ಲೇಖಕ: admin

ಮಡಿಕೇರಿ ಫೆ.25 : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ ತಡೆಗೋಡೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ರಕ್ಷಣಾ ತಡೆಗೋಡೆ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದರು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದ ರಾಷ್ಟçದಲ್ಲಿ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ಸಂಸದರು ಹೇಳಿದರು.  ರಾಷ್ಟçದ ರಾಜದಾನಿ ನವದೆಹಲಿ, ಮುಂಬೈ, ಬೆಂಗಳೂರು, ಚೆನೈ, ಕೊಲ್ಕತ್ತಾ ಮತ್ತಿತ್ತರ ಕಡೆಗಳಲ್ಲಿ ಸಂಪರ್ಕ ರಸ್ತೆಯನ್ನಾಗಿ ಸರ್ಕಾರ ಕೈಗೊಂಡಿದೆ. ಹಾಗೆಯೇ…

Read More

ಧಾರವಾಡ/ನ್ಯೂಯಾರ್ಕ್: ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿರುವ ಧಾರವಾಡ ಮೂಲದ ಖ್ಯಾತ ವಿಜ್ಞಾನಿ ಡಾ. ಕಟ್ಟೇಶ್ ವಿ. ಕಟ್ಟಿ (Dr. Kattesh V. Katti) ಅವರಿಗೆ ಅಂತರಾಷ್ಟ್ರೀಯ ಮನ್ನಣೆ ದೊರೆತಿದೆ. ಇವರ ಅಪೂರ್ವ ಸಂಶೋಧನೆಯನ್ನು ಗುರುತಿಸಿರುವ ಅಂತರಾಷ್ಟ್ರೀಯ ಉನ್ನತ ವೃತ್ತಿಪರರ ಸಂಘ (IAOTP), 2026ನೇ ಸಾಲಿನ ‘ಹೆಲ್ತ್‌ಕೇರ್ ಟಾಪ್ ಇನೋವೇಟರ್ ಆಫ್ ದಿ ಇಯರ್’ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ. ನ್ಯೂಯಾರ್ಕ್‌ನಲ್ಲಿ ಗೌರವ ಸಮರ್ಪಣೆ ಬರುವ ಡಿಸೆಂಬರ್‌ನಲ್ಲಿ ನ್ಯೂಯಾರ್ಕ್ ನಗರದ ಐತಿಹಾಸಿಕ ‘ದಿ ಪ್ಲಾಜಾ ಹೋಟೆಲ್’ನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಡಾ. ಕಟ್ಟಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಗ್ರೀನ್ ನ್ಯಾನೋಟೆಕ್ನಾಲಜಿ ಕ್ಷೇತ್ರದಲ್ಲಿ ಅವರು ಮಾಡಿರುವ ಕ್ರಾಂತಿಕಾರಿ ಬದಲಾವಣೆಗಳಿಗಾಗಿ ಈ ಗೌರವ ಸಂದಿದೆ. ಯಾರು ಈ ಡಾ. ಕಟ್ಟೇಶ್ ಕಟ್ಟಿ? ಮೂಲತಃ ಧಾರವಾಡದವರಾದ ಡಾ. ಕಟ್ಟಿ ಅವರು ಪ್ರಸ್ತುತ ಅಮೆರಿಕದ ಮಿಸೌರಿ ವಿಶ್ವವಿದ್ಯಾಲಯದ ಮೆಡಿಕಲ್ ಸ್ಕೂಲ್‌ನಲ್ಲಿ ಕ್ಯುರೇಟರ್ಸ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಜಗತ್ತು “ಹಸಿರು…

Read More

ಧಾರಾವಾಡ/ಬೆಂಗಳೂರು, ಫೆಬ್ರವರಿ 25, 2026: ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಇಂದು ಧಾರಾವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಧಾರಾವಾಡದ ಜುಬಿಲಿ ಸರ್ಕಲ್‌ನಲ್ಲಿ ಜಮಾಯಿಸಿದ ಯುವ ಜನರು ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯ ಕಿಚ್ಚು: ‘ಗೋ ಬ್ಯಾಕ್’ ಘೋಷಣೆ ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು, ಪರೀಕ್ಷೆಗಳ ಮುಂದೂಡಿಕೆ ಮತ್ತು ನೇಮಕಾತಿ ಅಧಿಸೂಚನೆಗಳ ವಿಳಂಬದಿಂದ ಕಂಗೆಟ್ಟಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಬಂದ ವಿರೋಧ ಪಕ್ಷದ ನಾಯಕರಿಗೆ ‘ಗೋ ಬ್ಯಾಕ್’ ಘೋಷಣೆ ಕೂಗುವ ಮೂಲಕ ಪ್ರತಿಭಟನೆಯನ್ನು ಪಕ್ಷಾತೀತವಾಗಿ ಇರಿಸಲು ಅಭ್ಯರ್ಥಿಗಳು ಪ್ರಯತ್ನಿಸಿದರು. ಸಂಚಾರ ದಟ್ಟಣೆಯಿಂದಾಗಿ ಧಾರಾವಾಡದ ಕೇಂದ್ರ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇಲಾಖಾವಾರು ಖಾಲಿ ಹುದ್ದೆಗಳ ಕಂಪ್ಲೀಟ್ ಲಿಸ್ಟ್ ಸರ್ಕಾರದ ಅಧಿಕೃತ ಮಾಹಿತಿಯ ಪ್ರಕಾರ, ಸುಮಾರು 2,84,881 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಬಿಸಿಲ ಬೇಗೆಗೆ ವರುಣ ತಂಪೆರೆಯಲಿದ್ದಾನೆ. ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತದ ಪರಿಚಲನೆಯ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಳೆಯಿಂದಾಗಿ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಾಡುತ್ತಿದ್ದ ಕಾಡ್ಗಿಚ್ಚಿನ ಭೀತಿಯೂ ಸದ್ಯಕ್ಕೆ ದೂರವಾಗಿದೆ. ಇಂದಿನ ಹವಾಮಾನ: ಎಲ್ಲೆಲ್ಲಿ ಮಳೆ? ಇಂದು ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ: ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ. ಒಳನಾಡು: ಬೆಳಗಾವಿ, ಬೀದರ್, ಕಲಬುರ್ಗಿ, ಗದಗ, ವಿಜಯಪುರ, ಕೊಡಗು, ಮೈಸೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಒಣಹವೆ: ಬಾಗಲಕೋಟೆ, ಧಾರವಾಡ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಫೆಬ್ರವರಿ 26 ಮತ್ತು 27ರ ಮುನ್ಸೂಚನೆ…

Read More

ಸೋಮವಾರಪೇಟೆ, NEWS DESK ಫೆ.25 : ನಿಜವಾದ ಮಾನವ ಧರ್ಮ ಹಿಂದೂ ಧರ್ಮವಾಗಿದೆ ಎಂದು ಕೊಡ್ಲಿಪೇಟೆ ಕಲ್ಲಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ ಹೇಳಿದರು. ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಕೇರಿ ಸಮುದಾಯಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಕಿರಗಂದೂರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದೇಶಿಯರು ಭಾರತದ ಸಂಪತ್ತು ಕೊಳ್ಳೆಹೊಡೆವುದರೊಂದಿಗೆ ಸಂಸ್ಕೃತಿ ಸಂಪ್ರದಾಯವನ್ನು ನಾಶ ಮಾಡಿ ಹೋದರು. ಇನ್ನಾದರೂ ಹಿಂದೂಗಳು ಒಂದಾಗಬೇಕು. ದೇವರು, ದೇವಸ್ಥಾನ, ಮಠಗಳ ಬಗ್ಗೆ ಗೌರವ, ನಂಬಿಕೆ ಇರಬೇಕು ಎಂದು ಹೇಳಿದರು. ತಂದೆ ತಾಯಂದಿರು ಮಕ್ಕಳಿಗೆ ನೀತಿಪಾಠ ವನ್ನು ಹೇಳಿಕೊಡಬೇಕು. ಮಕ್ಕಳಿಗೆ ಹಿಂದೂ ಧರ್ಮ, ಸಂಸ್ಕೃತಿಯ ಬಗ್ಗೆ ಹೇಳಿಕೊಡಬೇಕು. ಮಕ್ಕಳನ್ನು ವಿದೇಶಗಳಲ್ಲಿ ಓದುವಂತೆ ಒತ್ತಡ ಹಾಕಿದರೆ, ಪೋಷಕರೇ ವೃದ್ಧಾಶ್ರಮಕ್ಕೆ ಸೇರಬೇಕಾಗುತ್ತದೆ. ಭಾರತದ ಶಿಕ್ಷಣ ಪವಿತ್ರವಾಗಿದೆ. ಇಲ್ಲಿಯೇ ಮಕ್ಕಳು ಬೆಳೆದು ಬದುಕಲು ಅವಕಾಶ ಮಾಡಿಕೊಡಿ ಎಂದು ತಿಳಿ ಹೇಳಿದರು. ಧರ್ಮದಂತೆ ಬದುಕಿದರೆ ನೆಮ್ಮದಿ ಸಿಗುತ್ತದೆ. ಧರ್ಮವನ್ನು ನಾವು ಕಾಪಾಡಿದರೆ ಧರ್ಮ ನಮ್ಮನ್ನು ಕಾಪಾಡುತ್ತದೆ ಎಂದು ಹೇಳಿದರು. ಸಭೆಯಲ್ಲಿ ಉಪಸ್ಥಿತರಿದ್ದ…

Read More

ಮಡಿಕೇರಿ, NEWS DESK ಫೆ.25 : ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮ ಶ್ರೀ ಚಾಮುಂಡೇಶ್ವರಿ ದೇವಿಯ ಅಷ್ಟಬಂಧ ಬ್ರಹ್ಮಕಲಶ ಮುಹೂರ್ತ ಹಾಗೂ ನಾಗದೇವರು, ಗುಳಿಗ ದೈವದ ಪ್ರತಿಷ್ಠಾಪನಾ ಕಾರ್ಯ ಶ್ರದ್ಧಾ-ಭಕ್ತಿಯೊಂದಿಗೆ ಅದ್ದೂರಿಯಾಗಿ ನೆರವೇರಿತು. ಕಳೆದ ತಾ.20ರ ರಾತ್ರಿಯಿಂದ 22ರ ಸಂಜೆವರೆಗೆ ಮೂರು ದಿನಗಳ ಕಾಲ ವಿವಿಧ ದೈವಿಕ ಕೈಂಕರ್ಯಗಳು ನೆರವೇರಿದವು. ಆದ್ಯ ಗಣಪತಿ ಹೋಮ, ನವಗ್ರಹ ಹೋಮ, ಶಿಖರ ಪೂಜೆ ಮತ್ತು ಪ್ರತಿಷ್ಠೆ, ಸಪ್ತ ಶುದ್ಧಿ, ಶಾಂತಿ ಪ್ರಾಯಶ್ಚಿತ ಹೋಮ, ತತ್ವ ಹೋಮ, ಅಧಿವಾಸ ಹೋಮ, ಸುದರ್ಶನ ಹೋಮ, ಚಾಮುಂಡೇಶ್ವರಿ ಹೋಮ, ವಾಸ್ತು ಹೋಮ, ಪ್ರಕಾರ ಬಲಿ, ಬ್ರಹ್ಮ ಕಲಶಾಧಿವಾಸ, ಚಾಮುಂಡೇಶ್ವರಿ ದೇವಿಯ ಬಿಂಬ ಪ್ರತಿಷ್ಠೆ, ಅಷ್ಟಬಂಧ ಲೇಪನ, ನಿದ್ರಾ ಕುಂಬಾಭೀಷೇಕ, ದುರ್ಗಾ ಹೋಮ, ನಾಗ ಪ್ರತಿಷ್ಠ, ಗುಳಿಗ ದೈವ ಪ್ರತಿಷ್ಠೆಯೊಂದಿಗೆ ಬ್ರಹ್ಮ ಕಲಶಾಭಿಷೇಕ ನೆರವೇರಿತು. ಪೂಜಾ ಕಾರ್ಯದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ…

Read More

ಮಡಿಕೇರಿ, NEWS DESK ಫೆ.25: ಕ್ರಿಯಾಶೀಲತೆ, ನೈಪುಣ್ಯತೆ, ಕಠಿಣ ಪರಿಶ್ರಮ ರೂಢಿಸಿಕೊಂಡಿರುವ ಕೊಡಗು ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಮತ್ತು ಕೊಡಗು  ವಿಶ್ವವಿದ್ಯಾಲಯ, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರಲ್ಲೂ ಪ್ರತಿಭೆ ಮತ್ತು ಕೌಶಲ್ಯಗಳಿವೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಿದೆ. ಅಂತಹ ಅಧ್ಬುತ ವೇದಿಕೆಗೆಯನ್ನು ನಮ್ಮ ಕೊಡಗು…

Read More

ಮಡಿಕೇರಿ NEWS DESK ಫೆ.24 : ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರನ್ನು ಸ್ಮರಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಭೇಟಿ ನೀಡಿದ್ದ ಸದಸ್ಯರು ಹಿರಿಯರ ದುರಂತ ಅಂತ್ಯದ ಕುರಿತು ಬೇಸರ ವ್ಯಕ್ತಪಡಿಸಿ ಗೌರವ ಅರ್ಪಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆಯಲ್ಲಿ ಪಿತೂರಿಯಿಂದ ಕೊಡವರನ್ನು ಹತ್ಯೆ ಮಾಡಲಾಗಿದೆ. ದೇವಟ್ ಪರಂಬುವಿನಲ್ಲಿ ಟಿಪ್ಪು ಸುಲ್ತಾನನ ಪಡೆಗಳಿಂದ ಮತ್ತು ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯದಿಂದ ಸಾವಿರಾರು ಕೊಡವರ ಹತ್ಯೆಯಾಗಿದೆ. ರಾಜರು ಸಾವಿರಾರು ಕೊಡವರನ್ನು ಮಡಿಕೇರಿಯ ರಾಜಾಸೀಟು ಉದ್ಯಾನವನದಿಂದ ತಾಳತ್ತಮನೆಯ ಕಡಿದಾದ ಭೂಪ್ರದೇಶಕ್ಕೆ ತಳ್ಳಿದರು. ಹೀಗೆ ದುರಂತ ಅಂತ್ಯಕAಡ ಹಿರಿಯ ಕೊಡವರ ಆತ್ಮಗಳಿಗೆ ಶಾಂತಿ ಮತ್ತು ಸಿಎನ್‌ಸಿ ಯ ಹೋರಾಟಕ್ಕೆ ಬೆಂಬಲ ಕೋರಿ ಪ್ರಾರ್ಥಿಸಲಾಯಿತು ಎಂದರು. ಆನಿಮಿಸ್ಟಿಕ್ ಏಕ-ಜನಾಂಗೀಯ ಕೊಡವ ಸಮುದಾಯದ ದುರಂತಗಳನ್ನು ವಿಶ್ವಸಂಸ್ಥೆಯ ಅಂತರಾಷ್ಟಿçÃಯ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು. ದುರಂತ ನಡೆದ…

Read More

ಮಡಿಕೇರಿ ಫೆ.24 NEWS DESK : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಹೆಗಾರರು ಹಾಗೂ ವಿರಾಜಪೇಟೆ ವಿಧಾನಸಾಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡರು. ಈ ಸಂದರ್ಭ ಕರ್ನಾಟಕ ಸರ್ಕಾರದ ಇಂಧನ ಸಚಿವ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್  ಭಾಗವಹಿಸಿದ್ದರು.

Read More