಸವವನ್ನು ಆಚರಿಸಲಾಗುವುದೆಂದು ಸಮಿತಿಯ ಅಧ್ಯಕ್ಷ ಎಂ.ಎಸ್.ಮಹೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರದ ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಾಮರಾಜನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಶ್ರಿ ಬಂತೇಜಿ ಬೋಧಿದತ್ತತೇರಾ ದಿವ್ಯ ಸಾನಿಧ್ಯ ವಹಿಸಲಿದ್ದು, ಪ್ರಧಾನ ಭಾಷಣಕಾರರಾಗಿ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್ ಪಾಲ್ಗೊಳ್ಳಲಿದ್ದಾರೆ. ಸಭಾ ಗೌರವಾಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ…

Read More

ಮಡಿಕೇರಿ ಸೆ.26 : ಕರ್ಣಂಗೇರಿ ಗ್ರಾಮದ ವಿದ್ಯಾ ಭಾರತಿ ಬಡಾವಣೆಯ ಸ್ಫೂರ್ತಿ ಯುವಕ ಸಂಘದ ವತಿಯಿಂದ 13 ನೇ ವರ್ಷದ ಗಣೇಶೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಗ್ರಾಮಸ್ಥರಿಗೆ ಸಿಹಿ ವಿತರಿಸಿ ಗಣೇಶೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಕಿರಿಯರು ಹಾಗೂ ಹಿರಿಯರು ಉತ್ಸಾಹದಿಂದ ಪಾಲ್ಗೊಂಡರು. ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಹಾಗೂ ಸ್ಫೂರ್ತಿ ಯುವಕ ಸಂಘದ ಅಧ್ಯಕ್ಷ ಸುರೇಂದ್ರ ಬಹುಮಾನ ವಿತರಿಸಿದರು. ವಿದ್ಯುತ್ ಅಲಂಕೃತ ಮಂಟಪದಲ್ಲಿ ಗಣೇಶನ ಮೂರ್ತಿಯನ್ನು ಮೆರವಣಿಗೆ ಮಾಡಿ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು.

Read More

ಸುಂಟಿಕೊಪ್ಪ ಸೆ.26 : ಮಾದಾಪುರ ವಿವಿದೋದ್ಧೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ನಾಪಂಡ ಉಮೇಶ್ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಹರೀಶ್ ಆಯ್ಕೆಯಾಗಿದ್ದಾರೆ. ಈ ಸಂಘದಲ್ಲಿ ಬಿಜೆಪಿ ಬೆಂಬಲಿತ 11 ಸದಸ್ಯರುಗಳು ಚುನಾಯಿತರಾಗಿದ್ದು, ಇಬ್ಬರು ಪಕ್ಷೇತರರು ನಿರ್ದೇಶಕರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಬಿಜ್ಜಂಡ ಮೊಣ್ಣಪ್ಪ ಸುಬ್ರಮಣಿ ಹಾಗೂ ನಾಪಂಡ ಉಮೇಶ ಉತ್ತಪ್ಪ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಪವಿತ್ರ ಹರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದರು. ಮಡಿಕೇರಿ ಸಹಕಾರಿ ಇಲಾಖೆಯ ಉಪ ನಿಬಂಧಕರ ಕಚೇರಿ ಅಧಿಕಾರಿ ಬಿ.ಜೆ.ಸಂದೀಪ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಅಧ್ಯಕ್ಷ ಸ್ಥಾನದ ಮತ ಎಣಿಕೆಗೊಂಡಾಗ ನಾಪಂಡ ಉಮೇಶ್ ಉತ್ತಪ್ಪ ಅವರಿಗೆ 8 ಮತ ಹಾಗೂ ಬಿಜ್ಜಂಡ ಸುಬ್ರಮಣಿ ಅವರಿಗೆ 4 ಮತಗಳು ಲಭಿಸಿತು. ಚುನಾವಣಾಧಿಕಾರಿ ಸಹಾಯಕರಾಗಿ ಸಂಘದ ಸಿಇಓ ಬಿ.ಎಸ್.ಕಾವೇರಪ್ಪ ಕಾರ್ಯನಿರ್ವಹಿಸಿದರು. ಉಪಾಧ್ಯಕ್ಷರಾಗಿ ಪವಿತ್ರ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆಯಲ್ಲಿ ನಿರ್ದೇಶಕರಾದ ಬಿಜ್ಜಂಡ ಮೊಣ್ಣಪ್ಪ, ತಿಲಕ್ ಕುಮಾರ್, ನಾಗಂಡ ಭವಿನ್, ಸೋನು ದೇಚಮ್ಮ, ಪವಿತ್ರ ಹರೀಶ್, ಕುಟ್ಟಂಡ ಕುಟ್ಟಪ್ಪ, ಮುಕ್ಕಾಟಿರ…

Read More

ಮಡಿಕೇರಿ ಸೆ.26 : ಕೊಡಗು ಜಿಲ್ಲಾ ಮಟ್ಟದ ಅಂತರ ಪ್ರಾಥಮಿಕ ಶಾಲಾ 14 ವಯೋಮಿತಿಯ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೋಮವಾರಪೇಟೆ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿ, ಫೈನಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರು. ವಿದ್ಯಾರ್ಥಿಗಳಾದ ಜಿ.ಎಸ್.ಶಿಶಿರ ಮತ್ತು ಎಮ್.ಎಸ್.ಗಗನ್ ಮುಂದೆ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದರು.

Read More

ಮಡಿಕೇರಿ ಸೆ.26 : ಮಡಿಕೇರಿ ವಿವೇಕ ಜಾಗೃತ ಬಳಗದ ವತಿಯಿಂದ ಸೆ.28 ರಂದು ಅತ್ಯಪರೂಪದ ಆತ್ಮೋನ್ನತಿ ಶಿಬಿರ ನಡೆಯಲಿದೆ. ನಗರದ ಓಂಕಾರೇಶ್ವರ ದೇವಾಲಯ ಸಮೀಪದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಅಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಶಿಬಿರ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಆಗಮಿಸಿ ಆತ್ಮೋನ್ನತಿ ಎಂಬ ವಿಶೇಷ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಟಿ.ಎ.ಪದ್ಮವೇಣಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ವರವಾಗಿ ಬಂದಿರುವ ಈ ಮಾನವ ಜನ್ಮದ ಒಳಗಿರುವ ಪ್ರಾಣಶಕ್ತಿಯಾದ ದೇವರ ಮಧುರ ವಾಣಿಯನ್ನು ಒಳಕಿವಿಯಿಂದ ಕೇಳಿ, ದಿವ್ಯದರುಶನ ಭಾಗ್ಯ ಪಡೆದು ದೇವರೇ ಆಗಿ ಇತರರನ್ನೂ ದೇವರಾಗಿಸುವುದು ಶಿಬಿರದ ಉದ್ದೇಶವಾಗಿದೆ. ಒಳಗಿರುವ ಆತ್ಮಶಕ್ತಿಯನ್ನು ಮೇಲೇರಿಸಿ ಪುನೀತರಾಗುವುದೇ ಆತ್ಮೋನ್ನತಿಯ ಸರಳ ವಿಧಾನವಾಗಿದೆ. ಪಶುತ್ವದಿಂದ ಮಾನವತ್ವವನ್ನು ಪಡೆದು, ದೈವತ್ವಕ್ಕೇರುವ ಅತ್ಯಪರೂಪದ ಈ ಸೌಭಾಗ್ಯವೇ ಆತ್ಮೋನ್ನತಿ ಶಿಬಿರವಾಗಿದೆ. ಬಂಧನ, ಮನನ, ಸ್ಮರಣ, ಗಮನಗಳೆಲ್ಲವೂ ಇಲ್ಲಿವೆ. ಮಾನವನು ಎರಡು ಕಾಲಿನ ಹುಲಿ, ಸಿಂಹ, ಹಾವು, ಕರಡಿಯಂತೆ ವರ್ತಿಸಬಾರದು. ಜೀವನ…

Read More

ಮಡಿಕೇರಿ ಸೆ.26 : ಕೊಡಗಿನ ಮೂಲಭೂತ ಸಮಸ್ಯೆಗಳ ಕುರಿತು ತಮ್ಮ ಎರಡು ಅವಧಿಯಲ್ಲಿ ಕನಿಷ್ಠ ಕಾಳಜಿ ತೋರದ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರು, ಅತ್ಯಂತ ನಿಷ್ಕ್ರೀಯ ಸಂಸದರು ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭಗಳಲ್ಲಷ್ಟೆ ಪ್ರತ್ಯಕ್ಷರಾಗುವ ಪ್ರತಾಪ ಸಿಂಹ, ಭಾವನಾತ್ಮಕ ಮತ್ತು ಧರ್ಮಾಧಾರಿತ ವಿಚಾರಗಳೊಂದಿಗೆ ಮೋದಿ ಹೆಸರನ್ನು ಹೇಳಿ ಮತಯಾಚಿಸುತ್ತಾರೆಯೇ ಹೊರತು ಅಭಿವೃದ್ಧಿಪರ ಚಿಂತನೆ ಹೊಂದಿಲ್ಲ ಎಂದು ಆರೋಪಿಸಿದರು. ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಅವರು ಸೋಲುವುದು ಖಚಿತವೆಂದು ಭವಿಷ್ಯ ನುಡಿದರು. ಕಳೆದ ಒಂಭತ್ತೂವರೆ ವರ್ಷಗಳಲ್ಲಿ ಬೆಳೆಗಾರರ ಹಾಗೂ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ಸಂಸತ್‍ನಲ್ಲಿ ಪ್ರಬಲವಾಗಿ ಮಂಡಿಸಿ, ಕೇಂದ್ರದ ಗಮನ ಸೆಳೆಯುವಲ್ಲಿ ಪ್ರತಾಪ್ ಸಿಂಹ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಸಂಸದರಾಗಿ ಆಯ್ಕೆಯಾದ ಎರಡು ಬಾರಿಯೂ ಕೇಂದ್ರದಲ್ಲಿ ಅವರದ್ದೇ ಪಕ್ಷ ಅಧಿಕಾರದಲ್ಲಿದ್ದರೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ಅವರು ಸೋತಿದ್ದಾರೆ. ಇವರ ಈ ಎಲ್ಲಾ…

Read More

ಕುಶಾಲನಗರ ಸೆ.26 : ವಚನಕಾರರ ವ್ಯಕ್ತಿತ್ವ, ಸಾಧನೆ ಹಾಗೂ ಅವರು ಎತ್ತಿ ಹಿಡಿದ ಜೀವನ ಮೌಲ್ಯಗಳ ಘನತೆ ಇಂದಿನ ಯುವ ಸಮುದಾಯಕ್ಕೆ ಪ್ರೇರಣೆಯಾಗಬೇಕಿದೆ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರರು ಹಾಗೂ  ದಂಡಾಧಿಕಾರಿ ಕಿರಣ್ ಗೌರಯ್ಯ ಹೇಳಿದರು. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚಿಂತನಾ ಸಭಾಂಗಣದಲ್ಲಿ ಕಾಲೇಜಿನ ಆಂತರಿಕ ಗುಣ ಮಟ್ಟ ಭರವಸಾ ಕೋಶ, ಕನ್ನಡ ವಿಭಾಗ ಹಾಗೂ ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ” ವಿದ್ಯಾರ್ಥಿಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಚಿಂತನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿ ದಾಸ್ಯ ಸಂಕೋಲೆಯಲ್ಲಿದ್ದ ಜನಸಾಮಾನ್ಯರ ಬದುಕಿಗೆ ಬೆಳಕು ನೀಡಿದ ವಚನಕಾರರ ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ಅರಿಯಬೇಕಿದೆ. ಆ ಮೂಲಕ ಸಮಸಮಾಜವನ್ನು ಕಟ್ಟಲು ಕಂಕಣಬದ್ಧರಾಗಬೇಕೆಂದು ಕರೆಕೊಟ್ಟರು. ವಿಶೇಷ ಉಪನ್ಯಾಸ ನೀಡಿದ ಕೊಡಗು ವಿಶ್ವ ವಿದ್ಯಾಲಯದ ಉಪನ್ಯಾಸಕ ಡಾ.ಜಮೀರ್ ಅಹಮದ್, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇತ್ತೀಚೆಗಷ್ಟೆ ಘೋಷಿಸಿದ ಮಹಿಳೆಯರ ಮೀಸಲಾತಿಯ ಪ್ರಸ್ತಾಪ ಹನ್ನೆರಡನೇ ಶತಮಾನದಲ್ಲಿ ಬಸವಾದಿ…

Read More

ಮಡಿಕೇರಿ ಸೆ.26 :  ಭಾರತೀಯ ಜನತಾ ಪಾರ್ಟಿ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಅವರ 107 ನೇ ಜನ್ಮದಿನವನ್ನು ಮೇಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತನ್ನ ಇಡೀ ಜೀವನವನ್ನೇ ಸಮಾಜಕ್ಕಾಗಿ ಸಮರ್ಪಿಸಿದ ಜನಸಂಘದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ  ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದರು. ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರನ್ನು ಕಾರ್ಯಕ್ರಮದಲ್ಲಿ  ಸನ್ಮಾನಿಸಿ ಗೌರವಿಸಲಾಯಿತು.  ಈ ಸಂದರ್ಭ ಮಡಿಕೇರಿ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ  ಎಸ್.ಸಿ.ಸತೀಶ್ , ಬಿಜೆಪಿ ಶಕ್ತಿಕೇಂದ್ರದ ಸಂಚಾಲಕ  ಚೋಂಡಿರ ಕಿರಣ್ , ಬೂತ್ ಸಮಿತಿ ಅಧ್ಯಕ್ಷ  ವಿಜು ಹರೀಶ್ , ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಪ್ರಮುಖರಾದ  ಟಿ.ಎನ್.ಉಮೇಶ್,   ಜಿತಿನ್, ಗ್ರಾ.ಪಂ  ಮಾಜಿ ಸದಸ್ಯರಾದ ಅನುಸೂಯ ಸೇರಿದಂತೆ ಇನ್ನಿತರ ಪ್ರಮುಖರು…

Read More

ಕುಶಾಲನಗರ ಸೆ.26 :  ಕುಶಾಲನಗರದ ಕೊಡಗು ಹೆಗ್ಗಡೆ ಸಮಾಜ ವಾರ್ಷಿಕ ಮಹಾಸಭೆಯು ಹಾರಂಗಿಯ  ಸಮಾಜದ ನಿವೇಶನದಲ್ಲಿ  ಸಭೆ ನಡೆಯಿತು. ಸಮಾಜದ ಅಧ್ಯಕ್ಷ ಚಂಗಚಂಡ ನಂಜಪ್ಪ  ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಮುಂದಿನ ಮಹಾಸಭೆಯೊಳಗೆ ಅರ್ಧ ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಾಗ ಖರೀದಿಸಿ ಮುಂಬರುವ ವರ್ಷಗಳಲ್ಲಿ ಸುಸಜ್ಜಿತ ಕಟ್ಟಡವನ್ನು ಸರ್ಕಾರ ಮತ್ತು ದಾನಿಗಳ ನೆರವಿನಿಂದ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ನಂತರ  ಕೈಲ್ ಪೋಳ್ದ್ ಒತ್ತೊರ್ಮೆ ಕೂಟ ನಡೆಯಿತು. ಈ ಸಂದರ್ಭ ಮಾತನಾಡಿದ  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ  ಸದಸ್ಯ  ಪಡಿಞರಂಡ ಪ್ರಭು ಕುಮಾರ್,  ಕೊಡಗಿನಲ್ಲಿ ಹನ್ನೆರಡನೇ ಶತಮಾನಕ್ಕೂ ಮೊದಲು ಕೊಡಗು ಹೆಗ್ಗಡೆ ಜನಾಂಗದವರು ಕೊಡಗಿಗೆ ಬಂದು ನೆಲೆಸಿದವರಾಗಿದ್ದಾರೆಂದು ಹೊಯ್ಸಳರ ಕಾಲದಲ್ಲಿ ಕೊಡಗಿನ ರಾಜರ ಜೊತೆ ಯುದ್ಧಕ್ಕಾಗಿ ಬಂದು ವೀರರು ಯುದ್ದದಲ್ಲಿ ಸೋತು ಮತ್ತೆ ಊರಿಗೆ ಮರಳದೆ ಇಲ್ಲೇ ನೆಲೆ ನಿಂತು ಲಿಂಗಾಯತ ರಾಜರ ಆಳ್ವಿಕೆಯಲ್ಲಿ ಸೈನ್ಯಕ್ಕೆ ಸೇರಿದವರು ಕೆಲವರಾದರೆ, ಕೆಲವರು ಕೃಷಿಕರಾದರೆಂದು ನಂಬಲಾಗಿದೆ. ಹಾಲೇರಿ ಅರಸರ ಕಾಲದಲ್ಲಿ ಜಮ್ಮ ಜಾಹಗೀರು ಕೊಡಲ್ಪಟ್ಟಿತು. ಅಲ್ಲದೆ ಅರಸರ…

Read More

ಮಡಿಕೇರಿ ಜೂ.26 : ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ವಿರಾಜಪೇಟೆಯಲ್ಲಿ ಹುತಾತ್ಮರಾದ ಮಾಜಿ ಸೈನಿಕರಿಗೆ ಮತ್ತ ದೇಶ ಸೇವೆ ಸಂದರ್ಭ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿರಾಜಪೇಟೆಯ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ, ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ಮಾಜಿ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಲ್ ಮಂಡೆಟಿರ ಅವಿನ್ ಉತ್ತಯ್ಯ (ಸೇನಾ ಮೆಡಲ್), ಕರ್ನಲ್ ಮಾಚಿಮಂಡ ಡಿ.ಮುತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ತಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಹೆಚ್.ಎನ್.ರಾಮಚಂದ್ರ, ವಿರಾಜಪೇಟೆ ಡಿವೈಎಸ್‍ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ಪ.ಪಂ ಮುಖ್ಯಾಧಿಕಾರಿ ಚಂದ್ರಕುಮಾರ್, ಕೊಂಗಂಡ ಬೋಜಣ್ಣ ಹಾಗೂ ಸಂಘದ ಉಪಾಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಕಾರ್ಯದರ್ಶಿ ಪುಗ್ಗೇರ ಎಸ್.ನಂದ, ಖಜಾಂಚಿ ತೋರೆರ ಪೂವಯ್ಯ, ಕಾನೂನು ಸಲಹೆಗಾರ ಚೇಂದ್ರಿಮಾಡ ಕೆ.ನಂಜಪ್ಪ…

Read More