ಲೇಖಕ: admin

ಸಿದ್ದಾಪುರ  ಸೆ.25 :  ಶಾಂತಿ ಸಹ ಬಾಳ್ವೆ ಸಹೋದರತ್ವ ಸಾರುವ ಮಹಮ್ಮದ್ ಪೈಗಂಬರ್ ಅವರ ಸಂದೇಶವನ್ನು ಹಂಚಿಕೊಳ್ಳಲು ಸುನ್ನಿ ಯುವಜನ ಸಂಘಟನೆ ಜಿಲ್ಲೆಯಾದಂತ ಸಂದೇಶ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಕ್ಕಿಂಜೆಯ ಅಬ್ದುಲ್ ರಶೀದ್ ಝೈನಿ ಹೇಳಿದರು. ಸುನ್ನಿ ಯುವಜನ ಸಂಘದ ವತಿಯಿಂದ ಸಿದ್ದಾಪುರದಲ್ಲಿ ನಡೆದ ಈದ್ ಮಿಲಾದ್ ಸಂದೇಶ ಸಾರುವ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ ಸುನ್ನಿ ಯುವಜನ ಸಂಘಟನೆ ಪ್ರವಾದಿಯವರ ಸಂದೇಶ ಸಾರುವ ಮೂಲಕ ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಎಸ್.ಎಸ್.ಎಫ್ ಸಂಘಟನೆಯ ಸಂಚಾಲಕ ಕೆ.ಎಂ.ಬಾವ ಮಾತನಾಡಿ, ಮಿಲಾದ್ ಸಂದೇಶ ಜಾಥ ಜಿಲ್ಲೆಯ ಗೋಣಿಕೊಪ್ಪಲು, ವಿರಾಜಪೇಟೆ, ನಾಪೋಕ್ಲು, ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ಸಂಚರಿಸಲಿದ್ದು, ಸಮುದಾಯ  ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ  ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ  ಜಿಲ್ಲಾಧ್ಯಕ್ಷ ಜುಬೈರ್ ಸಾಹದಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ,…

Read More

ಮಡಿಕೇರಿ ಸೆ.25 : ಶಾಂತಿನಿಕೇತನ ಯುವಕ ಸಂಘದ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು. ಅಶ್ವಿನಿ ಗಣಪತಿ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯೊಂದಿಗೆ ಆಗಮಿಸಿದ ಸಂಘದ ಸದಸ್ಯ ಹಾಗೂ ಮಾಜಿ ಕ್ರೀಡಾಪಟು ಪಿ.ಎ.ರವಿ ಪಂದ್ಯಾವಳಿಗೆ ಚಾಲನೆ ನೀಡಿದರು. ಶಾಂತಿನಿಕೇತನದಲ್ಲಿ ನಡೆದ ಕ್ರೀಡಾಕೂಟದ ಕಾರ್ಯಕ್ರಮವನ್ನು ವ್ಯಾಂಡಮ್ ಎಂಟರ್ ಪ್ರೈಸಸ್ ನ ಮಾಲೀಕ ಕೆ.ಕೆ.ದಾಮೋದರ ಉದ್ಘಾಟಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಚಿತ್ತಾರ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕಿ ಸವಿತಾ ರೈ, ಶಾಂತಿನಿಕೇತನ ಯುವಕ ಸಂಘ ಅಂದು ಬಾಲ ಗಂಗಾಧರನಾಥ ತಿಲಕರ ಗಣೇಶೋತ್ಸವದ ಉದ್ದೇಶವನ್ನು ಇಂದಿಗೂ ಯಥಾವತ್ತಾಗಿ ಪಾಲಿಸಿಕೊಂಡು ಶ್ರದ್ಧಾಭಕ್ತಿಯಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯವೆಂದರು. ಮಡಿಕೇರಿ ದಸರಾದ 11ನೇ ಮಂಟಪ ಶಾಂತಿನಿಕೇತನ ಯುವಕ ಸಂಘದ ಗಣೇಶೋತ್ಸವ ಮಂಟಪ ಎನ್ನುವ ಹೆಗ್ಗಳಿಕೆ ಇದೆ. ಸಂಘದ ಅಧ್ಯಕ್ಷ ಚೇತನ್ ಹಾಗೂ ತಂಡದ ಶ್ರಮ ಇತರರಿಗೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಗೌರವ ಸಲಹೆಗಾರ ಮನು…

Read More

ವಿರಾಜಪೇಟೆ ಸೆ.25 :  ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಸಿ.ದಯಾನಂದ  ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್. ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಬೇಕು. ರಾಷ್ಟ್ರದ ಪ್ರಗತಿಗೆ ಶ್ರಮಸಬೇಕೆಂದರು. ಶಿಸ್ತು ಬದ್ದ ಜೀವನ, ಉತ್ತಮ ನಡತೆ, ಪ್ರಾಮಾಣಿಕತೆ ಇವು ಸ್ವಯಂ ಸೇವಕರ ಪ್ರಮುಖ ಲಕ್ಷಣ ಎಂದು ತಿಳಿಸಿದರು.  ನಮ್ಮ ಕರ್ತವ್ಯವನ್ನು ನಾವು ಮಾಡಿದಾಗ ಮಾತ್ರ ಇತರರಿಗೆ ಮಾದರಿಗಳಾಗುತ್ತೇವೆ ಎಂದು ನುಡಿದರು. ಕಾರ್ಯಕ್ರಮದ ಸಾನಿಧ್ಯ ವನ್ನು ವಹಿಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್  ಪ್ರತಿಜ್ಞಾ ವಿಧಿಯನ್ನು ಭೋದಿಸಿ, ಎನ್. ಎಸ್. ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಕಾರ್ಯ ಒಂದೇ ಆಗಿದ್ದು ಅದು ಸಮಾಜದ ಸೇವೆಯಾಗಿದೆ. ಈ ಎರಡೂ ಘಟಕಗಳು…

Read More

ಮಡಿಕೇರಿ ಸೆ.25 : ವಿಶಿಷ್ಟ ಸಂಸ್ಕೃತಿಯ ಮೂಲಕ ಕೊಡವರು ತಮ್ಮನ್ನು ಗುರುತಿಸಿಕೊಂಡಿದ್ದು, ಇವರ ಮೂಲಭೂತ ಸಮಸ್ಯೆಗಳನ್ನು ಅರಿತು ಬಗೆಹರಿಸಲು ಸರ್ವರು ಪ್ರಯತ್ನ ಮಾಡಬೇಕೆಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಕರೆ ನೀಡಿದ್ದಾರೆ. ನಗರದ ತ್ರಿವೇಣಿ ಆಂಗ್ಲ ಮಾದ್ಯಮ ಶಾಲೆಯ ಜಿಮ್ಮಿ ಕಲಾ ವೇದಿಕೆಯಲ್ಲಿ ಆಯೋಜಿಯ ವಿರಾಜಪೇಟೆ ಕೊಡವ ಸಮಾಜದ ನೂರರ ಸಂಭ್ರಮ ‘ನೂರಾಂಡ್ ನಮ್ಮೆ’ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ರಾಜಕೀಯ ಎಂಬುದು ಪ್ರಜಾಪ್ರಭುತ್ವದ ಒಂದು ಭಾಗ. ಆದರೆ ಇದೇ ರಾಜಕೀಯದಿಂದಾಗಿ ಭಿನ್ನಮತ, ಸಂಘರ್ಷಗಳು ಉಂಟಾಗಿ ಜನಾಂಗದ ನಡುವೆ ಬಾಂಧವ್ಯ ಕಳೆದುಕೊಳ್ಳುತ್ತೇವೆ. ಆದರೆ, ಸಮಸ್ಯೆಗಳಿಗೆ ರಾಜಕೀಯ ರಹಿತವಾಗಿ ಒಗ್ಗೂಡಿ ಹೋರಾಟ ಮಾಡಿದಲ್ಲಿ ಮಾತ್ರ ಸಂಘಟನೆಯು ಬಲವೃದ್ಧಿಯಾಗುತ್ತದೆ ಎಂದು ಹೇಳಿದರು. ಕೊಡಗು-ಮೈಸೂರು ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಕೊಡವ ಜನಾಂಗವು ತನ್ನ ಮೂಲ ನೆಲೆಯನ್ನು ಬಿಟ್ಟು ಇತರೆಡೆಗಳಲ್ಲಿ ವಾಸ ಮಾಡುವುದರಿಂದ ಕೊಡಗಿನಲ್ಲಿ ಕೊಡವರ ಸಂಖ್ಯೆ ಕ್ಷೀಣಿಸಿಕೊಂಡು ಬರುತ್ತಿದೆ. ಕೊಡವರು ವಿಶಿಷ್ಟವಾದ ವೀರ ಪರಂಪರೆಯನ್ನು ಹೊಂದಿದ್ದು, ಇತರ ಸಮುದಾಯಗಳಿಗಿಂತ ಭಿನ್ನವಾಗಿದ್ದಾರೆ.…

Read More

ವಿರಾಜಪೇಟೆ ಸೆ.25 :   ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ವಿರಾಜಪೇಟೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚೆಸ್ಕಾಮ್ ಉಪವಿಭಾಗದ ಪಿ.ಎಸ್. ಸುರೇಶ್ ಮಾತನಾಡಿ,  ಗ್ರಾಮೀಣ ಪ್ರದೇಶದಲ್ಲಿ  ಗಣೇಶೋತ್ಸವವನ್ನು ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ. ಇದು ಜನರಲ್ಲಿ ಐಕ್ಯತೆ ಮೂಡಿಸುವುದರ ಜೊತೆಗೆ ಪರಸ್ಪರ ಸಹಕಾರ ಮನೋಭಾವನೆ ಮೂಡಿಸುತ್ತದೆ ಎಂದರು. ಚೆಸ್ಕಾಮ್ ಲೈನ್ ಮ್ಯಾನ್ ಗಳನ್ನು ಗುರುತಿಸಿ ದೇವಸ್ಥಾನದ ಆಡಳಿತ ಮಂಡಳಿಯವರು ಸನ್ಮಾನಿಸುತಿರುವುದು ಗಮನಾರ್ಹವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ರಾಮಕೃಷ್ಣ ಮಾತನಾಡಿ, ಇಂದಿನ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಸಂತಸ. ಪ್ರತೀ ವರ್ಷವೂ ದೇವಸ್ಥಾನದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು,  ಆ ಮೂಲಕ ಪ್ರತಿಭೆಗಳನ್ನು ಗುರುತಿಸಿ ಸಮಾಜಕ್ಕೆ ಪರಿಚಯಿಸುವ ಕಾರ್ಯ ಆಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಬೇಟೋಳಿ ವಿಭಾಗದ ಚೆಸ್ಕಾಮ್ ನ ಲೈನ್ ಮ್ಯಾನ್…

Read More

ಮಡಿಕೇರಿ ಸೆ.25 : ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲೆಯ ವಿದ್ಯಾರ್ಥಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಮವಸ್ತ್ರ ಮತ್ತು ಶೂ ವಿತರಿಸಿದರು. ನಂತರ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿಯ ಪುಟಾಣಿಗಳಿಗೆ ಸಿಹಿ ಹಂಚಿ ಮಕ್ಕಳೊಂದಿಗೆ ಮಕ್ಕಳಾದರು. ಈ ಸಂದರ್ಭ ಕೆ.ನಿಡುಗಣೆ ಗ್ರಾ.ಪಂ ಸದಸ್ಯರಾದ ಜಾನ್ಸನ್ ಪಿಂಟೋ, ಅನಿತಾ ಸ್ಥಳೀಯರಾದ ಪ್ರೇಮ್ ಕುಮಾರ್, ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಾಲಿನಿ, ಅಂಗನಾವಡಿ ಸಹಾಯಕಿ ಜಯಂತಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಸಿದ್ದಾಪುರ  ಸೆ.25 :   ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ವಿದ್ಯಾರ್ಥಿಗಳು ಕ್ರೀಡೆ, ಕಲಾ ಸಾಹಿತ್ಯ ಅಭಿಮಾನದಿಂದ ತಮ್ಮದೇಯಾದ ಪ್ರತಿಭೆ ಅನಾವರಣಗೊಳಿಸುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿ.ಪಂ ಮಾಜಿ ಸದಸ್ಯ ಮುಕೂಂಡ ವಿಜು ಸುಬ್ರಮಣಿ ಸಲಹೆ ನೀಡಿದರು. ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ಸಭಾಂಗಣದಲ್ಲಿ ನಡೆದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,  ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು, ಶಿಕ್ಷಣ ಇಲಾಖೆಯ ಮೂಲಕ ಯೋಜನೆಗಳನ್ನ ಸದ್ಬಳಕೆ ಮಾಡಿಕೊಂಡು ಸಾಧಿಸುವ ಛಲದೊಂದಿಗೆ ತಮ್ಮ ಕಲೆ ಪ್ರತಿಭೆಯನ್ನ ಪ್ರದರ್ಶಿಸುವ ಮೂಲಕ ಪ್ರತಿಭಾನ್ವಿತರಾಗಿ ಗುರುತಿಸಿಕೊಂಡಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ,  ಶಿಕ್ಷಣ ಇಲಾಖೆಯಿಂದ ಮಕ್ಕಳ ಭವಿಷ್ಯ ರೂಪಿಸಲು ಹಲವಾರು ಯೋಜನೆಗಳು, ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪಾಲಿಬೆಟ್ಟ ಕ್ಲಸ್ಟರ್ ವ್ಯಾಪ್ತಿಯ 10ಕ್ಕೂ ಹೆಚ್ಚು ವಿವಿಧ ಶಾಲೆಯ ನೂರಾರು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ…

Read More

ಮಡಿಕೇರಿ ಸೆ.25 : ನಗರದ ಹೃದಯ ಭಾಗ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಂಚಾರಿ ವ್ಯವಸ್ಥೆಗೆ ವೈಜ್ಞಾನಿಕ ರೂಪ ನೀಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಅಪಘಾತದಿಂದ ಹಾನಿಗೊಳಗಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಪುನರ್ ಪ್ರತಿಷ್ಠಾಪನೆಗೂ ಮೊದಲು ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ತಿಮ್ಮಯ್ಯ ವೃತ್ತಕ್ಕೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸುಗಮ ಸಂಚಾರ ವ್ಯವಸ್ಥೆಯ ಕುರಿತು ಚರ್ಚಿಸಿದರು. ಅಪಘಾತದಿಂದ ಹಾನಿಗೊಳಗಾಗಿರುವ ಡಿವೈಡರ್ ಗಳನ್ನು ಶೀಘ್ರ ತೆರವುಗೊಳಿಸಲಾಗುವುದು. ಬಾರಿಕೇಡ್ ಬಳಸಿ ವಾಹನಗಳ ಸಂಚಾರದ ಬಗ್ಗೆ ಅವಲೋಕಿಸಲಾಗುವುದು. ನಂತರ ಇಂಜಿನಿಯರ್ ಗಳ ಸಲಹೆ ಪಡೆದು ವೈಜ್ಞಾನಿಕ ರೂಪದಲ್ಲಿ ವೃತ್ತ ನಿರ್ಮಿಸಿ ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಸ್ಪಷ್ಟಪಡಿಸಿದರು. ಅಕ್ಟೋಬರ್ 2ನೇ ವಾರದಿಂದ ಐತಿಹಾಸಿಕ ಮಡಿಕೇರಿ ದಸರಾ ಆರಂಭಗೊಳ್ಳುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸಲಾಗುವುದು. ನಗರಕ್ಕೆ ಪ್ರವೇಶ ಕಲ್ಪಿಸುವ ಮುಖ್ಯ…

Read More

ಮಡಿಕೇರಿ ಸೆ.25 : ಚೆಟ್ಟಳ್ಳಿಯ ಹಿಂದೂ ಮಲಯಾಳಿ ಸಮಾಜಂ ವತಿಯಿಂದ 15 ನೇ ವರ್ಷದ ಓಣಂ ಆಚರಣೆ ಸಂಭ್ರಮದಿಂದ ನಡೆಯಿತು. ಚೆಟ್ಟಳ್ಳಿಯ ಮಂಗಳ ಸಂಭಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಮಹಿಳೆಯರು ರಚಿಸಿದ ಪೂಕಳಂ (ಹೂವಿನ ರಂಗೋಲಿ), ಚಂಡೆಮೇಳ, ವiಹಾಬಲಿ ಚಕ್ರವರ್ತಿಯ ವೇಷಭೂಷಣ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಮಲಯಾಳಿ ಸಮಾಜಂ ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಎಲ್ಲರ ಸಹಕಾರದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಮಲಯಾಳಿ ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡುತ್ತೇನೆ ಎಂದರು. ಮಲಯಾಳಿ ಸಮಾಜಂ ನ ಅಧ್ಯಕ್ಷ ಕೆ.ಕೆ.ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗೌರವಾಧ್ಯಕ್ಷ ಎಸ್.ಕುಟ್ಟನ್ ಉದ್ಘಾಟಿಸಿದರು. ಸಮಾಜದ ಉಪಾಧ್ಯಕ್ಷ ಪಿ.ಕೆ.ವಿನಿಶ್, ಸದಸ್ಯೆ ಸುಲೋಚನಾ ನಾರಾಯಣ, ಚೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷರಾದ ಸಿಂಧು ರಾಜನ್, ಸಮಾಜದ ಮಾಜಿ ಅಧ್ಯಕ್ಷರುಗಳಾದ ವಿ.ಕೆ.ವಿನು, ಎನ್.ಚಂದ್ರನ್, ಒ.ಕೆ.ಶ್ರೀನಿವಾಸ್, ಎಸ್.ಎಲ್.ಎನ್ ಪ್ಲಾಂಟೇಶನ್ ನ ವ್ಯವಸ್ಥಾಪಕ ಪಿ.ಕಣ್ಣನ್, ಪ್ರಧಾನ ಕಾರ್ಯದರ್ಶಿ ಉಷಾಕುಮಾರಿ, ಖಜಾಂಚಿ ಕೆ.ಬಿ.ವಿಜಯನ್, ಪ್ರಮುಖರಾದ ಪ್ರವೀಣ್…

Read More

ಮಡಿಕೇರಿ ಸೆ.25 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸೆ.24 ರಂದು ಸಂಜೆಯಿಂದಲೇ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಇಂದು ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ನಡೆಯಿತು. ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.

Read More